Homeಮುಖಪುಟ'ದಲಿತರು' ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ 'ಹೊಸ ವಿಗ್ರಹ' ಪ್ರತಿಷ್ಠಾಪನೆ!

‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

- Advertisement -
- Advertisement -

ತಿರುವಣ್ಣಾಮಲೈ ಜಿಲ್ಲೆಯ ತಂದರಂಪೇಟೆ ಬಳಿಯ ತೆನ್ಮುಡಿಯನೂರ್ ಗ್ರಾಮದ ನೂರಾರು ದಲಿತರು ಜನವರಿ 30, 2023ರಂದು ಮುತ್ತುಮಾರಿಯಮ್ಮನ್ ದೇವಸ್ಥಾನವನ್ನು ಪ್ರವೇಶಿಸಿದ್ದರು. 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತರಿಗೆ ಆ ದೇವಸ್ಥಾನಕ್ಕೆ ಪ್ರವೇಶಕ್ಕೆ ಮೊದಲ ಬಾರಿಗೆ ಅವಕಾಶವನ್ನು ನೀಡಲಾಗಿದ್ದು, ಇದು ತಮಿಳುನಾಡು ಸರಕಾರದ ಐತಿಹಾಸಕ ಕ್ರಮ ಎಂದು ಬಣ್ಣಿಸಲಾಗಿತ್ತು.

ಆದರೆ ಇದಾದ ಬಳಿಕ ಗ್ರಾಮದ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಜನರು ದೇವಸ್ಥಾನಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ದೇವಸ್ಥಾನದಿಂದ ಪ್ರತ್ಯೇಕ ಸ್ಥಳದಲ್ಲಿ ಹೊಸ ಮುತ್ತುಮಾರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಅವರು ಹೊಸ ವಿಗ್ರಹಕ್ಕೆ ಪೂಜೆಗಳನ್ನು ಸಹ ಮಾಡುತ್ತಿದ್ದಾರೆ, ಜನವರಿ 22, 2024ರಂದು ಹೊಸ ವಿಗ್ರಹದೊಂದಿಗೆ ಗ್ರಾಮದಲ್ಲಿ ಮೆರವಣಿಗೆಯನ್ನು ಕೂಡ ನಡೆಸಿದ್ದಾರೆ. ದಲಿತರು ದೇವಾಲಯಕ್ಕೆ ಪ್ರವೇಶಿಸಿದ ನಂತರ ಮೂಲ ದೇವಾಲಯಕ್ಕೆ ಇತರರು ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯಕ್ಕೆ ಸೇರಿದ ಕೆಲ ಜನರು, ಅವರು ಹೊಸ ದೇವಾಲಯವನ್ನು ನಿರ್ಮಿಸಲು ಸರ್ಕಾರಿ ಪೋರಂಬೋಕೆ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತೆನ್ಮುಡಿಯನೂರಿನ ದಲಿತ ನಿವಾಸಿ ಸಿ ಮುರುಗನ್ ಅವರು ಈ ಬಗ್ಗೆ ಮಾತನಾಡಿದ್ದು, ಈ ದೇವಸ್ಥಾನ ಕೇವಲ ಪ್ರಬಲ ಜಾತಿಯ ಜನರಿಗೆ ಮಾತ್ರವಾಗಿದೆ. ಸಮುದಾಯ ಕೊಳದ ಬಳಿ ಹೊಸ ದೇವಸ್ಥಾನವನ್ನು ನಿರ್ಮಿಸಲು ಸವರ್ಣಿಯರು ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೊಳದ ಬಳಿ ವಿಗ್ರಹದ ಮೆರವಣಿಗೆ ಮತ್ತು ನಂತರದ ಪೂಜೆಗಳು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಉದಯರ್ ಸಮುದಾಯದ ಮಾಜಿ ಪಂಚಾಯತ್ ಅಧ್ಯಕ್ಷರಾದ ನಲ್ಲತಂಬಿ ಅವರು ಹೊಸ ದೇವಾಲಯವನ್ನು ನಿರ್ಮಿಸಬಹುದು ಎಂಬ ಆರೋಪವನ್ನು ಅಲ್ಲಗಳೆದಿಲ್ಲ. ಹೊಸ ದೇವಾಲಯವನ್ನು ನಿರ್ಮಿಸಿದರೆ, ಅದನ್ನು ಪಟ್ಟಾ ಭೂಮಿಯಲ್ಲಿ ನಿರ್ಮಿಸಲಾಗುವುದು, ಪೋರಂಬೋಕೆ ಭೂಮಿಯಲ್ಲಿ ಅಲ್ಲ. ಮುತ್ತುಮಾರಿಯಮ್ಮನ ದೇವಸ್ಥಾನದಲ್ಲಿ ಪೂಜೆ ಮಾಡುವುದರ ವಿರುದ್ಧ ಗ್ರಾಮದಲ್ಲಿ ಯಾವುದೇ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ದಲಿತರ ಪ್ರವೇಶದ ನಂತರ ಕೆಲವರು ದೇವಸ್ಥಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ತಂಡರಂಪೇಟೆ ತಹಶೀಲ್ದಾರ್ ಅಬ್ದುಲ್ ರಹೀಂ, ಸಮುದಾಯದ ಹೊಂಡದ ಬಳಿಯಿರುವ ಮೈದಾನವನ್ನು ಪೊಂಗಲ್ ಆಚರಣೆಗೆ ಮಾತ್ರ ತೆರವುಗೊಳಿಸಲಾಗಿದ್ದು, ಅಲ್ಲಿ ದೇವಸ್ಥಾನ ನಿರ್ಮಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ.

