Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

ಜಾತಿ ದೌರ್ಜನ್ಯ ವಿರೋಧಿಸಿ ಪುಣೆಯಿಂದ ಮುಂಬೈಗೆ ದಲಿತ ಕುಟುಂಬದ ಪಾದಯಾತ್ರೆ

- Advertisement -
- Advertisement -

ಕೈಯಲ್ಲಿ ಕೇವಲ ₹70, ನ್ಯಾಯಕ್ಕಾಗಿ ಮನವಿ; 35 ವರ್ಷದ ರತನ್ ತಮ್ಮ ಇಬ್ಬರು ಸಹೋದರಿಯರು ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಪುಣೆಯಿಂದ ಮುಂಬೈಗೆ 150 ಕಿ.ಮೀ.ಗೂ ಹೆಚ್ಚು ನಡೆದುಕೊಂಡು ತಲುಪಿದ್ದಾರೆ. ತಮ್ಮ ಕಷ್ಟದ ಸ್ಥಿತಿಯನ್ನು ವಿವರಿಸುವ ಪೋಸ್ಟರ್‌ಗಳನ್ನು ಹಿಡಿದು, ಫೆಬ್ರವರಿ 7 ರಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿ ಫೆಬ್ರವರಿ 13 ರಂದು ಆಜಾದ್ ಮೈದಾನಕ್ಕೆ ಆಗಮಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಲು ಬಯಸಿದರು. ಆದರೆ, ಹತ್ತು ದಿನಗಳ ನಂತರವೂ ಅವರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಅವರ ಈ ಪಾದಯಾತ್ರೆಯು ಜಾತಿ ಆಧಾರಿತ ಹಿಂಸೆ ಮತ್ತು ಸರ್ಕಾರಿ ಸಾಂಸ್ಥಿಕ ನಿರ್ಲಕ್ಷ್ಯದ ವಿರುದ್ಧವಾಗಿದೆ. ಪಿಂಪ್ರಿ-ಚಿಂಚ್‌ವಾಡ್‌ನ ಥೆರ್‌ಗಾಂವ್ ನಿವಾಸಿಗಳಾದ ರತನ್ ಮತ್ತು ಅವರ ಕುಟುಂಬವು ಮತಂಗ್ (ಮಾಂಗ್) ಸಮುದಾಯಕ್ಕೆ ಸೇರಿದವರು; ಈ ಸಮುದಾಯವು ಐತಿಹಾಸಿಕವಾಗಿ ಅಂಚಿನಲ್ಲಿರುವ ಮತ್ತು ತಾರತಮ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿಯಾಗಿದೆ. ಎರಡು ವರ್ಷಗಳ ಹಿಂದೆ ರತನ್ ಅವರ 14 ವರ್ಷದ ಮಗ ಕರಣ್ ಮೇಲೆ ಜಾತಿ ನಿಂದನೆ ಮಾಡಿ, ನೆರೆಹೊರೆಯ ಪ್ರಬಲ ಜಾತಿ ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿದ್ದರು. ಬಳಿಕ, ಅವರ ಕುಟುಂಬಕ್ಕೆ ಸಂಕಷ್ಟ ಪ್ರಾರಂಭವಾಯಿತು.

ಅಂದಿನಿಂದ, ಪದೇಪದೆ ಮೇಲ್ಜಾತಿಯ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಜಾತಿ ಆಧಾರಿತ ಅವಮಾನಗಳನ್ನು ನಡೆಸಿ, ದೈಹಿಕವಾಗಿ ಹಲ್ಲೆ ಮಾಡಿ, ಅವರ ಜೀವನವನ್ನು ಅಸಹನೀಯವಾಗಿಸಿದ್ದಾರೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ನನ್ನ ಸೋದರಳಿಯನಿಗೆ, ನೀವು ಮಂಗಿಗಳೇ, ಬೆಳಿಗ್ಗೆ ಯಾಕೆ ನಿಮ್ಮ ಮುಖವನ್ನು ತೋರಿಸುತ್ತೀರಿ ಎಂದು ಅವಮಾಣಿಸಲಾಯಿತು” ಎಂದು ರತನ್ ಅವರ ಸಹೋದರಿ 32 ವರ್ಷದ ರೇಷ್ಮಾ ಚೌಹಾಣ್ ಹೇಳಿದರು. “ಅವರು ಯಾವುದೇ ಕಾರಣವಿಲ್ಲದೆ ಜಗಳವಾಡುತ್ತಾರೆ, ಈಗ ನಮಗೆ ಜೀವ ಭಯವಿದೆ” ಎಂದು ಹೇಳಿದರು.

ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲವಾದಾಗ ಕುಟುಂಬದ ತೊಂದರೆಗಳು ಇನ್ನಷ್ಟು ಹೆಚ್ಚಾದವು. ಪಿಂಪ್ರಿ-ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೊಲೀಸರಿಗೆ ಹಲವಾರು ದೂರುಗಳನ್ನು ನೀಡಿದ್ದರೂ, ಯಾವುದೇ ಎಫ್‌ಆಐಆರ್‌ ದಾಖಲಾಗಿಲ್ಲ. ಬದಲಾಗಿ, ಆರು ತಿಂಗಳ ಹಿಂದೆ ಯಾವುದೇ ಮುನ್ಸೂಚನೆಯಿಲ್ಲದೆ ನಮ್ಮ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಬಾಪುಜಿ ಬುವಾ ದೇವಸ್ಥಾನದ ಬಳಿಯ ಸಾರ್ವಜನಿಕ ತೊಟ್ಟಿಯಿಂದ ನೀರು ತರಲು ಒತ್ತಾಯಿಸಲಾಯಿತು. ನಾವು ಮತ್ತಷ್ಟು ಅವಮಾನವನ್ನು ಎದುರಿಸಿದೆವು, ಸ್ಥಳೀಯರು ನಮ್ಮನ್ನು ಓಡಿಸಲು ನಮ್ಮ ನೀರಿನ ಪಾತ್ರೆಗಳಿಗೆ ಸತ್ತ ಇಲಿಗಳನ್ನು ಎಸೆದರು” ಎಂದು ರೇಷ್ಮಾ ತಾವು ಅನುಭವಿಸುತ್ತಿರುವ ದೌರ್ಜನ್ಯದ ಕುರಿತು ವಿವರಿಸಿದ್ದಾರೆ.

ರತನ್ ಅವರ ಕಿರಿಯ ಸಹೋದರಿ 23 ವರ್ಷದ ಸೋನಮ್ ಲೊಂಡೆ ಮಾತನಾಡಿ, ತಮ್ಮ ಮನೆಗೆ ಬಲವಂತವಾಗಿ ಪ್ರವೇಶಿಸುವುದು ಸೇರಿದಂತೆ ಹಲವು ಭಾರಿ ದೈಹಿಕ ಹಿಂಸೆಯ ಘಟನೆಗಳ ನಂತರ ದೌರ್ಜನ್ಯಗಳನ್ನು ದಾಖಲಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ ಎಂದು ಹೇಳಿದರು. “ದುರದೃಷ್ಟವಶಾತ್, ಅವರು ಕೆಲವು ಅಪರಿಚಿತರೊಂದಿಗೆ ಬಂದು, ಸಿಸಿಟಿವಿಯನ್ನು ಬಟ್ಟೆಯಿಂದ ಮುಚ್ಚಿ, ಕ್ಯಾಮೆರಾದಿಂದ ಮೆಮೊರಿ ಚಿಪ್ ಅನ್ನು ತೆಗೆದರು” ಎಂದು ಅವರು ಹೇಳಿದರು.

ಒಳಚರಂಡಿ ಕಾಮಗಾರಿ ನಮ್ಮ ಆಸ್ತಿಯನ್ನು ಅತಿಕ್ರಮಿಸುತ್ತಿರುವ ಬಗ್ಗೆ ನೆರೆಹೊರೆಯವರಲ್ಲಿ ಒಬ್ಬರನ್ನು ಪ್ರಶ್ನಿಸಿದಾಗ ವಾದವು ಉಲ್ಬಣಗೊಂಡಿತು ಎಂದು ಲೊಂಡೆ ನೆನಪಿಸಿಕೊಂಡರು. “ವಾಕಾಡ್ ಪೊಲೀಸರು ನನ್ನನ್ನು ಠಾಣೆಗೆ ಕರೆದೊಯ್ದು ಒಂದು ರಾತ್ರಿ ಬಂಧನದಲ್ಲಿಟ್ಟರು” ಎಂದು ಅವರು ಹೇಳಿದರು.

