Homeಅಂಕಣಗಳುಮಾತು ಮರೆತ ಭಾರತ-34; ಲಾಕ್‌ಡೌನ್ ಫೈಲ್: ಹಾಸನದಲ್ಲಿ ಮರ್‍ಯಾದೆಗೇಡು ಹತ್ಯೆ

ಮಾತು ಮರೆತ ಭಾರತ-34; ಲಾಕ್‌ಡೌನ್ ಫೈಲ್: ಹಾಸನದಲ್ಲಿ ಮರ್‍ಯಾದೆಗೇಡು ಹತ್ಯೆ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್ ಲಾಕ್‌ಡೌನ್’ ಸಮಯದಲ್ಲಿ ನಡೆದ ದಲಿತರ ಮೇಲಿನ 60 ದೌರ್ಜನ್ಯಗಳನ್ನು ಓದುಗರಿಗೆ ಕಟ್ಟಿಕೊಟ್ಟಿದೆ. ಒಂದೊಂದೂ ಭೀಕರ ಮತ್ತು ಹಿಂದೂ ಮೇಲ್ಜಾತಿ ಜನರು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತವೆ. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿ ಜನರ ಮನ ಪರಿವರ್ತಿಸುವುದಲ್ಲ; ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ಅದು ಸೊಪ್ಪಿನಹಳ್ಳಿ ಎಂಬ ಗ್ರಾಮ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿದೆ. ಹಳೆ ಮೈಸೂರು ಜಿಲ್ಲೆಯಲ್ಲಿರುವ ಒಕ್ಕಲಿಗರ ಪ್ರಾಬಲ್ಯ ಇಲ್ಲಿಯೂ ಇದೆ. ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಮುಂದುವರೆದಿರುವ ಒಕ್ಕಲಿಗ ಸಮಾಜ, ಸಾಮಾಜಿಕವಾಗಿಯೂ ಇಂದು ಮೇಲ್ಮುಖ ಚಲನೆಯನ್ನು ಹೊಂದಿದೆ. ಇದಕ್ಕೆ ತದ್ವಿರುದ್ಧವಾಗಿ ದಲಿತ ಸಮಾಜ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಒಂದಷ್ಟು ಸ್ಥಾನಮಾನ ಗಿಟ್ಟಿಸಿಕೊಂಡಿದ್ದರೂ ಸಾಮಾಜಿಕವಾಗಿ ಬಹಳ ಹಿಂದೆಯೇ ಉಳಿಯುವಂದತೆ ನೋಡಿಕೊಳ್ಳಲಾಗಿದೆ. ಈ ಚಿತ್ರಣವನ್ನೇ ಹೊದ್ದುಕೊಂಡಿರುವ ಸೊಪ್ಪಿನಹಳ್ಳಿಯಲ್ಲಿ ಶಿವಮ್ಮ ವಾಸಿಸುತ್ತಿದ್ದಳು. ಒಬ್ಬಂಟಿಯಾಗಿ ತನ್ನ ಎರಡು ಗಂಡು ಮಕ್ಕಳನ್ನು ಸಾಕಿ ಸಲುಹಿ ತಕ್ಕಮಟ್ಟಿಗೆ ವಿದ್ಯಾಭ್ಯಾಸವನ್ನೂ ಮಾಡಿಸಿದಳು. ಹಿರಿಯ ಮಗ ಮಧು ಪದವಿ ಓದುತ್ತಿದ್ದ. ಕಿರಿಯವನಾದ ಮನು ಕಾಲೇಜು ಶಿಕ್ಷಣಕ್ಕೆ ಕಾಲಿಟ್ಟಿದ್ದ.

