Homeದಲಿತ್ ಫೈಲ್ಸ್ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

- Advertisement -
- Advertisement -

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ ವಿರೋಧಿಸಿ ಸರ್ಕಾರಿ ಆಸ್ಪತ್ರೆಯೊಳಗೆ ಪ್ರತಿಭಟನೆ ನಡೆಸಿದೆ.

ಸಂತ್ರಸ್ತ ಕುಟುಂಬವು ನ್ಯಾಯಕ್ಕೆ ಆಗ್ರಹಿಸಿದ್ದು, ನಮ್ಮ ಮನವಿಗಳನ್ನು ನಿರ್ಲಕ್ಷಿಸಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದೆ.

ಫೆಬ್ರವರಿ 26 ರಂದು ದಾಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೋಹನ್ ಸಿಂಗ್ ಮತ್ತು ಬಾಬು ಸಿಂಗ್ ತಮ್ಮ ಮಗಳ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಬಲಿಪಶು ಪ್ರೇಮ್‌ಚಂದ್ ಮೋಗಿಯಾ ಆರೋಪಿಸಿದ್ದಾರೆ.

ಪೊಲೀಸರನ್ನು ಸಂಪರ್ಕಿಸಿದಾಗ, ಅಧಿಕಾರಿಗಳು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ಕುಟುಂಬ ಹೇಳಿಕೊಂಡಿದೆ. “ಪೊಲೀಸರು ಕ್ರಮ ಕೈಗೊಳ್ಳದ ಕಾರಣ ನಾವು ಸಿಎಂ ಸಹಾಯವಾಣಿಯ ಮೂಲಕ ದೂರು ನೀಡಬೇಕಾಯಿತು” ಎಂದು ಕುಟುಂಬ ತಿಳಿಸಿದೆ.

ದೂರು ದಾಖಲಿಸಿದ ನಂತರ, ಆರೋಪಿಗಳು ಮಾರ್ಚ್ 15 ರಂದು ಮತ್ತೆ ಕೋಲುಗಳಿಂದ ತಮ್ಮ ಮೇಲೆ ದಾಳಿ ಮಾಡಿದ್ದಾರೆ. ಪತ್ನಿ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರೇಮ್‌ಚಂದ್ ಆರೋಪಿಸಿದ್ದಾರೆ.

“ದಲಿತರ ಮೇಲಿನ ದೌರ್ಜನ್ಯಗಳನ್ನು ನಿಲ್ಲಿಸಿ, ಪೊಲೀಸ್ ರಕ್ಷಣೆಯಲ್ಲಿ ಗೂಂಡಾಗಿರಿಯನ್ನು ನಿಲ್ಲಿಸಿ,
ನಮಗೆ ನ್ಯಾಯ ಕೊಡಿ ಅಥವಾ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ನೀಡಿ” ಎಂಬ ಘೋಷಣೆಗಳನ್ನು ಒಳಗೊಂಡ ಫ್ಲೆಕಾರ್ಡ್‌ಗಳನ್ನು ಹಿಡಿದ ಕುಟುಂಬ, ಆಸ್ಪತ್ರೆ ಒಳಗೆ ಪ್ತಿಭಟನೆ ನಡೆಸಿದೆ.

“ನಮಗೆ ಗ್ರಾಮ ತೊರೆಯುವಂತೆ ಒತ್ತಾಯಿಸಲಾಗುತ್ತಿದೆ, ಜಾತಿವಾದಿ ಗೂಂಡಾಗಳಿಗೆ ಪೊಲೀಸ್ ರಕ್ಷಣೆ ಇರುವುದರಿಂದ, ನಾವು ನಮ್ಮ ಮನೆ ಮತ್ತು ಭೂಮಿಯನ್ನು ತ್ಯಜಿಸಬೇಕಾಗಬಹುದು” ಎಂದು ಅವರು ಫ್ಲೆಕಾರ್ಡ್‌ನಲ್ಲಿ ಬರೆದಿದ್ದಾರೆ.

ಪೊಲೀಸರ ವಿರುದ್ಧ ಆರೋಪ

ಪೊಲೀಸರು ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳನ್ನು ಅನ್ವಯಿಸುತ್ತಿಲ್ಲ ಎಂದು ಬಲಿಪಶುಗಳು ಆರೋಪಿಸಿದ್ದಾರೆ.

“ಅವರು ಉದ್ದೇಶಪೂರ್ವಕವಾಗಿ ಗಂಭೀರ ಆರೋಪಗಳನ್ನು ನಿರ್ಲಕ್ಷಿಸಿದ್ದಾರೆ. ದುರ್ಬಲ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ಕುಟುಂಬ ಆರೋಪಿಸಿದೆ. ದೂರು ಹಿಂಪಡೆಯಲು ನಮ್ಮ ಮೇಲೆ ಒತ್ತಡ ಹೇರಲಾಗಿದೆ ಎಂದು ಹೇಳಿದರು.

ಆರೋಪ ನಿರಾಕರಿಸಿದ ಪೊಲೀಸರು

ಪೊಲೀಸ್ ಅಧಿಕಾರಿಗಳು ಆರೋಪಗಳನ್ನು ತಿರಸ್ಕರಿಸಿದ್ದಾರೆ. ಸ್ಟೇಷನ್ ಹೌಸ್ ಅಧಿಕಾರಿ ಶಬ್ಬಿ ಮ್ಯೂ ಪ್ರತಿಕ್ರಿಯಿಸಿ, “ಆರೋಪಿಗಳಿಗೆ ಯಾವುದೇ ರಕ್ಷಣೆ ನೀಡಲಾಗಿಲ್ಲ. ಆರಂಭಿಕ ದೂರಿನ ಸಮಯದಲ್ಲಿ, ಯಾವುದೇ ಹಲ್ಲೆ ವರದಿಯಾಗಿಲ್ಲ, ಆದ್ದರಿಂದ ನಾವು ವಿಷಯವನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ” ಎಂದಿದ್ದಾರೆ.

ಹಲ್ಲೆಯ ನಂತರ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನೀಮುಚ್ ನಗರ ಪೊಲೀಸ್ ಅಧಿಕಾರಿ ಪುಷ್ಪಾ ಚೌಹಾಣ್ ಹೇಳಿದರು. “ಜಾತಿ ಪ್ರಮಾಣಪತ್ರವನ್ನು ಒದಗಿಸಿದ ನಂತರ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಸೇರಿಸಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳಿಗೆ ಮನವಿ

ನ್ಯಾಯಯುತ ತನಿಖೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ತಕ್ಷಣದ ಭದ್ರತೆಗಾಗಿ ಕುಟುಂಬವು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಮನವಿ ಮಾಡಿದೆ.

“ನಾವು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಂಡಿದ್ದೇವೆ. ನಮಗೆ ನ್ಯಾಯ ನೀಡಿ ಅಥವಾ ನಮ್ಮ ಜೀವನವನ್ನು ಕೊನೆಗೊಳಿಸಲು ನಮಗೆ ಅವಕಾಶ ನೀಡಿ” ಎಂದು ಕುಟುಂಬವು ತಮ್ಮ ಹತಾಶೆಯನ್ನು ಎತ್ತಿ ತೋರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...