Homeಅಂಕಣಗಳುಮಾತು ಮರೆತ ಭಾರತ-25; ಅರಿಯೂರು ಫೈಲ್: ಹಿಂದೂಗಳ ದೃಷ್ಟಿಯಲ್ಲಿ ’ದಲಿತರೆಂದಿಗೂ ಹಿಂದೂಗಳಲ್ಲ'

ಮಾತು ಮರೆತ ಭಾರತ-25; ಅರಿಯೂರು ಫೈಲ್: ಹಿಂದೂಗಳ ದೃಷ್ಟಿಯಲ್ಲಿ ’ದಲಿತರೆಂದಿಗೂ ಹಿಂದೂಗಳಲ್ಲ’

- Advertisement -
- Advertisement -

ನಂದಿನಿ, 17 ವರ್ಷದ ಯುವತಿ. ತಮಿಳುನಾಡಿನ ಅರಿಯೂರು ಜಿಲ್ಲೆಯ ಸಿರುಕಡಂಬೂರ್ ಎಂಬ ಹಳ್ಳಿಯ ದಲಿತ ಸಮುದಾಯ ಪರೈಯ್ಯಾ ಕುಟುಂಬದ ಯುವತಿ. ತಮಿಳುನಾಡಿನಲ್ಲಿ ಪ್ರತ್ಯೇಕವಾಗಿ ದಲಿತರ ಕಾಲೋನಿಗಳು ಕಣ್ಣಿಗೆ ಎದ್ದು ಕಾಣುವಂತೆಯೇ ಇರುತ್ತವೆ. ಸಿರುಕಡಂಬೂರಿನ ದಲಿತರ ಕಾಲೋನಿಯೂ ಹಾಗೆಯೇ ಇತ್ತು. ಈ ವಿದ್ಯಮಾನ ಇಡೀ ಭಾರತಕ್ಕೆ ಅನ್ವಯಿಸುತ್ತದೆ ಬಿಡಿ. ನಂದಿನಿ ಓದಿದ್ದು 8ನೇ ತರಗತಿಯವರೆಗೆ ಮಾತ್ರ. ಕುಟುಂಬದ ಕಡುಬಡತನ ಹೆಚ್ಚು ಓದಲು ಅವಳಿಗೆ ಬಿಡಲಿಲ್ಲ. ಹಾಗಾಗಿ ಶಾಲೆಯನ್ನು ಬಿಟ್ಟವಳೇ ಕಟ್ಟಡ ಕಾರ್ಮಿಕಳಾಗಿ ಕೆಲಸ ಮಾಡಲು ಆರಂಭಿಸಿದಳು. ಹಾಸ್ಯಭರಿತ ಮಾತು ಹಾಗು ಚುರುಕು ಬುದ್ಧಿಯಿಂದಾಗಿ ಅವಳು ಕೆಲಸ ಮಾಡುವ ಜಾಗದಲ್ಲಿಯೂ ಹೆಸರುವಾಸಿಯಾಗಿದ್ದಳು.

ಹೀಗಿದ್ದ ನಂದಿನಿ ದಿನಾಂಕ 29, ಡಿಸೆಂಬರ್ 2016ರಂದು ದಿಢೀರನೇ ಕಣ್ಮರೆಯಾದಳು. ಆ ದಿನ ಸಂಜೆ ನಂದಿನಿಯ ಸಂಬಂಧಿಕರೊಬ್ಬರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ’ನಂದಿನಿ ತನ್ನ ಬಳಿ ಇದ್ದಾಳೆ’ ಎಂದು ಹೇಳಿದ್ದ. ಗಾಬರಿಗೊಂಡ ನಂದಿನಿ ಕುಟುಂಬ ಪೊಲೀಸರಿಗೆ ದೂರು ನೀಡಿತು. ದೂರಿನಲ್ಲಿ ಮಣಿಕಂಠನ್ ಎಂಬ ವಣ್ಣಿಯಾರ್ ಹಿಂದೂ ಮೇಲ್ಜಾತಿಗೆ ಸೇರಿದ್ದ ವ್ಯಕ್ತಿಯ ವಿರುದ್ಧ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಈ ಮಣಿಕಂಠನ್ ’ಹಿಂದೂ ಮುನ್ನಾಣಿ’ ಸಂಘಟನೆಯ ಕಾರ್ಯದರ್ಶಿಯಾಗಿದ್ದನು. ಹಿಂದೂ ಮುನ್ನಾಣಿ ಸಂಘಟನೆಯನ್ನು 1980ರಲ್ಲಿ ’ರಾಷ್ಟ್ರೀಯ ಸ್ವಯಂಸೇವಕ ಸಂಘ’ದ ರಾಮಗೋಪಾಲನ್ ಅವರು ಸ್ಥಾಪಿಸಿದ್ದರು. ಈಗದು ಹಿಂದೂ ರಾಷ್ಟ್ರವನ್ನು ಪ್ರತಿಪಾದಿಸುವ ಸಂಘಪರಿವಾರದ ಭಾಗವಾಗಿದೆ.

