Homeಮುಖಪುಟ'ದಲಿತರು' ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ 'ಹೊಸ ವಿಗ್ರಹ' ಪ್ರತಿಷ್ಠಾಪನೆ!

‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

- Advertisement -
- Advertisement -

ತಿರುವಣ್ಣಾಮಲೈ ಜಿಲ್ಲೆಯ ತಂದರಂಪೇಟೆ ಬಳಿಯ ತೆನ್ಮುಡಿಯನೂರ್ ಗ್ರಾಮದ ನೂರಾರು ದಲಿತರು ಜನವರಿ 30, 2023ರಂದು ಮುತ್ತುಮಾರಿಯಮ್ಮನ್ ದೇವಸ್ಥಾನವನ್ನು ಪ್ರವೇಶಿಸಿದ್ದರು. 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತರಿಗೆ ಆ ದೇವಸ್ಥಾನಕ್ಕೆ ಪ್ರವೇಶಕ್ಕೆ ಮೊದಲ ಬಾರಿಗೆ ಅವಕಾಶವನ್ನು ನೀಡಲಾಗಿದ್ದು, ಇದು ತಮಿಳುನಾಡು ಸರಕಾರದ ಐತಿಹಾಸಕ ಕ್ರಮ ಎಂದು ಬಣ್ಣಿಸಲಾಗಿತ್ತು.

ಆದರೆ ಇದಾದ ಬಳಿಕ ಗ್ರಾಮದ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಜನರು ದೇವಸ್ಥಾನಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ದೇವಸ್ಥಾನದಿಂದ ಪ್ರತ್ಯೇಕ ಸ್ಥಳದಲ್ಲಿ ಹೊಸ ಮುತ್ತುಮಾರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಅವರು ಹೊಸ ವಿಗ್ರಹಕ್ಕೆ ಪೂಜೆಗಳನ್ನು ಸಹ ಮಾಡುತ್ತಿದ್ದಾರೆ, ಜನವರಿ 22, 2024ರಂದು ಹೊಸ ವಿಗ್ರಹದೊಂದಿಗೆ ಗ್ರಾಮದಲ್ಲಿ ಮೆರವಣಿಗೆಯನ್ನು ಕೂಡ ನಡೆಸಿದ್ದಾರೆ. ದಲಿತರು ದೇವಾಲಯಕ್ಕೆ ಪ್ರವೇಶಿಸಿದ ನಂತರ ಮೂಲ ದೇವಾಲಯಕ್ಕೆ ಇತರರು ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯಕ್ಕೆ ಸೇರಿದ ಕೆಲ ಜನರು, ಅವರು ಹೊಸ ದೇವಾಲಯವನ್ನು ನಿರ್ಮಿಸಲು ಸರ್ಕಾರಿ ಪೋರಂಬೋಕೆ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತೆನ್ಮುಡಿಯನೂರಿನ ದಲಿತ ನಿವಾಸಿ ಸಿ ಮುರುಗನ್ ಅವರು ಈ ಬಗ್ಗೆ ಮಾತನಾಡಿದ್ದು, ಈ ದೇವಸ್ಥಾನ ಕೇವಲ ಪ್ರಬಲ ಜಾತಿಯ ಜನರಿಗೆ ಮಾತ್ರವಾಗಿದೆ. ಸಮುದಾಯ ಕೊಳದ ಬಳಿ ಹೊಸ ದೇವಸ್ಥಾನವನ್ನು ನಿರ್ಮಿಸಲು ಸವರ್ಣಿಯರು ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೊಳದ ಬಳಿ ವಿಗ್ರಹದ ಮೆರವಣಿಗೆ ಮತ್ತು ನಂತರದ ಪೂಜೆಗಳು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಉದಯರ್ ಸಮುದಾಯದ ಮಾಜಿ ಪಂಚಾಯತ್ ಅಧ್ಯಕ್ಷರಾದ ನಲ್ಲತಂಬಿ ಅವರು ಹೊಸ ದೇವಾಲಯವನ್ನು ನಿರ್ಮಿಸಬಹುದು ಎಂಬ ಆರೋಪವನ್ನು ಅಲ್ಲಗಳೆದಿಲ್ಲ. ಹೊಸ ದೇವಾಲಯವನ್ನು ನಿರ್ಮಿಸಿದರೆ, ಅದನ್ನು ಪಟ್ಟಾ ಭೂಮಿಯಲ್ಲಿ ನಿರ್ಮಿಸಲಾಗುವುದು, ಪೋರಂಬೋಕೆ ಭೂಮಿಯಲ್ಲಿ ಅಲ್ಲ. ಮುತ್ತುಮಾರಿಯಮ್ಮನ ದೇವಸ್ಥಾನದಲ್ಲಿ ಪೂಜೆ ಮಾಡುವುದರ ವಿರುದ್ಧ ಗ್ರಾಮದಲ್ಲಿ ಯಾವುದೇ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ದಲಿತರ ಪ್ರವೇಶದ ನಂತರ ಕೆಲವರು ದೇವಸ್ಥಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ತಂಡರಂಪೇಟೆ ತಹಶೀಲ್ದಾರ್ ಅಬ್ದುಲ್ ರಹೀಂ, ಸಮುದಾಯದ ಹೊಂಡದ ಬಳಿಯಿರುವ ಮೈದಾನವನ್ನು ಪೊಂಗಲ್ ಆಚರಣೆಗೆ ಮಾತ್ರ ತೆರವುಗೊಳಿಸಲಾಗಿದ್ದು, ಅಲ್ಲಿ ದೇವಸ್ಥಾನ ನಿರ್ಮಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ.

