Homeಅಂಕಣಗಳುಮಾತು ಮರೆತ ಭಾರತ-34; ಲಾಕ್‌ಡೌನ್ ಫೈಲ್: ಹಾಸನದಲ್ಲಿ ಮರ್‍ಯಾದೆಗೇಡು ಹತ್ಯೆ

ಮಾತು ಮರೆತ ಭಾರತ-34; ಲಾಕ್‌ಡೌನ್ ಫೈಲ್: ಹಾಸನದಲ್ಲಿ ಮರ್‍ಯಾದೆಗೇಡು ಹತ್ಯೆ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್ ಲಾಕ್‌ಡೌನ್’ ಸಮಯದಲ್ಲಿ ನಡೆದ ದಲಿತರ ಮೇಲಿನ 60 ದೌರ್ಜನ್ಯಗಳನ್ನು ಓದುಗರಿಗೆ ಕಟ್ಟಿಕೊಟ್ಟಿದೆ. ಒಂದೊಂದೂ ಭೀಕರ ಮತ್ತು ಹಿಂದೂ ಮೇಲ್ಜಾತಿ ಜನರು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತವೆ. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿ ಜನರ ಮನ ಪರಿವರ್ತಿಸುವುದಲ್ಲ; ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ಅದು ಸೊಪ್ಪಿನಹಳ್ಳಿ ಎಂಬ ಗ್ರಾಮ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿದೆ. ಹಳೆ ಮೈಸೂರು ಜಿಲ್ಲೆಯಲ್ಲಿರುವ ಒಕ್ಕಲಿಗರ ಪ್ರಾಬಲ್ಯ ಇಲ್ಲಿಯೂ ಇದೆ. ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಮುಂದುವರೆದಿರುವ ಒಕ್ಕಲಿಗ ಸಮಾಜ, ಸಾಮಾಜಿಕವಾಗಿಯೂ ಇಂದು ಮೇಲ್ಮುಖ ಚಲನೆಯನ್ನು ಹೊಂದಿದೆ. ಇದಕ್ಕೆ ತದ್ವಿರುದ್ಧವಾಗಿ ದಲಿತ ಸಮಾಜ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಒಂದಷ್ಟು ಸ್ಥಾನಮಾನ ಗಿಟ್ಟಿಸಿಕೊಂಡಿದ್ದರೂ ಸಾಮಾಜಿಕವಾಗಿ ಬಹಳ ಹಿಂದೆಯೇ ಉಳಿಯುವಂದತೆ ನೋಡಿಕೊಳ್ಳಲಾಗಿದೆ. ಈ ಚಿತ್ರಣವನ್ನೇ ಹೊದ್ದುಕೊಂಡಿರುವ ಸೊಪ್ಪಿನಹಳ್ಳಿಯಲ್ಲಿ ಶಿವಮ್ಮ ವಾಸಿಸುತ್ತಿದ್ದಳು. ಒಬ್ಬಂಟಿಯಾಗಿ ತನ್ನ ಎರಡು ಗಂಡು ಮಕ್ಕಳನ್ನು ಸಾಕಿ ಸಲುಹಿ ತಕ್ಕಮಟ್ಟಿಗೆ ವಿದ್ಯಾಭ್ಯಾಸವನ್ನೂ ಮಾಡಿಸಿದಳು. ಹಿರಿಯ ಮಗ ಮಧು ಪದವಿ ಓದುತ್ತಿದ್ದ. ಕಿರಿಯವನಾದ ಮನು ಕಾಲೇಜು ಶಿಕ್ಷಣಕ್ಕೆ ಕಾಲಿಟ್ಟಿದ್ದ.

