Homeಅಂಕಣಗಳುಮಾತು ಮರೆತ ಭಾರತ-25; ಅರಿಯೂರು ಫೈಲ್: ಹಿಂದೂಗಳ ದೃಷ್ಟಿಯಲ್ಲಿ ’ದಲಿತರೆಂದಿಗೂ ಹಿಂದೂಗಳಲ್ಲ'

ಮಾತು ಮರೆತ ಭಾರತ-25; ಅರಿಯೂರು ಫೈಲ್: ಹಿಂದೂಗಳ ದೃಷ್ಟಿಯಲ್ಲಿ ’ದಲಿತರೆಂದಿಗೂ ಹಿಂದೂಗಳಲ್ಲ’

- Advertisement -
- Advertisement -

ನಂದಿನಿ, 17 ವರ್ಷದ ಯುವತಿ. ತಮಿಳುನಾಡಿನ ಅರಿಯೂರು ಜಿಲ್ಲೆಯ ಸಿರುಕಡಂಬೂರ್ ಎಂಬ ಹಳ್ಳಿಯ ದಲಿತ ಸಮುದಾಯ ಪರೈಯ್ಯಾ ಕುಟುಂಬದ ಯುವತಿ. ತಮಿಳುನಾಡಿನಲ್ಲಿ ಪ್ರತ್ಯೇಕವಾಗಿ ದಲಿತರ ಕಾಲೋನಿಗಳು ಕಣ್ಣಿಗೆ ಎದ್ದು ಕಾಣುವಂತೆಯೇ ಇರುತ್ತವೆ. ಸಿರುಕಡಂಬೂರಿನ ದಲಿತರ ಕಾಲೋನಿಯೂ ಹಾಗೆಯೇ ಇತ್ತು. ಈ ವಿದ್ಯಮಾನ ಇಡೀ ಭಾರತಕ್ಕೆ ಅನ್ವಯಿಸುತ್ತದೆ ಬಿಡಿ. ನಂದಿನಿ ಓದಿದ್ದು 8ನೇ ತರಗತಿಯವರೆಗೆ ಮಾತ್ರ. ಕುಟುಂಬದ ಕಡುಬಡತನ ಹೆಚ್ಚು ಓದಲು ಅವಳಿಗೆ ಬಿಡಲಿಲ್ಲ. ಹಾಗಾಗಿ ಶಾಲೆಯನ್ನು ಬಿಟ್ಟವಳೇ ಕಟ್ಟಡ ಕಾರ್ಮಿಕಳಾಗಿ ಕೆಲಸ ಮಾಡಲು ಆರಂಭಿಸಿದಳು. ಹಾಸ್ಯಭರಿತ ಮಾತು ಹಾಗು ಚುರುಕು ಬುದ್ಧಿಯಿಂದಾಗಿ ಅವಳು ಕೆಲಸ ಮಾಡುವ ಜಾಗದಲ್ಲಿಯೂ ಹೆಸರುವಾಸಿಯಾಗಿದ್ದಳು.

ಹೀಗಿದ್ದ ನಂದಿನಿ ದಿನಾಂಕ 29, ಡಿಸೆಂಬರ್ 2016ರಂದು ದಿಢೀರನೇ ಕಣ್ಮರೆಯಾದಳು. ಆ ದಿನ ಸಂಜೆ ನಂದಿನಿಯ ಸಂಬಂಧಿಕರೊಬ್ಬರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ’ನಂದಿನಿ ತನ್ನ ಬಳಿ ಇದ್ದಾಳೆ’ ಎಂದು ಹೇಳಿದ್ದ. ಗಾಬರಿಗೊಂಡ ನಂದಿನಿ ಕುಟುಂಬ ಪೊಲೀಸರಿಗೆ ದೂರು ನೀಡಿತು. ದೂರಿನಲ್ಲಿ ಮಣಿಕಂಠನ್ ಎಂಬ ವಣ್ಣಿಯಾರ್ ಹಿಂದೂ ಮೇಲ್ಜಾತಿಗೆ ಸೇರಿದ್ದ ವ್ಯಕ್ತಿಯ ವಿರುದ್ಧ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಈ ಮಣಿಕಂಠನ್ ’ಹಿಂದೂ ಮುನ್ನಾಣಿ’ ಸಂಘಟನೆಯ ಕಾರ್ಯದರ್ಶಿಯಾಗಿದ್ದನು. ಹಿಂದೂ ಮುನ್ನಾಣಿ ಸಂಘಟನೆಯನ್ನು 1980ರಲ್ಲಿ ’ರಾಷ್ಟ್ರೀಯ ಸ್ವಯಂಸೇವಕ ಸಂಘ’ದ ರಾಮಗೋಪಾಲನ್ ಅವರು ಸ್ಥಾಪಿಸಿದ್ದರು. ಈಗದು ಹಿಂದೂ ರಾಷ್ಟ್ರವನ್ನು ಪ್ರತಿಪಾದಿಸುವ ಸಂಘಪರಿವಾರದ ಭಾಗವಾಗಿದೆ.

