Homeಅಂಕಣಗಳುಮಾತು ಮರೆತ ಭಾರತ-36; ದಲಿತ್ ಫೈಲ್ಸ್ : ದಲಿತರು ಹಿಂದೂಗಳಲ್ಲ, ದೇಗುಲಕ್ಕೆ ಪ್ರವೇಶವಿಲ್ಲ

ಮಾತು ಮರೆತ ಭಾರತ-36; ದಲಿತ್ ಫೈಲ್ಸ್ : ದಲಿತರು ಹಿಂದೂಗಳಲ್ಲ, ದೇಗುಲಕ್ಕೆ ಪ್ರವೇಶವಿಲ್ಲ

- Advertisement -
- Advertisement -

’ದೇವಸ್ಥಾನದೊಳಗೆ ಹೋಗೋದೂ ಒಂದೇ ಬೆಂಕಿಯೊಳಗೆ ಹೋಗೋದು ಒಂದೇ’ ಈ ಮಾತುಗಳನ್ನಾಡಿದ್ದು 50 ವರ್ಷ ವಯಸ್ಸಿನ ಕೊಪ್ಪಳದ ಮಾದಿಗರ ಹನುಮವ್ವ. ಬುದ್ಧಿ ಬಂದಾಗಿನಿಂದಲೂ ಊರಿನ ದೇಸ್ಥಾನದೊಳಗೆ ಇಂದಲ್ಲ ನಾಳೆ ಪ್ರವೇಶ ಸಿಗುತ್ತದೆ ಎಂದು ಕಾಯುತ್ತಿರುವ ಹನುಮವ್ವನ ಆಸೆ ಇಂದಿಗೂ ತೀರಿಲ್ಲ. ಹನುಮವ್ವ ಅಂತಿಂತ ಗಟ್ಟಿಗಿತ್ತಿಯಲ್ಲ, ಊರಿನ ಮೇಲ್ಜಾತಿಯವರು ಬೆದರಿಕೆ ಒಡ್ಡಿದ್ದರೂ ಸಹ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದವರು.