ಶಿವಮ್ಮ ಹೋಟೆಲ್ ಒಂದರಲ್ಲಿ ಪಾತ್ರೆ ತೊಳೆಯುತ್ತಾ ತನ್ನ ಮಕ್ಕಳನ್ನು ಸಾಕಿದ್ದಳು. ತನ್ನ ಊರಿನಲ್ಲಿ ತಮಗಿರುವ ಸ್ಥಾನ ಯಾವುದೆಂಬುದನ್ನು ಬಹಳ ಚೆನ್ನಾಗಿ ಅರಿತಿದ್ದ ಆಕೆ ತಾನಾಯಿತು ತನ್ನ ಕೆಲಸವಾಯಿತು ಎಂದು ಜೀವಿಸುತ್ತಾ ಮಕ್ಕಳ ಭವಿಷ್ಯದ ಬಗ್ಗೆ ಕನಸು ಕಟ್ಟಿಕೊಂಡಿದ್ದಳು.

ಇದನ್ನೂ ಓದಿ: ಮಾತು ಮರೆತ ಭಾರತ-32; ಕಾಶ್ಮೀರಿ-ದಲಿತ್ ಫೈಲ್: ದಲಿತರ ಜೀವಕ್ಕಿಲ್ಲಿ ಬೆಲೆ ಇಲ್ಲ

ಆಗ ತಾನೇ ಹದಿಹರೆಯವನ್ನು ದಾಟಿದ್ದ 20 ವರ್ಷದ ಮಧುವಿಗೆ ವಯೋಸಹಜ ಪ್ರೇಮ ಮೂಡಿತು. ಅದೇ ಊರಿನ ಒಕ್ಕಲಿಗ ಕುಟುಂಬದ ರೇಖಾ ಅವನ ಮನದರಸಿ. ಆಕೆಯು ಸಹ ಮಧುವಿಗೆ ನಿರಾಸೆಯನ್ನುಂಟು ಮಾಡಲಿಲ್ಲ. ಇಬ್ಬರೂ ಪ್ರಕೃತಿ ಸಹಜ ಪ್ರೇಮದಲ್ಲಿ ಮುಳುಗಿದರು. ಈ ಪ್ರೇಮಕ್ಕೆ ರೇಖಾಳ ವಯಸ್ಸು ಅಡ್ಡಗಾಲಾಕಿ ನಿಂತಿತ್ತು. ರೇಖಾಳಿಗೆ ಇನ್ನೂ 17 ವರ್ಷವೆಂದು ಈ ’ಪ್ರೇಮ’ಕ್ಕೆ ಹೇಳುವವರಾರು? ಹಾಗಿದ್ದರೂ ಎಲ್ಲಾ ಪ್ರೇಮಿಗಳೂ ಮಾಡುವಂತೆ ’ಮುಂದೇನಾಗತ್ತೋ ನೋಡಿಯೇ ಬಿಡೋಣ’ ಎಂದುಕೊಂಡು ಮುಂದುವರೆದಿದ್ದಾರೆ.

ಇವರಿಬ್ಬರ ಪ್ರೇಮದ ವಿಚಾರ ರೇಖಾಳ ಮನೆಯವರಿಗೆ ತಿಳಿದಂತಿದೆ. ಪ್ರೇಮಿಗಳಿಬ್ಬರಿಗೂ ಪರಸ್ಪರ ಪ್ರತ್ಯೇಕಗೊಳ್ಳುವ ಭೀತಿ ಶುರುವಾಗಿದೆ. ಮುಖ ನೋಡದೇ ಒಂದು ದಿನವೂ ಇರಲಾಗದವರಿಗೆ ಶಾಶ್ವತವಾಗಿ ಬೇರೆಯಾಗುವುದು ಭಯ ಮೂಡಿಸಿರಲೇಬೇಕಲ್ಲವೆ? ಇಬ್ಬರೂ ಮನೆ ಬಿಟ್ಟು ಹೊರನಡೆದಿದ್ದಾರೆ. ಭಾರತದ ಕಾನೂನಿನ ಪ್ರಕಾರ ಅಪ್ರಾಪ್ತೆಯನ್ನು ಜೊತೆ ಕರೆದೊಯ್ಯುವುದು ಗಂಭೀರ ಅಪರಾಧವಾಗಿದೆ. ಹಾಗಾಗಿ ಪೋಕ್ಸೋ ಕಾಯ್ದೆಯಲ್ಲಿ ರೇಖಾಳ ಮನೆಯವರು ಮಧುವಿನ ಮೇಲೆ ದೂರು ದಾಖಲಿಸಿದ್ದಾರೆ. ಕೆಲವೇ ದಿನಗಳಲ್ಲಿ ಇಬ್ಬರನ್ನೂ ಪತ್ತೆ ಹಚ್ಚಿದ ಪೊಲೀಸರು ಮಧುವನ್ನು ಬಂಧಿಸಿದರು. ಮಧು ಕೆಲವು ತಿಂಗಳುಗಳ ಕಾಲ ಜೈಲಿನಲ್ಲಿಯೇ ಉಳಿಯಬೇಕಾಯಿತು.