“ನಾವು ಇಲ್ಲಿ ವಾಸಿಸುವ ಎರಡನೇ ತಲೆಮಾರಿನವರಾಗಿದ್ದರೂ, ಮಾಲೀಕತ್ವದ ದಾಖಲೆಗಳನ್ನು ತೋರಿಸಲು ನಮ್ಮನ್ನು ಕೇಳಲಾಯಿತು. ಇದು ಜಾತಿ ಆಧಾರಿತ ಹಿಂಸಾಚಾರವನ್ನು ಮುಚ್ಚಿಹಾಕುವ ಪ್ರಯತ್ನವಾಗಿರಬಹುದು ಅಥವಾ ನಮ್ಮಿಂದ ಏನನ್ನಾದರೂ ಪಡೆಯಲು ಜಾತಿ ಆಧಾರಿತ ಘಟನೆಗಳಿಗೆ ನಮ್ಮನ್ನು ಪ್ರಚೋದಿಸಿರಬಹುದು” ಎಂದು ಲೊಂಡೆ ಹೇಳಿದರು.

ಕಳೆದ ನವೆಂಬರ್‌ನಲ್ಲಿ, ಕುಟುಂಬವು ಹೊರಗೆ ಅಡುಗೆ ಮಾಡುತ್ತಿದ್ದಾಗ, ಕಿರುಕುಳ ನೀಡುತಿದ್ದವರು ಪೊಲೀಸರೊಂದಿಗೆ ಬಂದು ಕೂಗಾಡಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ. “ಅವರು ನನ್ನ 10 ವರ್ಷದ ಮಗಳು ನೂತನ್‌ಗೆ ಹೊಡೆದು, ನಾವು ದಾಖಲಿಸಿದ್ದ ಸಾಕ್ಷ್ಯವನ್ನು ಅಳಿಸಲು ನನ್ನ ಫೋನ್ ಕಸಿದುಕೊಂಡರು. ನಮ್ಮ ಮೊಬೈಲ್ ಫೋನ್ ಇನ್ನೂ ಅವರ ಬಳಿಯೇ ಇದೆ” ಎಂದು ರತನ್ ಹೇಳಿದರು.

ಇದರ ನಂತರ, ಸಂತ್ರಸ್ತರು ಆಯುಕ್ತರನ್ನು ಭೇಟಿ ಮಾಡಲು ಪಿಸಿಎಂಸಿ ಕಚೇರಿಗೆ ಹೋದರು. ಆದರೆ, ಅವರು ವಿಫಲರಾದರು ಎಂದು ರತನ್ ಹೇಳಿದರು. “ನಮ್ಮನ್ನು ಕಾಲೇವಾಡಿ ಪೊಲೀಸ್ ಠಾಣೆಗೆ ತೆರಳುವಂತೆ ನಿರ್ದೇಶಿಸಲಾಯಿತು, ಅಲ್ಲಿ ಅಧಿಕಾರಿಗಳು ಬೆಳಿಗ್ಗೆ 11 ಗಂಟೆಯಿಂದ ಮಧ್ಯರಾತ್ರಿಯವರೆಗೆ ಬಂಧಿಸಿ, ನೆಲವನ್ನು ಸ್ವಚ್ಛಗೊಳಿಸಲು ಒತ್ತಾಯಿಸಿ, ಪ್ರಕರಣ ದಾಖಲಿಸದೆ ನಮ್ಮನ್ನು ಕಳುಹಿಸಿದರು” ಎಂದು ರೇಷ್ಮಾ ಆರೋಪಿಸಿದರು.

ಫೆಬ್ರವರಿ 5 ರಂದು, ಪೊಲೀಸ್ ದೂರು ದಾಖಲಿಸಲು ಮತ್ತೊಂದು ವಿಫಲ ಪ್ರಯತ್ನದ ನಂತರ, ಕುಟುಂಬವು ಮರುದಿನ ಪಿಸಿಎಂಸಿ ಆಯುಕ್ತರ ಕಚೇರಿಗೆ ಲಿಖಿತ ದೂರು ಸಲ್ಲಿಸಿತು. ಯಾವುದೇ ಆಯ್ಕೆಗಳು ಉಳಿದಿಲ್ಲದ ಕಾರಣ, ಅವರು ನ್ಯಾಯಕ್ಕಾಗಿ ಮುಂಬೈಗೆ ಮೆರವಣಿಗೆ ನಡೆಸಲು ನಿರ್ಧರಿಸಿದರು.

ಇದನ್ನೂ ಓದಿ; ಉತ್ತರ ಪ್ರದೇಶ| ದಲಿತರ ಮದುವೆ ಮೆರವಣಿಗೆಯ ಮೇಲೆ ದಾಳಿ ನಡೆಸಿದ 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...