Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

- Advertisement -
- Advertisement -

ಕೈಯಲ್ಲಿ ಕೇವಲ ₹70, ನ್ಯಾಯಕ್ಕಾಗಿ ಮನವಿ; 35 ವರ್ಷದ ರತನ್ ತಮ್ಮ ಇಬ್ಬರು ಸಹೋದರಿಯರು ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಪುಣೆಯಿಂದ ಮುಂಬೈಗೆ 150 ಕಿ.ಮೀ.ಗೂ ಹೆಚ್ಚು ನಡೆದುಕೊಂಡು ತಲುಪಿದ್ದಾರೆ. ತಮ್ಮ ಕಷ್ಟದ ಸ್ಥಿತಿಯನ್ನು ವಿವರಿಸುವ ಪೋಸ್ಟರ್‌ಗಳನ್ನು ಹಿಡಿದು, ಫೆಬ್ರವರಿ 7 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿ ಫೆಬ್ರವರಿ 13 ರಂದು ಆಜಾದ್ ಮೈದಾನಕ್ಕೆ ಆಗಮಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಲು ಬಯಸಿದರು. ಆದರೆ, ಹತ್ತು ದಿನಗಳ ನಂತರವೂ ಅವರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಅವರ ಈ ಪಾದಯಾತ್ರೆಯು ಜಾತಿ ಆಧಾರಿತ ಹಿಂಸೆ ಮತ್ತು ಸರ್ಕಾರಿ ಸಾಂಸ್ಥಿಕ ನಿರ್ಲಕ್ಷ್ಯದ ವಿರುದ್ಧವಾಗಿದೆ. ಪಿಂಪ್ರಿ-ಚಿಂಚ್‌ವಾಡ್‌ನ ಥೆರ್‌ಗಾಂವ್ ನಿವಾಸಿಗಳಾದ ರತನ್ ಮತ್ತು ಅವರ ಕುಟುಂಬವು ಮತಂಗ್ (ಮಾಂಗ್) ಸಮುದಾಯಕ್ಕೆ ಸೇರಿದವರು; ಈ ಸಮುದಾಯವು ಐತಿಹಾಸಿಕವಾಗಿ ಅಂಚಿನಲ್ಲಿರುವ ಮತ್ತು ತಾರತಮ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿಯಾಗಿದೆ. ಎರಡು ವರ್ಷಗಳ ಹಿಂದೆ ರತನ್ ಅವರ 14 ವರ್ಷದ ಮಗ ಕರಣ್ ಮೇಲೆ ಜಾತಿ ನಿಂದನೆ ಮಾಡಿ, ನೆರೆಹೊರೆಯ ಪ್ರಬಲ ಜಾತಿ ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿದ್ದರು. ಬಳಿಕ, ಅವರ ಕುಟುಂಬಕ್ಕೆ ಸಂಕಷ್ಟ ಪ್ರಾರಂಭವಾಯಿತು.

