Homeಮುಖಪುಟಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

ಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

- Advertisement -
- Advertisement -

ರಾಜಸ್ಥಾನದ ಧೋಲ್‌ಪುರದಲ್ಲಿ ಇಂಜಿನಿಯರ್ ಆಗಿದ್ದ ದಲಿತ ಸಮುದಾಯದ ಹರ್ಷಾಧಿಪತಿ ಅವರ ಮೇಲೆ  ಕಾಂಗ್ರೆಸ್ ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಮತ್ತು ತಂಡ  ಹಲ್ಲೆ ನಡೆಸಿದ್ದರು. ಕಳೆದ ವರ್ಷ ಮಾರ್ಚ್ 28 ರಂದು ಘಟನೆ ನಡೆದಿದ್ದು ಆರೋಪಪಟ್ಟಿ ಇನ್ನು ಕೂಡ ಸಲ್ಲಿಕೆಯಾಗಿಲ್ಲ ಎನ್ನಲಾಗಿದೆ.

ಹರ್ಷಾಧಿಪತಿ ಸರಕಾರದ ವಿದ್ಯುತ್ ಬಿಲ್ ವಸೂಲಾತಿಗಾಗಿ ಗ್ರಾಮಗಳಿಗೆ ತೆರಳಿದ್ದರು. ಹಲವು ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದವರಲ್ಲಿ ಬಿಲ್ ಕಟ್ಟುವಂತೆ ಆಗ್ರಹಿಸಿದ್ದರು. ಈ ವೇಳೆ ಜನರು  ನನ್ನ ಜಾತಿಯನ್ನು ಕೇಳಿದರು ಮತ್ತು ನನ್ನನ್ನು ಸುತ್ತುವರೆದರು. ನಾನು ಠಾಕೂರ್ ಗ್ರಾಮವನ್ನು ಪ್ರವೇಶಿಸಲು ಹೇಗೆ ಧೈರ್ಯ ಮಾಡಿದ್ದೇನೆ ಎಂದು ಕೇಳಿದರು. ವ್ಯಕ್ತಿಯೊಬ್ಬರು ನನ್ನನ್ನು ಶಾಸಕ ಮಾಲಿಂಗ ಎಂದು ಹೇಳಿದ ವ್ಯಕ್ತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವಂತೆ ಹೇಳಿದರು. ಅವರು ನನ್ನನ್ನು ನಿಂದಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ.

ಮಾರ್ಚ್ 28 ರಂದು ರಜಪೂತ ಸಮುದಾಯದ, ಮೂರು ಬಾರಿ ಶಾಸಕರಾಗಿದ್ದ ಮಾಲಿಂಗ ಅವರು ತಮ್ಮ ಸಹಚರರೊಂದಿಗೆ ತಮ್ಮ ಕಚೇರಿಗೆ ನುಗ್ಗಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ. ಅವರನ್ನು ಮೊದಲು ಆಗ್ರಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಹೇಳಿದ್ದಾರೆ.

ಆ ವೇಳೆ ಮಾಲಿಂಗ ಅವರು ಆರೋಪಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದು ಕರೆದಿದ್ದರು ಮತ್ತು ಕೆಲವು ಬಿಜೆಪಿ ನಾಯಕರ ಆಜ್ಞೆಯ ಮೇರೆಗೆ ಎಫ್‌ಐಆರ್‌ನಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದರು.

ಮಾಲಿಂಗ ಸೇರಿ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ, ರಾಜಸ್ಥಾನ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದು, ಶಾಸಕ ಮಾಲಿಂಗ ಅವರನ್ನು ಬಂಧಿಸಿಲ್ಲ.

ಮೇ 11, 2022 ರಂದು ಅವರು ಗೆಹ್ಲೋಟ್ ಅವರನ್ನು ಭೇಟಿಯಾದ ನಂತರ ಅವರು ಪೊಲಿಸರಿಗೆ ಶರಣಾದರು. ಧೋಲ್‌ಪುರದ ಸ್ಥಳೀಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಇದರ ಮರುದಿನ ಕೋವಿಡ್‌ ಇದೆ ಎಂದು  ಆಸ್ಪತ್ರೆಗೆ ಸೇರಿದ್ದರು. ಒಂದು ವಾರದಲ್ಲಿ ಮಾಲಿಂಗ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

28 ವರ್ಷ ವಯಸ್ಸಿನ ಹರ್ಷಾಧಿಪತಿ ಘಟನೆ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿ ನಡೆದಾಡಲು 17 ತಿಂಗಳುಗಳು ಬೇಕಾಗಿದೆ. ಹರ್ಷಾಧಿಪತಿ ದಿನವಿಡಿ ಹಾಸಿಗೆಯ ಮೇಲೆ ಮಲಗಿರುತ್ತಿದ್ದರು. ಹರ್ಷಾಧಿಪತಿ ಅವರಿಗೆ ಮೂಳೆ ಮುರಿತ ಸೇರಿದಂತೆ ಅನೇಕ ಭಾಗಗಳಲ್ಲಿ ಮುರಿತ ಉಂಟಾಗಿತ್ತು  ಎಂದು ಸರ್ಕಾರಿ ವೈದ್ಯರೊಬ್ಬರು ತಿಳಿಸಿದ್ದಾರೆ.

ನನ್ನ ದೈಹಿಕ ಗಾಯಗಳು  ಗುಣವಾಗಿದ್ದರೂ, ನಾನು ಪ್ರತಿದಿನ ಅನ್ಯಾಯದ ಭಾವನೆ ಅನುಭವಿಸುತ್ತಿದ್ದೇನೆ. ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಅವರು ನನ್ನ ಮೇಲೆ ಕುರ್ಚಿ ಎಸೆದು, ಜಾತಿ ನಿಂದನೆಗಳನ್ನು ಮಾಡಿದರು. ಒಂದೂವರೆ ವರ್ಷ ಕಳೆದರೂ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎಂದು ಸಂತ್ರಸ್ತ ಹರ್ಷಾಧಿಪತಿ ಹೇಳಿದ್ದಾರೆ.

ಇದನ್ನು ಓದಿ: ಆದಿವಾಸಿ ಯುವಕನ ಎನ್‌ಕೌಂಟರ್: ಮರುತನಿಖೆಗೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...