Homeಅಂಕಣಗಳುಮಾತು ಮರೆತ ಭಾರತ-32; ಕಾಶ್ಮೀರಿ-ದಲಿತ್ ಫೈಲ್: ದಲಿತರ ಜೀವಕ್ಕಿಲ್ಲಿ ಬೆಲೆ ಇಲ್ಲ

ಮಾತು ಮರೆತ ಭಾರತ-32; ಕಾಶ್ಮೀರಿ-ದಲಿತ್ ಫೈಲ್: ದಲಿತರ ಜೀವಕ್ಕಿಲ್ಲಿ ಬೆಲೆ ಇಲ್ಲ

- Advertisement -
- Advertisement -

ಡಿಸೆಂಬರ್ 16, 2022ರ ಬೆಳ್ಳಂಬೆಳಗ್ಗೆ ಫಲಿಯಾನ ಗ್ರಾಮದ ರಜೌರಿ ಸೇನಾ ನೆಲೆಯ ಮುಂದೆಯೇ ಇಬ್ಬರು ದಲಿತರ ಮೃತ ದೇಹಗಳು ಪತ್ತೆಯಾದವು. ಈ ಘಟನೆಗೆ ಕಾರಣ ಉಗ್ರಗಾಮಿಗಳೆಂದು ಸೇನೆಯು ಹೇಳಿತು. ಆದರೆ ಅಲ್ಲಿನ ಗ್ರಾಮಸ್ಥರು ಮತ್ತು ದಲಿತ ಕುಟುಂಬಗಳು ಈ ಕೊಲೆಗೆ ಕಾರಣ ಸೇನೆಯೇ ಆಗಿದೆ ಎಂದು ಆರೋಪಿಸಿವೆ. ಉಗ್ರಗಾಮಿಗಳೆಂದು ಭಾವಿಸಿ ನಡೆಯುವ ವಿಚಾರಣಾ ರಹಿತ ಎನ್‌ಕೌಂಟರ್‌ಗಳ ಮಾದರಿಯಲ್ಲಿಯೇ ತಪ್ಪಾಗಿ ನಮ್ಮ ಮಕ್ಕಳನ್ನು ಸೇನೆ ಬಲಿ ಪಡೆದಿದೆ ಎಂಬುದೇ ಅವರ ಆರೋಪ. ಈ ಆರೋಪ ನೂರಕ್ಕೆ ನೂರು ಸುಳ್ಳಲ್ಲ ಎನ್ನುವುದು ಜಗಜ್ಜಾಹೀರಾಗಿದೆ. ಜಮ್ಮು ಕಾಶ್ಮೀರದಲ್ಲಿ ಮುಸ್ಲಿಮರಿಗೆ ಉಗ್ರಗಾಮಿಗಳೆಂಬ ಹಣೆಪಟ್ಟಿ ಕಟ್ಟಿ ಎನ್‌ಕೌಂಟರ್ ಮಾಡಿ ದೇಹವನ್ನೇ ನಾಪತ್ತೆಯಾಗಿಸುವ ತಂತ್ರ ಇಂದು ನಿನ್ನೆಯದಲ್ಲ. ಈ ಬಗ್ಗೆ ಹಲವು ಆಪಾದನೆಗಳಿಗೆ ಮತ್ತು ಕೆಲವು ಪ್ರಕರಣಗಳು ವಿಚಾರಣೆ ಕಂಡು ತಪ್ಪಿತಸ್ಥರಿಗೆ ಶಿಕ್ಷೆಯೂ ಆಗಿದೆ. ಭಾರತ ಸರ್ಕಾರ ಈ ದಲಿತ ಯುವಕರ ಹತ್ಯೆಯನ್ನು ತನಿಖೆ ಮಾಡಲು ತಂಡವನ್ನು ರಚಿಸಿದೆ. ತನಿಖೆ ನಡೆಯುತ್ತಿದೆ. ಸತ್ಯ ಆದಷ್ಟು ಬೇಗ ಬೆಳಕಿಗೆ ಬರಬಹುದೇ? ಕಾದು ನೋಡಬೇಕಾಗಿದೆ.

ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ವಾಸವಿರುವ ಹಿಂದೂ-ಮುಸ್ಲಿಮರು ಕಾಶ್ಮೀರಿಯತ್ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬರುತ್ತಿದ್ದಾರಾದರೂ ಆಳುವ ಇಚ್ಛೆ ಇರುವ ಸರ್ಕಾರಗಳಿಗೆ ಅವರ ಒಗ್ಗಟ್ಟು ಮುಳುವಾಗಿದೆ. ಹಾಗಾಗಿ ಹಿಂದೂ ವರ್ಸಸ್ ಮುಸ್ಲಿಂ ಮಾಡಲು ಶತಾಯಗತಾಯ ಎರಡೂ ಕಡೆಯ ಕುತಂತ್ರ ರಾಜಕಾರಣಿಗಳು ಶ್ರಮ ಪಡುತ್ತಿದ್ದಾರೆ. ಅದಿರಲಿ, ಇಲ್ಲಿ ಮುಖ್ಯವಾದ ಮತ್ತೊಂದು ಅಂಶವೆಂದರೆ ಸೇನೆಗೆ ಹಾಗೂ ಸೇನಾ ಮುಖ್ಯಸ್ಥರಿಗೆ ಹಿಂದೂ ಮೇಲ್ಜಾತಿ ಹಾಗೂ ದಲಿತರ ಜೀವಗಳು ಒಂದೇ ಎಂಬ ಭಾವನೆ ಇಲ್ಲದಿರುವುದು. ಭಾರತೀಯರಿಗೆ ಜಾತಿ ಪದ್ಧತಿ ಆಚರಣೆಯು ಸಹಜವಲ್ಲವೇ? ಅದು ಸೇನಾ ಮುಖ್ಯಸ್ಥರಾದರೇನು? ನ್ಯಾಯಾಧೀಶರಾದರೇನು? ಸರ್ಕಾರದ ಮಂತ್ರಿಯಾದರೇನು? ಎಲ್ಲರೂ ಇರುವೆಗಳೇ – ಜಾತಿ ಎಂಬ ಸಿಹಿಗೆ.

ಈಗಾಗಲೇ ಉಲ್ಲೇಖಿಸಿದಂತೆ ಡಿಸೆಂಬರ್ 16ನೇ ತಾರೀಕು ಜಮ್ಮುವಿನ ರಜೌರಿ ಬಳಿಯ ಫಲಿಯಾನ ಗ್ರಾಮದ ಸೇನಾ ಕ್ಯಾಂಪ್ ಮುಂಭಾಗ ಸುರೇಂದರ್ ಕುಮಾರ್ ಮತ್ತು ಕಮಲ್ ಕಿಶೋರ್ ಎಂಬ ಇಬ್ಬರು ದಲಿತ ಯುವಕರ ಮೃತದೇಹಗಳು ಬಿದ್ದಿದ್ದವು. ಆ ಎರಡು ದೇಹಗಳ ಮೇಲೆ ಗುಂಡಿನ ದಾಳಿಯಾಗಿತ್ತು. ಸೇನೆಯ ಡೆಪ್ಯುಟಿ ಕಮಿಷನರ್ ಆ ಇಬ್ಬರ ಕುಟುಂಬಕ್ಕೆ ತಲಾ 1 ಲಕ್ಷ ರೂಪಾಯಿ ಘೋಷಿಸಿದರು. ದಲಿತರ ಹೋರಾಟದಿಂದಾಗಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರತಿ ದಲಿತ ಕುಟುಂಬಕ್ಕೆ ಹೆಚ್ಚುವರಿಯಾಗಿ ಘೋಷಿಸಿದರು. ಒಟ್ಟು ಆ ಎರಡು ದಲಿತ ಜೀವಗಳ ಬದಲಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ನೀಡಲಾಯಿತು. ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವ ಭರವಸೆಯನ್ನೂ ನೀಡಿದರು. ಇದು ದೇಶಾದ್ಯಂತ ಮಾಧ್ಯಮಗಳಲ್ಲಿ ಒಂದು ಕ್ಷಣವೂ ಬಿತ್ತರಗೊಳ್ಳಲಿಲ್ಲ.