ಅಂದಿನಿಂದ, ಪದೇಪದೆ ಮೇಲ್ಜಾತಿಯ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಜಾತಿ ಆಧಾರಿತ ಅವಮಾನಗಳನ್ನು ನಡೆಸಿ, ದೈಹಿಕವಾಗಿ ಹಲ್ಲೆ ಮಾಡಿ, ಅವರ ಜೀವನವನ್ನು ಅಸಹನೀಯವಾಗಿಸಿದ್ದಾರೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ನನ್ನ ಸೋದರಳಿಯನಿಗೆ, ನೀವು ಮಂಗಿಗಳೇ, ಬೆಳಿಗ್ಗೆ ಯಾಕೆ ನಿಮ್ಮ ಮುಖವನ್ನು ತೋರಿಸುತ್ತೀರಿ ಎಂದು ಅವಮಾಣಿಸಲಾಯಿತು” ಎಂದು ರತನ್ ಅವರ ಸಹೋದರಿ 32 ವರ್ಷದ ರೇಷ್ಮಾ ಚೌಹಾಣ್ ಹೇಳಿದರು. “ಅವರು ಯಾವುದೇ ಕಾರಣವಿಲ್ಲದೆ ಜಗಳವಾಡುತ್ತಾರೆ, ಈಗ ನಮಗೆ ಜೀವ ಭಯವಿದೆ” ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದಾಗ ಕುಟುಂಬದ ತೊಂದರೆಗಳು ಇನ್ನಷ್ಟು ಹೆಚ್ಚಾದವು. ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೊಲೀಸರಿಗೆ ಹಲವಾರು ದೂರುಗಳನ್ನು ನೀಡಿದ್ದರೂ, ಯಾವುದೇ ಎಫ್‌ಆಐಆರ್‌ ದಾಖಲಾಗಿಲ್ಲ. ಬದಲಾಗಿ, ಆರು ತಿಂಗಳ ಹಿಂದೆ ಯಾವುದೇ ಮುನ್ಸೂಚನೆಯಿಲ್ಲದೆ ನಮ್ಮ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಬಾಪುಜಿ ಬುವಾ ದೇವಸ್ಥಾನದ ಬಳಿಯ ಸಾರ್ವಜನಿಕ ತೊಟ್ಟಿಯಿಂದ ನೀರು ತರಲು ಒತ್ತಾಯಿಸಲಾಯಿತು. ನಾವು ಮತ್ತಷ್ಟು ಅವಮಾನವನ್ನು ಎದುರಿಸಿದೆವು, ಸ್ಥಳೀಯರು ನಮ್ಮನ್ನು ಓಡಿಸಲು ನಮ್ಮ ನೀರಿನ ಪಾತ್ರೆಗಳಿಗೆ ಸತ್ತ ಇಲಿಗಳನ್ನು ಎಸೆದರು” ಎಂದು ರೇಷ್ಮಾ ತಾವು ಅನುಭವಿಸುತ್ತಿರುವ ದೌರ್ಜನ್ಯದ ಕುರಿತು ವಿವರಿಸಿದ್ದಾರೆ.

ರತನ್ ಅವರ ಕಿರಿಯ ಸಹೋದರಿ 23 ವರ್ಷದ ಸೋನಮ್ ಲೊಂಡೆ ಮಾತನಾಡಿ, ತಮ್ಮ ಮನೆಗೆ ಬಲವಂತವಾಗಿ ಪ್ರವೇಶಿಸುವುದು ಸೇರಿದಂತೆ ಹಲವು ಭಾರಿ ದೈಹಿಕ ಹಿಂಸೆಯ ಘಟನೆಗಳ ನಂತರ ದೌರ್ಜನ್ಯಗಳನ್ನು ದಾಖಲಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ ಎಂದು ಹೇಳಿದರು. “ದುರದೃಷ್ಟವಶಾತ್, ಅವರು ಕೆಲವು ಅಪರಿಚಿತರೊಂದಿಗೆ ಬಂದು, ಸಿಸಿಟಿವಿಯನ್ನು ಬಟ್ಟೆಯಿಂದ ಮುಚ್ಚಿ, ಕ್ಯಾಮೆರಾದಿಂದ ಮೆಮೊರಿ ಚಿಪ್ ಅನ್ನು ತೆಗೆದರು” ಎಂದು ಅವರು ಹೇಳಿದರು.

ಒಳಚರಂಡಿ ಕಾಮಗಾರಿ ನಮ್ಮ ಆಸ್ತಿಯನ್ನು ಅತಿಕ್ರಮಿಸುತ್ತಿರುವ ಬಗ್ಗೆ ನೆರೆಹೊರೆಯವರಲ್ಲಿ ಒಬ್ಬರನ್ನು ಪ್ರಶ್ನಿಸಿದಾಗ ವಾದವು ಉಲ್ಬಣಗೊಂಡಿತು ಎಂದು ಲೊಂಡೆ ನೆನಪಿಸಿಕೊಂಡರು. “ವಾಕಾಡ್ ಪೊಲೀಸರು ನನ್ನನ್ನು ಠಾಣೆಗೆ ಕರೆದೊಯ್ದು ಒಂದು ರಾತ್ರಿ ಬಂಧನದಲ್ಲಿಟ್ಟರು” ಎಂದು ಅವರು ಹೇಳಿದರು.