ದೂರು ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಲು ಆರಂಭಿಸಿದರು. ಅಪ್ರಾಪ್ತೆ ನಂದಿನಿ ಕಾಣೆಯಾಗಿದ್ದ ಕಾರಣ ’ಮಿಸ್ಸಿಂಗ್ ಕಂಪ್ಲೇಂಟ್’ ದಾಖಲಿಸಿಕೊಂಡಿದ್ದರು. ವಿಚಾರಣೆಯ ವೇಳೆ ನಂದಿನಿಯ ಆಪ್ತ ಸ್ನೇಹಿತೆಯಾಗಿದ್ದ ದೇವಿಯೂ ಮಣಿಕಂಠನ ಹೆಸರನ್ನು ಪ್ರಸ್ತಾಪಿಸಿದಳು. ಅಷ್ಟೇ ಅಲ್ಲದೇ ನಂದಿನಿ ಮತ್ತು ಮಣಿಕಂಠನ್ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದುದಾಗಿ ಹಾಗೂ ಇತ್ತೀಚೆಗೆ ನಂದಿನಿ ’ತಾನು ಗರ್ಭಿಣಿ’ ಆಗಿರುವುದಾಗಿಯೂ ಹೇಳಿಕೊಂಡಿದ್ದಳೆಂದು ದೇವಿ ತಿಳಿಸಿದಳು. ಈ ಕಾರಣವಾಗಿ ದಿನಾಂಕ 5, ಜನವರಿ 2017ರಂದು ಮಣಿಕಂಠನ ವಿಚಾರಣೆಯನ್ನು ಪೊಲೀಸರು ಮಾಡಿದ್ದರು. ಅಂದು ಸಂಜೆಯ ವೇಳೆಗಾಗಲೇ ವಣ್ಣಿಯಾರ್ ಸಮುದಾಯದ ಹಿರಿಯರು ಆತನನ್ನು ಮನೆಗೆ ಕರೆದುಕೊಂಡು ಹೋದರು. ಈ ಘಟನೆಯಾದ ಮಾರನೇ ದಿನದಿಂದ ಮಣಿಕಂಠನ್ ನಾಪತ್ತೆಯಾದನು. ಆತನ ಮೇಲಿದ್ದ ಕುಟುಂಬದವರ ಅನುಮಾನ ನಿಜವಾಗಿತ್ತು. ಪೊಲೀಸರು ಮಣಿಕಂಠನ ಪತ್ತೆಗಾಗಿ ಶೋಧಿಸತೊಡಗಿದರು.

ಇದಾದ ವಾರದ ನಂತರ ಮಣಿಕಂಠನ್ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದನು. ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಣಿಕಂಠನ್‌ನನ್ನು ಪರಿಚಿತರು ಆಸ್ಪತ್ರೆಗೆ ದಾಖಲಿಸಿದ್ದರು. ಗುಣಮುಖನಾದ ಮಣಿಕಂಠನ್ ಪೊಲೀಸರ ಬಳಿ ಬಾಯಿಬಿಟ್ಟ ವಿಷಯ ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದರು. ಹಿಂದೂರಾಷ್ಟ್ರ ಚಿಂತನೆಯಲ್ಲಿ ಬೆಳೆದುಬಂದ ಮಣಿಕಂಠನೊಳಗಿದ್ದ ಮಾನವ ವಿರೋಧಿ ಜಾತಿಪದ್ಧತಿಯ ಕರಾಳ ಮುಖವನ್ನು ನೋಡಿ ಪೊಲೀಸರಷ್ಟೇ ಅಲ್ಲ, ಇಡೀ ತಮಿಳುನಾಡು ಬೆಚ್ಚಿಬಿದ್ದಿತು.

