Homeಅಂಕಣಗಳುಮಾತು ಮರೆತ ಭಾರತ-32; ಕಾಶ್ಮೀರಿ-ದಲಿತ್ ಫೈಲ್: ದಲಿತರ ಜೀವಕ್ಕಿಲ್ಲಿ ಬೆಲೆ ಇಲ್ಲ

ಮಾತು ಮರೆತ ಭಾರತ-32; ಕಾಶ್ಮೀರಿ-ದಲಿತ್ ಫೈಲ್: ದಲಿತರ ಜೀವಕ್ಕಿಲ್ಲಿ ಬೆಲೆ ಇಲ್ಲ

- Advertisement -
- Advertisement -

ಡಿಸೆಂಬರ್ 16, 2022ರ ಬೆಳ್ಳಂಬೆಳಗ್ಗೆ ಫಲಿಯಾನ ಗ್ರಾಮದ ರಜೌರಿ ಸೇನಾ ನೆಲೆಯ ಮುಂದೆಯೇ ಇಬ್ಬರು ದಲಿತರ ಮೃತ ದೇಹಗಳು ಪತ್ತೆಯಾದವು. ಈ ಘಟನೆಗೆ ಕಾರಣ ಉಗ್ರಗಾಮಿಗಳೆಂದು ಸೇನೆಯು ಹೇಳಿತು. ಆದರೆ ಅಲ್ಲಿನ ಗ್ರಾಮಸ್ಥರು ಮತ್ತು ದಲಿತ ಕುಟುಂಬಗಳು ಈ ಕೊಲೆಗೆ ಕಾರಣ ಸೇನೆಯೇ ಆಗಿದೆ ಎಂದು ಆರೋಪಿಸಿವೆ. ಉಗ್ರಗಾಮಿಗಳೆಂದು ಭಾವಿಸಿ ನಡೆಯುವ ವಿಚಾರಣಾ ರಹಿತ ಎನ್‌ಕೌಂಟರ್‌ಗಳ ಮಾದರಿಯಲ್ಲಿಯೇ ತಪ್ಪಾಗಿ ನಮ್ಮ ಮಕ್ಕಳನ್ನು ಸೇನೆ ಬಲಿ ಪಡೆದಿದೆ ಎಂಬುದೇ ಅವರ ಆರೋಪ. ಈ ಆರೋಪ ನೂರಕ್ಕೆ ನೂರು ಸುಳ್ಳಲ್ಲ ಎನ್ನುವುದು ಜಗಜ್ಜಾಹೀರಾಗಿದೆ. ಜಮ್ಮು ಕಾಶ್ಮೀರದಲ್ಲಿ ಮುಸ್ಲಿಮರಿಗೆ ಉಗ್ರಗಾಮಿಗಳೆಂಬ ಹಣೆಪಟ್ಟಿ ಕಟ್ಟಿ ಎನ್‌ಕೌಂಟರ್ ಮಾಡಿ ದೇಹವನ್ನೇ ನಾಪತ್ತೆಯಾಗಿಸುವ ತಂತ್ರ ಇಂದು ನಿನ್ನೆಯದಲ್ಲ. ಈ ಬಗ್ಗೆ ಹಲವು ಆಪಾದನೆಗಳಿಗೆ ಮತ್ತು ಕೆಲವು ಪ್ರಕರಣಗಳು ವಿಚಾರಣೆ ಕಂಡು ತಪ್ಪಿತಸ್ಥರಿಗೆ ಶಿಕ್ಷೆಯೂ ಆಗಿದೆ. ಭಾರತ ಸರ್ಕಾರ ಈ ದಲಿತ ಯುವಕರ ಹತ್ಯೆಯನ್ನು ತನಿಖೆ ಮಾಡಲು ತಂಡವನ್ನು ರಚಿಸಿದೆ. ತನಿಖೆ ನಡೆಯುತ್ತಿದೆ. ಸತ್ಯ ಆದಷ್ಟು ಬೇಗ ಬೆಳಕಿಗೆ ಬರಬಹುದೇ? ಕಾದು ನೋಡಬೇಕಾಗಿದೆ.

ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ವಾಸವಿರುವ ಹಿಂದೂ-ಮುಸ್ಲಿಮರು ಕಾಶ್ಮೀರಿಯತ್ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬರುತ್ತಿದ್ದಾರಾದರೂ ಆಳುವ ಇಚ್ಛೆ ಇರುವ ಸರ್ಕಾರಗಳಿಗೆ ಅವರ ಒಗ್ಗಟ್ಟು ಮುಳುವಾಗಿದೆ. ಹಾಗಾಗಿ ಹಿಂದೂ ವರ್ಸಸ್ ಮುಸ್ಲಿಂ ಮಾಡಲು ಶತಾಯಗತಾಯ ಎರಡೂ ಕಡೆಯ ಕುತಂತ್ರ ರಾಜಕಾರಣಿಗಳು ಶ್ರಮ ಪಡುತ್ತಿದ್ದಾರೆ. ಅದಿರಲಿ, ಇಲ್ಲಿ ಮುಖ್ಯವಾದ ಮತ್ತೊಂದು ಅಂಶವೆಂದರೆ ಸೇನೆಗೆ ಹಾಗೂ ಸೇನಾ ಮುಖ್ಯಸ್ಥರಿಗೆ ಹಿಂದೂ ಮೇಲ್ಜಾತಿ ಹಾಗೂ ದಲಿತರ ಜೀವಗಳು ಒಂದೇ ಎಂಬ ಭಾವನೆ ಇಲ್ಲದಿರುವುದು. ಭಾರತೀಯರಿಗೆ ಜಾತಿ ಪದ್ಧತಿ ಆಚರಣೆಯು ಸಹಜವಲ್ಲವೇ? ಅದು ಸೇನಾ ಮುಖ್ಯಸ್ಥರಾದರೇನು? ನ್ಯಾಯಾಧೀಶರಾದರೇನು? ಸರ್ಕಾರದ ಮಂತ್ರಿಯಾದರೇನು? ಎಲ್ಲರೂ ಇರುವೆಗಳೇ – ಜಾತಿ ಎಂಬ ಸಿಹಿಗೆ.

ಈಗಾಗಲೇ ಉಲ್ಲೇಖಿಸಿದಂತೆ ಡಿಸೆಂಬರ್ 16ನೇ ತಾರೀಕು ಜಮ್ಮುವಿನ ರಜೌರಿ ಬಳಿಯ ಫಲಿಯಾನ ಗ್ರಾಮದ ಸೇನಾ ಕ್ಯಾಂಪ್ ಮುಂಭಾಗ ಸುರೇಂದರ್ ಕುಮಾರ್ ಮತ್ತು ಕಮಲ್ ಕಿಶೋರ್ ಎಂಬ ಇಬ್ಬರು ದಲಿತ ಯುವಕರ ಮೃತದೇಹಗಳು ಬಿದ್ದಿದ್ದವು. ಆ ಎರಡು ದೇಹಗಳ ಮೇಲೆ ಗುಂಡಿನ ದಾಳಿಯಾಗಿತ್ತು. ಸೇನೆಯ ಡೆಪ್ಯುಟಿ ಕಮಿಷನರ್ ಆ ಇಬ್ಬರ ಕುಟುಂಬಕ್ಕೆ ತಲಾ 1 ಲಕ್ಷ ರೂಪಾಯಿ ಘೋಷಿಸಿದರು. ದಲಿತರ ಹೋರಾಟದಿಂದಾಗಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರತಿ ದಲಿತ ಕುಟುಂಬಕ್ಕೆ ಹೆಚ್ಚುವರಿಯಾಗಿ ಘೋಷಿಸಿದರು. ಒಟ್ಟು ಆ ಎರಡು ದಲಿತ ಜೀವಗಳ ಬದಲಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ನೀಡಲಾಯಿತು. ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವ ಭರವಸೆಯನ್ನೂ ನೀಡಿದರು. ಇದು ದೇಶಾದ್ಯಂತ ಮಾಧ್ಯಮಗಳಲ್ಲಿ ಒಂದು ಕ್ಷಣವೂ ಬಿತ್ತರಗೊಳ್ಳಲಿಲ್ಲ.

