Homeಮುಖಪುಟ'ದಲಿತರು' ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ 'ಹೊಸ ವಿಗ್ರಹ' ಪ್ರತಿಷ್ಠಾಪನೆ!

‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

- Advertisement -
- Advertisement -

ತಿರುವಣ್ಣಾಮಲೈ ಜಿಲ್ಲೆಯ ತಂದರಂಪೇಟೆ ಬಳಿಯ ತೆನ್ಮುಡಿಯನೂರ್ ಗ್ರಾಮದ ನೂರಾರು ದಲಿತರು ಜನವರಿ 30, 2023ರಂದು ಮುತ್ತುಮಾರಿಯಮ್ಮನ್ ದೇವಸ್ಥಾನವನ್ನು ಪ್ರವೇಶಿಸಿದ್ದರು. 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತರಿಗೆ ಆ ದೇವಸ್ಥಾನಕ್ಕೆ ಪ್ರವೇಶಕ್ಕೆ ಮೊದಲ ಬಾರಿಗೆ ಅವಕಾಶವನ್ನು ನೀಡಲಾಗಿದ್ದು, ಇದು ತಮಿಳುನಾಡು ಸರಕಾರದ ಐತಿಹಾಸಕ ಕ್ರಮ ಎಂದು ಬಣ್ಣಿಸಲಾಗಿತ್ತು.

ಆದರೆ ಇದಾದ ಬಳಿಕ ಗ್ರಾಮದ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಜನರು ದೇವಸ್ಥಾನಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ದೇವಸ್ಥಾನದಿಂದ ಪ್ರತ್ಯೇಕ ಸ್ಥಳದಲ್ಲಿ ಹೊಸ ಮುತ್ತುಮಾರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಅವರು ಹೊಸ ವಿಗ್ರಹಕ್ಕೆ ಪೂಜೆಗಳನ್ನು ಸಹ ಮಾಡುತ್ತಿದ್ದಾರೆ, ಜನವರಿ 22, 2024ರಂದು ಹೊಸ ವಿಗ್ರಹದೊಂದಿಗೆ ಗ್ರಾಮದಲ್ಲಿ ಮೆರವಣಿಗೆಯನ್ನು ಕೂಡ ನಡೆಸಿದ್ದಾರೆ. ದಲಿತರು ದೇವಾಲಯಕ್ಕೆ ಪ್ರವೇಶಿಸಿದ ನಂತರ ಮೂಲ ದೇವಾಲಯಕ್ಕೆ ಇತರರು ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯಕ್ಕೆ ಸೇರಿದ ಕೆಲ ಜನರು, ಅವರು ಹೊಸ ದೇವಾಲಯವನ್ನು ನಿರ್ಮಿಸಲು ಸರ್ಕಾರಿ ಪೋರಂಬೋಕೆ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತೆನ್ಮುಡಿಯನೂರಿನ ದಲಿತ ನಿವಾಸಿ ಸಿ ಮುರುಗನ್ ಅವರು ಈ ಬಗ್ಗೆ ಮಾತನಾಡಿದ್ದು, ಈ ದೇವಸ್ಥಾನ ಕೇವಲ ಪ್ರಬಲ ಜಾತಿಯ ಜನರಿಗೆ ಮಾತ್ರವಾಗಿದೆ. ಸಮುದಾಯ ಕೊಳದ ಬಳಿ ಹೊಸ ದೇವಸ್ಥಾನವನ್ನು ನಿರ್ಮಿಸಲು ಸವರ್ಣಿಯರು ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೊಳದ ಬಳಿ ವಿಗ್ರಹದ ಮೆರವಣಿಗೆ ಮತ್ತು ನಂತರದ ಪೂಜೆಗಳು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಉದಯರ್ ಸಮುದಾಯದ ಮಾಜಿ ಪಂಚಾಯತ್ ಅಧ್ಯಕ್ಷರಾದ ನಲ್ಲತಂಬಿ ಅವರು ಹೊಸ ದೇವಾಲಯವನ್ನು ನಿರ್ಮಿಸಬಹುದು ಎಂಬ ಆರೋಪವನ್ನು ಅಲ್ಲಗಳೆದಿಲ್ಲ. ಹೊಸ ದೇವಾಲಯವನ್ನು ನಿರ್ಮಿಸಿದರೆ, ಅದನ್ನು ಪಟ್ಟಾ ಭೂಮಿಯಲ್ಲಿ ನಿರ್ಮಿಸಲಾಗುವುದು, ಪೋರಂಬೋಕೆ ಭೂಮಿಯಲ್ಲಿ ಅಲ್ಲ. ಮುತ್ತುಮಾರಿಯಮ್ಮನ ದೇವಸ್ಥಾನದಲ್ಲಿ ಪೂಜೆ ಮಾಡುವುದರ ವಿರುದ್ಧ ಗ್ರಾಮದಲ್ಲಿ ಯಾವುದೇ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ದಲಿತರ ಪ್ರವೇಶದ ನಂತರ ಕೆಲವರು ದೇವಸ್ಥಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ತಂಡರಂಪೇಟೆ ತಹಶೀಲ್ದಾರ್ ಅಬ್ದುಲ್ ರಹೀಂ, ಸಮುದಾಯದ ಹೊಂಡದ ಬಳಿಯಿರುವ ಮೈದಾನವನ್ನು ಪೊಂಗಲ್ ಆಚರಣೆಗೆ ಮಾತ್ರ ತೆರವುಗೊಳಿಸಲಾಗಿದ್ದು, ಅಲ್ಲಿ ದೇವಸ್ಥಾನ ನಿರ್ಮಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ.