ಶಿವಮ್ಮ ಹೋಟೆಲ್ ಒಂದರಲ್ಲಿ ಪಾತ್ರೆ ತೊಳೆಯುತ್ತಾ ತನ್ನ ಮಕ್ಕಳನ್ನು ಸಾಕಿದ್ದಳು. ತನ್ನ ಊರಿನಲ್ಲಿ ತಮಗಿರುವ ಸ್ಥಾನ ಯಾವುದೆಂಬುದನ್ನು ಬಹಳ ಚೆನ್ನಾಗಿ ಅರಿತಿದ್ದ ಆಕೆ ತಾನಾಯಿತು ತನ್ನ ಕೆಲಸವಾಯಿತು ಎಂದು ಜೀವಿಸುತ್ತಾ ಮಕ್ಕಳ ಭವಿಷ್ಯದ ಬಗ್ಗೆ ಕನಸು ಕಟ್ಟಿಕೊಂಡಿದ್ದಳು.

ಇದನ್ನೂ ಓದಿ: ಮಾತು ಮರೆತ ಭಾರತ-32; ಕಾಶ್ಮೀರಿ-ದಲಿತ್ ಫೈಲ್: ದಲಿತರ ಜೀವಕ್ಕಿಲ್ಲಿ ಬೆಲೆ ಇಲ್ಲ

ಆಗ ತಾನೇ ಹದಿಹರೆಯವನ್ನು ದಾಟಿದ್ದ 20 ವರ್ಷದ ಮಧುವಿಗೆ ವಯೋಸಹಜ ಪ್ರೇಮ ಮೂಡಿತು. ಅದೇ ಊರಿನ ಒಕ್ಕಲಿಗ ಕುಟುಂಬದ ರೇಖಾ ಅವನ ಮನದರಸಿ. ಆಕೆಯು ಸಹ ಮಧುವಿಗೆ ನಿರಾಸೆಯನ್ನುಂಟು ಮಾಡಲಿಲ್ಲ. ಇಬ್ಬರೂ ಪ್ರಕೃತಿ ಸಹಜ ಪ್ರೇಮದಲ್ಲಿ ಮುಳುಗಿದರು. ಈ ಪ್ರೇಮಕ್ಕೆ ರೇಖಾಳ ವಯಸ್ಸು ಅಡ್ಡಗಾಲಾಕಿ ನಿಂತಿತ್ತು. ರೇಖಾಳಿಗೆ ಇನ್ನೂ 17 ವರ್ಷವೆಂದು ಈ ’ಪ್ರೇಮ’ಕ್ಕೆ ಹೇಳುವವರಾರು? ಹಾಗಿದ್ದರೂ ಎಲ್ಲಾ ಪ್ರೇಮಿಗಳೂ ಮಾಡುವಂತೆ ’ಮುಂದೇನಾಗತ್ತೋ ನೋಡಿಯೇ ಬಿಡೋಣ’ ಎಂದುಕೊಂಡು ಮುಂದುವರೆದಿದ್ದಾರೆ.

ಇವರಿಬ್ಬರ ಪ್ರೇಮದ ವಿಚಾರ ರೇಖಾಳ ಮನೆಯವರಿಗೆ ತಿಳಿದಂತಿದೆ. ಪ್ರೇಮಿಗಳಿಬ್ಬರಿಗೂ ಪರಸ್ಪರ ಪ್ರತ್ಯೇಕಗೊಳ್ಳುವ ಭೀತಿ ಶುರುವಾಗಿದೆ. ಮುಖ ನೋಡದೇ ಒಂದು ದಿನವೂ ಇರಲಾಗದವರಿಗೆ ಶಾಶ್ವತವಾಗಿ ಬೇರೆಯಾಗುವುದು ಭಯ ಮೂಡಿಸಿರಲೇಬೇಕಲ್ಲವೆ? ಇಬ್ಬರೂ ಮನೆ ಬಿಟ್ಟು ಹೊರನಡೆದಿದ್ದಾರೆ. ಭಾರತದ ಕಾನೂನಿನ ಪ್ರಕಾರ ಅಪ್ರಾಪ್ತೆಯನ್ನು ಜೊತೆ ಕರೆದೊಯ್ಯುವುದು ಗಂಭೀರ ಅಪರಾಧವಾಗಿದೆ. ಹಾಗಾಗಿ ಪೋಕ್ಸೋ ಕಾಯ್ದೆಯಲ್ಲಿ ರೇಖಾಳ ಮನೆಯವರು ಮಧುವಿನ ಮೇಲೆ ದೂರು ದಾಖಲಿಸಿದ್ದಾರೆ. ಕೆಲವೇ ದಿನಗಳಲ್ಲಿ ಇಬ್ಬರನ್ನೂ ಪತ್ತೆ ಹಚ್ಚಿದ ಪೊಲೀಸರು ಮಧುವನ್ನು ಬಂಧಿಸಿದರು. ಮಧು ಕೆಲವು ತಿಂಗಳುಗಳ ಕಾಲ ಜೈಲಿನಲ್ಲಿಯೇ ಉಳಿಯಬೇಕಾಯಿತು.

