Homeಅಂಕಣಗಳುಮಾತು ಮರೆತ ಭಾರತ-32; ಕಾಶ್ಮೀರಿ-ದಲಿತ್ ಫೈಲ್: ದಲಿತರ ಜೀವಕ್ಕಿಲ್ಲಿ ಬೆಲೆ ಇಲ್ಲ

ಮಾತು ಮರೆತ ಭಾರತ-32; ಕಾಶ್ಮೀರಿ-ದಲಿತ್ ಫೈಲ್: ದಲಿತರ ಜೀವಕ್ಕಿಲ್ಲಿ ಬೆಲೆ ಇಲ್ಲ

- Advertisement -
- Advertisement -

ಡಿಸೆಂಬರ್ 16, 2022ರ ಬೆಳ್ಳಂಬೆಳಗ್ಗೆ ಫಲಿಯಾನ ಗ್ರಾಮದ ರಜೌರಿ ಸೇನಾ ನೆಲೆಯ ಮುಂದೆಯೇ ಇಬ್ಬರು ದಲಿತರ ಮೃತ ದೇಹಗಳು ಪತ್ತೆಯಾದವು. ಈ ಘಟನೆಗೆ ಕಾರಣ ಉಗ್ರಗಾಮಿಗಳೆಂದು ಸೇನೆಯು ಹೇಳಿತು. ಆದರೆ ಅಲ್ಲಿನ ಗ್ರಾಮಸ್ಥರು ಮತ್ತು ದಲಿತ ಕುಟುಂಬಗಳು ಈ ಕೊಲೆಗೆ ಕಾರಣ ಸೇನೆಯೇ ಆಗಿದೆ ಎಂದು ಆರೋಪಿಸಿವೆ. ಉಗ್ರಗಾಮಿಗಳೆಂದು ಭಾವಿಸಿ ನಡೆಯುವ ವಿಚಾರಣಾ ರಹಿತ ಎನ್‌ಕೌಂಟರ್‌ಗಳ ಮಾದರಿಯಲ್ಲಿಯೇ ತಪ್ಪಾಗಿ ನಮ್ಮ ಮಕ್ಕಳನ್ನು ಸೇನೆ ಬಲಿ ಪಡೆದಿದೆ ಎಂಬುದೇ ಅವರ ಆರೋಪ. ಈ ಆರೋಪ ನೂರಕ್ಕೆ ನೂರು ಸುಳ್ಳಲ್ಲ ಎನ್ನುವುದು ಜಗಜ್ಜಾಹೀರಾಗಿದೆ. ಜಮ್ಮು ಕಾಶ್ಮೀರದಲ್ಲಿ ಮುಸ್ಲಿಮರಿಗೆ ಉಗ್ರಗಾಮಿಗಳೆಂಬ ಹಣೆಪಟ್ಟಿ ಕಟ್ಟಿ ಎನ್‌ಕೌಂಟರ್ ಮಾಡಿ ದೇಹವನ್ನೇ ನಾಪತ್ತೆಯಾಗಿಸುವ ತಂತ್ರ ಇಂದು ನಿನ್ನೆಯದಲ್ಲ. ಈ ಬಗ್ಗೆ ಹಲವು ಆಪಾದನೆಗಳಿಗೆ ಮತ್ತು ಕೆಲವು ಪ್ರಕರಣಗಳು ವಿಚಾರಣೆ ಕಂಡು ತಪ್ಪಿತಸ್ಥರಿಗೆ ಶಿಕ್ಷೆಯೂ ಆಗಿದೆ. ಭಾರತ ಸರ್ಕಾರ ಈ ದಲಿತ ಯುವಕರ ಹತ್ಯೆಯನ್ನು ತನಿಖೆ ಮಾಡಲು ತಂಡವನ್ನು ರಚಿಸಿದೆ. ತನಿಖೆ ನಡೆಯುತ್ತಿದೆ. ಸತ್ಯ ಆದಷ್ಟು ಬೇಗ ಬೆಳಕಿಗೆ ಬರಬಹುದೇ? ಕಾದು ನೋಡಬೇಕಾಗಿದೆ.

ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ವಾಸವಿರುವ ಹಿಂದೂ-ಮುಸ್ಲಿಮರು ಕಾಶ್ಮೀರಿಯತ್ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬರುತ್ತಿದ್ದಾರಾದರೂ ಆಳುವ ಇಚ್ಛೆ ಇರುವ ಸರ್ಕಾರಗಳಿಗೆ ಅವರ ಒಗ್ಗಟ್ಟು ಮುಳುವಾಗಿದೆ. ಹಾಗಾಗಿ ಹಿಂದೂ ವರ್ಸಸ್ ಮುಸ್ಲಿಂ ಮಾಡಲು ಶತಾಯಗತಾಯ ಎರಡೂ ಕಡೆಯ ಕುತಂತ್ರ ರಾಜಕಾರಣಿಗಳು ಶ್ರಮ ಪಡುತ್ತಿದ್ದಾರೆ. ಅದಿರಲಿ, ಇಲ್ಲಿ ಮುಖ್ಯವಾದ ಮತ್ತೊಂದು ಅಂಶವೆಂದರೆ ಸೇನೆಗೆ ಹಾಗೂ ಸೇನಾ ಮುಖ್ಯಸ್ಥರಿಗೆ ಹಿಂದೂ ಮೇಲ್ಜಾತಿ ಹಾಗೂ ದಲಿತರ ಜೀವಗಳು ಒಂದೇ ಎಂಬ ಭಾವನೆ ಇಲ್ಲದಿರುವುದು. ಭಾರತೀಯರಿಗೆ ಜಾತಿ ಪದ್ಧತಿ ಆಚರಣೆಯು ಸಹಜವಲ್ಲವೇ? ಅದು ಸೇನಾ ಮುಖ್ಯಸ್ಥರಾದರೇನು? ನ್ಯಾಯಾಧೀಶರಾದರೇನು? ಸರ್ಕಾರದ ಮಂತ್ರಿಯಾದರೇನು? ಎಲ್ಲರೂ ಇರುವೆಗಳೇ – ಜಾತಿ ಎಂಬ ಸಿಹಿಗೆ.

ಈಗಾಗಲೇ ಉಲ್ಲೇಖಿಸಿದಂತೆ ಡಿಸೆಂಬರ್ 16ನೇ ತಾರೀಕು ಜಮ್ಮುವಿನ ರಜೌರಿ ಬಳಿಯ ಫಲಿಯಾನ ಗ್ರಾಮದ ಸೇನಾ ಕ್ಯಾಂಪ್ ಮುಂಭಾಗ ಸುರೇಂದರ್ ಕುಮಾರ್ ಮತ್ತು ಕಮಲ್ ಕಿಶೋರ್ ಎಂಬ ಇಬ್ಬರು ದಲಿತ ಯುವಕರ ಮೃತದೇಹಗಳು ಬಿದ್ದಿದ್ದವು. ಆ ಎರಡು ದೇಹಗಳ ಮೇಲೆ ಗುಂಡಿನ ದಾಳಿಯಾಗಿತ್ತು. ಸೇನೆಯ ಡೆಪ್ಯುಟಿ ಕಮಿಷನರ್ ಆ ಇಬ್ಬರ ಕುಟುಂಬಕ್ಕೆ ತಲಾ 1 ಲಕ್ಷ ರೂಪಾಯಿ ಘೋಷಿಸಿದರು. ದಲಿತರ ಹೋರಾಟದಿಂದಾಗಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರತಿ ದಲಿತ ಕುಟುಂಬಕ್ಕೆ ಹೆಚ್ಚುವರಿಯಾಗಿ ಘೋಷಿಸಿದರು. ಒಟ್ಟು ಆ ಎರಡು ದಲಿತ ಜೀವಗಳ ಬದಲಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ನೀಡಲಾಯಿತು. ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವ ಭರವಸೆಯನ್ನೂ ನೀಡಿದರು. ಇದು ದೇಶಾದ್ಯಂತ ಮಾಧ್ಯಮಗಳಲ್ಲಿ ಒಂದು ಕ್ಷಣವೂ ಬಿತ್ತರಗೊಳ್ಳಲಿಲ್ಲ.