ಮುತ್ತುಮಾರಿಯಮ್ಮ ದೇವಸ್ಥಾನ:

80 ವರ್ಷ ಹಳೆಯದಾದ ಮುತ್ತುಮಾರಿಯಮ್ಮನ್ ದೇವಸ್ಥಾನವು ಕಳೆದ 30 ವರ್ಷಗಳಿಂದ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ. ಕಳೆದ ವರ್ಷ ಜನವರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರು ಮೊದಲ ಬಾರಿಗೆ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯಕ್ಕೆ ಪ್ರವೇಶಿಸಿದ್ದಾರೆ. ಇದನ್ನು ಖಂಡಿಸಿ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನವನ್ನು ಸೀಲ್ ಮಾಡಲಾಗಿತ್ತು. ಸುತ್ತಲೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಭವನೀಯ ಜಾತಿ ಹಿಂಸೆ ಹಿನ್ನೆಲೆ ಸುಮಾರು 7 ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು.

ಪೊಂಗಲ್ ಆಚರಣೆಯ ನಂತರ ದೇವಾಲಯದ 12 ದಿನಗಳ ಉತ್ಸವದಲ್ಲಿ ಭಾಗವಾಗಲು ಅವಕಾಶ ನೀಡುವಂತೆ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವರ್ಷ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮದ ದಲಿತ ನಿವಾಸಿ ಸತ್ಯಶೀಲನ್ ಹೇಳಿದ್ದಾರೆ. ತೆನ್ಮುಡಿಯನೂರಿನಲ್ಲಿ ಪ್ರಬಲ ಜಾತಿಯ ಜನರು ಪೊಂಗಲ್ ನಂತರ ಹಬ್ಬಗಳನ್ನು 12 ದಿನಗಳ ಕಾಲ ಆಚರಿಸುತ್ತಾರೆ. ಗ್ರಾಮದಲ್ಲಿ 10ಕ್ಕಿಂತ ಹೆಚ್ಚು ಜಾತಿಗಳ ಜನರಿದ್ದಾರೆ. ಪ್ರತಿ ದಿನದ ಆಚರಣೆಯನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲಾಗುತ್ತದೆ. ದಲಿತ ನಿವಾಸಿಗಳು ತಮ್ಮನ್ನು ಆಚರಣೆಯಲ್ಲಿ ಸೇರಿಸಬೇಕೆಂದು ದೀರ್ಘಕಾಲದಿಂದ ಬೇಡಿಕೆಯಿಟ್ಟರೂ ಏನೂ ಪ್ರಯೋಜನವಿಲ್ಲದಾಗಿದೆ.

ಆ ಪ್ರದೇಶದಲ್ಲಿ ದಲಿತರು ದೇವಸ್ಥಾನಕ್ಕೆ ಪ್ರವೇಶಿಸಿದ ಬಳಿಕ ದಲಿತರ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಹೇರುವುದರ ಜೊತೆಗೆ ಅವರ ಮೇಲೆ ಹಿಂಸಾಚಾರವನ್ನು ಕೂಡ ನಡೆಸಿದ್ದಾರೆ. ದಲಿತರ ಒಡೆತನದ ಸಣ್ಣ ಕೃಷಿ ಭೂಮಿಗಳಿಗೆ ನೀರು ಸರಬರಾಜು ಮಾಡುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಳ್ಳಿಯ ಅನೇಕ ದಲಿತ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗ್ರಾಮದಲ್ಲಿ ದಲಿತ ಒಂಟಿ ಮಹಿಳೆಯ ಮಾಲೀಕತ್ವದ ಅಂಗಡಿಯನ್ನು ಸುಟ್ಟು ಹಾಕಿ ದುಷ್ಕೃತ್ಯವನ್ನು ಮೆರೆಯಲಾತ್ತು.

ಇದನ್ನು ಓದಿ: ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...