ತಾಯಿ ಮತ್ತು ಇತರ ಕುಟುಂಬ ಸದಸ್ಯರು (PC: The Hindu)

ಇಂತಹ ಪರಿಸ್ಥಿತಿಯಲ್ಲಿ ಮಧುವಿನ ಪರವಾಗಿ ಗಟ್ಟಿಯಾಗಿ ನಿಂತುಕೊಂಡ ಅವನ ತಾಯಿ ಮತ್ತು ತಮ್ಮ, ಇದ್ದಬದ್ದ ಹಣವನ್ನೆಲ್ಲ ನ್ಯಾಯಾಲಯದ ವಿಚಾರಣೆಗೆ ಸುರಿದು ಕೊನೆಗೂ ಮಗನನ್ನು ಜಾಮೀನಿನ ಮೇಲೆ ಹೊರತಂದರು. ಅಲ್ಲಿಗೆ ಶಿವಮ್ಮನ ಮನಸ್ಸು ಒಂದಷ್ಟು ನಿರಾಳವಾಯಿತು. ಊರಿನಲ್ಲಿಯೇ ಇದ್ದರೆ ಮಧುವಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರಿತ ಶಿವಮ್ಮ ಮತ್ತು ಮನು, ಮಧುವನ್ನು ಬೆಂಗಳೂರಿಗೆ ಕಳಿಸಿದರು. ಮನಸ್ಸಿಲ್ಲದಿದ್ದರೂ ಅಮ್ಮನ ಮಾತಿಗೆ ಇಲ್ಲವೆನ್ನದೆ ಬೆಂಗಳೂರಿಗೆ ತೆರಳಿದ ಮಧು, ತಿಂಗಳುಗಳ ಕಾಲ ಸುತ್ತಾಡಿ ಒಂದು ಕೆಲಸ ಗಿಟ್ಟಿಸಿಕೊಂಡನು. ಬರುವ ಸಂಬಳದಲ್ಲಿ ಒಂದಷ್ಟು ಮನೆಗೂ ಕಳಿಸುತ್ತಿದ್ದನು.

ಎಲ್ಲವೂ ಸರಿ ಹೋಯಿತು ಎಂದುಕೊಂಡು ಶಿವಮ್ಮ ನಿಟ್ಟುಸಿರುಬಿಡುವಷ್ಟರಲ್ಲಿ ಕೋವಿಡ್ 19 ಭಾರತಕ್ಕೆ ಲಗ್ಗೆ ಇಟ್ಟಿತು. ಮಾರ್ಚ್ 2019ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದಾದ್ಯಂತ ಲಾಕ್‌ಡೌನ್ ಹೇರಿದರು. ದೇಶದಾದ್ಯಂತ ಕೆಲಸ ಮಾಡುತ್ತಿದ್ದ ಕಾರ್ಮಿಕ ವರ್ಗದಂತೆ ಮಧುವೂ ಕೆಲಸವಿಲ್ಲದೆ ಬೆಂಗಳೂರು ಬಿಟ್ಟು ತವರೂರು ಸೊಪ್ಪಿನಹಳ್ಳಿಗೆ ಬಂದನು. ಅದೇ ಗ್ರಾಮದ ವರ್ಕ್‌ಶಾಪ್ ಒಂದರಲ್ಲಿ ಕೆಲಸಕ್ಕೆ ಸೇರಿಕೊಂಡನು. ಅಂತೂ ಇಂತು ನನ್ನಿಬ್ಬರು ಮಕ್ಕಳೂ ಈಗ ನನ್ನೊಂದಿಗೆ ಇದ್ದಾರೆ ಎಂಬ ಖುಷಿಯಲ್ಲಿ ಶಿವಮ್ಮ ತೇಲುತ್ತಿದ್ದಳು. ಇತ್ತ ಸೊಪ್ಪಿನಹಳ್ಳಿಗೆ ಬಂದ ಮಧುವಿನ ಹೃದಯದಲ್ಲಿ ಮಲಗಿದ್ದ ರೇಖಾಳ ನೆನಪಿಗೆ ಜೀವ ಬಂದಿತು. ರೇಖಾಳನ್ನು ಬಂಧಿಸಿಟ್ಟುಕೊಳ್ಳುವಲ್ಲಿ ಸಫಲವಾಗಿದ್ದೇವೆಂದು ನಂಬಿಕೊಂಡಿದ್ದ ಆಕೆಯ ಸಂಬಂಧಿಕರಿಗೆ ಒಳಗೊಳಗೇ ಪ್ರತಿಷ್ಠೆಯ ಅಮಲು ನೆತ್ತಿಗೇರಿ ಸುಖ ನೀಡುತ್ತಿತ್ತು.

