Homeದಲಿತ್ ಫೈಲ್ಸ್ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

- Advertisement -
- Advertisement -

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ ವಿರೋಧಿಸಿ ಸರ್ಕಾರಿ ಆಸ್ಪತ್ರೆಯೊಳಗೆ ಪ್ರತಿಭಟನೆ ನಡೆಸಿದೆ.

ಸಂತ್ರಸ್ತ ಕುಟುಂಬವು ನ್ಯಾಯಕ್ಕೆ ಆಗ್ರಹಿಸಿದ್ದು, ನಮ್ಮ ಮನವಿಗಳನ್ನು ನಿರ್ಲಕ್ಷಿಸಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದೆ.

ಫೆಬ್ರವರಿ 26 ರಂದು ದಾಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೋಹನ್ ಸಿಂಗ್ ಮತ್ತು ಬಾಬು ಸಿಂಗ್ ತಮ್ಮ ಮಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಬಲಿಪಶು ಪ್ರೇಮ್‌ಚಂದ್ ಮೋಗಿಯಾ ಆರೋಪಿಸಿದ್ದಾರೆ.

ಪೊಲೀಸರನ್ನು ಸಂಪರ್ಕಿಸಿದಾಗ, ಅಧಿಕಾರಿಗಳು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ಕುಟುಂಬ ಹೇಳಿಕೊಂಡಿದೆ. “ಪೊಲೀಸರು ಕ್ರಮ ಕೈಗೊಳ್ಳದ ಕಾರಣ ನಾವು ಸಿಎಂ ಸಹಾಯವಾಣಿಯ ಮೂಲಕ ದೂರು ನೀಡಬೇಕಾಯಿತು” ಎಂದು ಕುಟುಂಬ ತಿಳಿಸಿದೆ.

ದೂರು ದಾಖಲಿಸಿದ ನಂತರ, ಆರೋಪಿಗಳು ಮಾರ್ಚ್ 15 ರಂದು ಮತ್ತೆ ಕೋಲುಗಳಿಂದ ತಮ್ಮ ಮೇಲೆ ದಾಳಿ ಮಾಡಿದ್ದಾರೆ. ಪತ್ನಿ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರೇಮ್‌ಚಂದ್ ಆರೋಪಿಸಿದ್ದಾರೆ.

“ದಲಿತರ ಮೇಲಿನ ದೌರ್ಜನ್ಯಗಳನ್ನು ನಿಲ್ಲಿಸಿ, ಪೊಲೀಸ್ ರಕ್ಷಣೆಯಲ್ಲಿ ಗೂಂಡಾಗಿರಿಯನ್ನು ನಿಲ್ಲಿಸಿ,
ನಮಗೆ ನ್ಯಾಯ ಕೊಡಿ ಅಥವಾ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ನೀಡಿ” ಎಂಬ ಘೋಷಣೆಗಳನ್ನು ಒಳಗೊಂಡ ಫ್ಲೆಕಾರ್ಡ್‌ಗಳನ್ನು ಹಿಡಿದ ಕುಟುಂಬ, ಆಸ್ಪತ್ರೆ ಒಳಗೆ ಪ್ತಿಭಟನೆ ನಡೆಸಿದೆ.

“ನಮಗೆ ಗ್ರಾಮ ತೊರೆಯುವಂತೆ ಒತ್ತಾಯಿಸಲಾಗುತ್ತಿದೆ, ಜಾತಿವಾದಿ ಗೂಂಡಾಗಳಿಗೆ ಪೊಲೀಸ್ ರಕ್ಷಣೆ ಇರುವುದರಿಂದ, ನಾವು ನಮ್ಮ ಮನೆ ಮತ್ತು ಭೂಮಿಯನ್ನು ತ್ಯಜಿಸಬೇಕಾಗಬಹುದು” ಎಂದು ಅವರು ಫ್ಲೆಕಾರ್ಡ್‌ನಲ್ಲಿ ಬರೆದಿದ್ದಾರೆ.

ಪೊಲೀಸರ ವಿರುದ್ಧ ಆರೋಪ

ಪೊಲೀಸರು ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳನ್ನು ಅನ್ವಯಿಸುತ್ತಿಲ್ಲ ಎಂದು ಬಲಿಪಶುಗಳು ಆರೋಪಿಸಿದ್ದಾರೆ.

“ಅವರು ಉದ್ದೇಶಪೂರ್ವಕವಾಗಿ ಗಂಭೀರ ಆರೋಪಗಳನ್ನು ನಿರ್ಲಕ್ಷಿಸಿದ್ದಾರೆ. ದುರ್ಬಲ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ಕುಟುಂಬ ಆರೋಪಿಸಿದೆ. ದೂರು ಹಿಂಪಡೆಯಲು ನಮ್ಮ ಮೇಲೆ ಒತ್ತಡ ಹೇರಲಾಗಿದೆ ಎಂದು ಹೇಳಿದರು.

ಆರೋಪ ನಿರಾಕರಿಸಿದ ಪೊಲೀಸರು

ಪೊಲೀಸ್ ಅಧಿಕಾರಿಗಳು ಆರೋಪಗಳನ್ನು ತಿರಸ್ಕರಿಸಿದ್ದಾರೆ. ಸ್ಟೇಷನ್ ಹೌಸ್ ಅಧಿಕಾರಿ ಶಬ್ಬಿ ಮ್ಯೂ ಪ್ರತಿಕ್ರಿಯಿಸಿ, “ಆರೋಪಿಗಳಿಗೆ ಯಾವುದೇ ರಕ್ಷಣೆ ನೀಡಲಾಗಿಲ್ಲ. ಆರಂಭಿಕ ದೂರಿನ ಸಮಯದಲ್ಲಿ, ಯಾವುದೇ ಹಲ್ಲೆ ವರದಿಯಾಗಿಲ್ಲ, ಆದ್ದರಿಂದ ನಾವು ವಿಷಯವನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ” ಎಂದಿದ್ದಾರೆ.

ಹಲ್ಲೆಯ ನಂತರ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನೀಮುಚ್ ನಗರ ಪೊಲೀಸ್ ಅಧಿಕಾರಿ ಪುಷ್ಪಾ ಚೌಹಾಣ್ ಹೇಳಿದರು. “ಜಾತಿ ಪ್ರಮಾಣಪತ್ರವನ್ನು ಒದಗಿಸಿದ ನಂತರ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಸೇರಿಸಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳಿಗೆ ಮನವಿ

ನ್ಯಾಯಯುತ ತನಿಖೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ತಕ್ಷಣದ ಭದ್ರತೆಗಾಗಿ ಕುಟುಂಬವು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಮನವಿ ಮಾಡಿದೆ.

“ನಾವು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಂಡಿದ್ದೇವೆ. ನಮಗೆ ನ್ಯಾಯ ನೀಡಿ ಅಥವಾ ನಮ್ಮ ಜೀವನವನ್ನು ಕೊನೆಗೊಳಿಸಲು ನಮಗೆ ಅವಕಾಶ ನೀಡಿ” ಎಂದು ಕುಟುಂಬವು ತಮ್ಮ ಹತಾಶೆಯನ್ನು ಎತ್ತಿ ತೋರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...