“ನಾವು ಇಲ್ಲಿ ವಾಸಿಸುವ ಎರಡನೇ ತಲೆಮಾರಿನವರಾಗಿದ್ದರೂ, ಮಾಲೀಕತ್ವದ ದಾಖಲೆಗಳನ್ನು ತೋರಿಸಲು ನಮ್ಮನ್ನು ಕೇಳಲಾಯಿತು. ಇದು ಜಾತಿ ಆಧಾರಿತ ಹಿಂಸಾಚಾರವನ್ನು ಮುಚ್ಚಿಹಾಕುವ ಪ್ರಯತ್ನವಾಗಿರಬಹುದು ಅಥವಾ ನಮ್ಮಿಂದ ಏನನ್ನಾದರೂ ಪಡೆಯಲು ಜಾತಿ ಆಧಾರಿತ ಘಟನೆಗಳಿಗೆ ನಮ್ಮನ್ನು ಪ್ರಚೋದಿಸಿರಬಹುದು” ಎಂದು ಲೊಂಡೆ ಹೇಳಿದರು.

ಕಳೆದ ನವೆಂಬರ್‌ನಲ್ಲಿ, ಕುಟುಂಬವು ಹೊರಗೆ ಅಡುಗೆ ಮಾಡುತ್ತಿದ್ದಾಗ, ಕಿರುಕುಳ ನೀಡುತಿದ್ದವರು ಪೊಲೀಸರೊಂದಿಗೆ ಬಂದು ಕೂಗಾಡಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. “ಅವರು ನನ್ನ 10 ವರ್ಷದ ಮಗಳು ನೂತನ್‌ಗೆ ಹೊಡೆದು, ನಾವು ದಾಖಲಿಸಿದ್ದ ಸಾಕ್ಷ್ಯವನ್ನು ಅಳಿಸಲು ನನ್ನ ಫೋನ್ ಕಸಿದುಕೊಂಡರು. ನಮ್ಮ ಮೊಬೈಲ್ ಫೋನ್ ಇನ್ನೂ ಅವರ ಬಳಿಯೇ ಇದೆ” ಎಂದು ರತನ್ ಹೇಳಿದರು.

ಇದರ ನಂತರ, ಸಂತ್ರಸ್ತರು ಆಯುಕ್ತರನ್ನು ಭೇಟಿ ಮಾಡಲು ಪಿಸಿಎಂಸಿ ಕಚೇರಿಗೆ ಹೋದರು. ಆದರೆ, ಅವರು ವಿಫಲರಾದರು ಎಂದು ರತನ್ ಹೇಳಿದರು. “ನಮ್ಮನ್ನು ಕಾಲೇವಾಡಿ ಪೊಲೀಸ್ ಠಾಣೆಗೆ ತೆರಳುವಂತೆ ನಿರ್ದೇಶಿಸಲಾಯಿತು, ಅಲ್ಲಿ ಅಧಿಕಾರಿಗಳು ಬೆಳಿಗ್ಗೆ 11 ಗಂಟೆಯಿಂದ ಮಧ್ಯರಾತ್ರಿಯವರೆಗೆ ಬಂಧಿಸಿ, ನೆಲವನ್ನು ಸ್ವಚ್ಛಗೊಳಿಸಲು ಒತ್ತಾಯಿಸಿ, ಪ್ರಕರಣ ದಾಖಲಿಸದೆ ನಮ್ಮನ್ನು ಕಳುಹಿಸಿದರು” ಎಂದು ರೇಷ್ಮಾ ಆರೋಪಿಸಿದರು.

ಫೆಬ್ರವರಿ 5 ರಂದು, ಪೊಲೀಸ್ ದೂರು ದಾಖಲಿಸಲು ಮತ್ತೊಂದು ವಿಫಲ ಪ್ರಯತ್ನದ ನಂತರ, ಕುಟುಂಬವು ಮರುದಿನ ಪಿಸಿಎಂಸಿ ಆಯುಕ್ತರ ಕಚೇರಿಗೆ ಲಿಖಿತ ದೂರು ಸಲ್ಲಿಸಿತು. ಯಾವುದೇ ಆಯ್ಕೆಗಳು ಉಳಿದಿಲ್ಲದ ಕಾರಣ, ಅವರು ನ್ಯಾಯಕ್ಕಾಗಿ ಮುಂಬೈಗೆ ಮೆರವಣಿಗೆ ನಡೆಸಲು ನಿರ್ಧರಿಸಿದರು.

ಇದನ್ನೂ ಓದಿ; ಉತ್ತರ ಪ್ರದೇಶ| ದಲಿತರ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...