Homeಮುಖಪುಟಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

ಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

- Advertisement -
- Advertisement -

ರಾಜಸ್ಥಾನದ ಧೋಲ್‌ಪುರದಲ್ಲಿ ಇಂಜಿನಿಯರ್ ಆಗಿದ್ದ ದಲಿತ ಸಮುದಾಯದ ಹರ್ಷಾಧಿಪತಿ ಅವರ ಮೇಲೆ  ಕಾಂಗ್ರೆಸ್ ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಮತ್ತು ತಂಡ  ಹಲ್ಲೆ ನಡೆಸಿದ್ದರು. ಕಳೆದ ವರ್ಷ ಮಾರ್ಚ್ 28 ರಂದು ಘಟನೆ ನಡೆದಿದ್ದು ಆರೋಪಪಟ್ಟಿ ಇನ್ನು ಕೂಡ ಸಲ್ಲಿಕೆಯಾಗಿಲ್ಲ ಎನ್ನಲಾಗಿದೆ.

ಹರ್ಷಾಧಿಪತಿ ಸರಕಾರದ ವಿದ್ಯುತ್ ಬಿಲ್ ವಸೂಲಾತಿಗಾಗಿ ಗ್ರಾಮಗಳಿಗೆ ತೆರಳಿದ್ದರು. ಹಲವು ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದವರಲ್ಲಿ ಬಿಲ್ ಕಟ್ಟುವಂತೆ ಆಗ್ರಹಿಸಿದ್ದರು. ಈ ವೇಳೆ ಜನರು  ನನ್ನ ಜಾತಿಯನ್ನು ಕೇಳಿದರು ಮತ್ತು ನನ್ನನ್ನು ಸುತ್ತುವರೆದರು. ನಾನು ಠಾಕೂರ್ ಗ್ರಾಮವನ್ನು ಪ್ರವೇಶಿಸಲು ಹೇಗೆ ಧೈರ್ಯ ಮಾಡಿದ್ದೇನೆ ಎಂದು ಕೇಳಿದರು. ವ್ಯಕ್ತಿಯೊಬ್ಬರು ನನ್ನನ್ನು ಶಾಸಕ ಮಾಲಿಂಗ ಎಂದು ಹೇಳಿದ ವ್ಯಕ್ತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವಂತೆ ಹೇಳಿದರು. ಅವರು ನನ್ನನ್ನು ನಿಂದಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ.

ಮಾರ್ಚ್ 28 ರಂದು ರಜಪೂತ ಸಮುದಾಯದ, ಮೂರು ಬಾರಿ ಶಾಸಕರಾಗಿದ್ದ ಮಾಲಿಂಗ ಅವರು ತಮ್ಮ ಸಹಚರರೊಂದಿಗೆ ತಮ್ಮ ಕಚೇರಿಗೆ ನುಗ್ಗಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ. ಅವರನ್ನು ಮೊದಲು ಆಗ್ರಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಹೇಳಿದ್ದಾರೆ.

ಆ ವೇಳೆ ಮಾಲಿಂಗ ಅವರು ಆರೋಪಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದು ಕರೆದಿದ್ದರು ಮತ್ತು ಕೆಲವು ಬಿಜೆಪಿ ನಾಯಕರ ಆಜ್ಞೆಯ ಮೇರೆಗೆ ಎಫ್‌ಐಆರ್‌ನಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದರು.

ಮಾಲಿಂಗ ಸೇರಿ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ, ರಾಜಸ್ಥಾನ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದು, ಶಾಸಕ ಮಾಲಿಂಗ ಅವರನ್ನು ಬಂಧಿಸಿಲ್ಲ.

ಮೇ 11, 2022 ರಂದು ಅವರು ಗೆಹ್ಲೋಟ್ ಅವರನ್ನು ಭೇಟಿಯಾದ ನಂತರ ಅವರು ಪೊಲಿಸರಿಗೆ ಶರಣಾದರು. ಧೋಲ್‌ಪುರದ ಸ್ಥಳೀಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಇದರ ಮರುದಿನ ಕೋವಿಡ್‌ ಇದೆ ಎಂದು  ಆಸ್ಪತ್ರೆಗೆ ಸೇರಿದ್ದರು. ಒಂದು ವಾರದಲ್ಲಿ ಮಾಲಿಂಗ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

28 ವರ್ಷ ವಯಸ್ಸಿನ ಹರ್ಷಾಧಿಪತಿ ಘಟನೆ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿ ನಡೆದಾಡಲು 17 ತಿಂಗಳುಗಳು ಬೇಕಾಗಿದೆ. ಹರ್ಷಾಧಿಪತಿ ದಿನವಿಡಿ ಹಾಸಿಗೆಯ ಮೇಲೆ ಮಲಗಿರುತ್ತಿದ್ದರು. ಹರ್ಷಾಧಿಪತಿ ಅವರಿಗೆ ಮೂಳೆ ಮುರಿತ ಸೇರಿದಂತೆ ಅನೇಕ ಭಾಗಗಳಲ್ಲಿ ಮುರಿತ ಉಂಟಾಗಿತ್ತು  ಎಂದು ಸರ್ಕಾರಿ ವೈದ್ಯರೊಬ್ಬರು ತಿಳಿಸಿದ್ದಾರೆ.

ನನ್ನ ದೈಹಿಕ ಗಾಯಗಳು  ಗುಣವಾಗಿದ್ದರೂ, ನಾನು ಪ್ರತಿದಿನ ಅನ್ಯಾಯದ ಭಾವನೆ ಅನುಭವಿಸುತ್ತಿದ್ದೇನೆ. ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಅವರು ನನ್ನ ಮೇಲೆ ಕುರ್ಚಿ ಎಸೆದು, ಜಾತಿ ನಿಂದನೆಗಳನ್ನು ಮಾಡಿದರು. ಒಂದೂವರೆ ವರ್ಷ ಕಳೆದರೂ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎಂದು ಸಂತ್ರಸ್ತ ಹರ್ಷಾಧಿಪತಿ ಹೇಳಿದ್ದಾರೆ.

ಇದನ್ನು ಓದಿ: ಆದಿವಾಸಿ ಯುವಕನ ಎನ್‌ಕೌಂಟರ್: ಮರುತನಿಖೆಗೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...