ನಂದಿನಿ ಕೆಲಸ ಮಾಡುತ್ತಿದ್ದ ಕಟ್ಟಡದ ಉಸ್ತುವಾರಿ ಹೊತ್ತಿದ್ದವನು ಮಣಿಕಂಠನ್. ಅಲ್ಲಿ ಅವರಿಬ್ಬರ ನಡುವೆ ಸಲುಗೆ ಬೆಳೆದು ಮಣಿಕಂಠನ ಪ್ರೀತಿಯೆಂಬ ನಾಟಕಕ್ಕೆ ತಲೆದೂಗಿದ್ದ ನಂದಿನಿ ಮೈಮನಸ್ಸನ್ನು ಒಪ್ಪಿಸಿದ್ದಳು. ಇದರಿಂದಾಗಿ ಗರ್ಭಿಣಿಯಾಗಿದ್ದ ನಂದಿನಿ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಕ್ಕೆ ’ಮೊದಲು ಗರ್ಭಪಾತ ಮಾಡಿಸಿಕೋ’ ಎಂದು ತಾಕೀತು ಮಾಡಿದ್ದ ಮಣಿಕಂಠನ್. ಅವಳೆಷ್ಟೇ ಬೇಡಿಕೊಂಡರೂ ಅದಕ್ಕೆ ಮಣಿಯದ ಮಣಿಕಂಠನ್ ಗರ್ಭಪಾತವಾದ ನಂತರವೇ ಮದುವೆ ಎಂದು ಹೇಳಿದ್ದನಾದರೂ ಅದಕ್ಕೆ ಒಪ್ಪಿಕೊಳ್ಳದ ನಂದಿನಿ ಇದ್ದ ವಿಷಯವನ್ನು ತನ್ನ ಆಪ್ತರೊಂದಿಗೆ ಹೇಳಿದ್ದಳು. ಇದನ್ನು ಸಹಿಸದ ಮಣಿಕಂಠನ್ ದಿನಾಂಕ 29, ಡಿಸೆಂಬರ್ 2016ರಂದು ನಂದಿನಿಯನ್ನು ಹೊರಗಡೆ ಭೇಟಿಯಾಗುವಂತೆ ತಿಳಿಸಿದ್ದ; ನಂದಿನಿ ಭೇಟಿ ಮಾಡಲು ಬಂದಾಗ ತನ್ನ ಮೂವರು ಸ್ನೇಹಿತರೊಡನೆ ಆಕೆಯನ್ನ ಅಪಹರಿಸಿದ್ದನು. ಮೂರು ದಿನಗಳ ನಂತರ ನಂದಿನಿಯ ಮೇಲೆ ಮೃಗಗಳಂತೆ ಎರಗಿದ ನಾಲ್ವರು ಗಂಡು ಪಿಶಾಚಿಗಳು ಒಬ್ಬರಾದ ಮೇಲೊಬ್ಬರಂತೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ನಿತ್ರಾಣಳಾಗಿ ಬಿದ್ದಿದ್ದ ನಂದಿನಿಯ ಜನನಾಂಗವನ್ನು ಬ್ಲೇಡಿನಿಂದ ಕೊಯ್ದು ಅವಳ ಗರ್ಭಕ್ಕೆ ಕೈ ಹಾಕಿ ಭ್ರೂಣವನ್ನು ಹೊರತೆಗೆದು ಬಿಸಾಡಿದರು. ಪ್ರಜ್ಞೆ ತಪ್ಪಿದ್ದ ನಂದಿನಿ ರಕ್ತಸ್ರಾವದಿಂದ ಅಲ್ಲಿಯೇ ಕೊನೆಯುಸಿರೆಳೆದಿದ್ದಳು. ಇಂತಹ ಭೀಕರ ಕೃತ್ಯವೆಸಗಿದ ಮಣಿಕಂಠನ್ ಮತ್ತು ಮೂವರು ಸ್ನೇಹಿತರು ಆಕೆಯ ದೇಹವನ್ನು ಸಂಪೂರ್ಣ ಬೆತ್ತಲೆಗೊಳಿಸಿ, ಆಭರಣವನ್ನು ಕಸಿದುಕೊಂಡು ಕೈಗಳನ್ನು ಕಟ್ಟಿ ಕಾಲಿಗೆ ಕಲ್ಲುಕಟ್ಟಿ ಬಾವಿಯೊಂದರಲ್ಲಿ ಬಿಸಾಕಿಬಿಟ್ಟಿದ್ದರು. ಯಾರಿಗೂ ವಾಸನೆಯಿಂದ ಅನುಮಾನ ಬರಬಾರದೆಂದು ನಾಯಿಯೊಂದನ್ನು ಕೊಂದು ಅದೇ ಬಾವಿಗೆ ಎಸೆದಿದ್ದರು. ಜನವರಿ 14ರಂದು ಪೊಲೀಸರು ಬಾವಿಯನ್ನು ಶೋಧಿಸಿ ನಂದಿನಿಯ ಕೊಳೆತ ದೇಹವನ್ನು ಹೊರತೆಗೆದಿದ್ದರು. ಕ್ರೂರಿ ಮಣಿಕಂಠನ್ ಮತ್ತು ಆತನ ಸ್ನೇಹಿತರು ಇಂದು ಜೈಲಿನಲ್ಲಿದ್ದಾರೆ.

