Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

- Advertisement -
- Advertisement -

ಕೈಯಲ್ಲಿ ಕೇವಲ ₹70, ನ್ಯಾಯಕ್ಕಾಗಿ ಮನವಿ; 35 ವರ್ಷದ ರತನ್ ತಮ್ಮ ಇಬ್ಬರು ಸಹೋದರಿಯರು ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಪುಣೆಯಿಂದ ಮುಂಬೈಗೆ 150 ಕಿ.ಮೀ.ಗೂ ಹೆಚ್ಚು ನಡೆದುಕೊಂಡು ತಲುಪಿದ್ದಾರೆ. ತಮ್ಮ ಕಷ್ಟದ ಸ್ಥಿತಿಯನ್ನು ವಿವರಿಸುವ ಪೋಸ್ಟರ್‌ಗಳನ್ನು ಹಿಡಿದು, ಫೆಬ್ರವರಿ 7 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿ ಫೆಬ್ರವರಿ 13 ರಂದು ಆಜಾದ್ ಮೈದಾನಕ್ಕೆ ಆಗಮಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಲು ಬಯಸಿದರು. ಆದರೆ, ಹತ್ತು ದಿನಗಳ ನಂತರವೂ ಅವರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಅವರ ಈ ಪಾದಯಾತ್ರೆಯು ಜಾತಿ ಆಧಾರಿತ ಹಿಂಸೆ ಮತ್ತು ಸರ್ಕಾರಿ ಸಾಂಸ್ಥಿಕ ನಿರ್ಲಕ್ಷ್ಯದ ವಿರುದ್ಧವಾಗಿದೆ. ಪಿಂಪ್ರಿ-ಚಿಂಚ್‌ವಾಡ್‌ನ ಥೆರ್‌ಗಾಂವ್ ನಿವಾಸಿಗಳಾದ ರತನ್ ಮತ್ತು ಅವರ ಕುಟುಂಬವು ಮತಂಗ್ (ಮಾಂಗ್) ಸಮುದಾಯಕ್ಕೆ ಸೇರಿದವರು; ಈ ಸಮುದಾಯವು ಐತಿಹಾಸಿಕವಾಗಿ ಅಂಚಿನಲ್ಲಿರುವ ಮತ್ತು ತಾರತಮ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿಯಾಗಿದೆ. ಎರಡು ವರ್ಷಗಳ ಹಿಂದೆ ರತನ್ ಅವರ 14 ವರ್ಷದ ಮಗ ಕರಣ್ ಮೇಲೆ ಜಾತಿ ನಿಂದನೆ ಮಾಡಿ, ನೆರೆಹೊರೆಯ ಪ್ರಬಲ ಜಾತಿ ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿದ್ದರು. ಬಳಿಕ, ಅವರ ಕುಟುಂಬಕ್ಕೆ ಸಂಕಷ್ಟ ಪ್ರಾರಂಭವಾಯಿತು.

