Homeಅಂಕಣಗಳುಮಾತು ಮರೆತ ಭಾರತ-25; ಅರಿಯೂರು ಫೈಲ್: ಹಿಂದೂಗಳ ದೃಷ್ಟಿಯಲ್ಲಿ ’ದಲಿತರೆಂದಿಗೂ ಹಿಂದೂಗಳಲ್ಲ'

ಮಾತು ಮರೆತ ಭಾರತ-25; ಅರಿಯೂರು ಫೈಲ್: ಹಿಂದೂಗಳ ದೃಷ್ಟಿಯಲ್ಲಿ ’ದಲಿತರೆಂದಿಗೂ ಹಿಂದೂಗಳಲ್ಲ’

- Advertisement -
- Advertisement -

ನಂದಿನಿ, 17 ವರ್ಷದ ಯುವತಿ. ತಮಿಳುನಾಡಿನ ಅರಿಯೂರು ಜಿಲ್ಲೆಯ ಸಿರುಕಡಂಬೂರ್ ಎಂಬ ಹಳ್ಳಿಯ ದಲಿತ ಸಮುದಾಯ ಪರೈಯ್ಯಾ ಕುಟುಂಬದ ಯುವತಿ. ತಮಿಳುನಾಡಿನಲ್ಲಿ ಪ್ರತ್ಯೇಕವಾಗಿ ದಲಿತರ ಕಾಲೋನಿಗಳು ಕಣ್ಣಿಗೆ ಎದ್ದು ಕಾಣುವಂತೆಯೇ ಇರುತ್ತವೆ. ಸಿರುಕಡಂಬೂರಿನ ದಲಿತರ ಕಾಲೋನಿಯೂ ಹಾಗೆಯೇ ಇತ್ತು. ಈ ವಿದ್ಯಮಾನ ಇಡೀ ಭಾರತಕ್ಕೆ ಅನ್ವಯಿಸುತ್ತದೆ ಬಿಡಿ. ನಂದಿನಿ ಓದಿದ್ದು 8ನೇ ತರಗತಿಯವರೆಗೆ ಮಾತ್ರ. ಕುಟುಂಬದ ಕಡುಬಡತನ ಹೆಚ್ಚು ಓದಲು ಅವಳಿಗೆ ಬಿಡಲಿಲ್ಲ. ಹಾಗಾಗಿ ಶಾಲೆಯನ್ನು ಬಿಟ್ಟವಳೇ ಕಟ್ಟಡ ಕಾರ್ಮಿಕಳಾಗಿ ಕೆಲಸ ಮಾಡಲು ಆರಂಭಿಸಿದಳು. ಹಾಸ್ಯಭರಿತ ಮಾತು ಹಾಗು ಚುರುಕು ಬುದ್ಧಿಯಿಂದಾಗಿ ಅವಳು ಕೆಲಸ ಮಾಡುವ ಜಾಗದಲ್ಲಿಯೂ ಹೆಸರುವಾಸಿಯಾಗಿದ್ದಳು.

ಹೀಗಿದ್ದ ನಂದಿನಿ ದಿನಾಂಕ 29, ಡಿಸೆಂಬರ್ 2016ರಂದು ದಿಢೀರನೇ ಕಣ್ಮರೆಯಾದಳು. ಆ ದಿನ ಸಂಜೆ ನಂದಿನಿಯ ಸಂಬಂಧಿಕರೊಬ್ಬರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ’ನಂದಿನಿ ತನ್ನ ಬಳಿ ಇದ್ದಾಳೆ’ ಎಂದು ಹೇಳಿದ್ದ. ಗಾಬರಿಗೊಂಡ ನಂದಿನಿ ಕುಟುಂಬ ಪೊಲೀಸರಿಗೆ ದೂರು ನೀಡಿತು. ದೂರಿನಲ್ಲಿ ಮಣಿಕಂಠನ್ ಎಂಬ ವಣ್ಣಿಯಾರ್ ಹಿಂದೂ ಮೇಲ್ಜಾತಿಗೆ ಸೇರಿದ್ದ ವ್ಯಕ್ತಿಯ ವಿರುದ್ಧ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಈ ಮಣಿಕಂಠನ್ ’ಹಿಂದೂ ಮುನ್ನಾಣಿ’ ಸಂಘಟನೆಯ ಕಾರ್ಯದರ್ಶಿಯಾಗಿದ್ದನು. ಹಿಂದೂ ಮುನ್ನಾಣಿ ಸಂಘಟನೆಯನ್ನು 1980ರಲ್ಲಿ ’ರಾಷ್ಟ್ರೀಯ ಸ್ವಯಂಸೇವಕ ಸಂಘ’ದ ರಾಮಗೋಪಾಲನ್ ಅವರು ಸ್ಥಾಪಿಸಿದ್ದರು. ಈಗದು ಹಿಂದೂ ರಾಷ್ಟ್ರವನ್ನು ಪ್ರತಿಪಾದಿಸುವ ಸಂಘಪರಿವಾರದ ಭಾಗವಾಗಿದೆ.