ದೂರು ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಲು ಆರಂಭಿಸಿದರು. ಅಪ್ರಾಪ್ತೆ ನಂದಿನಿ ಕಾಣೆಯಾಗಿದ್ದ ಕಾರಣ ’ಮಿಸ್ಸಿಂಗ್ ಕಂಪ್ಲೇಂಟ್’ ದಾಖಲಿಸಿಕೊಂಡಿದ್ದರು. ವಿಚಾರಣೆಯ ವೇಳೆ ನಂದಿನಿಯ ಆಪ್ತ ಸ್ನೇಹಿತೆಯಾಗಿದ್ದ ದೇವಿಯೂ ಮಣಿಕಂಠನ ಹೆಸರನ್ನು ಪ್ರಸ್ತಾಪಿಸಿದಳು. ಅಷ್ಟೇ ಅಲ್ಲದೇ ನಂದಿನಿ ಮತ್ತು ಮಣಿಕಂಠನ್ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದುದಾಗಿ ಹಾಗೂ ಇತ್ತೀಚೆಗೆ ನಂದಿನಿ ’ತಾನು ಗರ್ಭಿಣಿ’ ಆಗಿರುವುದಾಗಿಯೂ ಹೇಳಿಕೊಂಡಿದ್ದಳೆಂದು ದೇವಿ ತಿಳಿಸಿದಳು. ಈ ಕಾರಣವಾಗಿ ದಿನಾಂಕ 5, ಜನವರಿ 2017ರಂದು ಮಣಿಕಂಠನ ವಿಚಾರಣೆಯನ್ನು ಪೊಲೀಸರು ಮಾಡಿದ್ದರು. ಅಂದು ಸಂಜೆಯ ವೇಳೆಗಾಗಲೇ ವಣ್ಣಿಯಾರ್ ಸಮುದಾಯದ ಹಿರಿಯರು ಆತನನ್ನು ಮನೆಗೆ ಕರೆದುಕೊಂಡು ಹೋದರು. ಈ ಘಟನೆಯಾದ ಮಾರನೇ ದಿನದಿಂದ ಮಣಿಕಂಠನ್ ನಾಪತ್ತೆಯಾದನು. ಆತನ ಮೇಲಿದ್ದ ಕುಟುಂಬದವರ ಅನುಮಾನ ನಿಜವಾಗಿತ್ತು. ಪೊಲೀಸರು ಮಣಿಕಂಠನ ಪತ್ತೆಗಾಗಿ ಶೋಧಿಸತೊಡಗಿದರು.

ಇದಾದ ವಾರದ ನಂತರ ಮಣಿಕಂಠನ್ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದನು. ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಣಿಕಂಠನ್‌ನನ್ನು ಪರಿಚಿತರು ಆಸ್ಪತ್ರೆಗೆ ದಾಖಲಿಸಿದ್ದರು. ಗುಣಮುಖನಾದ ಮಣಿಕಂಠನ್ ಪೊಲೀಸರ ಬಳಿ ಬಾಯಿಬಿಟ್ಟ ವಿಷಯ ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದರು. ಹಿಂದೂರಾಷ್ಟ್ರ ಚಿಂತನೆಯಲ್ಲಿ ಬೆಳೆದುಬಂದ ಮಣಿಕಂಠನೊಳಗಿದ್ದ ಮಾನವ ವಿರೋಧಿ ಜಾತಿಪದ್ಧತಿಯ ಕರಾಳ ಮುಖವನ್ನು ನೋಡಿ ಪೊಲೀಸರಷ್ಟೇ ಅಲ್ಲ, ಇಡೀ ತಮಿಳುನಾಡು ಬೆಚ್ಚಿಬಿದ್ದಿತು.