ಅದೇ ಊರಿನಲ್ಲಿ ದಲಿತ ಜಾತಿಯಾದ ’ದಾಸ’ರ 3 ವರ್ಷದ ವಿನಯ್ ಆಡುತ್ತಿದ್ದಾಗ ಮಳೆ ಬಂದ ಕಾರಣ ಆಶ್ರಯಕ್ಕಾಗಿ ದೇವಸ್ಥಾನದೊಳಗೆ ಕಾಲಿಟ್ಟುಬಿಟ್ಟ. ತಕ್ಷಣವೇ ಇಡೀ ಊರಿನ ಮೇಲ್ಜಾತಿ ಮುಖಂಡರು ಆ ಮಗುವಿನ ಕುಟುಂಬದ ಮೇಲೆ ಮುಗಿಬಿದ್ದರು. ದೇವಸ್ಥಾನ ದಲಿತನ ಪ್ರವೇಶದಿಂದ ಮೈಲಿಗೆಯಾಗಿದೆ, ಹಾಗಾಗಿ ಶುದ್ಧೀಕರಿಸಬೇಕೆಂದು ತೀರ್ಮಾನಿಸಿದರು. ಈ ಶುದ್ಧೀಕರಣಕ್ಕೆ ತಗಲುವ ಖರ್ಚನ್ನು ವಿನಯ್ ಕುಟುಂಬವೇ ಭರಿಸಬೇಕೆಂದು ಮೇಲ್ಜಾತಿ ಮನಸುಗಳು ತೀರ್ಪು ನೀಡಿದವು. ವಿಷಯ ತಿಳಿದ ಜಿಲ್ಲಾಡಳಿತ ಮೇಲ್ಜಾತಿ ಮುಖಂಡರನ್ನು ಬಂಧಿಸಿ ಜಿಲ್ಲೆಯ ಎಲ್ಲಾ ದೇವಸ್ಥಾನಕ್ಕೂ ದಲಿತರಿಗೆ ಪ್ರವೇಶ ನೀಡಬೇಕೆಂದು ತಾಕೀತು ಮಾಡಿತು. ವಿನಯ್ ಕುಟುಂಬವೂ ಸಹ ದೇವಸ್ಥಾನಕ್ಕೆ ಪೊಲೀಸ್ ಬೆಂಗಾವಲಿನಲ್ಲಿ ಪ್ರವೇಶ ಪಡೆಯಿತು. ಒಂದು ದಿನದ ಹರುಷವೂ ಮುಗಿಯಿತು. ವಿನಯ್ ಕುಟುಂಬಕ್ಕೆ ಕಿರುಕುಳ ನೀಡಿದ್ದ ಮೇಲ್ಜಾತಿ ಮುಖಂಡರನ್ನು ಜಾಮೀನಿನಲ್ಲಿ ಬಿಡುಗಡೆಗೊಳ್ಳುವ ಮುನ್ನಾ ದಿನವೇ ವಿನಯ್ ಕುಟುಂಬವನ್ನು ಊರು ಬಿಡುವಂತೆ ಮಾಡಲಾಯಿತು. ಇಲ್ಲದಿದ್ದರೆ ಅನಾಹುತ ಸಂಭವಿಸಬಹುದೆಂದು ಹೇಳಲಾಯಿತು. ಈ ಬೆದರಿಕೆ-ಹೆದರಿಕೆಗೆ ಜಿಲ್ಲಾಡಳಿತ ಬೆಂಗಾವಲು ನೀಡಲಾಗಲಿಲ್ಲ, ಆಗುವುದೂ ಇಲ್ಲ. ಸರ್ಕಾರ ವಿನಯ್‌ನನ್ನು ದತ್ತು ತೆಗೆದುಕೊಂಡು ಓದಿಸುವುದಾಗಿ ಭರವಸೆ ನೀಡಿತು. ಆದರೆ ಆತನ ಕುಟುಂಬ ಈಗ ಊರೂರು ಅಲೆಯುತ್ತ ಅನಾಥವಾಗಿದೆ. ಈ ಭಾಗದ ಮಾದಿಗ ಮತ್ತು ಛಲವಾದಿ ದಲಿತರ ಪಾಡು ಇದೇ ಆಗಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹಸಿಹಸಿಯಾಗಿ ಜೀವಂತವಿರುವ ಅಸ್ಪೃಶ್ಯತೆ ಆಚರಣೆಗೆ ಮತ್ತೊಂದು ಸಾಕ್ಷಿ ಕೋಲಾರದ ಮುಳಬಾಗಿಲು. ಇಲ್ಲಿ ದೇವರ ಕಂಬವನ್ನು ದಲಿತ ಯುವಕನೊಬ್ಬ ಮುಟ್ಟಿದ್ದಕ್ಕೆ ಮೇಲ್ಜಾತಿವಾದಿಗಳು 60,000 ರೂಪಾಯಿ ದಂಡ ವಿಧಿಸಿದ್ದರು. ಅಲ್ಲಿನ ದಲಿತರೂ ಸಹ ಹಿಂದೂ ಮೇಲ್ಜಾತಿ ದೇವರುಗಳನ್ನು ಮನೆಯಿಂದ ಹೊರಗೆ ಹಾಕಿ ಅಂಬೇಡ್ಕರ್ ದಾರಿಯನ್ನು ಹಿಡಿಯಲು ಮುಂದಾದರು.

ಇದು ಇಂದು ನಿನ್ನೆಯ ವಿಷಯವಲ್ಲ. ಸನಾತನ ಪರಂಪರೆಯ ಸಮಸ್ಯೆ. ಮಾನವೀಯವಾದ ನಮ್ಮ ಸಂವಿಧಾನ ಈ ಸನಾತನದ ವಿರುದ್ಧವಾಗಿ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಗೊಳಿಸಿದ ನಂತರವೂ ಇಂತಹ ಅಮಾನವೀಯ ಆಚರಣೆಗಳು ಈ ನೆಲದಲ್ಲಿ ಇನ್ನೂ ಜೀವಂತವಾಗಿವೆ. ಅಷ್ಟೇಅಲ್ಲದೇ ಬಹಿರಂಗವಾಗಿ ನಡೆಯುತ್ತವೆ.