ತಾಯಿ ಮತ್ತು ಇತರ ಕುಟುಂಬ ಸದಸ್ಯರು (PC: The Hindu)

ಇಂತಹ ಪರಿಸ್ಥಿತಿಯಲ್ಲಿ ಮಧುವಿನ ಪರವಾಗಿ ಗಟ್ಟಿಯಾಗಿ ನಿಂತುಕೊಂಡ ಅವನ ತಾಯಿ ಮತ್ತು ತಮ್ಮ, ಇದ್ದಬದ್ದ ಹಣವನ್ನೆಲ್ಲ ನ್ಯಾಯಾಲಯದ ವಿಚಾರಣೆಗೆ ಸುರಿದು ಕೊನೆಗೂ ಮಗನನ್ನು ಜಾಮೀನಿನ ಮೇಲೆ ಹೊರತಂದರು. ಅಲ್ಲಿಗೆ ಶಿವಮ್ಮನ ಮನಸ್ಸು ಒಂದಷ್ಟು ನಿರಾಳವಾಯಿತು. ಊರಿನಲ್ಲಿಯೇ ಇದ್ದರೆ ಮಧುವಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರಿತ ಶಿವಮ್ಮ ಮತ್ತು ಮನು, ಮಧುವನ್ನು ಬೆಂಗಳೂರಿಗೆ ಕಳಿಸಿದರು. ಮನಸ್ಸಿಲ್ಲದಿದ್ದರೂ ಅಮ್ಮನ ಮಾತಿಗೆ ಇಲ್ಲವೆನ್ನದೆ ಬೆಂಗಳೂರಿಗೆ ತೆರಳಿದ ಮಧು, ತಿಂಗಳುಗಳ ಕಾಲ ಸುತ್ತಾಡಿ ಒಂದು ಕೆಲಸ ಗಿಟ್ಟಿಸಿಕೊಂಡನು. ಬರುವ ಸಂಬಳದಲ್ಲಿ ಒಂದಷ್ಟು ಮನೆಗೂ ಕಳಿಸುತ್ತಿದ್ದನು.