ದೂರು ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಲು ಆರಂಭಿಸಿದರು. ಅಪ್ರಾಪ್ತೆ ನಂದಿನಿ ಕಾಣೆಯಾಗಿದ್ದ ಕಾರಣ ’ಮಿಸ್ಸಿಂಗ್ ಕಂಪ್ಲೇಂಟ್’ ದಾಖಲಿಸಿಕೊಂಡಿದ್ದರು. ವಿಚಾರಣೆಯ ವೇಳೆ ನಂದಿನಿಯ ಆಪ್ತ ಸ್ನೇಹಿತೆಯಾಗಿದ್ದ ದೇವಿಯೂ ಮಣಿಕಂಠನ ಹೆಸರನ್ನು ಪ್ರಸ್ತಾಪಿಸಿದಳು. ಅಷ್ಟೇ ಅಲ್ಲದೇ ನಂದಿನಿ ಮತ್ತು ಮಣಿಕಂಠನ್ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದುದಾಗಿ ಹಾಗೂ ಇತ್ತೀಚೆಗೆ ನಂದಿನಿ ’ತಾನು ಗರ್ಭಿಣಿ’ ಆಗಿರುವುದಾಗಿಯೂ ಹೇಳಿಕೊಂಡಿದ್ದಳೆಂದು ದೇವಿ ತಿಳಿಸಿದಳು. ಈ ಕಾರಣವಾಗಿ ದಿನಾಂಕ 5, ಜನವರಿ 2017ರಂದು ಮಣಿಕಂಠನ ವಿಚಾರಣೆಯನ್ನು ಪೊಲೀಸರು ಮಾಡಿದ್ದರು. ಅಂದು ಸಂಜೆಯ ವೇಳೆಗಾಗಲೇ ವಣ್ಣಿಯಾರ್ ಸಮುದಾಯದ ಹಿರಿಯರು ಆತನನ್ನು ಮನೆಗೆ ಕರೆದುಕೊಂಡು ಹೋದರು. ಈ ಘಟನೆಯಾದ ಮಾರನೇ ದಿನದಿಂದ ಮಣಿಕಂಠನ್ ನಾಪತ್ತೆಯಾದನು. ಆತನ ಮೇಲಿದ್ದ ಕುಟುಂಬದವರ ಅನುಮಾನ ನಿಜವಾಗಿತ್ತು. ಪೊಲೀಸರು ಮಣಿಕಂಠನ ಪತ್ತೆಗಾಗಿ ಶೋಧಿಸತೊಡಗಿದರು.

ಇದಾದ ವಾರದ ನಂತರ ಮಣಿಕಂಠನ್ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದನು. ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಣಿಕಂಠನ್‌ನನ್ನು ಪರಿಚಿತರು ಆಸ್ಪತ್ರೆಗೆ ದಾಖಲಿಸಿದ್ದರು. ಗುಣಮುಖನಾದ ಮಣಿಕಂಠನ್ ಪೊಲೀಸರ ಬಳಿ ಬಾಯಿಬಿಟ್ಟ ವಿಷಯ ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದರು. ಹಿಂದೂರಾಷ್ಟ್ರ ಚಿಂತನೆಯಲ್ಲಿ ಬೆಳೆದುಬಂದ ಮಣಿಕಂಠನೊಳಗಿದ್ದ ಮಾನವ ವಿರೋಧಿ ಜಾತಿಪದ್ಧತಿಯ ಕರಾಳ ಮುಖವನ್ನು ನೋಡಿ ಪೊಲೀಸರಷ್ಟೇ ಅಲ್ಲ, ಇಡೀ ತಮಿಳುನಾಡು ಬೆಚ್ಚಿಬಿದ್ದಿತು.