ನಂದಿನಿ ಕೆಲಸ ಮಾಡುತ್ತಿದ್ದ ಕಟ್ಟಡದ ಉಸ್ತುವಾರಿ ಹೊತ್ತಿದ್ದವನು ಮಣಿಕಂಠನ್. ಅಲ್ಲಿ ಅವರಿಬ್ಬರ ನಡುವೆ ಸಲುಗೆ ಬೆಳೆದು ಮಣಿಕಂಠನ ಪ್ರೀತಿಯೆಂಬ ನಾಟಕಕ್ಕೆ ತಲೆದೂಗಿದ್ದ ನಂದಿನಿ ಮೈಮನಸ್ಸನ್ನು ಒಪ್ಪಿಸಿದ್ದಳು. ಇದರಿಂದಾಗಿ ಗರ್ಭಿಣಿಯಾಗಿದ್ದ ನಂದಿನಿ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಕ್ಕೆ ’ಮೊದಲು ಗರ್ಭಪಾತ ಮಾಡಿಸಿಕೋ’ ಎಂದು ತಾಕೀತು ಮಾಡಿದ್ದ ಮಣಿಕಂಠನ್. ಅವಳೆಷ್ಟೇ ಬೇಡಿಕೊಂಡರೂ ಅದಕ್ಕೆ ಮಣಿಯದ ಮಣಿಕಂಠನ್ ಗರ್ಭಪಾತವಾದ ನಂತರವೇ ಮದುವೆ ಎಂದು ಹೇಳಿದ್ದನಾದರೂ ಅದಕ್ಕೆ ಒಪ್ಪಿಕೊಳ್ಳದ ನಂದಿನಿ ಇದ್ದ ವಿಷಯವನ್ನು ತನ್ನ ಆಪ್ತರೊಂದಿಗೆ ಹೇಳಿದ್ದಳು. ಇದನ್ನು ಸಹಿಸದ ಮಣಿಕಂಠನ್ ದಿನಾಂಕ 29, ಡಿಸೆಂಬರ್ 2016ರಂದು ನಂದಿನಿಯನ್ನು ಹೊರಗಡೆ ಭೇಟಿಯಾಗುವಂತೆ ತಿಳಿಸಿದ್ದ; ನಂದಿನಿ ಭೇಟಿ ಮಾಡಲು ಬಂದಾಗ ತನ್ನ ಮೂವರು ಸ್ನೇಹಿತರೊಡನೆ ಆಕೆಯನ್ನ ಅಪಹರಿಸಿದ್ದನು. ಮೂರು ದಿನಗಳ ನಂತರ ನಂದಿನಿಯ ಮೇಲೆ ಮೃಗಗಳಂತೆ ಎರಗಿದ ನಾಲ್ವರು ಗಂಡು ಪಿಶಾಚಿಗಳು ಒಬ್ಬರಾದ ಮೇಲೊಬ್ಬರಂತೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ನಿತ್ರಾಣಳಾಗಿ ಬಿದ್ದಿದ್ದ ನಂದಿನಿಯ ಜನನಾಂಗವನ್ನು ಬ್ಲೇಡಿನಿಂದ ಕೊಯ್ದು ಅವಳ ಗರ್ಭಕ್ಕೆ ಕೈ ಹಾಕಿ ಭ್ರೂಣವನ್ನು ಹೊರತೆಗೆದು ಬಿಸಾಡಿದರು. ಪ್ರಜ್ಞೆ ತಪ್ಪಿದ್ದ ನಂದಿನಿ ರಕ್ತಸ್ರಾವದಿಂದ ಅಲ್ಲಿಯೇ ಕೊನೆಯುಸಿರೆಳೆದಿದ್ದಳು. ಇಂತಹ ಭೀಕರ ಕೃತ್ಯವೆಸಗಿದ ಮಣಿಕಂಠನ್ ಮತ್ತು ಮೂವರು ಸ್ನೇಹಿತರು ಆಕೆಯ ದೇಹವನ್ನು ಸಂಪೂರ್ಣ ಬೆತ್ತಲೆಗೊಳಿಸಿ, ಆಭರಣವನ್ನು ಕಸಿದುಕೊಂಡು ಕೈಗಳನ್ನು ಕಟ್ಟಿ ಕಾಲಿಗೆ ಕಲ್ಲುಕಟ್ಟಿ ಬಾವಿಯೊಂದರಲ್ಲಿ ಬಿಸಾಕಿಬಿಟ್ಟಿದ್ದರು. ಯಾರಿಗೂ ವಾಸನೆಯಿಂದ ಅನುಮಾನ ಬರಬಾರದೆಂದು ನಾಯಿಯೊಂದನ್ನು ಕೊಂದು ಅದೇ ಬಾವಿಗೆ ಎಸೆದಿದ್ದರು. ಜನವರಿ 14ರಂದು ಪೊಲೀಸರು ಬಾವಿಯನ್ನು ಶೋಧಿಸಿ ನಂದಿನಿಯ ಕೊಳೆತ ದೇಹವನ್ನು ಹೊರತೆಗೆದಿದ್ದರು. ಕ್ರೂರಿ ಮಣಿಕಂಠನ್ ಮತ್ತು ಆತನ ಸ್ನೇಹಿತರು ಇಂದು ಜೈಲಿನಲ್ಲಿದ್ದಾರೆ.