ಮುತ್ತುಮಾರಿಯಮ್ಮ ದೇವಸ್ಥಾನ:

80 ವರ್ಷ ಹಳೆಯದಾದ ಮುತ್ತುಮಾರಿಯಮ್ಮನ್ ದೇವಸ್ಥಾನವು ಕಳೆದ 30 ವರ್ಷಗಳಿಂದ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ. ಕಳೆದ ವರ್ಷ ಜನವರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರು ಮೊದಲ ಬಾರಿಗೆ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯಕ್ಕೆ ಪ್ರವೇಶಿಸಿದ್ದಾರೆ. ಇದನ್ನು ಖಂಡಿಸಿ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನವನ್ನು ಸೀಲ್ ಮಾಡಲಾಗಿತ್ತು. ಸುತ್ತಲೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಭವನೀಯ ಜಾತಿ ಹಿಂಸೆ ಹಿನ್ನೆಲೆ ಸುಮಾರು 7 ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು.

ಪೊಂಗಲ್ ಆಚರಣೆಯ ನಂತರ ದೇವಾಲಯದ 12 ದಿನಗಳ ಉತ್ಸವದಲ್ಲಿ ಭಾಗವಾಗಲು ಅವಕಾಶ ನೀಡುವಂತೆ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವರ್ಷ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮದ ದಲಿತ ನಿವಾಸಿ ಸತ್ಯಶೀಲನ್ ಹೇಳಿದ್ದಾರೆ. ತೆನ್ಮುಡಿಯನೂರಿನಲ್ಲಿ ಪ್ರಬಲ ಜಾತಿಯ ಜನರು ಪೊಂಗಲ್ ನಂತರ ಹಬ್ಬಗಳನ್ನು 12 ದಿನಗಳ ಕಾಲ ಆಚರಿಸುತ್ತಾರೆ. ಗ್ರಾಮದಲ್ಲಿ 10ಕ್ಕಿಂತ ಹೆಚ್ಚು ಜಾತಿಗಳ ಜನರಿದ್ದಾರೆ. ಪ್ರತಿ ದಿನದ ಆಚರಣೆಯನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲಾಗುತ್ತದೆ. ದಲಿತ ನಿವಾಸಿಗಳು ತಮ್ಮನ್ನು ಆಚರಣೆಯಲ್ಲಿ ಸೇರಿಸಬೇಕೆಂದು ದೀರ್ಘಕಾಲದಿಂದ ಬೇಡಿಕೆಯಿಟ್ಟರೂ ಏನೂ ಪ್ರಯೋಜನವಿಲ್ಲದಾಗಿದೆ.

ಆ ಪ್ರದೇಶದಲ್ಲಿ ದಲಿತರು ದೇವಸ್ಥಾನಕ್ಕೆ ಪ್ರವೇಶಿಸಿದ ಬಳಿಕ ದಲಿತರ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಹೇರುವುದರ ಜೊತೆಗೆ ಅವರ ಮೇಲೆ ಹಿಂಸಾಚಾರವನ್ನು ಕೂಡ ನಡೆಸಿದ್ದಾರೆ. ದಲಿತರ ಒಡೆತನದ ಸಣ್ಣ ಕೃಷಿ ಭೂಮಿಗಳಿಗೆ ನೀರು ಸರಬರಾಜು ಮಾಡುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಳ್ಳಿಯ ಅನೇಕ ದಲಿತ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗ್ರಾಮದಲ್ಲಿ ದಲಿತ ಒಂಟಿ ಮಹಿಳೆಯ ಮಾಲೀಕತ್ವದ ಅಂಗಡಿಯನ್ನು ಸುಟ್ಟು ಹಾಕಿ ದುಷ್ಕೃತ್ಯವನ್ನು ಮೆರೆಯಲಾತ್ತು.

ಇದನ್ನು ಓದಿ: ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...