ನಂದಿನಿ ಕೆಲಸ ಮಾಡುತ್ತಿದ್ದ ಕಟ್ಟಡದ ಉಸ್ತುವಾರಿ ಹೊತ್ತಿದ್ದವನು ಮಣಿಕಂಠನ್. ಅಲ್ಲಿ ಅವರಿಬ್ಬರ ನಡುವೆ ಸಲುಗೆ ಬೆಳೆದು ಮಣಿಕಂಠನ ಪ್ರೀತಿಯೆಂಬ ನಾಟಕಕ್ಕೆ ತಲೆದೂಗಿದ್ದ ನಂದಿನಿ ಮೈಮನಸ್ಸನ್ನು ಒಪ್ಪಿಸಿದ್ದಳು. ಇದರಿಂದಾಗಿ ಗರ್ಭಿಣಿಯಾಗಿದ್ದ ನಂದಿನಿ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಕ್ಕೆ ’ಮೊದಲು ಗರ್ಭಪಾತ ಮಾಡಿಸಿಕೋ’ ಎಂದು ತಾಕೀತು ಮಾಡಿದ್ದ ಮಣಿಕಂಠನ್. ಅವಳೆಷ್ಟೇ ಬೇಡಿಕೊಂಡರೂ ಅದಕ್ಕೆ ಮಣಿಯದ ಮಣಿಕಂಠನ್ ಗರ್ಭಪಾತವಾದ ನಂತರವೇ ಮದುವೆ ಎಂದು ಹೇಳಿದ್ದನಾದರೂ ಅದಕ್ಕೆ ಒಪ್ಪಿಕೊಳ್ಳದ ನಂದಿನಿ ಇದ್ದ ವಿಷಯವನ್ನು ತನ್ನ ಆಪ್ತರೊಂದಿಗೆ ಹೇಳಿದ್ದಳು. ಇದನ್ನು ಸಹಿಸದ ಮಣಿಕಂಠನ್ ದಿನಾಂಕ 29, ಡಿಸೆಂಬರ್ 2016ರಂದು ನಂದಿನಿಯನ್ನು ಹೊರಗಡೆ ಭೇಟಿಯಾಗುವಂತೆ ತಿಳಿಸಿದ್ದ; ನಂದಿನಿ ಭೇಟಿ ಮಾಡಲು ಬಂದಾಗ ತನ್ನ ಮೂವರು ಸ್ನೇಹಿತರೊಡನೆ ಆಕೆಯನ್ನ ಅಪಹರಿಸಿದ್ದನು. ಮೂರು ದಿನಗಳ ನಂತರ ನಂದಿನಿಯ ಮೇಲೆ ಮೃಗಗಳಂತೆ ಎರಗಿದ ನಾಲ್ವರು ಗಂಡು ಪಿಶಾಚಿಗಳು ಒಬ್ಬರಾದ ಮೇಲೊಬ್ಬರಂತೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ನಿತ್ರಾಣಳಾಗಿ ಬಿದ್ದಿದ್ದ ನಂದಿನಿಯ ಜನನಾಂಗವನ್ನು ಬ್ಲೇಡಿನಿಂದ ಕೊಯ್ದು ಅವಳ ಗರ್ಭಕ್ಕೆ ಕೈ ಹಾಕಿ ಭ್ರೂಣವನ್ನು ಹೊರತೆಗೆದು ಬಿಸಾಡಿದರು. ಪ್ರಜ್ಞೆ ತಪ್ಪಿದ್ದ ನಂದಿನಿ ರಕ್ತಸ್ರಾವದಿಂದ ಅಲ್ಲಿಯೇ ಕೊನೆಯುಸಿರೆಳೆದಿದ್ದಳು. ಇಂತಹ ಭೀಕರ ಕೃತ್ಯವೆಸಗಿದ ಮಣಿಕಂಠನ್ ಮತ್ತು ಮೂವರು ಸ್ನೇಹಿತರು ಆಕೆಯ ದೇಹವನ್ನು ಸಂಪೂರ್ಣ ಬೆತ್ತಲೆಗೊಳಿಸಿ, ಆಭರಣವನ್ನು ಕಸಿದುಕೊಂಡು ಕೈಗಳನ್ನು ಕಟ್ಟಿ ಕಾಲಿಗೆ ಕಲ್ಲುಕಟ್ಟಿ ಬಾವಿಯೊಂದರಲ್ಲಿ ಬಿಸಾಕಿಬಿಟ್ಟಿದ್ದರು. ಯಾರಿಗೂ ವಾಸನೆಯಿಂದ ಅನುಮಾನ ಬರಬಾರದೆಂದು ನಾಯಿಯೊಂದನ್ನು ಕೊಂದು ಅದೇ ಬಾವಿಗೆ ಎಸೆದಿದ್ದರು. ಜನವರಿ 14ರಂದು ಪೊಲೀಸರು ಬಾವಿಯನ್ನು ಶೋಧಿಸಿ ನಂದಿನಿಯ ಕೊಳೆತ ದೇಹವನ್ನು ಹೊರತೆಗೆದಿದ್ದರು. ಕ್ರೂರಿ ಮಣಿಕಂಠನ್ ಮತ್ತು ಆತನ ಸ್ನೇಹಿತರು ಇಂದು ಜೈಲಿನಲ್ಲಿದ್ದಾರೆ.