ತಮ್ಮ ಹೋರಾಟದ ಆರಂಭಿಕ ಘಟ್ಟದಲ್ಲಿ ಸ್ವತಃ ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರೇ ಕಾಳರಾಮ್ ದೇವಸ್ಥಾನ ಪ್ರವೇಶಕ್ಕೆ ಹೋರಾಟ ರೂಪಿಸಿದ್ದರು. ಆದರೆ ಕೆಲವೇ ದಿನಗಳಲ್ಲಿ ಮೇಲ್ಜಾತಿ ಹಿಂದೂಗಳ ಜಡತ್ವವನ್ನು ಅರಿತು ದೇಗುಲ ಪ್ರವೇಶ ಹೋರಾಟದಿಂದಲೇ ದೂರ ಸರಿದರು. ಅಂಬೇಡ್ಕರರು ದೇವಸ್ಥಾನ ಪ್ರವೇಶ ಹೋರಾಟ ಕೈಬಿಟ್ಟು ಇಲ್ಲಿಗೆ ಸುಮಾರು 9 ದಶಕಗಳೇ ಕಳೆದಿವೆ. ಆದರೆ ಇಂದಿಗೂ ದಲಿತರು ದೇವಸ್ಥಾನದ ಬಾಗಿಲುಗಳನ್ನು ತಟ್ಟುತ್ತಲೇ ಇದ್ದಾರೆ. ಅಂಬೇಡ್ಕರ್ ಅವರ ದೂರದೃಷ್ಟಿ ಇವರಿಗೆ ಇಂದಿಗೂ ಅರ್ಥವಾಗಿಲ್ಲದಿರುವುದಕ್ಕೆ ನಾವೆಲ್ಲರೂ ಕಾರಣರಾಗಿದ್ದೇವೆ. ಆದರೆ ಮತ್ತೊಂದು ಕಡೆ ಕೋಲಾರದ ಮುಳಬಾಗಿಲಿನ ದಲಿತ ಕುಟುಂಬ ಮಾಡಿದ ಕೆಲಸ ನಿಜಕ್ಕೂ ಶ್ಲಾಘನೀಯ. ’ನಿನಗೆಲ್ಲಿ ಗೌರವವಿಲ್ಲವೋ ಅಲ್ಲಿ ನಿನ್ನ ಚಪ್ಪಲಿಗಳನ್ನೂ ಸಹ ಬಿಡಬೇಡ’ ಎಂಬ ಅಂಬೇಡ್ಕರರ ಸ್ವಾಭಿಮಾನದ ಮಾತುಗಳನ್ನು ಮುಳಬಾಗಿನ ದಲಿತ ಕುಟುಂಬ ಪಾಲಿಸಿದೆ. ಇದು ಆಶಾದಾಯಕವಾದ ಬೆಳವಣಿಗೆ.

ಇದನ್ನೂ ಓದಿ: ಮಾತು ಮರೆತ ಭಾರತ-35; ಮಿರ್ಯಾಲಗುಡ ಫೈಲ್: ’ಅಪ್ಪನನ್ನು ಗಲ್ಲಿಗೇರಿಸಿ’ ಎಂದ ಅಮೃತಳ ಕತೆ

