Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

- Advertisement -
- Advertisement -

ಕೈಯಲ್ಲಿ ಕೇವಲ ₹70, ನ್ಯಾಯಕ್ಕಾಗಿ ಮನವಿ; 35 ವರ್ಷದ ರತನ್ ತಮ್ಮ ಇಬ್ಬರು ಸಹೋದರಿಯರು ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಪುಣೆಯಿಂದ ಮುಂಬೈಗೆ 150 ಕಿ.ಮೀ.ಗೂ ಹೆಚ್ಚು ನಡೆದುಕೊಂಡು ತಲುಪಿದ್ದಾರೆ. ತಮ್ಮ ಕಷ್ಟದ ಸ್ಥಿತಿಯನ್ನು ವಿವರಿಸುವ ಪೋಸ್ಟರ್‌ಗಳನ್ನು ಹಿಡಿದು, ಫೆಬ್ರವರಿ 7 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿ ಫೆಬ್ರವರಿ 13 ರಂದು ಆಜಾದ್ ಮೈದಾನಕ್ಕೆ ಆಗಮಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಲು ಬಯಸಿದರು. ಆದರೆ, ಹತ್ತು ದಿನಗಳ ನಂತರವೂ ಅವರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಅವರ ಈ ಪಾದಯಾತ್ರೆಯು ಜಾತಿ ಆಧಾರಿತ ಹಿಂಸೆ ಮತ್ತು ಸರ್ಕಾರಿ ಸಾಂಸ್ಥಿಕ ನಿರ್ಲಕ್ಷ್ಯದ ವಿರುದ್ಧವಾಗಿದೆ. ಪಿಂಪ್ರಿ-ಚಿಂಚ್‌ವಾಡ್‌ನ ಥೆರ್‌ಗಾಂವ್ ನಿವಾಸಿಗಳಾದ ರತನ್ ಮತ್ತು ಅವರ ಕುಟುಂಬವು ಮತಂಗ್ (ಮಾಂಗ್) ಸಮುದಾಯಕ್ಕೆ ಸೇರಿದವರು; ಈ ಸಮುದಾಯವು ಐತಿಹಾಸಿಕವಾಗಿ ಅಂಚಿನಲ್ಲಿರುವ ಮತ್ತು ತಾರತಮ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿಯಾಗಿದೆ. ಎರಡು ವರ್ಷಗಳ ಹಿಂದೆ ರತನ್ ಅವರ 14 ವರ್ಷದ ಮಗ ಕರಣ್ ಮೇಲೆ ಜಾತಿ ನಿಂದನೆ ಮಾಡಿ, ನೆರೆಹೊರೆಯ ಪ್ರಬಲ ಜಾತಿ ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿದ್ದರು. ಬಳಿಕ, ಅವರ ಕುಟುಂಬಕ್ಕೆ ಸಂಕಷ್ಟ ಪ್ರಾರಂಭವಾಯಿತು.

