Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

- Advertisement -
- Advertisement -

ಕೈಯಲ್ಲಿ ಕೇವಲ ₹70, ನ್ಯಾಯಕ್ಕಾಗಿ ಮನವಿ; 35 ವರ್ಷದ ರತನ್ ತಮ್ಮ ಇಬ್ಬರು ಸಹೋದರಿಯರು ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಪುಣೆಯಿಂದ ಮುಂಬೈಗೆ 150 ಕಿ.ಮೀ.ಗೂ ಹೆಚ್ಚು ನಡೆದುಕೊಂಡು ತಲುಪಿದ್ದಾರೆ. ತಮ್ಮ ಕಷ್ಟದ ಸ್ಥಿತಿಯನ್ನು ವಿವರಿಸುವ ಪೋಸ್ಟರ್‌ಗಳನ್ನು ಹಿಡಿದು, ಫೆಬ್ರವರಿ 7 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿ ಫೆಬ್ರವರಿ 13 ರಂದು ಆಜಾದ್ ಮೈದಾನಕ್ಕೆ ಆಗಮಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಲು ಬಯಸಿದರು. ಆದರೆ, ಹತ್ತು ದಿನಗಳ ನಂತರವೂ ಅವರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಅವರ ಈ ಪಾದಯಾತ್ರೆಯು ಜಾತಿ ಆಧಾರಿತ ಹಿಂಸೆ ಮತ್ತು ಸರ್ಕಾರಿ ಸಾಂಸ್ಥಿಕ ನಿರ್ಲಕ್ಷ್ಯದ ವಿರುದ್ಧವಾಗಿದೆ. ಪಿಂಪ್ರಿ-ಚಿಂಚ್‌ವಾಡ್‌ನ ಥೆರ್‌ಗಾಂವ್ ನಿವಾಸಿಗಳಾದ ರತನ್ ಮತ್ತು ಅವರ ಕುಟುಂಬವು ಮತಂಗ್ (ಮಾಂಗ್) ಸಮುದಾಯಕ್ಕೆ ಸೇರಿದವರು; ಈ ಸಮುದಾಯವು ಐತಿಹಾಸಿಕವಾಗಿ ಅಂಚಿನಲ್ಲಿರುವ ಮತ್ತು ತಾರತಮ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿಯಾಗಿದೆ. ಎರಡು ವರ್ಷಗಳ ಹಿಂದೆ ರತನ್ ಅವರ 14 ವರ್ಷದ ಮಗ ಕರಣ್ ಮೇಲೆ ಜಾತಿ ನಿಂದನೆ ಮಾಡಿ, ನೆರೆಹೊರೆಯ ಪ್ರಬಲ ಜಾತಿ ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿದ್ದರು. ಬಳಿಕ, ಅವರ ಕುಟುಂಬಕ್ಕೆ ಸಂಕಷ್ಟ ಪ್ರಾರಂಭವಾಯಿತು.