ಎಲ್ಲವೂ ಸರಿ ಹೋಯಿತು ಎಂದುಕೊಂಡು ಶಿವಮ್ಮ ನಿಟ್ಟುಸಿರುಬಿಡುವಷ್ಟರಲ್ಲಿ ಕೋವಿಡ್ 19 ಭಾರತಕ್ಕೆ ಲಗ್ಗೆ ಇಟ್ಟಿತು. ಮಾರ್ಚ್ 2019ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದಾದ್ಯಂತ ಲಾಕ್‌ಡೌನ್ ಹೇರಿದರು. ದೇಶದಾದ್ಯಂತ ಕೆಲಸ ಮಾಡುತ್ತಿದ್ದ ಕಾರ್ಮಿಕ ವರ್ಗದಂತೆ ಮಧುವೂ ಕೆಲಸವಿಲ್ಲದೆ ಬೆಂಗಳೂರು ಬಿಟ್ಟು ತವರೂರು ಸೊಪ್ಪಿನಹಳ್ಳಿಗೆ ಬಂದನು. ಅದೇ ಗ್ರಾಮದ ವರ್ಕ್‌ಶಾಪ್ ಒಂದರಲ್ಲಿ ಕೆಲಸಕ್ಕೆ ಸೇರಿಕೊಂಡನು. ಅಂತೂ ಇಂತು ನನ್ನಿಬ್ಬರು ಮಕ್ಕಳೂ ಈಗ ನನ್ನೊಂದಿಗೆ ಇದ್ದಾರೆ ಎಂಬ ಖುಷಿಯಲ್ಲಿ ಶಿವಮ್ಮ ತೇಲುತ್ತಿದ್ದಳು. ಇತ್ತ ಸೊಪ್ಪಿನಹಳ್ಳಿಗೆ ಬಂದ ಮಧುವಿನ ಹೃದಯದಲ್ಲಿ ಮಲಗಿದ್ದ ರೇಖಾಳ ನೆನಪಿಗೆ ಜೀವ ಬಂದಿತು. ರೇಖಾಳನ್ನು ಬಂಧಿಸಿಟ್ಟುಕೊಳ್ಳುವಲ್ಲಿ ಸಫಲವಾಗಿದ್ದೇವೆಂದು ನಂಬಿಕೊಂಡಿದ್ದ ಆಕೆಯ ಸಂಬಂಧಿಕರಿಗೆ ಒಳಗೊಳಗೇ ಪ್ರತಿಷ್ಠೆಯ ಅಮಲು ನೆತ್ತಿಗೇರಿ ಸುಖ ನೀಡುತ್ತಿತ್ತು.

ಇದನ್ನೂ ಓದಿ: ಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

ಶಿವಮ್ಮ ಮತ್ತು ಮನು ಇಬ್ಬರೂ ಮಧುವಿಗೆ ಆಗಾಗ ಎಚ್ಚರಿಕೆ ನೀಡುತ್ತಲೇ ಇದ್ದರು. ಯಾವುದೇ ಕಾರಣಕ್ಕೂ ರೇಖಾಳ ಸಹವಾಸಕ್ಕೆ ಹೋಗಬೇಡ, ಆಕೆಯೊಂದಿಗೆ ಮತ್ತೆ ಸಂಪರ್ಕ ಬೆಸೆಯಬೇಡ ಎಂದು ತಾಕೀತು ಮಾಡುತ್ತಿದ್ದರು. ಆದರೇನು ಮಾಡುವುದು? ಅದು ಪ್ರೇಮವಲ್ಲವೇ? ಎಂಟು ದಿಕ್ಕುಗಳಲ್ಲೂ ಯೋಚಿಸಿ ಮುಂದುವರೆಯಲು ಅದೇನು ಯುದ್ಧತಂತ್ರವೇ?