ಅಂದಿನಿಂದ, ಪದೇಪದೆ ಮೇಲ್ಜಾತಿಯ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಜಾತಿ ಆಧಾರಿತ ಅವಮಾನಗಳನ್ನು ನಡೆಸಿ, ದೈಹಿಕವಾಗಿ ಹಲ್ಲೆ ಮಾಡಿ, ಅವರ ಜೀವನವನ್ನು ಅಸಹನೀಯವಾಗಿಸಿದ್ದಾರೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ನನ್ನ ಸೋದರಳಿಯನಿಗೆ, ನೀವು ಮಂಗಿಗಳೇ, ಬೆಳಿಗ್ಗೆ ಯಾಕೆ ನಿಮ್ಮ ಮುಖವನ್ನು ತೋರಿಸುತ್ತೀರಿ ಎಂದು ಅವಮಾಣಿಸಲಾಯಿತು” ಎಂದು ರತನ್ ಅವರ ಸಹೋದರಿ 32 ವರ್ಷದ ರೇಷ್ಮಾ ಚೌಹಾಣ್ ಹೇಳಿದರು. “ಅವರು ಯಾವುದೇ ಕಾರಣವಿಲ್ಲದೆ ಜಗಳವಾಡುತ್ತಾರೆ, ಈಗ ನಮಗೆ ಜೀವ ಭಯವಿದೆ” ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದಾಗ ಕುಟುಂಬದ ತೊಂದರೆಗಳು ಇನ್ನಷ್ಟು ಹೆಚ್ಚಾದವು. ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೊಲೀಸರಿಗೆ ಹಲವಾರು ದೂರುಗಳನ್ನು ನೀಡಿದ್ದರೂ, ಯಾವುದೇ ಎಫ್‌ಆಐಆರ್‌ ದಾಖಲಾಗಿಲ್ಲ. ಬದಲಾಗಿ, ಆರು ತಿಂಗಳ ಹಿಂದೆ ಯಾವುದೇ ಮುನ್ಸೂಚನೆಯಿಲ್ಲದೆ ನಮ್ಮ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಬಾಪುಜಿ ಬುವಾ ದೇವಸ್ಥಾನದ ಬಳಿಯ ಸಾರ್ವಜನಿಕ ತೊಟ್ಟಿಯಿಂದ ನೀರು ತರಲು ಒತ್ತಾಯಿಸಲಾಯಿತು. ನಾವು ಮತ್ತಷ್ಟು ಅವಮಾನವನ್ನು ಎದುರಿಸಿದೆವು, ಸ್ಥಳೀಯರು ನಮ್ಮನ್ನು ಓಡಿಸಲು ನಮ್ಮ ನೀರಿನ ಪಾತ್ರೆಗಳಿಗೆ ಸತ್ತ ಇಲಿಗಳನ್ನು ಎಸೆದರು” ಎಂದು ರೇಷ್ಮಾ ತಾವು ಅನುಭವಿಸುತ್ತಿರುವ ದೌರ್ಜನ್ಯದ ಕುರಿತು ವಿವರಿಸಿದ್ದಾರೆ.

ರತನ್ ಅವರ ಕಿರಿಯ ಸಹೋದರಿ 23 ವರ್ಷದ ಸೋನಮ್ ಲೊಂಡೆ ಮಾತನಾಡಿ, ತಮ್ಮ ಮನೆಗೆ ಬಲವಂತವಾಗಿ ಪ್ರವೇಶಿಸುವುದು ಸೇರಿದಂತೆ ಹಲವು ಭಾರಿ ದೈಹಿಕ ಹಿಂಸೆಯ ಘಟನೆಗಳ ನಂತರ ದೌರ್ಜನ್ಯಗಳನ್ನು ದಾಖಲಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ ಎಂದು ಹೇಳಿದರು. “ದುರದೃಷ್ಟವಶಾತ್, ಅವರು ಕೆಲವು ಅಪರಿಚಿತರೊಂದಿಗೆ ಬಂದು, ಸಿಸಿಟಿವಿಯನ್ನು ಬಟ್ಟೆಯಿಂದ ಮುಚ್ಚಿ, ಕ್ಯಾಮೆರಾದಿಂದ ಮೆಮೊರಿ ಚಿಪ್ ಅನ್ನು ತೆಗೆದರು” ಎಂದು ಅವರು ಹೇಳಿದರು.

ಒಳಚರಂಡಿ ಕಾಮಗಾರಿ ನಮ್ಮ ಆಸ್ತಿಯನ್ನು ಅತಿಕ್ರಮಿಸುತ್ತಿರುವ ಬಗ್ಗೆ ನೆರೆಹೊರೆಯವರಲ್ಲಿ ಒಬ್ಬರನ್ನು ಪ್ರಶ್ನಿಸಿದಾಗ ವಾದವು ಉಲ್ಬಣಗೊಂಡಿತು ಎಂದು ಲೊಂಡೆ ನೆನಪಿಸಿಕೊಂಡರು. “ವಾಕಾಡ್ ಪೊಲೀಸರು ನನ್ನನ್ನು ಠಾಣೆಗೆ ಕರೆದೊಯ್ದು ಒಂದು ರಾತ್ರಿ ಬಂಧನದಲ್ಲಿಟ್ಟರು” ಎಂದು ಅವರು ಹೇಳಿದರು.