ಈ ಘಟನೆಯಾದ 15 ದಿನಗಳ ನಂತರ ಅಂದರೆ, ಜನವರಿ 1, 2023ರಂದು ಅದೇ ರಜೌರಿಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿದ್ದ ಧಂಗ್ರಿ ಎಂಬ ಹಳ್ಳಿಯೊಂದರಲ್ಲಿ 6 ಜನರ ಕೊಲೆಯಾಗಿತ್ತು. ಉಗ್ರಗಾಮಿ ಸಂಘಟನೆಯೊಂದು ಅವರನ್ನು ಅಮಾನವೀಯವಾಗಿ ಕೊಂದಿತ್ತು. ಹೊಸ ವರ್ಷದ ದಿನದಂದೇ ನಡೆದ ಈ ಘಟನೆಯಲ್ಲಿ ಪರಸ್ಪರ ಸಂಬಂಧಿಕರಾದ ವಿಹಾನ್ ಶರ್ಮ, ಸಮೀಕ್ಷ ಶರ್ಮ, ಸತೀಶ್ ಕುಮಾರ್, ದೀಪಕ್ ಕುಮಾರ್, ಪ್ರೀತಮ್ ಲಾಲ್ ಮತ್ತು ಶಿಶುಪಾಲ್ ಕೊಲೆಗೀಡಾಗಿದ್ದರು. ಮಾಧ್ಯಮಗಳು ಎಂದಿನಂತೆ ನಮ್ಮಲ್ಲೇ ಮೊದಲು ಎಂದು ಮುಗಿಬಿದ್ದು ಸುದ್ದಿ ಮಾಡಿದವು. ಖಂಡಿತಾ ಮಾಡಲೇಬೇಕು. ಎಲ್ಲರ ಜೀವಕ್ಕೂ ಬೆಲೆ ಇದೆ. ಈ ಘಟನೆ ಆದ ತಕ್ಷಣ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆ ಹಳ್ಳಿಗೆ ಬೇಟಿ ನೀಡಿದರು. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಜೊತೆಗೆ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿದರು.

ಇದನ್ನೂ ಓದಿ: ಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

ಈ ಮೇಲಿನ ಎರಡೂ ಘಟನೆಗಳನ್ನು ಮೇಲ್ನೋಟಕ್ಕೆ ಗಮನಿಸಿದರೆ ಸಾಕು, ಭಾರತದ ಸೇನೆಯಲ್ಲೂ ಜಾತಿಪದ್ಧತಿ ಅದೆಷ್ಟು ಆಳವಾಗಿ ಬೇರು ಬಿಟ್ಟಿದೆ ಎಂದು ಮನದಟ್ಟಾಗುತ್ತದೆ. ಲೆಫ್ಟಿನೆಂಟ್ ಗವರ್ನರ್ 6 ಜನರು ಮೃತರಾದ ಹಳ್ಳಿಗೆ ದೌಡಾಯಿಸಿದ ಮುಖ್ಯ ಕಾರಣ ಅವರೆಲ್ಲರೂ ಬ್ರಾಹ್ಮಣ ಕುಟುಂಬದವರಾಗಿದ್ದರು ಎಂಬುವುದಾಗಿತ್ತು. ಆದರೆ ಕಜೌರಿಯಲ್ಲಿ ಮೃತಪಟ್ಟವರು ದಲಿತರಾದ ಕಾರಣ ಗವರ್ನರ್ ಅವರಿಗೆ ಅಷ್ಟು ಪುರುಸೊತ್ತು ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಮನಸ್ಸಾಗಲಿಲ್ಲ. ಪರಿಹಾರ ಘೋಷಿಸುವಲ್ಲಿಯೂ ಸೇನಾ ಮುಖ್ಯಸ್ಥರು ತಾರತಮ್ಯವೆಸಗಿದ್ದಾರೆ. ಬ್ರಾಹ್ಮಣರಿಗೆ 10 ಲಕ್ಷ ರೂ, ದಲಿತರಿಗೆ 6 ಲಕ್ಷ ರೂ. ಅದೂ ಹೋರಾಟ ಮಾಡಿದರೆ ಮಾತ್ರ! ಸೇನಾ ನೆಲೆಯ ಮುಂದೆಯೇ ಹೆಣವಾದ ದಲಿತರು ಸುದ್ದಿಯಾಗುವುದೇ ಇಲ್ಲ. ಸೇನಾ ನೆಲೆಯಿಂದ 7 ಕಿಲೋಮೀಟರ್ ದೂರದಲ್ಲಿ ನಡೆದ ಶೂಟೌಟ್ ಸುದ್ದಿಯಾಗುತ್ತದೆ. ಎರಡೂ ಘಟನೆಯೂ ನಡೆಯಬಾರದಿತ್ತು. ಎರಡೂ ಘಟನೆಯನ್ನು ಮನುಷ್ಯರಾದವರು ಖಂಡಿಸಬೇಕು. ಸಮಾನ ಆದ್ಯತೆ ನೀಡಬೇಕು. ಆದರೆ ಇಲ್ಲಿ ಆಗಿರುವುದೇ ಬೇರೆ. ದಲಿತರಿಗೆ ಬದುಕಿದ್ದಾಗಲೂ ಸಮಾನ ಸ್ಥಾನವಿಲ್ಲ. ಸತ್ತ ಮೇಲೂ ಸಮಾನ ಸ್ಥಾನವಿಲ್ಲ ಎನ್ನುತ್ತಾರೆ ಕಜೌರಿಯ ಗ್ರಾಮಪಂಚಾಯತ್ ಅಧ್ಯಕ್ಷರು.