ಈ ಘಟನೆಯಾದ 15 ದಿನಗಳ ನಂತರ ಅಂದರೆ, ಜನವರಿ 1, 2023ರಂದು ಅದೇ ರಜೌರಿಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿದ್ದ ಧಂಗ್ರಿ ಎಂಬ ಹಳ್ಳಿಯೊಂದರಲ್ಲಿ 6 ಜನರ ಕೊಲೆಯಾಗಿತ್ತು. ಉಗ್ರಗಾಮಿ ಸಂಘಟನೆಯೊಂದು ಅವರನ್ನು ಅಮಾನವೀಯವಾಗಿ ಕೊಂದಿತ್ತು. ಹೊಸ ವರ್ಷದ ದಿನದಂದೇ ನಡೆದ ಈ ಘಟನೆಯಲ್ಲಿ ಪರಸ್ಪರ ಸಂಬಂಧಿಕರಾದ ವಿಹಾನ್ ಶರ್ಮ, ಸಮೀಕ್ಷ ಶರ್ಮ, ಸತೀಶ್ ಕುಮಾರ್, ದೀಪಕ್ ಕುಮಾರ್, ಪ್ರೀತಮ್ ಲಾಲ್ ಮತ್ತು ಶಿಶುಪಾಲ್ ಕೊಲೆಗೀಡಾಗಿದ್ದರು. ಮಾಧ್ಯಮಗಳು ಎಂದಿನಂತೆ ನಮ್ಮಲ್ಲೇ ಮೊದಲು ಎಂದು ಮುಗಿಬಿದ್ದು ಸುದ್ದಿ ಮಾಡಿದವು. ಖಂಡಿತಾ ಮಾಡಲೇಬೇಕು. ಎಲ್ಲರ ಜೀವಕ್ಕೂ ಬೆಲೆ ಇದೆ. ಈ ಘಟನೆ ಆದ ತಕ್ಷಣ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆ ಹಳ್ಳಿಗೆ ಬೇಟಿ ನೀಡಿದರು. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಜೊತೆಗೆ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿದರು.

ಇದನ್ನೂ ಓದಿ: ಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

ಈ ಮೇಲಿನ ಎರಡೂ ಘಟನೆಗಳನ್ನು ಮೇಲ್ನೋಟಕ್ಕೆ ಗಮನಿಸಿದರೆ ಸಾಕು, ಭಾರತದ ಸೇನೆಯಲ್ಲೂ ಜಾತಿಪದ್ಧತಿ ಅದೆಷ್ಟು ಆಳವಾಗಿ ಬೇರು ಬಿಟ್ಟಿದೆ ಎಂದು ಮನದಟ್ಟಾಗುತ್ತದೆ. ಲೆಫ್ಟಿನೆಂಟ್ ಗವರ್ನರ್ 6 ಜನರು ಮೃತರಾದ ಹಳ್ಳಿಗೆ ದೌಡಾಯಿಸಿದ ಮುಖ್ಯ ಕಾರಣ ಅವರೆಲ್ಲರೂ ಬ್ರಾಹ್ಮಣ ಕುಟುಂಬದವರಾಗಿದ್ದರು ಎಂಬುವುದಾಗಿತ್ತು. ಆದರೆ ಕಜೌರಿಯಲ್ಲಿ ಮೃತಪಟ್ಟವರು ದಲಿತರಾದ ಕಾರಣ ಗವರ್ನರ್ ಅವರಿಗೆ ಅಷ್ಟು ಪುರುಸೊತ್ತು ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಮನಸ್ಸಾಗಲಿಲ್ಲ. ಪರಿಹಾರ ಘೋಷಿಸುವಲ್ಲಿಯೂ ಸೇನಾ ಮುಖ್ಯಸ್ಥರು ತಾರತಮ್ಯವೆಸಗಿದ್ದಾರೆ. ಬ್ರಾಹ್ಮಣರಿಗೆ 10 ಲಕ್ಷ ರೂ, ದಲಿತರಿಗೆ 6 ಲಕ್ಷ ರೂ. ಅದೂ ಹೋರಾಟ ಮಾಡಿದರೆ ಮಾತ್ರ! ಸೇನಾ ನೆಲೆಯ ಮುಂದೆಯೇ ಹೆಣವಾದ ದಲಿತರು ಸುದ್ದಿಯಾಗುವುದೇ ಇಲ್ಲ. ಸೇನಾ ನೆಲೆಯಿಂದ 7 ಕಿಲೋಮೀಟರ್ ದೂರದಲ್ಲಿ ನಡೆದ ಶೂಟೌಟ್ ಸುದ್ದಿಯಾಗುತ್ತದೆ. ಎರಡೂ ಘಟನೆಯೂ ನಡೆಯಬಾರದಿತ್ತು. ಎರಡೂ ಘಟನೆಯನ್ನು ಮನುಷ್ಯರಾದವರು ಖಂಡಿಸಬೇಕು. ಸಮಾನ ಆದ್ಯತೆ ನೀಡಬೇಕು. ಆದರೆ ಇಲ್ಲಿ ಆಗಿರುವುದೇ ಬೇರೆ. ದಲಿತರಿಗೆ ಬದುಕಿದ್ದಾಗಲೂ ಸಮಾನ ಸ್ಥಾನವಿಲ್ಲ. ಸತ್ತ ಮೇಲೂ ಸಮಾನ ಸ್ಥಾನವಿಲ್ಲ ಎನ್ನುತ್ತಾರೆ ಕಜೌರಿಯ ಗ್ರಾಮಪಂಚಾಯತ್ ಅಧ್ಯಕ್ಷರು.