ಅಂದಿನಿಂದ, ಪದೇಪದೆ ಮೇಲ್ಜಾತಿಯ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಜಾತಿ ಆಧಾರಿತ ಅವಮಾನಗಳನ್ನು ನಡೆಸಿ, ದೈಹಿಕವಾಗಿ ಹಲ್ಲೆ ಮಾಡಿ, ಅವರ ಜೀವನವನ್ನು ಅಸಹನೀಯವಾಗಿಸಿದ್ದಾರೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ನನ್ನ ಸೋದರಳಿಯನಿಗೆ, ನೀವು ಮಂಗಿಗಳೇ, ಬೆಳಿಗ್ಗೆ ಯಾಕೆ ನಿಮ್ಮ ಮುಖವನ್ನು ತೋರಿಸುತ್ತೀರಿ ಎಂದು ಅವಮಾಣಿಸಲಾಯಿತು” ಎಂದು ರತನ್ ಅವರ ಸಹೋದರಿ 32 ವರ್ಷದ ರೇಷ್ಮಾ ಚೌಹಾಣ್ ಹೇಳಿದರು. “ಅವರು ಯಾವುದೇ ಕಾರಣವಿಲ್ಲದೆ ಜಗಳವಾಡುತ್ತಾರೆ, ಈಗ ನಮಗೆ ಜೀವ ಭಯವಿದೆ” ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದಾಗ ಕುಟುಂಬದ ತೊಂದರೆಗಳು ಇನ್ನಷ್ಟು ಹೆಚ್ಚಾದವು. ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೊಲೀಸರಿಗೆ ಹಲವಾರು ದೂರುಗಳನ್ನು ನೀಡಿದ್ದರೂ, ಯಾವುದೇ ಎಫ್‌ಆಐಆರ್‌ ದಾಖಲಾಗಿಲ್ಲ. ಬದಲಾಗಿ, ಆರು ತಿಂಗಳ ಹಿಂದೆ ಯಾವುದೇ ಮುನ್ಸೂಚನೆಯಿಲ್ಲದೆ ನಮ್ಮ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಬಾಪುಜಿ ಬುವಾ ದೇವಸ್ಥಾನದ ಬಳಿಯ ಸಾರ್ವಜನಿಕ ತೊಟ್ಟಿಯಿಂದ ನೀರು ತರಲು ಒತ್ತಾಯಿಸಲಾಯಿತು. ನಾವು ಮತ್ತಷ್ಟು ಅವಮಾನವನ್ನು ಎದುರಿಸಿದೆವು, ಸ್ಥಳೀಯರು ನಮ್ಮನ್ನು ಓಡಿಸಲು ನಮ್ಮ ನೀರಿನ ಪಾತ್ರೆಗಳಿಗೆ ಸತ್ತ ಇಲಿಗಳನ್ನು ಎಸೆದರು” ಎಂದು ರೇಷ್ಮಾ ತಾವು ಅನುಭವಿಸುತ್ತಿರುವ ದೌರ್ಜನ್ಯದ ಕುರಿತು ವಿವರಿಸಿದ್ದಾರೆ.

ರತನ್ ಅವರ ಕಿರಿಯ ಸಹೋದರಿ 23 ವರ್ಷದ ಸೋನಮ್ ಲೊಂಡೆ ಮಾತನಾಡಿ, ತಮ್ಮ ಮನೆಗೆ ಬಲವಂತವಾಗಿ ಪ್ರವೇಶಿಸುವುದು ಸೇರಿದಂತೆ ಹಲವು ಭಾರಿ ದೈಹಿಕ ಹಿಂಸೆಯ ಘಟನೆಗಳ ನಂತರ ದೌರ್ಜನ್ಯಗಳನ್ನು ದಾಖಲಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ ಎಂದು ಹೇಳಿದರು. “ದುರದೃಷ್ಟವಶಾತ್, ಅವರು ಕೆಲವು ಅಪರಿಚಿತರೊಂದಿಗೆ ಬಂದು, ಸಿಸಿಟಿವಿಯನ್ನು ಬಟ್ಟೆಯಿಂದ ಮುಚ್ಚಿ, ಕ್ಯಾಮೆರಾದಿಂದ ಮೆಮೊರಿ ಚಿಪ್ ಅನ್ನು ತೆಗೆದರು” ಎಂದು ಅವರು ಹೇಳಿದರು.

ಒಳಚರಂಡಿ ಕಾಮಗಾರಿ ನಮ್ಮ ಆಸ್ತಿಯನ್ನು ಅತಿಕ್ರಮಿಸುತ್ತಿರುವ ಬಗ್ಗೆ ನೆರೆಹೊರೆಯವರಲ್ಲಿ ಒಬ್ಬರನ್ನು ಪ್ರಶ್ನಿಸಿದಾಗ ವಾದವು ಉಲ್ಬಣಗೊಂಡಿತು ಎಂದು ಲೊಂಡೆ ನೆನಪಿಸಿಕೊಂಡರು. “ವಾಕಾಡ್ ಪೊಲೀಸರು ನನ್ನನ್ನು ಠಾಣೆಗೆ ಕರೆದೊಯ್ದು ಒಂದು ರಾತ್ರಿ ಬಂಧನದಲ್ಲಿಟ್ಟರು” ಎಂದು ಅವರು ಹೇಳಿದರು.