ಮನೋಜ್ ಸಿನ್ಹಾ

ಈ ಎರಡು ಘಟನೆಗೆ ಸಂಬಂಧಿಸಿದಂತೆ ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ನಿಲುವು ಸಹ ಬಹಿರಂಗಗೊಂಡಿದೆ. ಒಕ್ಕೂಟ ಸರ್ಕಾರದ ಗೃಹ ಮಂತ್ರಿಯಾದ ಅಮಿತ್ ಶಾ ಜನವರಿ 13, 2023ರಂದು 6 ಬ್ರಾಹ್ಮಣರನ್ನು ಕೊಂದಿದ್ದ ಧಂಗ್ರಿ ಗ್ರಾಮಕ್ಕೆ ಬೇಟಿ ನೀಡಿ ಆ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ವೇಳಾಪಟ್ಟಿ ನಿಗದಿಪಡಿಸಿಕೊಂಡಿದ್ದರು. ವಾಯುಗುಣ ಸರಿ ಇಲ್ಲದ ಕಾರಣ ಹವಾಮಾನ ಇಲಾಖೆಯು ಪ್ರಯಾಣವನ್ನು ರದ್ದುಗೊಳಿಸಿದ್ದರಿಂದಾಗಿ ನೊಂದುಕೊಂಡ ಅಮಿತ್ ಶಾ ಫೋನ್ ಮೂಲಕವೇ 6 ಸಂತ್ರಸ್ತ ಕುಟುಂಬದವರೊಟ್ಟಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬಿದರು. ನಿಮ್ಮೊಟ್ಟಿಗೆ ನಮ್ಮ ಸರ್ಕಾರವಿದೆ ಎಂಬ ಭರವಸೆ ನೀಡಿದರು. ನಿಜಕ್ಕೂ ಈ ಬೆಳವಣಿಗೆ ಸ್ವಾಗತಾರ್ಹ. ಪ್ರತಿಯೊಬ್ಬ ಭಾರತೀಯರ ನೋವಿಗೆ ದನಿಯಾಗಬೇಕಿರುವುದು ಪ್ರಗತಿಪರ ಸರ್ಕಾರದ ಹೊಣೆಯಾಗಿರುತ್ತದೆ. ಆದರೆ ಅಮಿತ್ ಶಾ ಅವರಿಗೆ ಕಜೌರಿಯಲ್ಲಿ ಕೊಲೆಯಾದ 2 ದಲಿತ ಯುವಕರ ಕುಟುಂಬ ನೆನಪಾಗಲಿಲ್ಲವಲ್ಲ ಏಕೆ? ಅವರ ಮನೆಗೆ ಭೇಟಿ ನೀಡುವುದಿರಲಿ, ಕನಿಷ್ಠ ಪಕ್ಷ ಫೋನ್ ಮಾಡಿ ವಿಚಾರಿಸಿಕೊಳ್ಳಲಿಲ್ಲವೇಕೆ? ದಲಿತ ಕುಟುಂಬಗಳಿಗೇನು ಸಾಂತ್ವನ ಮಾಡುವ ಅವಶ್ಯಕತೆ ಇಲ್ಲವೆಂಬುದು ಅಮಿತ್ ಶಾ ಹಾಗೂ ಮೋದಿಯವರ ಸರ್ಕಾರದ ನಿಲುವೇ? ಈ ಎಲ್ಲಾ ಪ್ರಶ್ನೆಗಳನ್ನು ಮೃತ ದಲಿತ ಯುವಕರ ಕುಟುಂಬಸ್ಥರು ಕೇಳುತ್ತಿದ್ದಾರೆ. ಆದರೆ ಈ ಎರಡು ಬಡಪಾಯಿ ದಲಿತ ಕುಟುಂಬದ ಪರವಾಗಿ ನಿಲ್ಲುವವರಾರು? ದಪ್ಪ ಚರ್ಮದ ಸರ್ಕಾರದ ಬಾಯಿ ಬಿಡಿಸುವವರಾರು?

