Homeಮುಖಪುಟ'ದಲಿತರು' ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ 'ಹೊಸ ವಿಗ್ರಹ' ಪ್ರತಿಷ್ಠಾಪನೆ!

‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

- Advertisement -
- Advertisement -

ತಿರುವಣ್ಣಾಮಲೈ ಜಿಲ್ಲೆಯ ತಂದರಂಪೇಟೆ ಬಳಿಯ ತೆನ್ಮುಡಿಯನೂರ್ ಗ್ರಾಮದ ನೂರಾರು ದಲಿತರು ಜನವರಿ 30, 2023ರಂದು ಮುತ್ತುಮಾರಿಯಮ್ಮನ್ ದೇವಸ್ಥಾನವನ್ನು ಪ್ರವೇಶಿಸಿದ್ದರು. 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತರಿಗೆ ಆ ದೇವಸ್ಥಾನಕ್ಕೆ ಪ್ರವೇಶಕ್ಕೆ ಮೊದಲ ಬಾರಿಗೆ ಅವಕಾಶವನ್ನು ನೀಡಲಾಗಿದ್ದು, ಇದು ತಮಿಳುನಾಡು ಸರಕಾರದ ಐತಿಹಾಸಕ ಕ್ರಮ ಎಂದು ಬಣ್ಣಿಸಲಾಗಿತ್ತು.

ಆದರೆ ಇದಾದ ಬಳಿಕ ಗ್ರಾಮದ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಜನರು ದೇವಸ್ಥಾನಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ದೇವಸ್ಥಾನದಿಂದ ಪ್ರತ್ಯೇಕ ಸ್ಥಳದಲ್ಲಿ ಹೊಸ ಮುತ್ತುಮಾರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಅವರು ಹೊಸ ವಿಗ್ರಹಕ್ಕೆ ಪೂಜೆಗಳನ್ನು ಸಹ ಮಾಡುತ್ತಿದ್ದಾರೆ, ಜನವರಿ 22, 2024ರಂದು ಹೊಸ ವಿಗ್ರಹದೊಂದಿಗೆ ಗ್ರಾಮದಲ್ಲಿ ಮೆರವಣಿಗೆಯನ್ನು ಕೂಡ ನಡೆಸಿದ್ದಾರೆ. ದಲಿತರು ದೇವಾಲಯಕ್ಕೆ ಪ್ರವೇಶಿಸಿದ ನಂತರ ಮೂಲ ದೇವಾಲಯಕ್ಕೆ ಇತರರು ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯಕ್ಕೆ ಸೇರಿದ ಕೆಲ ಜನರು, ಅವರು ಹೊಸ ದೇವಾಲಯವನ್ನು ನಿರ್ಮಿಸಲು ಸರ್ಕಾರಿ ಪೋರಂಬೋಕೆ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತೆನ್ಮುಡಿಯನೂರಿನ ದಲಿತ ನಿವಾಸಿ ಸಿ ಮುರುಗನ್ ಅವರು ಈ ಬಗ್ಗೆ ಮಾತನಾಡಿದ್ದು, ಈ ದೇವಸ್ಥಾನ ಕೇವಲ ಪ್ರಬಲ ಜಾತಿಯ ಜನರಿಗೆ ಮಾತ್ರವಾಗಿದೆ. ಸಮುದಾಯ ಕೊಳದ ಬಳಿ ಹೊಸ ದೇವಸ್ಥಾನವನ್ನು ನಿರ್ಮಿಸಲು ಸವರ್ಣಿಯರು ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೊಳದ ಬಳಿ ವಿಗ್ರಹದ ಮೆರವಣಿಗೆ ಮತ್ತು ನಂತರದ ಪೂಜೆಗಳು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಉದಯರ್ ಸಮುದಾಯದ ಮಾಜಿ ಪಂಚಾಯತ್ ಅಧ್ಯಕ್ಷರಾದ ನಲ್ಲತಂಬಿ ಅವರು ಹೊಸ ದೇವಾಲಯವನ್ನು ನಿರ್ಮಿಸಬಹುದು ಎಂಬ ಆರೋಪವನ್ನು ಅಲ್ಲಗಳೆದಿಲ್ಲ. ಹೊಸ ದೇವಾಲಯವನ್ನು ನಿರ್ಮಿಸಿದರೆ, ಅದನ್ನು ಪಟ್ಟಾ ಭೂಮಿಯಲ್ಲಿ ನಿರ್ಮಿಸಲಾಗುವುದು, ಪೋರಂಬೋಕೆ ಭೂಮಿಯಲ್ಲಿ ಅಲ್ಲ. ಮುತ್ತುಮಾರಿಯಮ್ಮನ ದೇವಸ್ಥಾನದಲ್ಲಿ ಪೂಜೆ ಮಾಡುವುದರ ವಿರುದ್ಧ ಗ್ರಾಮದಲ್ಲಿ ಯಾವುದೇ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ದಲಿತರ ಪ್ರವೇಶದ ನಂತರ ಕೆಲವರು ದೇವಸ್ಥಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ತಂಡರಂಪೇಟೆ ತಹಶೀಲ್ದಾರ್ ಅಬ್ದುಲ್ ರಹೀಂ, ಸಮುದಾಯದ ಹೊಂಡದ ಬಳಿಯಿರುವ ಮೈದಾನವನ್ನು ಪೊಂಗಲ್ ಆಚರಣೆಗೆ ಮಾತ್ರ ತೆರವುಗೊಳಿಸಲಾಗಿದ್ದು, ಅಲ್ಲಿ ದೇವಸ್ಥಾನ ನಿರ್ಮಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ.