ಈ ಘಟನೆಯಾದ 15 ದಿನಗಳ ನಂತರ ಅಂದರೆ, ಜನವರಿ 1, 2023ರಂದು ಅದೇ ರಜೌರಿಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿದ್ದ ಧಂಗ್ರಿ ಎಂಬ ಹಳ್ಳಿಯೊಂದರಲ್ಲಿ 6 ಜನರ ಕೊಲೆಯಾಗಿತ್ತು. ಉಗ್ರಗಾಮಿ ಸಂಘಟನೆಯೊಂದು ಅವರನ್ನು ಅಮಾನವೀಯವಾಗಿ ಕೊಂದಿತ್ತು. ಹೊಸ ವರ್ಷದ ದಿನದಂದೇ ನಡೆದ ಈ ಘಟನೆಯಲ್ಲಿ ಪರಸ್ಪರ ಸಂಬಂಧಿಕರಾದ ವಿಹಾನ್ ಶರ್ಮ, ಸಮೀಕ್ಷ ಶರ್ಮ, ಸತೀಶ್ ಕುಮಾರ್, ದೀಪಕ್ ಕುಮಾರ್, ಪ್ರೀತಮ್ ಲಾಲ್ ಮತ್ತು ಶಿಶುಪಾಲ್ ಕೊಲೆಗೀಡಾಗಿದ್ದರು. ಮಾಧ್ಯಮಗಳು ಎಂದಿನಂತೆ ನಮ್ಮಲ್ಲೇ ಮೊದಲು ಎಂದು ಮುಗಿಬಿದ್ದು ಸುದ್ದಿ ಮಾಡಿದವು. ಖಂಡಿತಾ ಮಾಡಲೇಬೇಕು. ಎಲ್ಲರ ಜೀವಕ್ಕೂ ಬೆಲೆ ಇದೆ. ಈ ಘಟನೆ ಆದ ತಕ್ಷಣ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆ ಹಳ್ಳಿಗೆ ಬೇಟಿ ನೀಡಿದರು. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಜೊತೆಗೆ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿದರು.

ಇದನ್ನೂ ಓದಿ: ಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

ಈ ಮೇಲಿನ ಎರಡೂ ಘಟನೆಗಳನ್ನು ಮೇಲ್ನೋಟಕ್ಕೆ ಗಮನಿಸಿದರೆ ಸಾಕು, ಭಾರತದ ಸೇನೆಯಲ್ಲೂ ಜಾತಿಪದ್ಧತಿ ಅದೆಷ್ಟು ಆಳವಾಗಿ ಬೇರು ಬಿಟ್ಟಿದೆ ಎಂದು ಮನದಟ್ಟಾಗುತ್ತದೆ. ಲೆಫ್ಟಿನೆಂಟ್ ಗವರ್ನರ್ 6 ಜನರು ಮೃತರಾದ ಹಳ್ಳಿಗೆ ದೌಡಾಯಿಸಿದ ಮುಖ್ಯ ಕಾರಣ ಅವರೆಲ್ಲರೂ ಬ್ರಾಹ್ಮಣ ಕುಟುಂಬದವರಾಗಿದ್ದರು ಎಂಬುವುದಾಗಿತ್ತು. ಆದರೆ ಕಜೌರಿಯಲ್ಲಿ ಮೃತಪಟ್ಟವರು ದಲಿತರಾದ ಕಾರಣ ಗವರ್ನರ್ ಅವರಿಗೆ ಅಷ್ಟು ಪುರುಸೊತ್ತು ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಮನಸ್ಸಾಗಲಿಲ್ಲ. ಪರಿಹಾರ ಘೋಷಿಸುವಲ್ಲಿಯೂ ಸೇನಾ ಮುಖ್ಯಸ್ಥರು ತಾರತಮ್ಯವೆಸಗಿದ್ದಾರೆ. ಬ್ರಾಹ್ಮಣರಿಗೆ 10 ಲಕ್ಷ ರೂ, ದಲಿತರಿಗೆ 6 ಲಕ್ಷ ರೂ. ಅದೂ ಹೋರಾಟ ಮಾಡಿದರೆ ಮಾತ್ರ! ಸೇನಾ ನೆಲೆಯ ಮುಂದೆಯೇ ಹೆಣವಾದ ದಲಿತರು ಸುದ್ದಿಯಾಗುವುದೇ ಇಲ್ಲ. ಸೇನಾ ನೆಲೆಯಿಂದ 7 ಕಿಲೋಮೀಟರ್ ದೂರದಲ್ಲಿ ನಡೆದ ಶೂಟೌಟ್ ಸುದ್ದಿಯಾಗುತ್ತದೆ. ಎರಡೂ ಘಟನೆಯೂ ನಡೆಯಬಾರದಿತ್ತು. ಎರಡೂ ಘಟನೆಯನ್ನು ಮನುಷ್ಯರಾದವರು ಖಂಡಿಸಬೇಕು. ಸಮಾನ ಆದ್ಯತೆ ನೀಡಬೇಕು. ಆದರೆ ಇಲ್ಲಿ ಆಗಿರುವುದೇ ಬೇರೆ. ದಲಿತರಿಗೆ ಬದುಕಿದ್ದಾಗಲೂ ಸಮಾನ ಸ್ಥಾನವಿಲ್ಲ. ಸತ್ತ ಮೇಲೂ ಸಮಾನ ಸ್ಥಾನವಿಲ್ಲ ಎನ್ನುತ್ತಾರೆ ಕಜೌರಿಯ ಗ್ರಾಮಪಂಚಾಯತ್ ಅಧ್ಯಕ್ಷರು.

