Homeಮುಖಪುಟ'ದಲಿತರು' ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ 'ಹೊಸ ವಿಗ್ರಹ' ಪ್ರತಿಷ್ಠಾಪನೆ!

‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

- Advertisement -
- Advertisement -

ತಿರುವಣ್ಣಾಮಲೈ ಜಿಲ್ಲೆಯ ತಂದರಂಪೇಟೆ ಬಳಿಯ ತೆನ್ಮುಡಿಯನೂರ್ ಗ್ರಾಮದ ನೂರಾರು ದಲಿತರು ಜನವರಿ 30, 2023ರಂದು ಮುತ್ತುಮಾರಿಯಮ್ಮನ್ ದೇವಸ್ಥಾನವನ್ನು ಪ್ರವೇಶಿಸಿದ್ದರು. 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತರಿಗೆ ಆ ದೇವಸ್ಥಾನಕ್ಕೆ ಪ್ರವೇಶಕ್ಕೆ ಮೊದಲ ಬಾರಿಗೆ ಅವಕಾಶವನ್ನು ನೀಡಲಾಗಿದ್ದು, ಇದು ತಮಿಳುನಾಡು ಸರಕಾರದ ಐತಿಹಾಸಕ ಕ್ರಮ ಎಂದು ಬಣ್ಣಿಸಲಾಗಿತ್ತು.

ಆದರೆ ಇದಾದ ಬಳಿಕ ಗ್ರಾಮದ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಜನರು ದೇವಸ್ಥಾನಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ದೇವಸ್ಥಾನದಿಂದ ಪ್ರತ್ಯೇಕ ಸ್ಥಳದಲ್ಲಿ ಹೊಸ ಮುತ್ತುಮಾರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಅವರು ಹೊಸ ವಿಗ್ರಹಕ್ಕೆ ಪೂಜೆಗಳನ್ನು ಸಹ ಮಾಡುತ್ತಿದ್ದಾರೆ, ಜನವರಿ 22, 2024ರಂದು ಹೊಸ ವಿಗ್ರಹದೊಂದಿಗೆ ಗ್ರಾಮದಲ್ಲಿ ಮೆರವಣಿಗೆಯನ್ನು ಕೂಡ ನಡೆಸಿದ್ದಾರೆ. ದಲಿತರು ದೇವಾಲಯಕ್ಕೆ ಪ್ರವೇಶಿಸಿದ ನಂತರ ಮೂಲ ದೇವಾಲಯಕ್ಕೆ ಇತರರು ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯಕ್ಕೆ ಸೇರಿದ ಕೆಲ ಜನರು, ಅವರು ಹೊಸ ದೇವಾಲಯವನ್ನು ನಿರ್ಮಿಸಲು ಸರ್ಕಾರಿ ಪೋರಂಬೋಕೆ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತೆನ್ಮುಡಿಯನೂರಿನ ದಲಿತ ನಿವಾಸಿ ಸಿ ಮುರುಗನ್ ಅವರು ಈ ಬಗ್ಗೆ ಮಾತನಾಡಿದ್ದು, ಈ ದೇವಸ್ಥಾನ ಕೇವಲ ಪ್ರಬಲ ಜಾತಿಯ ಜನರಿಗೆ ಮಾತ್ರವಾಗಿದೆ. ಸಮುದಾಯ ಕೊಳದ ಬಳಿ ಹೊಸ ದೇವಸ್ಥಾನವನ್ನು ನಿರ್ಮಿಸಲು ಸವರ್ಣಿಯರು ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೊಳದ ಬಳಿ ವಿಗ್ರಹದ ಮೆರವಣಿಗೆ ಮತ್ತು ನಂತರದ ಪೂಜೆಗಳು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಉದಯರ್ ಸಮುದಾಯದ ಮಾಜಿ ಪಂಚಾಯತ್ ಅಧ್ಯಕ್ಷರಾದ ನಲ್ಲತಂಬಿ ಅವರು ಹೊಸ ದೇವಾಲಯವನ್ನು ನಿರ್ಮಿಸಬಹುದು ಎಂಬ ಆರೋಪವನ್ನು ಅಲ್ಲಗಳೆದಿಲ್ಲ. ಹೊಸ ದೇವಾಲಯವನ್ನು ನಿರ್ಮಿಸಿದರೆ, ಅದನ್ನು ಪಟ್ಟಾ ಭೂಮಿಯಲ್ಲಿ ನಿರ್ಮಿಸಲಾಗುವುದು, ಪೋರಂಬೋಕೆ ಭೂಮಿಯಲ್ಲಿ ಅಲ್ಲ. ಮುತ್ತುಮಾರಿಯಮ್ಮನ ದೇವಸ್ಥಾನದಲ್ಲಿ ಪೂಜೆ ಮಾಡುವುದರ ವಿರುದ್ಧ ಗ್ರಾಮದಲ್ಲಿ ಯಾವುದೇ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ದಲಿತರ ಪ್ರವೇಶದ ನಂತರ ಕೆಲವರು ದೇವಸ್ಥಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ತಂಡರಂಪೇಟೆ ತಹಶೀಲ್ದಾರ್ ಅಬ್ದುಲ್ ರಹೀಂ, ಸಮುದಾಯದ ಹೊಂಡದ ಬಳಿಯಿರುವ ಮೈದಾನವನ್ನು ಪೊಂಗಲ್ ಆಚರಣೆಗೆ ಮಾತ್ರ ತೆರವುಗೊಳಿಸಲಾಗಿದ್ದು, ಅಲ್ಲಿ ದೇವಸ್ಥಾನ ನಿರ್ಮಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ.