ಮುತ್ತುಮಾರಿಯಮ್ಮ ದೇವಸ್ಥಾನ:

80 ವರ್ಷ ಹಳೆಯದಾದ ಮುತ್ತುಮಾರಿಯಮ್ಮನ್ ದೇವಸ್ಥಾನವು ಕಳೆದ 30 ವರ್ಷಗಳಿಂದ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ. ಕಳೆದ ವರ್ಷ ಜನವರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರು ಮೊದಲ ಬಾರಿಗೆ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯಕ್ಕೆ ಪ್ರವೇಶಿಸಿದ್ದಾರೆ. ಇದನ್ನು ಖಂಡಿಸಿ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನವನ್ನು ಸೀಲ್ ಮಾಡಲಾಗಿತ್ತು. ಸುತ್ತಲೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಭವನೀಯ ಜಾತಿ ಹಿಂಸೆ ಹಿನ್ನೆಲೆ ಸುಮಾರು 7 ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು.

ಪೊಂಗಲ್ ಆಚರಣೆಯ ನಂತರ ದೇವಾಲಯದ 12 ದಿನಗಳ ಉತ್ಸವದಲ್ಲಿ ಭಾಗವಾಗಲು ಅವಕಾಶ ನೀಡುವಂತೆ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವರ್ಷ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮದ ದಲಿತ ನಿವಾಸಿ ಸತ್ಯಶೀಲನ್ ಹೇಳಿದ್ದಾರೆ. ತೆನ್ಮುಡಿಯನೂರಿನಲ್ಲಿ ಪ್ರಬಲ ಜಾತಿಯ ಜನರು ಪೊಂಗಲ್ ನಂತರ ಹಬ್ಬಗಳನ್ನು 12 ದಿನಗಳ ಕಾಲ ಆಚರಿಸುತ್ತಾರೆ. ಗ್ರಾಮದಲ್ಲಿ 10ಕ್ಕಿಂತ ಹೆಚ್ಚು ಜಾತಿಗಳ ಜನರಿದ್ದಾರೆ. ಪ್ರತಿ ದಿನದ ಆಚರಣೆಯನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲಾಗುತ್ತದೆ. ದಲಿತ ನಿವಾಸಿಗಳು ತಮ್ಮನ್ನು ಆಚರಣೆಯಲ್ಲಿ ಸೇರಿಸಬೇಕೆಂದು ದೀರ್ಘಕಾಲದಿಂದ ಬೇಡಿಕೆಯಿಟ್ಟರೂ ಏನೂ ಪ್ರಯೋಜನವಿಲ್ಲದಾಗಿದೆ.

ಆ ಪ್ರದೇಶದಲ್ಲಿ ದಲಿತರು ದೇವಸ್ಥಾನಕ್ಕೆ ಪ್ರವೇಶಿಸಿದ ಬಳಿಕ ದಲಿತರ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಹೇರುವುದರ ಜೊತೆಗೆ ಅವರ ಮೇಲೆ ಹಿಂಸಾಚಾರವನ್ನು ಕೂಡ ನಡೆಸಿದ್ದಾರೆ. ದಲಿತರ ಒಡೆತನದ ಸಣ್ಣ ಕೃಷಿ ಭೂಮಿಗಳಿಗೆ ನೀರು ಸರಬರಾಜು ಮಾಡುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಳ್ಳಿಯ ಅನೇಕ ದಲಿತ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗ್ರಾಮದಲ್ಲಿ ದಲಿತ ಒಂಟಿ ಮಹಿಳೆಯ ಮಾಲೀಕತ್ವದ ಅಂಗಡಿಯನ್ನು ಸುಟ್ಟು ಹಾಕಿ ದುಷ್ಕೃತ್ಯವನ್ನು ಮೆರೆಯಲಾತ್ತು.

ಇದನ್ನು ಓದಿ: ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...