ಅಂದು ಜುಲೈ 15. ಮಧು ತನ್ನ ಸ್ನೇಹಿತರೊಡನೆ ಊರಿನ ದೇಗುಲಕ್ಕೆ ಹೋಗಿ ವಾಪಸ್ಸು ಬರುತ್ತಿದ್ದನು. ಅಚಾನಕ್ಕಾಗಿ ಅವರೆಲ್ಲರ ಎದುರಿಗೆ ರೇಖಾಳ ಚಿಕ್ಕಪ್ಪ ರೂಪೇಶ್ ಬಂದು ನಿಂತನು. ಅವನ ಕೈಯಲ್ಲಿ ಡಬಲ್ ಬ್ಯಾರೆಲ್ ಕಂಟ್ರಿ ಮೇಡ್ ಬಂದೂಕು ಇತ್ತು. ಆಗ ಸಮಯ ಮಧ್ಯಾಹ್ನ 3 ಗಂಟೆ. ಕ್ಷಣಹೊತ್ತೂ ಕಾಯದೇ, ರೇಖಾಳ ನೆನಪನ್ನೇ ತುಂಬಿಕೊಂಡಿದ್ದ ಮಧುವಿನ ಎದೆಗೆ ಗುರಿಯಿಟ್ಟು ಗುಂಡು ಹಾರಿಸಿದನು. ಮಿಸುಕಾಡುತ್ತಲೇ ಮಧುವಿನ ದೇಹ ತಣ್ಣಗಾಯಿತು. ಅವನ ಕಣ್ಣ ತುಂಬ ತುಂಬಿಕೊಂಡಿದ್ದ ರೇಖಾಳನ್ನು ನೋಡಿಯೇ ರೂಪೇಶ್ ಕೆಲಸ ಮುಗಿಸಿ ಹೋಗಿರಬೇಕು. ರೂಪೇಶ್ ಎಂಬ ಜಾತಿ ಮೃಗಗಳು ಇಂದಿಗೂ ಜೀವಂತ ಇವೆ. ಮರ್‍ಯಾದೆ ಹೆಸರಿನಲ್ಲಿ ಕೊಲೆಯನ್ನೂ ಮಾಡಿಸಿಬಿಡುವ ಜಾತಿವ್ಯವಸ್ಥೆ ಜೀವಂತ ಇರುವವರೆಗೂ ಇಂತಹ ನಾಡುಮೃಗಗಳ ಸಂಖ್ಯೆ ಕಡಿಮೆ ಆಗುವುದಿಲ್ಲ. ಇಂತಹ ನಾಡುಮೃಗಗಳ ಹೆಡೆಮುರಿ ಕಟ್ಟಬೇಕಿದ್ದ ಕಾನೂನಿನ ಆಯಕಟ್ಟಿನ ಸ್ಥಾನದಲ್ಲಿಯೂ ಮೃಗಗಳೇ ತುಂಬಿಕೊಂಡಿರುವಾಗ ಕಟಕಟೆಯಲ್ಲಿಯಾದರೂ ಮಧು-ರೇಖಾಳ ಪ್ರೇಮಕ್ಕೆ ಗೆಲುವು ಸಿಗುವುದೇ ಕಾದು ನೋಡಬೇಕಿದೆ.

2019ರ ಎನ್‌ಸಿಆರ್‌ಬಿ ವರದಿ ಪ್ರಕಾರ ದಲಿತರ ಮೇಲೆ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ದೌರ್ಜನ್ಯಗಳು ನಡೆದಿವೆ. ಆದರೆ ಕರ್ನಾಟಕದಲ್ಲಿ ದಲಿತರ ಮೇಲೆ ನಡೆಯುವ ದೌರ್ಜನ್ಯ ದರ ಉತ್ತರಪ್ರದೇಶಕ್ಕಿಂತಲೂ ಹೆಚ್ಚಿದೆ. ಉತ್ತರಪ್ರದೇಶದಲ್ಲಿ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಶೇ.5.6ರಷ್ಟು ದೌರ್ಜನ್ಯಗಳು ದಲಿತರ ಮೇಲೆ ಘಟಿಸಿದರೆ, ಕರ್ನಾಟಕದಲ್ಲಿ ಅದರ ಪ್ರಮಾಣ ಶೇ.12.8. ಇಂತಹ ಪ್ರಕರಣಗಳಲ್ಲಿ ಶಿಕ್ಷೆ ನೀಡುವ ಪ್ರಮಾಣವೂ ಸಹ ಕರ್ನಾಟಕದಲ್ಲಿ ಅತ್ಯಂತ ಕಡಿಮೆ. ಅದು ಕೇವಲ ಶೇ.0.4.

ನಾಡುಮೃಗ ರೂಪೇಶ್ ಜೈಲಿನಲ್ಲಿದ್ದಾನೆ. ಶಿವಮ್ಮ ಮತ್ತೆ ನ್ಯಾಯಾಲಯದ ಸುತ್ತಾ ಸುತ್ತುತ್ತಿದ್ದಾರೆ. ಸೊಪ್ಪಿನಹಳ್ಳಿ ಮಧುವನ್ನು ಬಹುತೇಕ ಮರೆತಂತಿದೆ. ಆದರೆ ರೇಖಾಳ ಹೃದಯ ಮರೆತಿರುವುದಕ್ಕೆ ಸಾಕ್ಷಿ ಇನ್ನೂ ಸಿಕ್ಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...