Homeಮುಖಪುಟ'ದಲಿತರು' ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ 'ಹೊಸ ವಿಗ್ರಹ' ಪ್ರತಿಷ್ಠಾಪನೆ!

‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

- Advertisement -
- Advertisement -

ತಿರುವಣ್ಣಾಮಲೈ ಜಿಲ್ಲೆಯ ತಂದರಂಪೇಟೆ ಬಳಿಯ ತೆನ್ಮುಡಿಯನೂರ್ ಗ್ರಾಮದ ನೂರಾರು ದಲಿತರು ಜನವರಿ 30, 2023ರಂದು ಮುತ್ತುಮಾರಿಯಮ್ಮನ್ ದೇವಸ್ಥಾನವನ್ನು ಪ್ರವೇಶಿಸಿದ್ದರು. 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತರಿಗೆ ಆ ದೇವಸ್ಥಾನಕ್ಕೆ ಪ್ರವೇಶಕ್ಕೆ ಮೊದಲ ಬಾರಿಗೆ ಅವಕಾಶವನ್ನು ನೀಡಲಾಗಿದ್ದು, ಇದು ತಮಿಳುನಾಡು ಸರಕಾರದ ಐತಿಹಾಸಕ ಕ್ರಮ ಎಂದು ಬಣ್ಣಿಸಲಾಗಿತ್ತು.

ಆದರೆ ಇದಾದ ಬಳಿಕ ಗ್ರಾಮದ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಜನರು ದೇವಸ್ಥಾನಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ದೇವಸ್ಥಾನದಿಂದ ಪ್ರತ್ಯೇಕ ಸ್ಥಳದಲ್ಲಿ ಹೊಸ ಮುತ್ತುಮಾರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಅವರು ಹೊಸ ವಿಗ್ರಹಕ್ಕೆ ಪೂಜೆಗಳನ್ನು ಸಹ ಮಾಡುತ್ತಿದ್ದಾರೆ, ಜನವರಿ 22, 2024ರಂದು ಹೊಸ ವಿಗ್ರಹದೊಂದಿಗೆ ಗ್ರಾಮದಲ್ಲಿ ಮೆರವಣಿಗೆಯನ್ನು ಕೂಡ ನಡೆಸಿದ್ದಾರೆ. ದಲಿತರು ದೇವಾಲಯಕ್ಕೆ ಪ್ರವೇಶಿಸಿದ ನಂತರ ಮೂಲ ದೇವಾಲಯಕ್ಕೆ ಇತರರು ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯಕ್ಕೆ ಸೇರಿದ ಕೆಲ ಜನರು, ಅವರು ಹೊಸ ದೇವಾಲಯವನ್ನು ನಿರ್ಮಿಸಲು ಸರ್ಕಾರಿ ಪೋರಂಬೋಕೆ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತೆನ್ಮುಡಿಯನೂರಿನ ದಲಿತ ನಿವಾಸಿ ಸಿ ಮುರುಗನ್ ಅವರು ಈ ಬಗ್ಗೆ ಮಾತನಾಡಿದ್ದು, ಈ ದೇವಸ್ಥಾನ ಕೇವಲ ಪ್ರಬಲ ಜಾತಿಯ ಜನರಿಗೆ ಮಾತ್ರವಾಗಿದೆ. ಸಮುದಾಯ ಕೊಳದ ಬಳಿ ಹೊಸ ದೇವಸ್ಥಾನವನ್ನು ನಿರ್ಮಿಸಲು ಸವರ್ಣಿಯರು ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೊಳದ ಬಳಿ ವಿಗ್ರಹದ ಮೆರವಣಿಗೆ ಮತ್ತು ನಂತರದ ಪೂಜೆಗಳು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಉದಯರ್ ಸಮುದಾಯದ ಮಾಜಿ ಪಂಚಾಯತ್ ಅಧ್ಯಕ್ಷರಾದ ನಲ್ಲತಂಬಿ ಅವರು ಹೊಸ ದೇವಾಲಯವನ್ನು ನಿರ್ಮಿಸಬಹುದು ಎಂಬ ಆರೋಪವನ್ನು ಅಲ್ಲಗಳೆದಿಲ್ಲ. ಹೊಸ ದೇವಾಲಯವನ್ನು ನಿರ್ಮಿಸಿದರೆ, ಅದನ್ನು ಪಟ್ಟಾ ಭೂಮಿಯಲ್ಲಿ ನಿರ್ಮಿಸಲಾಗುವುದು, ಪೋರಂಬೋಕೆ ಭೂಮಿಯಲ್ಲಿ ಅಲ್ಲ. ಮುತ್ತುಮಾರಿಯಮ್ಮನ ದೇವಸ್ಥಾನದಲ್ಲಿ ಪೂಜೆ ಮಾಡುವುದರ ವಿರುದ್ಧ ಗ್ರಾಮದಲ್ಲಿ ಯಾವುದೇ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ದಲಿತರ ಪ್ರವೇಶದ ನಂತರ ಕೆಲವರು ದೇವಸ್ಥಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ತಂಡರಂಪೇಟೆ ತಹಶೀಲ್ದಾರ್ ಅಬ್ದುಲ್ ರಹೀಂ, ಸಮುದಾಯದ ಹೊಂಡದ ಬಳಿಯಿರುವ ಮೈದಾನವನ್ನು ಪೊಂಗಲ್ ಆಚರಣೆಗೆ ಮಾತ್ರ ತೆರವುಗೊಳಿಸಲಾಗಿದ್ದು, ಅಲ್ಲಿ ದೇವಸ್ಥಾನ ನಿರ್ಮಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ.