ಮುತ್ತುಮಾರಿಯಮ್ಮ ದೇವಸ್ಥಾನ:

80 ವರ್ಷ ಹಳೆಯದಾದ ಮುತ್ತುಮಾರಿಯಮ್ಮನ್ ದೇವಸ್ಥಾನವು ಕಳೆದ 30 ವರ್ಷಗಳಿಂದ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ. ಕಳೆದ ವರ್ಷ ಜನವರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರು ಮೊದಲ ಬಾರಿಗೆ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯಕ್ಕೆ ಪ್ರವೇಶಿಸಿದ್ದಾರೆ. ಇದನ್ನು ಖಂಡಿಸಿ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನವನ್ನು ಸೀಲ್ ಮಾಡಲಾಗಿತ್ತು. ಸುತ್ತಲೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಭವನೀಯ ಜಾತಿ ಹಿಂಸೆ ಹಿನ್ನೆಲೆ ಸುಮಾರು 7 ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು.

ಪೊಂಗಲ್ ಆಚರಣೆಯ ನಂತರ ದೇವಾಲಯದ 12 ದಿನಗಳ ಉತ್ಸವದಲ್ಲಿ ಭಾಗವಾಗಲು ಅವಕಾಶ ನೀಡುವಂತೆ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವರ್ಷ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮದ ದಲಿತ ನಿವಾಸಿ ಸತ್ಯಶೀಲನ್ ಹೇಳಿದ್ದಾರೆ. ತೆನ್ಮುಡಿಯನೂರಿನಲ್ಲಿ ಪ್ರಬಲ ಜಾತಿಯ ಜನರು ಪೊಂಗಲ್ ನಂತರ ಹಬ್ಬಗಳನ್ನು 12 ದಿನಗಳ ಕಾಲ ಆಚರಿಸುತ್ತಾರೆ. ಗ್ರಾಮದಲ್ಲಿ 10ಕ್ಕಿಂತ ಹೆಚ್ಚು ಜಾತಿಗಳ ಜನರಿದ್ದಾರೆ. ಪ್ರತಿ ದಿನದ ಆಚರಣೆಯನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲಾಗುತ್ತದೆ. ದಲಿತ ನಿವಾಸಿಗಳು ತಮ್ಮನ್ನು ಆಚರಣೆಯಲ್ಲಿ ಸೇರಿಸಬೇಕೆಂದು ದೀರ್ಘಕಾಲದಿಂದ ಬೇಡಿಕೆಯಿಟ್ಟರೂ ಏನೂ ಪ್ರಯೋಜನವಿಲ್ಲದಾಗಿದೆ.

ಆ ಪ್ರದೇಶದಲ್ಲಿ ದಲಿತರು ದೇವಸ್ಥಾನಕ್ಕೆ ಪ್ರವೇಶಿಸಿದ ಬಳಿಕ ದಲಿತರ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಹೇರುವುದರ ಜೊತೆಗೆ ಅವರ ಮೇಲೆ ಹಿಂಸಾಚಾರವನ್ನು ಕೂಡ ನಡೆಸಿದ್ದಾರೆ. ದಲಿತರ ಒಡೆತನದ ಸಣ್ಣ ಕೃಷಿ ಭೂಮಿಗಳಿಗೆ ನೀರು ಸರಬರಾಜು ಮಾಡುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಳ್ಳಿಯ ಅನೇಕ ದಲಿತ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗ್ರಾಮದಲ್ಲಿ ದಲಿತ ಒಂಟಿ ಮಹಿಳೆಯ ಮಾಲೀಕತ್ವದ ಅಂಗಡಿಯನ್ನು ಸುಟ್ಟು ಹಾಕಿ ದುಷ್ಕೃತ್ಯವನ್ನು ಮೆರೆಯಲಾತ್ತು.

ಇದನ್ನು ಓದಿ: ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...