ಮನೋಜ್ ಸಿನ್ಹಾ

ಈ ಎರಡು ಘಟನೆಗೆ ಸಂಬಂಧಿಸಿದಂತೆ ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ನಿಲುವು ಸಹ ಬಹಿರಂಗಗೊಂಡಿದೆ. ಒಕ್ಕೂಟ ಸರ್ಕಾರದ ಗೃಹ ಮಂತ್ರಿಯಾದ ಅಮಿತ್ ಶಾ ಜನವರಿ 13, 2023ರಂದು 6 ಬ್ರಾಹ್ಮಣರನ್ನು ಕೊಂದಿದ್ದ ಧಂಗ್ರಿ ಗ್ರಾಮಕ್ಕೆ ಬೇಟಿ ನೀಡಿ ಆ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ವೇಳಾಪಟ್ಟಿ ನಿಗದಿಪಡಿಸಿಕೊಂಡಿದ್ದರು. ವಾಯುಗುಣ ಸರಿ ಇಲ್ಲದ ಕಾರಣ ಹವಾಮಾನ ಇಲಾಖೆಯು ಪ್ರಯಾಣವನ್ನು ರದ್ದುಗೊಳಿಸಿದ್ದರಿಂದಾಗಿ ನೊಂದುಕೊಂಡ ಅಮಿತ್ ಶಾ ಫೋನ್ ಮೂಲಕವೇ 6 ಸಂತ್ರಸ್ತ ಕುಟುಂಬದವರೊಟ್ಟಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬಿದರು. ನಿಮ್ಮೊಟ್ಟಿಗೆ ನಮ್ಮ ಸರ್ಕಾರವಿದೆ ಎಂಬ ಭರವಸೆ ನೀಡಿದರು. ನಿಜಕ್ಕೂ ಈ ಬೆಳವಣಿಗೆ ಸ್ವಾಗತಾರ್ಹ. ಪ್ರತಿಯೊಬ್ಬ ಭಾರತೀಯರ ನೋವಿಗೆ ದನಿಯಾಗಬೇಕಿರುವುದು ಪ್ರಗತಿಪರ ಸರ್ಕಾರದ ಹೊಣೆಯಾಗಿರುತ್ತದೆ. ಆದರೆ ಅಮಿತ್ ಶಾ ಅವರಿಗೆ ಕಜೌರಿಯಲ್ಲಿ ಕೊಲೆಯಾದ 2 ದಲಿತ ಯುವಕರ ಕುಟುಂಬ ನೆನಪಾಗಲಿಲ್ಲವಲ್ಲ ಏಕೆ? ಅವರ ಮನೆಗೆ ಭೇಟಿ ನೀಡುವುದಿರಲಿ, ಕನಿಷ್ಠ ಪಕ್ಷ ಫೋನ್ ಮಾಡಿ ವಿಚಾರಿಸಿಕೊಳ್ಳಲಿಲ್ಲವೇಕೆ? ದಲಿತ ಕುಟುಂಬಗಳಿಗೇನು ಸಾಂತ್ವನ ಮಾಡುವ ಅವಶ್ಯಕತೆ ಇಲ್ಲವೆಂಬುದು ಅಮಿತ್ ಶಾ ಹಾಗೂ ಮೋದಿಯವರ ಸರ್ಕಾರದ ನಿಲುವೇ? ಈ ಎಲ್ಲಾ ಪ್ರಶ್ನೆಗಳನ್ನು ಮೃತ ದಲಿತ ಯುವಕರ ಕುಟುಂಬಸ್ಥರು ಕೇಳುತ್ತಿದ್ದಾರೆ. ಆದರೆ ಈ ಎರಡು ಬಡಪಾಯಿ ದಲಿತ ಕುಟುಂಬದ ಪರವಾಗಿ ನಿಲ್ಲುವವರಾರು? ದಪ್ಪ ಚರ್ಮದ ಸರ್ಕಾರದ ಬಾಯಿ ಬಿಡಿಸುವವರಾರು?