“ನಾವು ಇಲ್ಲಿ ವಾಸಿಸುವ ಎರಡನೇ ತಲೆಮಾರಿನವರಾಗಿದ್ದರೂ, ಮಾಲೀಕತ್ವದ ದಾಖಲೆಗಳನ್ನು ತೋರಿಸಲು ನಮ್ಮನ್ನು ಕೇಳಲಾಯಿತು. ಇದು ಜಾತಿ ಆಧಾರಿತ ಹಿಂಸಾಚಾರವನ್ನು ಮುಚ್ಚಿಹಾಕುವ ಪ್ರಯತ್ನವಾಗಿರಬಹುದು ಅಥವಾ ನಮ್ಮಿಂದ ಏನನ್ನಾದರೂ ಪಡೆಯಲು ಜಾತಿ ಆಧಾರಿತ ಘಟನೆಗಳಿಗೆ ನಮ್ಮನ್ನು ಪ್ರಚೋದಿಸಿರಬಹುದು” ಎಂದು ಲೊಂಡೆ ಹೇಳಿದರು.

ಕಳೆದ ನವೆಂಬರ್‌ನಲ್ಲಿ, ಕುಟುಂಬವು ಹೊರಗೆ ಅಡುಗೆ ಮಾಡುತ್ತಿದ್ದಾಗ, ಕಿರುಕುಳ ನೀಡುತಿದ್ದವರು ಪೊಲೀಸರೊಂದಿಗೆ ಬಂದು ಕೂಗಾಡಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. “ಅವರು ನನ್ನ 10 ವರ್ಷದ ಮಗಳು ನೂತನ್‌ಗೆ ಹೊಡೆದು, ನಾವು ದಾಖಲಿಸಿದ್ದ ಸಾಕ್ಷ್ಯವನ್ನು ಅಳಿಸಲು ನನ್ನ ಫೋನ್ ಕಸಿದುಕೊಂಡರು. ನಮ್ಮ ಮೊಬೈಲ್ ಫೋನ್ ಇನ್ನೂ ಅವರ ಬಳಿಯೇ ಇದೆ” ಎಂದು ರತನ್ ಹೇಳಿದರು.

ಇದರ ನಂತರ, ಸಂತ್ರಸ್ತರು ಆಯುಕ್ತರನ್ನು ಭೇಟಿ ಮಾಡಲು ಪಿಸಿಎಂಸಿ ಕಚೇರಿಗೆ ಹೋದರು. ಆದರೆ, ಅವರು ವಿಫಲರಾದರು ಎಂದು ರತನ್ ಹೇಳಿದರು. “ನಮ್ಮನ್ನು ಕಾಲೇವಾಡಿ ಪೊಲೀಸ್ ಠಾಣೆಗೆ ತೆರಳುವಂತೆ ನಿರ್ದೇಶಿಸಲಾಯಿತು, ಅಲ್ಲಿ ಅಧಿಕಾರಿಗಳು ಬೆಳಿಗ್ಗೆ 11 ಗಂಟೆಯಿಂದ ಮಧ್ಯರಾತ್ರಿಯವರೆಗೆ ಬಂಧಿಸಿ, ನೆಲವನ್ನು ಸ್ವಚ್ಛಗೊಳಿಸಲು ಒತ್ತಾಯಿಸಿ, ಪ್ರಕರಣ ದಾಖಲಿಸದೆ ನಮ್ಮನ್ನು ಕಳುಹಿಸಿದರು” ಎಂದು ರೇಷ್ಮಾ ಆರೋಪಿಸಿದರು.

ಫೆಬ್ರವರಿ 5 ರಂದು, ಪೊಲೀಸ್ ದೂರು ದಾಖಲಿಸಲು ಮತ್ತೊಂದು ವಿಫಲ ಪ್ರಯತ್ನದ ನಂತರ, ಕುಟುಂಬವು ಮರುದಿನ ಪಿಸಿಎಂಸಿ ಆಯುಕ್ತರ ಕಚೇರಿಗೆ ಲಿಖಿತ ದೂರು ಸಲ್ಲಿಸಿತು. ಯಾವುದೇ ಆಯ್ಕೆಗಳು ಉಳಿದಿಲ್ಲದ ಕಾರಣ, ಅವರು ನ್ಯಾಯಕ್ಕಾಗಿ ಮುಂಬೈಗೆ ಮೆರವಣಿಗೆ ನಡೆಸಲು ನಿರ್ಧರಿಸಿದರು.

ಇದನ್ನೂ ಓದಿ; ಉತ್ತರ ಪ್ರದೇಶ| ದಲಿತರ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...