ಅಂದಿನಿಂದ, ಪದೇಪದೆ ಮೇಲ್ಜಾತಿಯ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಜಾತಿ ಆಧಾರಿತ ಅವಮಾನಗಳನ್ನು ನಡೆಸಿ, ದೈಹಿಕವಾಗಿ ಹಲ್ಲೆ ಮಾಡಿ, ಅವರ ಜೀವನವನ್ನು ಅಸಹನೀಯವಾಗಿಸಿದ್ದಾರೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ನನ್ನ ಸೋದರಳಿಯನಿಗೆ, ನೀವು ಮಂಗಿಗಳೇ, ಬೆಳಿಗ್ಗೆ ಯಾಕೆ ನಿಮ್ಮ ಮುಖವನ್ನು ತೋರಿಸುತ್ತೀರಿ ಎಂದು ಅವಮಾಣಿಸಲಾಯಿತು” ಎಂದು ರತನ್ ಅವರ ಸಹೋದರಿ 32 ವರ್ಷದ ರೇಷ್ಮಾ ಚೌಹಾಣ್ ಹೇಳಿದರು. “ಅವರು ಯಾವುದೇ ಕಾರಣವಿಲ್ಲದೆ ಜಗಳವಾಡುತ್ತಾರೆ, ಈಗ ನಮಗೆ ಜೀವ ಭಯವಿದೆ” ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದಾಗ ಕುಟುಂಬದ ತೊಂದರೆಗಳು ಇನ್ನಷ್ಟು ಹೆಚ್ಚಾದವು. ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೊಲೀಸರಿಗೆ ಹಲವಾರು ದೂರುಗಳನ್ನು ನೀಡಿದ್ದರೂ, ಯಾವುದೇ ಎಫ್‌ಆಐಆರ್‌ ದಾಖಲಾಗಿಲ್ಲ. ಬದಲಾಗಿ, ಆರು ತಿಂಗಳ ಹಿಂದೆ ಯಾವುದೇ ಮುನ್ಸೂಚನೆಯಿಲ್ಲದೆ ನಮ್ಮ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಬಾಪುಜಿ ಬುವಾ ದೇವಸ್ಥಾನದ ಬಳಿಯ ಸಾರ್ವಜನಿಕ ತೊಟ್ಟಿಯಿಂದ ನೀರು ತರಲು ಒತ್ತಾಯಿಸಲಾಯಿತು. ನಾವು ಮತ್ತಷ್ಟು ಅವಮಾನವನ್ನು ಎದುರಿಸಿದೆವು, ಸ್ಥಳೀಯರು ನಮ್ಮನ್ನು ಓಡಿಸಲು ನಮ್ಮ ನೀರಿನ ಪಾತ್ರೆಗಳಿಗೆ ಸತ್ತ ಇಲಿಗಳನ್ನು ಎಸೆದರು” ಎಂದು ರೇಷ್ಮಾ ತಾವು ಅನುಭವಿಸುತ್ತಿರುವ ದೌರ್ಜನ್ಯದ ಕುರಿತು ವಿವರಿಸಿದ್ದಾರೆ.

ರತನ್ ಅವರ ಕಿರಿಯ ಸಹೋದರಿ 23 ವರ್ಷದ ಸೋನಮ್ ಲೊಂಡೆ ಮಾತನಾಡಿ, ತಮ್ಮ ಮನೆಗೆ ಬಲವಂತವಾಗಿ ಪ್ರವೇಶಿಸುವುದು ಸೇರಿದಂತೆ ಹಲವು ಭಾರಿ ದೈಹಿಕ ಹಿಂಸೆಯ ಘಟನೆಗಳ ನಂತರ ದೌರ್ಜನ್ಯಗಳನ್ನು ದಾಖಲಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ ಎಂದು ಹೇಳಿದರು. “ದುರದೃಷ್ಟವಶಾತ್, ಅವರು ಕೆಲವು ಅಪರಿಚಿತರೊಂದಿಗೆ ಬಂದು, ಸಿಸಿಟಿವಿಯನ್ನು ಬಟ್ಟೆಯಿಂದ ಮುಚ್ಚಿ, ಕ್ಯಾಮೆರಾದಿಂದ ಮೆಮೊರಿ ಚಿಪ್ ಅನ್ನು ತೆಗೆದರು” ಎಂದು ಅವರು ಹೇಳಿದರು.

ಒಳಚರಂಡಿ ಕಾಮಗಾರಿ ನಮ್ಮ ಆಸ್ತಿಯನ್ನು ಅತಿಕ್ರಮಿಸುತ್ತಿರುವ ಬಗ್ಗೆ ನೆರೆಹೊರೆಯವರಲ್ಲಿ ಒಬ್ಬರನ್ನು ಪ್ರಶ್ನಿಸಿದಾಗ ವಾದವು ಉಲ್ಬಣಗೊಂಡಿತು ಎಂದು ಲೊಂಡೆ ನೆನಪಿಸಿಕೊಂಡರು. “ವಾಕಾಡ್ ಪೊಲೀಸರು ನನ್ನನ್ನು ಠಾಣೆಗೆ ಕರೆದೊಯ್ದು ಒಂದು ರಾತ್ರಿ ಬಂಧನದಲ್ಲಿಟ್ಟರು” ಎಂದು ಅವರು ಹೇಳಿದರು.