ಹಾಗೆಂದು ಇಂದಿಗೂ ದೇಗುಲ ಪ್ರವೇಶಕ್ಕಾಗಿಯೇ ಕಾಯುತ್ತಿರುವ ದಲಿತ ಸಮುದಾಯಕ್ಕೆ ನಿಜಸ್ಥಿತಿಯನ್ನು ಸಾರಿಸಾರಿ ಹೇಳಬೇಕಾಗಿದೆ. ಉದಾಹರಣೆಗೆ, 2022ರಲ್ಲಿ ರಾಯಚೂರಿನ ಗ್ರಾಮೀಣ ಕೂಲಿಕಾರ್ಮಿಕರ ಸಂಘವು 56 ಹಳ್ಳಿಗಳನ್ನು ಸಮೀಕ್ಷೆ ಮಾಡಿತು. ಅದರ ಪ್ರಕಾರ 56ರಲ್ಲಿ ಕೇವಲ 9 ಹಳ್ಳಿಗಳಲ್ಲಿ ಮಾತ್ರ ದಲಿತರಿಗೆ ದೇಗುಲ ಪ್ರವೇಶವಿತ್ತು. 2018ರಲ್ಲಿ ಇನ್‌ಸ್ಟಿಟ್ಯೂಟ್ ಆಫ್ ’ಸೋಷಿಯಲ್ ಅಂಡ್ ಎಕನಾಮಿಕ್ ಚೇಂಜ್’ನ ಪ್ರೊ. ಮಾರುತಿಯವರ ನೇತೃತ್ವದಲ್ಲಿ ಒಂದು ಅಧ್ಯಯನ ನಡೆಯಿತು. ಈ ಅಧ್ಯಯನದ ಪ್ರಕಾರ ಕರ್ನಾಟಕದ ಶೇ.34ರಷ್ಟು ದಲಿತರಿಗೆ ದೇಗುಲ ಪ್ರವೇಶವೇ ಇಲ್ಲ. ಮಾರುತಿಯವರ ಪ್ರಕಾರ ಎಲ್ಲಿ ಅನಕ್ಷರತೆ ಕಡಿಮೆ ಇದೆಯೋ ಹಾಗೂ ಬಡವರು-ಶ್ರೀಮಂತರ ನಡುವಿನ ಅಂತರ ಎಲ್ಲಿ ಹೆಚ್ಚಿದೆಯೋ ಅಲ್ಲಿ ಹೆಚ್ಚಿನ ಜಾತಿ ತಾರತಮ್ಯವಿದೆ. ಎಲ್ಲಿ ದಲಿತರು ಉನ್ನತ ಮಟ್ಟದ ಶಿಕ್ಷಣ ಪಡೆದಿದ್ದಾರೋ ಅಲ್ಲಿ ದಲಿತರ ಮೇಲಿನ ತಾರತಮ್ಯ ಕಡಿಮೆ ಆಗುತ್ತಿದೆ. ಜೊತೆಗೆ ದಲಿತರ ಆರ್ಥಿಕ ಸ್ಥಿತಿಗತಿಯೂ ಸಹ ಚನ್ನಾಗಿದೆ.

ಕೊಪ್ಪಳದಲ್ಲಿ ಪದೇಪದೇ ಅಸ್ಪೃಶ್ಯತೆ ಆಚರಣೆಯ ಘಟನೆಗಳು ಹೆಚ್ಚಾಗುತ್ತಲೇ ಇರುವುದಕ್ಕೆ ಕಾರಣ ಅಲ್ಲಿನ ದಲಿತರಲ್ಲಿರುವ ಅಜಾಗೃತಿ. ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಎಲ್ಲೆಲ್ಲಿ ಲಿಂಗಾಯತರು, ಬ್ರಾಹ್ಮಣರು, ಕುರುಬರು, ಗೌಡರು ಹಾಗೂ ನಾಯಕರ ಪ್ರಾಬಲ್ಯ ಹೆಚ್ಚಿದೆಯೋ ಅಲ್ಲೆಲ್ಲಾ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಹೆಚ್ಚಿದೆ ಎಂದು ಈ ಸಮೀಕ್ಷೆ ಹೇಳುತ್ತದೆ. ಒಟ್ಟಾರೆ ಕರ್ನಾಟಕದಲ್ಲಿ 2019ರಿಂದ 2021ರ ನಡುವೆ ಶೇ.11ರಷ್ಟು ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿರುವುದಕ್ಕೆ ಕಾರಣ ಹಿಂದೂ ಮೇಲ್ಜಾತಿ ಪರ ನಿಂತಿರುವ ಬಿಜೆಪಿ ಸರ್ಕಾರವೇ ಆಗಿದೆ.

