Homeಮುಖಪುಟಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

ಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

- Advertisement -
- Advertisement -

ರಾಜಸ್ಥಾನದ ಧೋಲ್‌ಪುರದಲ್ಲಿ ಇಂಜಿನಿಯರ್ ಆಗಿದ್ದ ದಲಿತ ಸಮುದಾಯದ ಹರ್ಷಾಧಿಪತಿ ಅವರ ಮೇಲೆ  ಕಾಂಗ್ರೆಸ್ ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಮತ್ತು ತಂಡ  ಹಲ್ಲೆ ನಡೆಸಿದ್ದರು. ಕಳೆದ ವರ್ಷ ಮಾರ್ಚ್ 28 ರಂದು ಘಟನೆ ನಡೆದಿದ್ದು ಆರೋಪಪಟ್ಟಿ ಇನ್ನು ಕೂಡ ಸಲ್ಲಿಕೆಯಾಗಿಲ್ಲ ಎನ್ನಲಾಗಿದೆ.

ಹರ್ಷಾಧಿಪತಿ ಸರಕಾರದ ವಿದ್ಯುತ್ ಬಿಲ್ ವಸೂಲಾತಿಗಾಗಿ ಗ್ರಾಮಗಳಿಗೆ ತೆರಳಿದ್ದರು. ಹಲವು ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದವರಲ್ಲಿ ಬಿಲ್ ಕಟ್ಟುವಂತೆ ಆಗ್ರಹಿಸಿದ್ದರು. ಈ ವೇಳೆ ಜನರು  ನನ್ನ ಜಾತಿಯನ್ನು ಕೇಳಿದರು ಮತ್ತು ನನ್ನನ್ನು ಸುತ್ತುವರೆದರು. ನಾನು ಠಾಕೂರ್ ಗ್ರಾಮವನ್ನು ಪ್ರವೇಶಿಸಲು ಹೇಗೆ ಧೈರ್ಯ ಮಾಡಿದ್ದೇನೆ ಎಂದು ಕೇಳಿದರು. ವ್ಯಕ್ತಿಯೊಬ್ಬರು ನನ್ನನ್ನು ಶಾಸಕ ಮಾಲಿಂಗ ಎಂದು ಹೇಳಿದ ವ್ಯಕ್ತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವಂತೆ ಹೇಳಿದರು. ಅವರು ನನ್ನನ್ನು ನಿಂದಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ.

ಮಾರ್ಚ್ 28 ರಂದು ರಜಪೂತ ಸಮುದಾಯದ, ಮೂರು ಬಾರಿ ಶಾಸಕರಾಗಿದ್ದ ಮಾಲಿಂಗ ಅವರು ತಮ್ಮ ಸಹಚರರೊಂದಿಗೆ ತಮ್ಮ ಕಚೇರಿಗೆ ನುಗ್ಗಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ. ಅವರನ್ನು ಮೊದಲು ಆಗ್ರಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಹೇಳಿದ್ದಾರೆ.

ಆ ವೇಳೆ ಮಾಲಿಂಗ ಅವರು ಆರೋಪಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದು ಕರೆದಿದ್ದರು ಮತ್ತು ಕೆಲವು ಬಿಜೆಪಿ ನಾಯಕರ ಆಜ್ಞೆಯ ಮೇರೆಗೆ ಎಫ್‌ಐಆರ್‌ನಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದರು.

ಮಾಲಿಂಗ ಸೇರಿ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ, ರಾಜಸ್ಥಾನ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದು, ಶಾಸಕ ಮಾಲಿಂಗ ಅವರನ್ನು ಬಂಧಿಸಿಲ್ಲ.

ಮೇ 11, 2022 ರಂದು ಅವರು ಗೆಹ್ಲೋಟ್ ಅವರನ್ನು ಭೇಟಿಯಾದ ನಂತರ ಅವರು ಪೊಲಿಸರಿಗೆ ಶರಣಾದರು. ಧೋಲ್‌ಪುರದ ಸ್ಥಳೀಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಇದರ ಮರುದಿನ ಕೋವಿಡ್‌ ಇದೆ ಎಂದು  ಆಸ್ಪತ್ರೆಗೆ ಸೇರಿದ್ದರು. ಒಂದು ವಾರದಲ್ಲಿ ಮಾಲಿಂಗ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

28 ವರ್ಷ ವಯಸ್ಸಿನ ಹರ್ಷಾಧಿಪತಿ ಘಟನೆ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿ ನಡೆದಾಡಲು 17 ತಿಂಗಳುಗಳು ಬೇಕಾಗಿದೆ. ಹರ್ಷಾಧಿಪತಿ ದಿನವಿಡಿ ಹಾಸಿಗೆಯ ಮೇಲೆ ಮಲಗಿರುತ್ತಿದ್ದರು. ಹರ್ಷಾಧಿಪತಿ ಅವರಿಗೆ ಮೂಳೆ ಮುರಿತ ಸೇರಿದಂತೆ ಅನೇಕ ಭಾಗಗಳಲ್ಲಿ ಮುರಿತ ಉಂಟಾಗಿತ್ತು  ಎಂದು ಸರ್ಕಾರಿ ವೈದ್ಯರೊಬ್ಬರು ತಿಳಿಸಿದ್ದಾರೆ.

ನನ್ನ ದೈಹಿಕ ಗಾಯಗಳು  ಗುಣವಾಗಿದ್ದರೂ, ನಾನು ಪ್ರತಿದಿನ ಅನ್ಯಾಯದ ಭಾವನೆ ಅನುಭವಿಸುತ್ತಿದ್ದೇನೆ. ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಅವರು ನನ್ನ ಮೇಲೆ ಕುರ್ಚಿ ಎಸೆದು, ಜಾತಿ ನಿಂದನೆಗಳನ್ನು ಮಾಡಿದರು. ಒಂದೂವರೆ ವರ್ಷ ಕಳೆದರೂ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎಂದು ಸಂತ್ರಸ್ತ ಹರ್ಷಾಧಿಪತಿ ಹೇಳಿದ್ದಾರೆ.

ಇದನ್ನು ಓದಿ: ಆದಿವಾಸಿ ಯುವಕನ ಎನ್‌ಕೌಂಟರ್: ಮರುತನಿಖೆಗೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...