“ನಾವು ಇಲ್ಲಿ ವಾಸಿಸುವ ಎರಡನೇ ತಲೆಮಾರಿನವರಾಗಿದ್ದರೂ, ಮಾಲೀಕತ್ವದ ದಾಖಲೆಗಳನ್ನು ತೋರಿಸಲು ನಮ್ಮನ್ನು ಕೇಳಲಾಯಿತು. ಇದು ಜಾತಿ ಆಧಾರಿತ ಹಿಂಸಾಚಾರವನ್ನು ಮುಚ್ಚಿಹಾಕುವ ಪ್ರಯತ್ನವಾಗಿರಬಹುದು ಅಥವಾ ನಮ್ಮಿಂದ ಏನನ್ನಾದರೂ ಪಡೆಯಲು ಜಾತಿ ಆಧಾರಿತ ಘಟನೆಗಳಿಗೆ ನಮ್ಮನ್ನು ಪ್ರಚೋದಿಸಿರಬಹುದು” ಎಂದು ಲೊಂಡೆ ಹೇಳಿದರು.

ಕಳೆದ ನವೆಂಬರ್‌ನಲ್ಲಿ, ಕುಟುಂಬವು ಹೊರಗೆ ಅಡುಗೆ ಮಾಡುತ್ತಿದ್ದಾಗ, ಕಿರುಕುಳ ನೀಡುತಿದ್ದವರು ಪೊಲೀಸರೊಂದಿಗೆ ಬಂದು ಕೂಗಾಡಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. “ಅವರು ನನ್ನ 10 ವರ್ಷದ ಮಗಳು ನೂತನ್‌ಗೆ ಹೊಡೆದು, ನಾವು ದಾಖಲಿಸಿದ್ದ ಸಾಕ್ಷ್ಯವನ್ನು ಅಳಿಸಲು ನನ್ನ ಫೋನ್ ಕಸಿದುಕೊಂಡರು. ನಮ್ಮ ಮೊಬೈಲ್ ಫೋನ್ ಇನ್ನೂ ಅವರ ಬಳಿಯೇ ಇದೆ” ಎಂದು ರತನ್ ಹೇಳಿದರು.

ಇದರ ನಂತರ, ಸಂತ್ರಸ್ತರು ಆಯುಕ್ತರನ್ನು ಭೇಟಿ ಮಾಡಲು ಪಿಸಿಎಂಸಿ ಕಚೇರಿಗೆ ಹೋದರು. ಆದರೆ, ಅವರು ವಿಫಲರಾದರು ಎಂದು ರತನ್ ಹೇಳಿದರು. “ನಮ್ಮನ್ನು ಕಾಲೇವಾಡಿ ಪೊಲೀಸ್ ಠಾಣೆಗೆ ತೆರಳುವಂತೆ ನಿರ್ದೇಶಿಸಲಾಯಿತು, ಅಲ್ಲಿ ಅಧಿಕಾರಿಗಳು ಬೆಳಿಗ್ಗೆ 11 ಗಂಟೆಯಿಂದ ಮಧ್ಯರಾತ್ರಿಯವರೆಗೆ ಬಂಧಿಸಿ, ನೆಲವನ್ನು ಸ್ವಚ್ಛಗೊಳಿಸಲು ಒತ್ತಾಯಿಸಿ, ಪ್ರಕರಣ ದಾಖಲಿಸದೆ ನಮ್ಮನ್ನು ಕಳುಹಿಸಿದರು” ಎಂದು ರೇಷ್ಮಾ ಆರೋಪಿಸಿದರು.

ಫೆಬ್ರವರಿ 5 ರಂದು, ಪೊಲೀಸ್ ದೂರು ದಾಖಲಿಸಲು ಮತ್ತೊಂದು ವಿಫಲ ಪ್ರಯತ್ನದ ನಂತರ, ಕುಟುಂಬವು ಮರುದಿನ ಪಿಸಿಎಂಸಿ ಆಯುಕ್ತರ ಕಚೇರಿಗೆ ಲಿಖಿತ ದೂರು ಸಲ್ಲಿಸಿತು. ಯಾವುದೇ ಆಯ್ಕೆಗಳು ಉಳಿದಿಲ್ಲದ ಕಾರಣ, ಅವರು ನ್ಯಾಯಕ್ಕಾಗಿ ಮುಂಬೈಗೆ ಮೆರವಣಿಗೆ ನಡೆಸಲು ನಿರ್ಧರಿಸಿದರು.

ಇದನ್ನೂ ಓದಿ; ಉತ್ತರ ಪ್ರದೇಶ| ದಲಿತರ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...