“ನಾವು ಇಲ್ಲಿ ವಾಸಿಸುವ ಎರಡನೇ ತಲೆಮಾರಿನವರಾಗಿದ್ದರೂ, ಮಾಲೀಕತ್ವದ ದಾಖಲೆಗಳನ್ನು ತೋರಿಸಲು ನಮ್ಮನ್ನು ಕೇಳಲಾಯಿತು. ಇದು ಜಾತಿ ಆಧಾರಿತ ಹಿಂಸಾಚಾರವನ್ನು ಮುಚ್ಚಿಹಾಕುವ ಪ್ರಯತ್ನವಾಗಿರಬಹುದು ಅಥವಾ ನಮ್ಮಿಂದ ಏನನ್ನಾದರೂ ಪಡೆಯಲು ಜಾತಿ ಆಧಾರಿತ ಘಟನೆಗಳಿಗೆ ನಮ್ಮನ್ನು ಪ್ರಚೋದಿಸಿರಬಹುದು” ಎಂದು ಲೊಂಡೆ ಹೇಳಿದರು.

ಕಳೆದ ನವೆಂಬರ್‌ನಲ್ಲಿ, ಕುಟುಂಬವು ಹೊರಗೆ ಅಡುಗೆ ಮಾಡುತ್ತಿದ್ದಾಗ, ಕಿರುಕುಳ ನೀಡುತಿದ್ದವರು ಪೊಲೀಸರೊಂದಿಗೆ ಬಂದು ಕೂಗಾಡಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. “ಅವರು ನನ್ನ 10 ವರ್ಷದ ಮಗಳು ನೂತನ್‌ಗೆ ಹೊಡೆದು, ನಾವು ದಾಖಲಿಸಿದ್ದ ಸಾಕ್ಷ್ಯವನ್ನು ಅಳಿಸಲು ನನ್ನ ಫೋನ್ ಕಸಿದುಕೊಂಡರು. ನಮ್ಮ ಮೊಬೈಲ್ ಫೋನ್ ಇನ್ನೂ ಅವರ ಬಳಿಯೇ ಇದೆ” ಎಂದು ರತನ್ ಹೇಳಿದರು.

ಇದರ ನಂತರ, ಸಂತ್ರಸ್ತರು ಆಯುಕ್ತರನ್ನು ಭೇಟಿ ಮಾಡಲು ಪಿಸಿಎಂಸಿ ಕಚೇರಿಗೆ ಹೋದರು. ಆದರೆ, ಅವರು ವಿಫಲರಾದರು ಎಂದು ರತನ್ ಹೇಳಿದರು. “ನಮ್ಮನ್ನು ಕಾಲೇವಾಡಿ ಪೊಲೀಸ್ ಠಾಣೆಗೆ ತೆರಳುವಂತೆ ನಿರ್ದೇಶಿಸಲಾಯಿತು, ಅಲ್ಲಿ ಅಧಿಕಾರಿಗಳು ಬೆಳಿಗ್ಗೆ 11 ಗಂಟೆಯಿಂದ ಮಧ್ಯರಾತ್ರಿಯವರೆಗೆ ಬಂಧಿಸಿ, ನೆಲವನ್ನು ಸ್ವಚ್ಛಗೊಳಿಸಲು ಒತ್ತಾಯಿಸಿ, ಪ್ರಕರಣ ದಾಖಲಿಸದೆ ನಮ್ಮನ್ನು ಕಳುಹಿಸಿದರು” ಎಂದು ರೇಷ್ಮಾ ಆರೋಪಿಸಿದರು.

ಫೆಬ್ರವರಿ 5 ರಂದು, ಪೊಲೀಸ್ ದೂರು ದಾಖಲಿಸಲು ಮತ್ತೊಂದು ವಿಫಲ ಪ್ರಯತ್ನದ ನಂತರ, ಕುಟುಂಬವು ಮರುದಿನ ಪಿಸಿಎಂಸಿ ಆಯುಕ್ತರ ಕಚೇರಿಗೆ ಲಿಖಿತ ದೂರು ಸಲ್ಲಿಸಿತು. ಯಾವುದೇ ಆಯ್ಕೆಗಳು ಉಳಿದಿಲ್ಲದ ಕಾರಣ, ಅವರು ನ್ಯಾಯಕ್ಕಾಗಿ ಮುಂಬೈಗೆ ಮೆರವಣಿಗೆ ನಡೆಸಲು ನಿರ್ಧರಿಸಿದರು.

ಇದನ್ನೂ ಓದಿ; ಉತ್ತರ ಪ್ರದೇಶ| ದಲಿತರ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...