ಈ ರೀತಿಯ ಬಹಿರಂಗ ತಾರತಮ್ಯಗಳು, ದಲಿತರನ್ನು ಈ ಸರ್ಕಾರ ಎರಡನೇ ದರ್ಜೆಯ ನಾಗರಿಕರನ್ನಾಗಿ ಪದೇಪದೇ ಕಾಣುತ್ತಿರುವುದನ್ನು ಸಾಬೀತುಪಡಿಸುತ್ತಿದೆ. ಈ ಸರ್ಕಾರದಲ್ಲಿ ಕಾಶ್ಮೀರಿ ಪಂಡಿತರು ಹಾಗೂ ಕಾಶ್ಮೀರಿ ದಲಿತರು ಒಂದೇ ಅಲ್ಲ. ಕಾಶ್ಮೀರಿ ಪಂಡಿತರಿಗಿರುವ ಬೆಲೆ ದಲಿತರಿಗಿಲ್ಲ. ವಿಪರ್ಯಾಸ ಹಾಗೂ ದುರಂತವೆಂದರೆ, ಮೋದಿ ನೇತೃತ್ವದ ಒಕ್ಕೂಟ ಸರ್ಕಾರಕ್ಕೆ ಕಾಶ್ಮೀರಿ ಪಂಡಿತರ ಮೇಲೆಯೂ ಪ್ರಾಮಾಣಿಕ ಪ್ರೀತಿ ಇಲ್ಲ. ಹಿಂದೂ-ಮುಸ್ಲಿಂ ಎಂದು ಒಡೆದು ಆಳುತ್ತಾ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಾತ್ರ ಪಂಡಿತರು ಬೇಕಾಗಿದ್ದಾರೆ. ಅವರಿಗೆ ವಸತಿ, ಮೂಲಸೌಕರ್ಯ, ಭದ್ರತೆ ಕೊಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಹೀಗೆ ಪಂಡಿತರ ಸ್ಥಿತಿಯೇ ಚಿಂತಾಜನಕವಾಗಿರುವಾಗ ದಲಿತರ ಸ್ಥಿತಿ ಕೇಳುವವರಾರು? ಕೇಳಬೇಕೆಂದರೆ ದಲಿತರು ಏನು ಮಾಡಬೇಕು? ಖಂಡಿತವಾಗಿಯೂ ಇದಕ್ಕೆ ಭಾರತ ಉತ್ತರಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...