ಈ ರೀತಿಯ ಬಹಿರಂಗ ತಾರತಮ್ಯಗಳು, ದಲಿತರನ್ನು ಈ ಸರ್ಕಾರ ಎರಡನೇ ದರ್ಜೆಯ ನಾಗರಿಕರನ್ನಾಗಿ ಪದೇಪದೇ ಕಾಣುತ್ತಿರುವುದನ್ನು ಸಾಬೀತುಪಡಿಸುತ್ತಿದೆ. ಈ ಸರ್ಕಾರದಲ್ಲಿ ಕಾಶ್ಮೀರಿ ಪಂಡಿತರು ಹಾಗೂ ಕಾಶ್ಮೀರಿ ದಲಿತರು ಒಂದೇ ಅಲ್ಲ. ಕಾಶ್ಮೀರಿ ಪಂಡಿತರಿಗಿರುವ ಬೆಲೆ ದಲಿತರಿಗಿಲ್ಲ. ವಿಪರ್ಯಾಸ ಹಾಗೂ ದುರಂತವೆಂದರೆ, ಮೋದಿ ನೇತೃತ್ವದ ಒಕ್ಕೂಟ ಸರ್ಕಾರಕ್ಕೆ ಕಾಶ್ಮೀರಿ ಪಂಡಿತರ ಮೇಲೆಯೂ ಪ್ರಾಮಾಣಿಕ ಪ್ರೀತಿ ಇಲ್ಲ. ಹಿಂದೂ-ಮುಸ್ಲಿಂ ಎಂದು ಒಡೆದು ಆಳುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಾತ್ರ ಪಂಡಿತರು ಬೇಕಾಗಿದ್ದಾರೆ. ಅವರಿಗೆ ವಸತಿ, ಮೂಲಸೌಕರ್ಯ, ಭದ್ರತೆ ಕೊಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಹೀಗೆ ಪಂಡಿತರ ಸ್ಥಿತಿಯೇ ಚಿಂತಾಜನಕವಾಗಿರುವಾಗ ದಲಿತರ ಸ್ಥಿತಿ ಕೇಳುವವರಾರು? ಕೇಳಬೇಕೆಂದರೆ ದಲಿತರು ಏನು ಮಾಡಬೇಕು? ಖಂಡಿತವಾಗಿಯೂ ಇದಕ್ಕೆ ಭಾರತ ಉತ್ತರಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...