ಮುತ್ತುಮಾರಿಯಮ್ಮ ದೇವಸ್ಥಾನ:

80 ವರ್ಷ ಹಳೆಯದಾದ ಮುತ್ತುಮಾರಿಯಮ್ಮನ್ ದೇವಸ್ಥಾನವು ಕಳೆದ 30 ವರ್ಷಗಳಿಂದ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ. ಕಳೆದ ವರ್ಷ ಜನವರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರು ಮೊದಲ ಬಾರಿಗೆ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯಕ್ಕೆ ಪ್ರವೇಶಿಸಿದ್ದಾರೆ. ಇದನ್ನು ಖಂಡಿಸಿ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನವನ್ನು ಸೀಲ್ ಮಾಡಲಾಗಿತ್ತು. ಸುತ್ತಲೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಭವನೀಯ ಜಾತಿ ಹಿಂಸೆ ಹಿನ್ನೆಲೆ ಸುಮಾರು 7 ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು.

ಪೊಂಗಲ್ ಆಚರಣೆಯ ನಂತರ ದೇವಾಲಯದ 12 ದಿನಗಳ ಉತ್ಸವದಲ್ಲಿ ಭಾಗವಾಗಲು ಅವಕಾಶ ನೀಡುವಂತೆ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವರ್ಷ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮದ ದಲಿತ ನಿವಾಸಿ ಸತ್ಯಶೀಲನ್ ಹೇಳಿದ್ದಾರೆ. ತೆನ್ಮುಡಿಯನೂರಿನಲ್ಲಿ ಪ್ರಬಲ ಜಾತಿಯ ಜನರು ಪೊಂಗಲ್ ನಂತರ ಹಬ್ಬಗಳನ್ನು 12 ದಿನಗಳ ಕಾಲ ಆಚರಿಸುತ್ತಾರೆ. ಗ್ರಾಮದಲ್ಲಿ 10ಕ್ಕಿಂತ ಹೆಚ್ಚು ಜಾತಿಗಳ ಜನರಿದ್ದಾರೆ. ಪ್ರತಿ ದಿನದ ಆಚರಣೆಯನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲಾಗುತ್ತದೆ. ದಲಿತ ನಿವಾಸಿಗಳು ತಮ್ಮನ್ನು ಆಚರಣೆಯಲ್ಲಿ ಸೇರಿಸಬೇಕೆಂದು ದೀರ್ಘಕಾಲದಿಂದ ಬೇಡಿಕೆಯಿಟ್ಟರೂ ಏನೂ ಪ್ರಯೋಜನವಿಲ್ಲದಾಗಿದೆ.

ಆ ಪ್ರದೇಶದಲ್ಲಿ ದಲಿತರು ದೇವಸ್ಥಾನಕ್ಕೆ ಪ್ರವೇಶಿಸಿದ ಬಳಿಕ ದಲಿತರ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಹೇರುವುದರ ಜೊತೆಗೆ ಅವರ ಮೇಲೆ ಹಿಂಸಾಚಾರವನ್ನು ಕೂಡ ನಡೆಸಿದ್ದಾರೆ. ದಲಿತರ ಒಡೆತನದ ಸಣ್ಣ ಕೃಷಿ ಭೂಮಿಗಳಿಗೆ ನೀರು ಸರಬರಾಜು ಮಾಡುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಳ್ಳಿಯ ಅನೇಕ ದಲಿತ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗ್ರಾಮದಲ್ಲಿ ದಲಿತ ಒಂಟಿ ಮಹಿಳೆಯ ಮಾಲೀಕತ್ವದ ಅಂಗಡಿಯನ್ನು ಸುಟ್ಟು ಹಾಕಿ ದುಷ್ಕೃತ್ಯವನ್ನು ಮೆರೆಯಲಾತ್ತು.

ಇದನ್ನು ಓದಿ: ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...