ಇದನ್ನೂ ಓದಿ: ಮಾತು ಮರೆತ ಭಾರತ-32; ಲಾಕ್‌ಡೌನ್ ಫೈಲ್ಸ್: ಪ್ರೀತಿಯನ್ನು ಮಣಿಸಿದ ಜಾತಿ

ಶಿವಮ್ಮ ಮತ್ತು ಮನು ಇಬ್ಬರೂ ಮಧುವಿಗೆ ಆಗಾಗ ಎಚ್ಚರಿಕೆ ನೀಡುತ್ತಲೇ ಇದ್ದರು. ಯಾವುದೇ ಕಾರಣಕ್ಕೂ ರೇಖಾಳ ಸಹವಾಸಕ್ಕೆ ಹೋಗಬೇಡ, ಆಕೆಯೊಂದಿಗೆ ಮತ್ತೆ ಸಂಪರ್ಕ ಬೆಸೆಯಬೇಡ ಎಂದು ತಾಕೀತು ಮಾಡುತ್ತಿದ್ದರು. ಆದರೇನು ಮಾಡುವುದು? ಅದು ಪ್ರೇಮವಲ್ಲವೇ? ಎಂಟು ದಿಕ್ಕುಗಳಲ್ಲೂ ಯೋಚಿಸಿ ಮುಂದುವರೆಯಲು ಅದೇನು ಯುದ್ಧತಂತ್ರವೇ?

