Homeದಲಿತ್ ಫೈಲ್ಸ್ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

- Advertisement -
- Advertisement -

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ ವಿರೋಧಿಸಿ ಸರ್ಕಾರಿ ಆಸ್ಪತ್ರೆಯೊಳಗೆ ಪ್ರತಿಭಟನೆ ನಡೆಸಿದೆ.

ಸಂತ್ರಸ್ತ ಕುಟುಂಬವು ನ್ಯಾಯಕ್ಕೆ ಆಗ್ರಹಿಸಿದ್ದು, ನಮ್ಮ ಮನವಿಗಳನ್ನು ನಿರ್ಲಕ್ಷಿಸಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದೆ.

ಫೆಬ್ರವರಿ 26 ರಂದು ದಾಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೋಹನ್ ಸಿಂಗ್ ಮತ್ತು ಬಾಬು ಸಿಂಗ್ ತಮ್ಮ ಮಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಬಲಿಪಶು ಪ್ರೇಮ್‌ಚಂದ್ ಮೋಗಿಯಾ ಆರೋಪಿಸಿದ್ದಾರೆ.

ಪೊಲೀಸರನ್ನು ಸಂಪರ್ಕಿಸಿದಾಗ, ಅಧಿಕಾರಿಗಳು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ಕುಟುಂಬ ಹೇಳಿಕೊಂಡಿದೆ. “ಪೊಲೀಸರು ಕ್ರಮ ಕೈಗೊಳ್ಳದ ಕಾರಣ ನಾವು ಸಿಎಂ ಸಹಾಯವಾಣಿಯ ಮೂಲಕ ದೂರು ನೀಡಬೇಕಾಯಿತು” ಎಂದು ಕುಟುಂಬ ತಿಳಿಸಿದೆ.

ದೂರು ದಾಖಲಿಸಿದ ನಂತರ, ಆರೋಪಿಗಳು ಮಾರ್ಚ್ 15 ರಂದು ಮತ್ತೆ ಕೋಲುಗಳಿಂದ ತಮ್ಮ ಮೇಲೆ ದಾಳಿ ಮಾಡಿದ್ದಾರೆ. ಪತ್ನಿ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರೇಮ್‌ಚಂದ್ ಆರೋಪಿಸಿದ್ದಾರೆ.

“ದಲಿತರ ಮೇಲಿನ ದೌರ್ಜನ್ಯಗಳನ್ನು ನಿಲ್ಲಿಸಿ, ಪೊಲೀಸ್ ರಕ್ಷಣೆಯಲ್ಲಿ ಗೂಂಡಾಗಿರಿಯನ್ನು ನಿಲ್ಲಿಸಿ,
ನಮಗೆ ನ್ಯಾಯ ಕೊಡಿ ಅಥವಾ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ನೀಡಿ” ಎಂಬ ಘೋಷಣೆಗಳನ್ನು ಒಳಗೊಂಡ ಫ್ಲೆಕಾರ್ಡ್‌ಗಳನ್ನು ಹಿಡಿದ ಕುಟುಂಬ, ಆಸ್ಪತ್ರೆ ಒಳಗೆ ಪ್ತಿಭಟನೆ ನಡೆಸಿದೆ.

“ನಮಗೆ ಗ್ರಾಮ ತೊರೆಯುವಂತೆ ಒತ್ತಾಯಿಸಲಾಗುತ್ತಿದೆ, ಜಾತಿವಾದಿ ಗೂಂಡಾಗಳಿಗೆ ಪೊಲೀಸ್ ರಕ್ಷಣೆ ಇರುವುದರಿಂದ, ನಾವು ನಮ್ಮ ಮನೆ ಮತ್ತು ಭೂಮಿಯನ್ನು ತ್ಯಜಿಸಬೇಕಾಗಬಹುದು” ಎಂದು ಅವರು ಫ್ಲೆಕಾರ್ಡ್‌ನಲ್ಲಿ ಬರೆದಿದ್ದಾರೆ.

ಪೊಲೀಸರ ವಿರುದ್ಧ ಆರೋಪ

ಪೊಲೀಸರು ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳನ್ನು ಅನ್ವಯಿಸುತ್ತಿಲ್ಲ ಎಂದು ಬಲಿಪಶುಗಳು ಆರೋಪಿಸಿದ್ದಾರೆ.

“ಅವರು ಉದ್ದೇಶಪೂರ್ವಕವಾಗಿ ಗಂಭೀರ ಆರೋಪಗಳನ್ನು ನಿರ್ಲಕ್ಷಿಸಿದ್ದಾರೆ. ದುರ್ಬಲ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ಕುಟುಂಬ ಆರೋಪಿಸಿದೆ. ದೂರು ಹಿಂಪಡೆಯಲು ನಮ್ಮ ಮೇಲೆ ಒತ್ತಡ ಹೇರಲಾಗಿದೆ ಎಂದು ಹೇಳಿದರು.

ಆರೋಪ ನಿರಾಕರಿಸಿದ ಪೊಲೀಸರು

ಪೊಲೀಸ್ ಅಧಿಕಾರಿಗಳು ಆರೋಪಗಳನ್ನು ತಿರಸ್ಕರಿಸಿದ್ದಾರೆ. ಸ್ಟೇಷನ್ ಹೌಸ್ ಅಧಿಕಾರಿ ಶಬ್ಬಿ ಮ್ಯೂ ಪ್ರತಿಕ್ರಿಯಿಸಿ, “ಆರೋಪಿಗಳಿಗೆ ಯಾವುದೇ ರಕ್ಷಣೆ ನೀಡಲಾಗಿಲ್ಲ. ಆರಂಭಿಕ ದೂರಿನ ಸಮಯದಲ್ಲಿ, ಯಾವುದೇ ಹಲ್ಲೆ ವರದಿಯಾಗಿಲ್ಲ, ಆದ್ದರಿಂದ ನಾವು ವಿಷಯವನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ” ಎಂದಿದ್ದಾರೆ.

ಹಲ್ಲೆಯ ನಂತರ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನೀಮುಚ್ ನಗರ ಪೊಲೀಸ್ ಅಧಿಕಾರಿ ಪುಷ್ಪಾ ಚೌಹಾಣ್ ಹೇಳಿದರು. “ಜಾತಿ ಪ್ರಮಾಣಪತ್ರವನ್ನು ಒದಗಿಸಿದ ನಂತರ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಸೇರಿಸಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳಿಗೆ ಮನವಿ

ನ್ಯಾಯಯುತ ತನಿಖೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ತಕ್ಷಣದ ಭದ್ರತೆಗಾಗಿ ಕುಟುಂಬವು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಮನವಿ ಮಾಡಿದೆ.

“ನಾವು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಂಡಿದ್ದೇವೆ. ನಮಗೆ ನ್ಯಾಯ ನೀಡಿ ಅಥವಾ ನಮ್ಮ ಜೀವನವನ್ನು ಕೊನೆಗೊಳಿಸಲು ನಮಗೆ ಅವಕಾಶ ನೀಡಿ” ಎಂದು ಕುಟುಂಬವು ತಮ್ಮ ಹತಾಶೆಯನ್ನು ಎತ್ತಿ ತೋರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...