Homeಮುಖಪುಟಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

ಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

- Advertisement -
- Advertisement -

ರಾಜಸ್ಥಾನದ ಧೋಲ್‌ಪುರದಲ್ಲಿ ಇಂಜಿನಿಯರ್ ಆಗಿದ್ದ ದಲಿತ ಸಮುದಾಯದ ಹರ್ಷಾಧಿಪತಿ ಅವರ ಮೇಲೆ  ಕಾಂಗ್ರೆಸ್ ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಮತ್ತು ತಂಡ  ಹಲ್ಲೆ ನಡೆಸಿದ್ದರು. ಕಳೆದ ವರ್ಷ ಮಾರ್ಚ್ 28 ರಂದು ಘಟನೆ ನಡೆದಿದ್ದು ಆರೋಪಪಟ್ಟಿ ಇನ್ನು ಕೂಡ ಸಲ್ಲಿಕೆಯಾಗಿಲ್ಲ ಎನ್ನಲಾಗಿದೆ.

ಹರ್ಷಾಧಿಪತಿ ಸರಕಾರದ ವಿದ್ಯುತ್ ಬಿಲ್ ವಸೂಲಾತಿಗಾಗಿ ಗ್ರಾಮಗಳಿಗೆ ತೆರಳಿದ್ದರು. ಹಲವು ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದವರಲ್ಲಿ ಬಿಲ್ ಕಟ್ಟುವಂತೆ ಆಗ್ರಹಿಸಿದ್ದರು. ಈ ವೇಳೆ ಜನರು  ನನ್ನ ಜಾತಿಯನ್ನು ಕೇಳಿದರು ಮತ್ತು ನನ್ನನ್ನು ಸುತ್ತುವರೆದರು. ನಾನು ಠಾಕೂರ್ ಗ್ರಾಮವನ್ನು ಪ್ರವೇಶಿಸಲು ಹೇಗೆ ಧೈರ್ಯ ಮಾಡಿದ್ದೇನೆ ಎಂದು ಕೇಳಿದರು. ವ್ಯಕ್ತಿಯೊಬ್ಬರು ನನ್ನನ್ನು ಶಾಸಕ ಮಾಲಿಂಗ ಎಂದು ಹೇಳಿದ ವ್ಯಕ್ತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವಂತೆ ಹೇಳಿದರು. ಅವರು ನನ್ನನ್ನು ನಿಂದಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ.

ಮಾರ್ಚ್ 28 ರಂದು ರಜಪೂತ ಸಮುದಾಯದ, ಮೂರು ಬಾರಿ ಶಾಸಕರಾಗಿದ್ದ ಮಾಲಿಂಗ ಅವರು ತಮ್ಮ ಸಹಚರರೊಂದಿಗೆ ತಮ್ಮ ಕಚೇರಿಗೆ ನುಗ್ಗಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ. ಅವರನ್ನು ಮೊದಲು ಆಗ್ರಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಹೇಳಿದ್ದಾರೆ.

ಆ ವೇಳೆ ಮಾಲಿಂಗ ಅವರು ಆರೋಪಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದು ಕರೆದಿದ್ದರು ಮತ್ತು ಕೆಲವು ಬಿಜೆಪಿ ನಾಯಕರ ಆಜ್ಞೆಯ ಮೇರೆಗೆ ಎಫ್‌ಐಆರ್‌ನಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದರು.

ಮಾಲಿಂಗ ಸೇರಿ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ, ರಾಜಸ್ಥಾನ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದು, ಶಾಸಕ ಮಾಲಿಂಗ ಅವರನ್ನು ಬಂಧಿಸಿಲ್ಲ.

ಮೇ 11, 2022 ರಂದು ಅವರು ಗೆಹ್ಲೋಟ್ ಅವರನ್ನು ಭೇಟಿಯಾದ ನಂತರ ಅವರು ಪೊಲಿಸರಿಗೆ ಶರಣಾದರು. ಧೋಲ್‌ಪುರದ ಸ್ಥಳೀಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಇದರ ಮರುದಿನ ಕೋವಿಡ್‌ ಇದೆ ಎಂದು  ಆಸ್ಪತ್ರೆಗೆ ಸೇರಿದ್ದರು. ಒಂದು ವಾರದಲ್ಲಿ ಮಾಲಿಂಗ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

28 ವರ್ಷ ವಯಸ್ಸಿನ ಹರ್ಷಾಧಿಪತಿ ಘಟನೆ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿ ನಡೆದಾಡಲು 17 ತಿಂಗಳುಗಳು ಬೇಕಾಗಿದೆ. ಹರ್ಷಾಧಿಪತಿ ದಿನವಿಡಿ ಹಾಸಿಗೆಯ ಮೇಲೆ ಮಲಗಿರುತ್ತಿದ್ದರು. ಹರ್ಷಾಧಿಪತಿ ಅವರಿಗೆ ಮೂಳೆ ಮುರಿತ ಸೇರಿದಂತೆ ಅನೇಕ ಭಾಗಗಳಲ್ಲಿ ಮುರಿತ ಉಂಟಾಗಿತ್ತು  ಎಂದು ಸರ್ಕಾರಿ ವೈದ್ಯರೊಬ್ಬರು ತಿಳಿಸಿದ್ದಾರೆ.

ನನ್ನ ದೈಹಿಕ ಗಾಯಗಳು  ಗುಣವಾಗಿದ್ದರೂ, ನಾನು ಪ್ರತಿದಿನ ಅನ್ಯಾಯದ ಭಾವನೆ ಅನುಭವಿಸುತ್ತಿದ್ದೇನೆ. ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಅವರು ನನ್ನ ಮೇಲೆ ಕುರ್ಚಿ ಎಸೆದು, ಜಾತಿ ನಿಂದನೆಗಳನ್ನು ಮಾಡಿದರು. ಒಂದೂವರೆ ವರ್ಷ ಕಳೆದರೂ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎಂದು ಸಂತ್ರಸ್ತ ಹರ್ಷಾಧಿಪತಿ ಹೇಳಿದ್ದಾರೆ.

ಇದನ್ನು ಓದಿ: ಆದಿವಾಸಿ ಯುವಕನ ಎನ್‌ಕೌಂಟರ್: ಮರುತನಿಖೆಗೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...