ಈ ಇಡೀ ಪ್ರಕರಣ ತಿಳಿಸುವ ಸತ್ಯವೇನೆಂದರೆ ಹಿಂದೂರಾಷ್ಟ್ರ ಪ್ರತಿಪಾದಕರು ಆಳದಲ್ಲಿ ಜಾತಿವಾದಿಗಳೇ ಆಗಿದ್ದು ಮುಸ್ಲಿಮರ ವಿರುದ್ಧದ “ದ್ವೇಷ ಸಾಧಿಸಿ” ಸೆಣಸಾಡಲು ಮಾತ್ರ ಹಿಂದುತ್ವ ಶಕ್ತಿಗಳಿಗೆ ದಲಿತರು ಬೇಕೆಂದೂ, ಮದುವೆಯಾಗಲು ದಲಿತರು ಯಾವುದೇ ಕಾರಣಕ್ಕೆ ಬೇಡವೆಂಬುದನ್ನು! ಇವರೊಳಗಿನ ಜಾತಿಪ್ರಜ್ಞೆ ಅದೆಷ್ಟರಮಟ್ಟಿಗೆ ಆಳದಲ್ಲಿ ಹುದುಗಿದೆಯೆಂದರೆ ದಲಿತ ಹೆಣ್ಣಿನ ಗರ್ಭದಲ್ಲಿರುವ ತಮ್ಮ ಭ್ರೂಣವನ್ನೂ ಕೊಲ್ಲುವಷ್ಟು! ಹಿಂದೂಗಳ ದೃಷ್ಟಿಯಲ್ಲಿ ದಲಿತರೆಂದಿಗೂ ಹಿಂದೂಗಳಾಗಲು ಸಾಧ್ಯವೇ ಇಲ್ಲ. ಯಾರು ಏನೇ ಹೇಳಿದರೂ ಇದೇ ಸತ್ಯವೆಂದು ಪದೇಪದೇ ಸಾಬೀತಾಗುತ್ತಿದೆ. ದುರಂತವೆಂದರೆ ದಲಿತರು ಈ ಸತ್ಯವನ್ನು ಅರ್ಥ ಮಾಡಿಕೊಳ್ಳುವಲ್ಲಿ ಪದೇಪದೇ ಎಡವುತ್ತಲೇ ಇದ್ದಾರೆ.


ಇದನ್ನೂ ಓದಿ: ಮಾತು ಮರೆತ ಭಾರತ-24; ಧರ್ಮಾಪುರಿ ಫೈಲ್: ಒಂದು ದುರಂತ ಪ್ರೇಮಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...