ಈ ಇಡೀ ಪ್ರಕರಣ ತಿಳಿಸುವ ಸತ್ಯವೇನೆಂದರೆ ಹಿಂದೂರಾಷ್ಟ್ರ ಪ್ರತಿಪಾದಕರು ಆಳದಲ್ಲಿ ಜಾತಿವಾದಿಗಳೇ ಆಗಿದ್ದು ಮುಸ್ಲಿಮರ ವಿರುದ್ಧದ “ದ್ವೇಷ ಸಾಧಿಸಿ” ಸೆಣಸಾಡಲು ಮಾತ್ರ ಹಿಂದುತ್ವ ಶಕ್ತಿಗಳಿಗೆ ದಲಿತರು ಬೇಕೆಂದೂ, ಮದುವೆಯಾಗಲು ದಲಿತರು ಯಾವುದೇ ಕಾರಣಕ್ಕೆ ಬೇಡವೆಂಬುದನ್ನು! ಇವರೊಳಗಿನ ಜಾತಿಪ್ರಜ್ಞೆ ಅದೆಷ್ಟರಮಟ್ಟಿಗೆ ಆಳದಲ್ಲಿ ಹುದುಗಿದೆಯೆಂದರೆ ದಲಿತ ಹೆಣ್ಣಿನ ಗರ್ಭದಲ್ಲಿರುವ ತಮ್ಮ ಭ್ರೂಣವನ್ನೂ ಕೊಲ್ಲುವಷ್ಟು! ಹಿಂದೂಗಳ ದೃಷ್ಟಿಯಲ್ಲಿ ದಲಿತರೆಂದಿಗೂ ಹಿಂದೂಗಳಾಗಲು ಸಾಧ್ಯವೇ ಇಲ್ಲ. ಯಾರು ಏನೇ ಹೇಳಿದರೂ ಇದೇ ಸತ್ಯವೆಂದು ಪದೇಪದೇ ಸಾಬೀತಾಗುತ್ತಿದೆ. ದುರಂತವೆಂದರೆ ದಲಿತರು ಈ ಸತ್ಯವನ್ನು ಅರ್ಥ ಮಾಡಿಕೊಳ್ಳುವಲ್ಲಿ ಪದೇಪದೇ ಎಡವುತ್ತಲೇ ಇದ್ದಾರೆ.


ಇದನ್ನೂ ಓದಿ: ಮಾತು ಮರೆತ ಭಾರತ-24; ಧರ್ಮಾಪುರಿ ಫೈಲ್: ಒಂದು ದುರಂತ ಪ್ರೇಮಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....