ಕೊನೆಯದಾಗಿ, ದಲಿತರು ಹೋರಾಡಿ ದೇಗುಲ ಪ್ರವೇಸಿದ ಮೇಲೆಯೂ ಅವರ ಜೀವನ ಮತ್ತಷ್ಟು ಚಿಂತಾಜನಕವಾಗುತ್ತದೆ ಎಂಬುವುದಕ್ಕೆ ಈ ಮುಂದಿನ ಪ್ರಕರಣವೇ ಸಾಕ್ಷಿ. ಹಾಸನದ ದಿಂಡಗೂರು ಗ್ರಾಮದಲ್ಲಿ ದೇಗುಲ ಪ್ರವೇಶಕ್ಕೆ ಹೋರಾಡಿದ ದಲಿತ ಯುವಕ ಸಂತೋಷ್ ಇಂದು ಗ್ರಾಮದವರ ಅಘೋಷಿತ ಬಹಿಷ್ಕಾರಕ್ಕೆ ನಲುಗಿಹೋಗಿದ್ದಾನೆ. ಆತನೊಬ್ಬನೇ ಅಲ್ಲ, ಅವನ ಜೊತೆಗೆ ಇಡೀ ಸಮುದಾಯವನ್ನೇ ಮೇಲ್ಜಾತಿಗಳು ಬಹಿಷ್ಕಾರ ಮಾಡಿದ್ದಾರೆ. ಅಲ್ಲಿನ ದಲಿತರು ಹೊಟ್ಟೆಪಾಡಿಗಾಗಿ ದೂರದೂರಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಸವಲತ್ತುಗಳು ಸಿಗದೇ ಸ್ವತಃ ಸಂತೋಷ್ ಕಂಗಾಲಾಗಿದ್ದಾನೆ. ಇನ್ನು ಮುಂದೆ ದೇಗುಲ ಪ್ರವೇಶಕ್ಕಾಗಿ ಒತ್ತಾಯಿಸುವುದಿಲ್ಲವೆಂಬ ಷರತ್ತಿನ ಮೇಲೆ ಅಲ್ಲಿನ ಒಕ್ಕಲಿಗರು ಕೆಲವು ದಲಿತ ಕುಟುಂಬಗಳಿಗೆ ಕೆಲಸ ನೀಡಲು ಒಪ್ಪಿಕೊಂಡಿವೆ.

ಹಾಗಾಗಿ ಇಂದು ದಲಿತರ ಮುಂದೆ, ದೇಗುಲ ಪ್ರವೇಶಕ್ಕಿಂತಲೂ ಹೆಚ್ಚು ಮುಖ್ಯವಾಗಿರುವ ಹಾಗೂ ತುರ್ತಾಗಿರುವ ಕಾರ್ಯಗಳಿವೆ. ಕರ್ನಾಟಕದ ಕೇವಲ ಶೇ.10ರಷ್ಟು ದಲಿತರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ದಲಿತರ ಸರಾಸರಿ ಭೂಮಿಯ ಪಾಲು ಕೇವಲ 0.2 ಹೆಕ್ಟೇರ್ ಮಾತ್ರ. ದಲಿತರೊಳಗೆ ಕೂಲಿಕಾರ್ಮಿಕರ ಪ್ರಮಾಣ ಬರೋಬ್ಬರಿ ಶೇ.84. ಶಾಲೆ ಬಿಡುವ ಮಕ್ಕಳ ಸಂಖ್ಯೆಯಲ್ಲಿಯೂ ಸಹ ದಲಿತರದ್ದೇ ಮೇಲುಗೈ. ಪರಿಸ್ಥಿತಿ ಹೀಗಿರುವಾಗ ದಲಿತರು ದೇಗುಲ ಪ್ರವೇಶಕ್ಕೆ ಹಾಕುವ ಶ್ರಮವನ್ನು ಬೇರೆಡೆ ಹಾಕಬೇಕಾಗಿದೆ. ಅದೆಷ್ಟೇ ಬಾಗಿಲು ಬಡಿದರೂ ದೇಗುಲದೊಳಗಿನ ದೇವರ ಕೀಲಿಕೈ ಮೇಲ್ಜಾತಿ ಹಿಂದೂಗಳ ಕೈಲಿದೆ. ಅವರ ಪ್ರಕಾರ ದಲಿತರು ಹಿಂದೂಗಳಲ್ಲ. ದಲಿತರು ಹಿಂದೂಗಳಲ್ಲ ಎಂದು ಪದೇಪದೇ ಮೇಲ್ಜಾತಿ ಹಿಂದೂಗಳು ಘಂಟಾಘೋಷವಾಗಿ ಹೇಳುತ್ತಿರುವಾಗ ತಮ್ಮದಲ್ಲದ ಮನೆಯ ಬಾಗಿಲು ಬಡಿಯುವುದು ದಲಿತರಿಗೂ ಒಳ್ಳೆಯದಲ್ಲ. ಆದಷ್ಟು ಬೇಗ ಬಾಬಾಸಾಹೇಬ್ ಅಂಬೇಡ್ಕರರ ದಾರಿದೀಪ ದಲಿತರ ಕಣ್ಣಿಗೆ ಗೋಚರಿಸಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dalitharu yavathu hindugalla,ee mathu sariyagide.Dalitaru kanade iruva devarannu bittu kanuva Ambedkar devarige pooje sallisali,tattekasu meljathiyavarige uddaravagalu sahayavagutte.

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...