ಈ ಇಡೀ ಪ್ರಕರಣ ತಿಳಿಸುವ ಸತ್ಯವೇನೆಂದರೆ ಹಿಂದೂರಾಷ್ಟ್ರ ಪ್ರತಿಪಾದಕರು ಆಳದಲ್ಲಿ ಜಾತಿವಾದಿಗಳೇ ಆಗಿದ್ದು ಮುಸ್ಲಿಮರ ವಿರುದ್ಧದ “ದ್ವೇಷ ಸಾಧಿಸಿ” ಸೆಣಸಾಡಲು ಮಾತ್ರ ಹಿಂದುತ್ವ ಶಕ್ತಿಗಳಿಗೆ ದಲಿತರು ಬೇಕೆಂದೂ, ಮದುವೆಯಾಗಲು ದಲಿತರು ಯಾವುದೇ ಕಾರಣಕ್ಕೆ ಬೇಡವೆಂಬುದನ್ನು! ಇವರೊಳಗಿನ ಜಾತಿಪ್ರಜ್ಞೆ ಅದೆಷ್ಟರಮಟ್ಟಿಗೆ ಆಳದಲ್ಲಿ ಹುದುಗಿದೆಯೆಂದರೆ ದಲಿತ ಹೆಣ್ಣಿನ ಗರ್ಭದಲ್ಲಿರುವ ತಮ್ಮ ಭ್ರೂಣವನ್ನೂ ಕೊಲ್ಲುವಷ್ಟು! ಹಿಂದೂಗಳ ದೃಷ್ಟಿಯಲ್ಲಿ ದಲಿತರೆಂದಿಗೂ ಹಿಂದೂಗಳಾಗಲು ಸಾಧ್ಯವೇ ಇಲ್ಲ. ಯಾರು ಏನೇ ಹೇಳಿದರೂ ಇದೇ ಸತ್ಯವೆಂದು ಪದೇಪದೇ ಸಾಬೀತಾಗುತ್ತಿದೆ. ದುರಂತವೆಂದರೆ ದಲಿತರು ಈ ಸತ್ಯವನ್ನು ಅರ್ಥ ಮಾಡಿಕೊಳ್ಳುವಲ್ಲಿ ಪದೇಪದೇ ಎಡವುತ್ತಲೇ ಇದ್ದಾರೆ.


ಇದನ್ನೂ ಓದಿ: ಮಾತು ಮರೆತ ಭಾರತ-24; ಧರ್ಮಾಪುರಿ ಫೈಲ್: ಒಂದು ದುರಂತ ಪ್ರೇಮಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...