ಅಂದು ಜುಲೈ 15. ಮಧು ತನ್ನ ಸ್ನೇಹಿತರೊಡನೆ ಊರಿನ ದೇಗುಲಕ್ಕೆ ಹೋಗಿ ವಾಪಸ್ಸು ಬರುತ್ತಿದ್ದನು. ಅಚಾನಕ್ಕಾಗಿ ಅವರೆಲ್ಲರ ಎದುರಿಗೆ ರೇಖಾಳ ಚಿಕ್ಕಪ್ಪ ರೂಪೇಶ್ ಬಂದು ನಿಂತನು. ಅವನ ಕೈಯಲ್ಲಿ ಡಬಲ್ ಬ್ಯಾರೆಲ್ ಕಂಟ್ರಿ ಮೇಡ್ ಬಂದೂಕು ಇತ್ತು. ಆಗ ಸಮಯ ಮಧ್ಯಾಹ್ನ 3 ಗಂಟೆ. ಕ್ಷಣಹೊತ್ತೂ ಕಾಯದೇ, ರೇಖಾಳ ನೆನಪನ್ನೇ ತುಂಬಿಕೊಂಡಿದ್ದ ಮಧುವಿನ ಎದೆಗೆ ಗುರಿಯಿಟ್ಟು ಗುಂಡು ಹಾರಿಸಿದನು. ಮಿಸುಕಾಡುತ್ತಲೇ ಮಧುವಿನ ದೇಹ ತಣ್ಣಗಾಯಿತು. ಅವನ ಕಣ್ಣ ತುಂಬ ತುಂಬಿಕೊಂಡಿದ್ದ ರೇಖಾಳನ್ನು ನೋಡಿಯೇ ರೂಪೇಶ್ ಕೆಲಸ ಮುಗಿಸಿ ಹೋಗಿರಬೇಕು. ರೂಪೇಶ್ ಎಂಬ ಜಾತಿ ಮೃಗಗಳು ಇಂದಿಗೂ ಜೀವಂತ ಇವೆ. ಮರ್‍ಯಾದೆ ಹೆಸರಿನಲ್ಲಿ ಕೊಲೆಯನ್ನೂ ಮಾಡಿಸಿಬಿಡುವ ಜಾತಿವ್ಯವಸ್ಥೆ ಜೀವಂತ ಇರುವವರೆಗೂ ಇಂತಹ ನಾಡುಮೃಗಗಳ ಸಂಖ್ಯೆ ಕಡಿಮೆ ಆಗುವುದಿಲ್ಲ. ಇಂತಹ ನಾಡುಮೃಗಗಳ ಹೆಡೆಮುರಿ ಕಟ್ಟಬೇಕಿದ್ದ ಕಾನೂನಿನ ಆಯಕಟ್ಟಿನ ಸ್ಥಾನದಲ್ಲಿಯೂ ಮೃಗಗಳೇ ತುಂಬಿಕೊಂಡಿರುವಾಗ ಕಟಕಟೆಯಲ್ಲಿಯಾದರೂ ಮಧು-ರೇಖಾಳ ಪ್ರೇಮಕ್ಕೆ ಗೆಲುವು ಸಿಗುವುದೇ ಕಾದು ನೋಡಬೇಕಿದೆ.

2019ರ ಎನ್‌ಸಿಆರ್‌ಬಿ ವರದಿ ಪ್ರಕಾರ ದಲಿತರ ಮೇಲೆ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ದೌರ್ಜನ್ಯಗಳು ನಡೆದಿವೆ. ಆದರೆ ಕರ್ನಾಟಕದಲ್ಲಿ ದಲಿತರ ಮೇಲೆ ನಡೆಯುವ ದೌರ್ಜನ್ಯ ದರ ಉತ್ತರಪ್ರದೇಶಕ್ಕಿಂತಲೂ ಹೆಚ್ಚಿದೆ. ಉತ್ತರಪ್ರದೇಶದಲ್ಲಿ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಶೇ.5.6ರಷ್ಟು ದೌರ್ಜನ್ಯಗಳು ದಲಿತರ ಮೇಲೆ ಘಟಿಸಿದರೆ, ಕರ್ನಾಟಕದಲ್ಲಿ ಅದರ ಪ್ರಮಾಣ ಶೇ.12.8. ಇಂತಹ ಪ್ರಕರಣಗಳಲ್ಲಿ ಶಿಕ್ಷೆ ನೀಡುವ ಪ್ರಮಾಣವೂ ಸಹ ಕರ್ನಾಟಕದಲ್ಲಿ ಅತ್ಯಂತ ಕಡಿಮೆ. ಅದು ಕೇವಲ ಶೇ.0.4.

ನಾಡುಮೃಗ ರೂಪೇಶ್ ಜೈಲಿನಲ್ಲಿದ್ದಾನೆ. ಶಿವಮ್ಮ ಮತ್ತೆ ನ್ಯಾಯಾಲಯದ ಸುತ್ತಾ ಸುತ್ತುತ್ತಿದ್ದಾರೆ. ಸೊಪ್ಪಿನಹಳ್ಳಿ ಮಧುವನ್ನು ಬಹುತೇಕ ಮರೆತಂತಿದೆ. ಆದರೆ ರೇಖಾಳ ಹೃದಯ ಮರೆತಿರುವುದಕ್ಕೆ ಸಾಕ್ಷಿ ಇನ್ನೂ ಸಿಕ್ಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...