ಮುತ್ತುಮಾರಿಯಮ್ಮ ದೇವಸ್ಥಾನ:

80 ವರ್ಷ ಹಳೆಯದಾದ ಮುತ್ತುಮಾರಿಯಮ್ಮನ್ ದೇವಸ್ಥಾನವು ಕಳೆದ 30 ವರ್ಷಗಳಿಂದ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ. ಕಳೆದ ವರ್ಷ ಜನವರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರು ಮೊದಲ ಬಾರಿಗೆ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯಕ್ಕೆ ಪ್ರವೇಶಿಸಿದ್ದಾರೆ. ಇದನ್ನು ಖಂಡಿಸಿ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನವನ್ನು ಸೀಲ್ ಮಾಡಲಾಗಿತ್ತು. ಸುತ್ತಲೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಭವನೀಯ ಜಾತಿ ಹಿಂಸೆ ಹಿನ್ನೆಲೆ ಸುಮಾರು 7 ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು.

ಪೊಂಗಲ್ ಆಚರಣೆಯ ನಂತರ ದೇವಾಲಯದ 12 ದಿನಗಳ ಉತ್ಸವದಲ್ಲಿ ಭಾಗವಾಗಲು ಅವಕಾಶ ನೀಡುವಂತೆ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವರ್ಷ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮದ ದಲಿತ ನಿವಾಸಿ ಸತ್ಯಶೀಲನ್ ಹೇಳಿದ್ದಾರೆ. ತೆನ್ಮುಡಿಯನೂರಿನಲ್ಲಿ ಪ್ರಬಲ ಜಾತಿಯ ಜನರು ಪೊಂಗಲ್ ನಂತರ ಹಬ್ಬಗಳನ್ನು 12 ದಿನಗಳ ಕಾಲ ಆಚರಿಸುತ್ತಾರೆ. ಗ್ರಾಮದಲ್ಲಿ 10ಕ್ಕಿಂತ ಹೆಚ್ಚು ಜಾತಿಗಳ ಜನರಿದ್ದಾರೆ. ಪ್ರತಿ ದಿನದ ಆಚರಣೆಯನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲಾಗುತ್ತದೆ. ದಲಿತ ನಿವಾಸಿಗಳು ತಮ್ಮನ್ನು ಆಚರಣೆಯಲ್ಲಿ ಸೇರಿಸಬೇಕೆಂದು ದೀರ್ಘಕಾಲದಿಂದ ಬೇಡಿಕೆಯಿಟ್ಟರೂ ಏನೂ ಪ್ರಯೋಜನವಿಲ್ಲದಾಗಿದೆ.

ಆ ಪ್ರದೇಶದಲ್ಲಿ ದಲಿತರು ದೇವಸ್ಥಾನಕ್ಕೆ ಪ್ರವೇಶಿಸಿದ ಬಳಿಕ ದಲಿತರ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಹೇರುವುದರ ಜೊತೆಗೆ ಅವರ ಮೇಲೆ ಹಿಂಸಾಚಾರವನ್ನು ಕೂಡ ನಡೆಸಿದ್ದಾರೆ. ದಲಿತರ ಒಡೆತನದ ಸಣ್ಣ ಕೃಷಿ ಭೂಮಿಗಳಿಗೆ ನೀರು ಸರಬರಾಜು ಮಾಡುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಳ್ಳಿಯ ಅನೇಕ ದಲಿತ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗ್ರಾಮದಲ್ಲಿ ದಲಿತ ಒಂಟಿ ಮಹಿಳೆಯ ಮಾಲೀಕತ್ವದ ಅಂಗಡಿಯನ್ನು ಸುಟ್ಟು ಹಾಕಿ ದುಷ್ಕೃತ್ಯವನ್ನು ಮೆರೆಯಲಾತ್ತು.

ಇದನ್ನು ಓದಿ: ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...