ಮನೋಜ್ ಸಿನ್ಹಾ

ಈ ಎರಡು ಘಟನೆಗೆ ಸಂಬಂಧಿಸಿದಂತೆ ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ನಿಲುವು ಸಹ ಬಹಿರಂಗಗೊಂಡಿದೆ. ಒಕ್ಕೂಟ ಸರ್ಕಾರದ ಗೃಹ ಮಂತ್ರಿಯಾದ ಅಮಿತ್ ಶಾ ಜನವರಿ 13, 2023ರಂದು 6 ಬ್ರಾಹ್ಮಣರನ್ನು ಕೊಂದಿದ್ದ ಧಂಗ್ರಿ ಗ್ರಾಮಕ್ಕೆ ಬೇಟಿ ನೀಡಿ ಆ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ವೇಳಾಪಟ್ಟಿ ನಿಗದಿಪಡಿಸಿಕೊಂಡಿದ್ದರು. ವಾಯುಗುಣ ಸರಿ ಇಲ್ಲದ ಕಾರಣ ಹವಾಮಾನ ಇಲಾಖೆಯು ಪ್ರಯಾಣವನ್ನು ರದ್ದುಗೊಳಿಸಿದ್ದರಿಂದಾಗಿ ನೊಂದುಕೊಂಡ ಅಮಿತ್ ಶಾ ಫೋನ್ ಮೂಲಕವೇ 6 ಸಂತ್ರಸ್ತ ಕುಟುಂಬದವರೊಟ್ಟಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬಿದರು. ನಿಮ್ಮೊಟ್ಟಿಗೆ ನಮ್ಮ ಸರ್ಕಾರವಿದೆ ಎಂಬ ಭರವಸೆ ನೀಡಿದರು. ನಿಜಕ್ಕೂ ಈ ಬೆಳವಣಿಗೆ ಸ್ವಾಗತಾರ್ಹ. ಪ್ರತಿಯೊಬ್ಬ ಭಾರತೀಯರ ನೋವಿಗೆ ದನಿಯಾಗಬೇಕಿರುವುದು ಪ್ರಗತಿಪರ ಸರ್ಕಾರದ ಹೊಣೆಯಾಗಿರುತ್ತದೆ. ಆದರೆ ಅಮಿತ್ ಶಾ ಅವರಿಗೆ ಕಜೌರಿಯಲ್ಲಿ ಕೊಲೆಯಾದ 2 ದಲಿತ ಯುವಕರ ಕುಟುಂಬ ನೆನಪಾಗಲಿಲ್ಲವಲ್ಲ ಏಕೆ? ಅವರ ಮನೆಗೆ ಭೇಟಿ ನೀಡುವುದಿರಲಿ, ಕನಿಷ್ಠ ಪಕ್ಷ ಫೋನ್ ಮಾಡಿ ವಿಚಾರಿಸಿಕೊಳ್ಳಲಿಲ್ಲವೇಕೆ? ದಲಿತ ಕುಟುಂಬಗಳಿಗೇನು ಸಾಂತ್ವನ ಮಾಡುವ ಅವಶ್ಯಕತೆ ಇಲ್ಲವೆಂಬುದು ಅಮಿತ್ ಶಾ ಹಾಗೂ ಮೋದಿಯವರ ಸರ್ಕಾರದ ನಿಲುವೇ? ಈ ಎಲ್ಲಾ ಪ್ರಶ್ನೆಗಳನ್ನು ಮೃತ ದಲಿತ ಯುವಕರ ಕುಟುಂಬಸ್ಥರು ಕೇಳುತ್ತಿದ್ದಾರೆ. ಆದರೆ ಈ ಎರಡು ಬಡಪಾಯಿ ದಲಿತ ಕುಟುಂಬದ ಪರವಾಗಿ ನಿಲ್ಲುವವರಾರು? ದಪ್ಪ ಚರ್ಮದ ಸರ್ಕಾರದ ಬಾಯಿ ಬಿಡಿಸುವವರಾರು?

