Homeಮುಖಪುಟಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

ಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

- Advertisement -
- Advertisement -

ರಾಜಸ್ಥಾನದ ಧೋಲ್‌ಪುರದಲ್ಲಿ ಇಂಜಿನಿಯರ್ ಆಗಿದ್ದ ದಲಿತ ಸಮುದಾಯದ ಹರ್ಷಾಧಿಪತಿ ಅವರ ಮೇಲೆ  ಕಾಂಗ್ರೆಸ್ ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಮತ್ತು ತಂಡ  ಹಲ್ಲೆ ನಡೆಸಿದ್ದರು. ಕಳೆದ ವರ್ಷ ಮಾರ್ಚ್ 28 ರಂದು ಘಟನೆ ನಡೆದಿದ್ದು ಆರೋಪಪಟ್ಟಿ ಇನ್ನು ಕೂಡ ಸಲ್ಲಿಕೆಯಾಗಿಲ್ಲ ಎನ್ನಲಾಗಿದೆ.

ಹರ್ಷಾಧಿಪತಿ ಸರಕಾರದ ವಿದ್ಯುತ್ ಬಿಲ್ ವಸೂಲಾತಿಗಾಗಿ ಗ್ರಾಮಗಳಿಗೆ ತೆರಳಿದ್ದರು. ಹಲವು ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದವರಲ್ಲಿ ಬಿಲ್ ಕಟ್ಟುವಂತೆ ಆಗ್ರಹಿಸಿದ್ದರು. ಈ ವೇಳೆ ಜನರು  ನನ್ನ ಜಾತಿಯನ್ನು ಕೇಳಿದರು ಮತ್ತು ನನ್ನನ್ನು ಸುತ್ತುವರೆದರು. ನಾನು ಠಾಕೂರ್ ಗ್ರಾಮವನ್ನು ಪ್ರವೇಶಿಸಲು ಹೇಗೆ ಧೈರ್ಯ ಮಾಡಿದ್ದೇನೆ ಎಂದು ಕೇಳಿದರು. ವ್ಯಕ್ತಿಯೊಬ್ಬರು ನನ್ನನ್ನು ಶಾಸಕ ಮಾಲಿಂಗ ಎಂದು ಹೇಳಿದ ವ್ಯಕ್ತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವಂತೆ ಹೇಳಿದರು. ಅವರು ನನ್ನನ್ನು ನಿಂದಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ.

ಮಾರ್ಚ್ 28 ರಂದು ರಜಪೂತ ಸಮುದಾಯದ, ಮೂರು ಬಾರಿ ಶಾಸಕರಾಗಿದ್ದ ಮಾಲಿಂಗ ಅವರು ತಮ್ಮ ಸಹಚರರೊಂದಿಗೆ ತಮ್ಮ ಕಚೇರಿಗೆ ನುಗ್ಗಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ. ಅವರನ್ನು ಮೊದಲು ಆಗ್ರಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಹೇಳಿದ್ದಾರೆ.

ಆ ವೇಳೆ ಮಾಲಿಂಗ ಅವರು ಆರೋಪಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದು ಕರೆದಿದ್ದರು ಮತ್ತು ಕೆಲವು ಬಿಜೆಪಿ ನಾಯಕರ ಆಜ್ಞೆಯ ಮೇರೆಗೆ ಎಫ್‌ಐಆರ್‌ನಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದರು.

ಮಾಲಿಂಗ ಸೇರಿ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ, ರಾಜಸ್ಥಾನ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದು, ಶಾಸಕ ಮಾಲಿಂಗ ಅವರನ್ನು ಬಂಧಿಸಿಲ್ಲ.

ಮೇ 11, 2022 ರಂದು ಅವರು ಗೆಹ್ಲೋಟ್ ಅವರನ್ನು ಭೇಟಿಯಾದ ನಂತರ ಅವರು ಪೊಲಿಸರಿಗೆ ಶರಣಾದರು. ಧೋಲ್‌ಪುರದ ಸ್ಥಳೀಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಇದರ ಮರುದಿನ ಕೋವಿಡ್‌ ಇದೆ ಎಂದು  ಆಸ್ಪತ್ರೆಗೆ ಸೇರಿದ್ದರು. ಒಂದು ವಾರದಲ್ಲಿ ಮಾಲಿಂಗ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

28 ವರ್ಷ ವಯಸ್ಸಿನ ಹರ್ಷಾಧಿಪತಿ ಘಟನೆ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿ ನಡೆದಾಡಲು 17 ತಿಂಗಳುಗಳು ಬೇಕಾಗಿದೆ. ಹರ್ಷಾಧಿಪತಿ ದಿನವಿಡಿ ಹಾಸಿಗೆಯ ಮೇಲೆ ಮಲಗಿರುತ್ತಿದ್ದರು. ಹರ್ಷಾಧಿಪತಿ ಅವರಿಗೆ ಮೂಳೆ ಮುರಿತ ಸೇರಿದಂತೆ ಅನೇಕ ಭಾಗಗಳಲ್ಲಿ ಮುರಿತ ಉಂಟಾಗಿತ್ತು  ಎಂದು ಸರ್ಕಾರಿ ವೈದ್ಯರೊಬ್ಬರು ತಿಳಿಸಿದ್ದಾರೆ.

ನನ್ನ ದೈಹಿಕ ಗಾಯಗಳು  ಗುಣವಾಗಿದ್ದರೂ, ನಾನು ಪ್ರತಿದಿನ ಅನ್ಯಾಯದ ಭಾವನೆ ಅನುಭವಿಸುತ್ತಿದ್ದೇನೆ. ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಅವರು ನನ್ನ ಮೇಲೆ ಕುರ್ಚಿ ಎಸೆದು, ಜಾತಿ ನಿಂದನೆಗಳನ್ನು ಮಾಡಿದರು. ಒಂದೂವರೆ ವರ್ಷ ಕಳೆದರೂ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎಂದು ಸಂತ್ರಸ್ತ ಹರ್ಷಾಧಿಪತಿ ಹೇಳಿದ್ದಾರೆ.

ಇದನ್ನು ಓದಿ: ಆದಿವಾಸಿ ಯುವಕನ ಎನ್‌ಕೌಂಟರ್: ಮರುತನಿಖೆಗೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....