Homeಮುಖಪುಟ3ರಲ್ಲಿ 2 ಪ್ರಕರಣಗಳಲ್ಲಿ ಜಾಮೀನು ಪಡೆದ ದಲಿತ ಹೋರಾಟಗಾರ್ತಿ ನೊದೀಪ್ ಕೌರ್

3ರಲ್ಲಿ 2 ಪ್ರಕರಣಗಳಲ್ಲಿ ಜಾಮೀನು ಪಡೆದ ದಲಿತ ಹೋರಾಟಗಾರ್ತಿ ನೊದೀಪ್ ಕೌರ್

ನೊದೀಪ್ ಕೌರ್ ಬಿಡುಗಡೆಗೊಳಿಸುವಂತೆ ಅಮೆರಿಕದ ವಕೀಲೆ ಮೀನಾ ಹ್ಯಾರಿಸ್, ನಟ ದಿಲ್ಜಿತ್ ದೋಸಾಂಜ್, ನಟಿ ಸ್ವರ ಭಾಸ್ಕರ್, ರಮ್ಯಾ ಸೇರಿದಂತೆ ನೂರಾರು ಜನ ದನಿಯೆತ್ತಿದ್ದರು.

- Advertisement -
- Advertisement -

ಒಂದೂವರೆ ತಿಂಗಳಿನಿಂದ ಬಂಧನದಲ್ಲಿರುವ ದಲಿತ, ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರಿಗೆ ಎರಡು ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದ್ದು, ಮೂರನೇ ಎಫ್‌ಐಆರ್‌ ವಿರುದ್ಧ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಶೀಘ್ರವೇ ವಿಚಾರಣೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

23 ವರ್ಷದ ಪಂಜಾಬ್ ಮೂಲದ ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರನ್ನು ರೈತರ ಪರವಾಗಿ ದೆಹಲಿಯ ಸಿಂಘು ಗಡಿಯಲ್ಲಿ ಹೋರಾಡುತ್ತಿದ್ದಾಗ ಹರಿಯಾಣ ಪೊಲೀಸರು ಬಂಧಿಸಿದ್ದರು. ಅವರಿಗೆ ಫೆಬ್ರವರಿ 2 ರಂದು ಹರಿಯಾಣದ ಸೋನೆಪತ್‌ನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಪ್ರಸ್ತುತ ಹರಿಯಾಣದ ಕರ್ನಾಲ್ ಜೈಲಿನಲ್ಲಿರುವ ಅವರನ್ನು ಹಿಂಸಿಸಲಾಗುತ್ತಿದೆ ಮತ್ತು ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

ಇಂದು ನೊದೀಪ್ ಕೌರ್ ವಿರುದ್ಧದ ಎಫ್ಐಆರ್ ನಂ 26 ಕ್ಕೆ ಜಾಮೀನು ನೀಡಲಾಗಿದೆ ಎಂದು ನೊದೀಪ್ ಕೌರ್ ಅವರ ವಕೀಲ ಜತಿಂದರ್ ಕುಮಾರ್ ಹೇಳಿದ್ದಾರೆ. ಆಕೆಗೆ ಈಗಾಗಲೇ ಎಫ್ಐಆರ್ ನಂ 649 ರಲ್ಲಿ ಜಾಮೀನು ಸಿಕ್ಕಿದೆ. ಆದರೆ ಎಫ್‌ಐಆರ್ ನಂ25 ಕ್ಕೆ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ಆಕೆಯ ಸಹೋದರಿ ರಾಜ್‌ವಿರ್ ಕೌರ್ ತಿಳಿಸಿದ್ದಾರೆ.

ನೊದೀಪ್ ಕೌರ್ ಬಂಧನದ ನಂತರ ಕೇವಲ ಎರಡು ಎಫ್‌ಐಆರ್ ಹಾಕಲಾಗಿದೆ ಎಂದು ಆಕೆಯ ವಕೀಲರಿಗೆ ತಿಳಿದಿತ್ತು. ಹಾಗಾಗಿ ಆ ಎರಡು ಎಫ್‌ಐಆರ್‌ಗಳ ವಿರುದ್ಧ ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ ಆನಂತರ ಮತ್ತೊಂದು ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದು ಅದಕ್ಕೂ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ.

ನೊದೀಪ್ ಕೌರ್ ಬಿಡುಗಡೆಗೊಳಿಸುವಂತೆ ಅಮೆರಿಕದ ವಕೀಲೆ ಮೀನಾ ಹ್ಯಾರಿಸ್, ನಟ ದಿಲ್ಜಿತ್ ದೋಸಾಂಜ್, ನಟಿ ಸ್ವರ ಭಾಸ್ಕರ್, ರಮ್ಯಾ ದಿವ್ಯಸ್ಪಂದನ ಸೇರಿದಂತೆ ನೂರಾರು ಜನ ದನಿಯೆತ್ತಿದ್ದರು.

ಪಂಜಾಬ್‌ ಮೂಲದ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಕಾರ್ಮಿಕ ಸಂಘದ ಕಾರ್ಯಕರ್ತೆಯಾಗಿರುವ ದಲಿತ ಸಮುದಾಯದ ನೊದೀಪ್ ಕೌರ್ ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ; ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...