ಈ ರೀತಿಯ ಬಹಿರಂಗ ತಾರತಮ್ಯಗಳು, ದಲಿತರನ್ನು ಈ ಸರ್ಕಾರ ಎರಡನೇ ದರ್ಜೆಯ ನಾಗರಿಕರನ್ನಾಗಿ ಪದೇಪದೇ ಕಾಣುತ್ತಿರುವುದನ್ನು ಸಾಬೀತುಪಡಿಸುತ್ತಿದೆ. ಈ ಸರ್ಕಾರದಲ್ಲಿ ಕಾಶ್ಮೀರಿ ಪಂಡಿತರು ಹಾಗೂ ಕಾಶ್ಮೀರಿ ದಲಿತರು ಒಂದೇ ಅಲ್ಲ. ಕಾಶ್ಮೀರಿ ಪಂಡಿತರಿಗಿರುವ ಬೆಲೆ ದಲಿತರಿಗಿಲ್ಲ. ವಿಪರ್ಯಾಸ ಹಾಗೂ ದುರಂತವೆಂದರೆ, ಮೋದಿ ನೇತೃತ್ವದ ಒಕ್ಕೂಟ ಸರ್ಕಾರಕ್ಕೆ ಕಾಶ್ಮೀರಿ ಪಂಡಿತರ ಮೇಲೆಯೂ ಪ್ರಾಮಾಣಿಕ ಪ್ರೀತಿ ಇಲ್ಲ. ಹಿಂದೂ-ಮುಸ್ಲಿಂ ಎಂದು ಒಡೆದು ಆಳುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಾತ್ರ ಪಂಡಿತರು ಬೇಕಾಗಿದ್ದಾರೆ. ಅವರಿಗೆ ವಸತಿ, ಮೂಲಸೌಕರ್ಯ, ಭದ್ರತೆ ಕೊಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಹೀಗೆ ಪಂಡಿತರ ಸ್ಥಿತಿಯೇ ಚಿಂತಾಜನಕವಾಗಿರುವಾಗ ದಲಿತರ ಸ್ಥಿತಿ ಕೇಳುವವರಾರು? ಕೇಳಬೇಕೆಂದರೆ ದಲಿತರು ಏನು ಮಾಡಬೇಕು? ಖಂಡಿತವಾಗಿಯೂ ಇದಕ್ಕೆ ಭಾರತ ಉತ್ತರಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...