Homeಅಂಕಣಗಳುಮಾತು ಮರೆತ ಭಾರತ-35; ಮಿರ್ಯಾಲಗುಡ ಫೈಲ್: ’ಅಪ್ಪನನ್ನು ಗಲ್ಲಿಗೇರಿಸಿ’ ಎಂದ ಅಮೃತಳ ಕತೆ

ಮಾತು ಮರೆತ ಭಾರತ-35; ಮಿರ್ಯಾಲಗುಡ ಫೈಲ್: ’ಅಪ್ಪನನ್ನು ಗಲ್ಲಿಗೇರಿಸಿ’ ಎಂದ ಅಮೃತಳ ಕತೆ

- Advertisement -
- Advertisement -

ಗಮನಿಸಿ : ಫೆಬ್ರವರಿ 20, 2023ರಲ್ಲಿ ಪ್ರಕಟಗೊಂಡ ಈ ಹಳೆಯ ಬರಹವನ್ನು ಮತ್ತೊಮ್ಮೆ ಹಂಚಿಕೊಳ್ಳಲಾಗಿದೆ. ಈ ಪ್ರಕರಣದ ಮೊದಲ ಆರೋಪಿ ಮಾರುತಿರಾವ್ 2020ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡನೇ ಅಪರಾಧಿಗೆ ಮರಣದಂಡನೆ ಮತ್ತು ಉಳಿದ 6 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಾ.10,2025ರಂದು ತೆಲಂಗಾಣದ ನ್ಯಾಯಾಲಯದ ಆದೇಶಿಸಿದೆ.   

’ನನ್ನ ತಂದೆಯನ್ನು ನೇಣಿಗೇರಿಸಿ’ ಎಂದು ಅಮೃತವರ್ಷಿಣಿ ಪೊಲೀಸರನ್ನೂ ಹಾಗೂ ಮಾಧ್ಯಮದವರನ್ನು ಅಂಗಲಾಚುತ್ತಿದ್ದಳು. ಅವಳ ಕಣ್ಣುಗಳು ಕಣ್ಣೀರಲ್ಲಿ ಮಿಂದು ಕೆಂಪಗಾಗಿದ್ದವು. ತಂದೆಯನ್ನೇ ಗಲ್ಲಿಗೇರಿಸಲು ಬೇಡಿಕೊಳ್ಳುವ ಮಗಳು ನಿಜಕ್ಕೂ ಮಗಳೇ ಎಂದು ನೀವು ಪ್ರಶ್ನಿಸಬಹುದು. ಓದುತ್ತಾ ಹೋದಂತೆ ನಿಮಗೆ ಉತ್ತರ ಸಿಗಲಿದೆ.

ಪ್ರಣಯ್ ಕುಮಾರ್ ತೆಲಂಗಾಣದ ನಲಕೊಂಡ ಬಳಿ ಇರುವ ಮಿರ್ಯಾಲಗುಡ ಪಟ್ಟಣದ ದಲಿತ ಯುವಕ. ಆರ್ಥಿಕವಾಗಿ ಮುಂದುವರಿದಿದ್ದ ದಲಿತ ಕುಟುಂಬದ ಹಿರಿಯ ಮಗ. ಅವನಿಗಿನ್ನೂ 23 ವರ್ಷ ಮಾತ್ರ. ಅದೇ ಪಟ್ಟಣದ ಪ್ರಭಾವಿ ವೈಶ್ಯ ಕುಟುಂಬದ ವ್ಯಾಪಾರಿ ಮಾರುತಿರಾವ್ ಮಗಳು ಅಮೃತವರ್ಷಿಣಿ. ಅಮೃತ ಮತ್ತು ಪ್ರಣಯ್ ಇಬ್ಬರೂ ಶಾಲಾದಿನಗಳಿಂದಲೇ ಉತ್ತಮ ಸ್ನೇಹಿತರು. ಒಂದೇ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣವನ್ನು ಕಲಿಯುತ್ತಿದ್ದಾಗ ಇವರಿಬ್ಬರ ನಡುವೆ ಪ್ರೇಮಾಂಕುರವಾಯಿತು. ಯಥಾಪ್ರಕಾರ ಪ್ರೀತಿ ಜಾತಿಯನ್ನು ಮೀರಿ ನಿಂತಿತು. ಆದರೆ ಭಾರತದ ಹಿರಿಯ ಜಾತಿ ಭಯೋತ್ಪಾದಕರು ಮೀರಿಲ್ಲವಲ್ಲ! ಪಿಯುಸಿಯಲ್ಲಿಯೇ ಒಮ್ಮೆ ಪ್ರಣಯ್‌ಗೆ ಅಮೃತಳ ತಂದೆ ಎಚ್ಚರಿಕೆ ನೀಡಿದ್ದರು. ಮಗಳ ಸಹವಾಸಕ್ಕೆ ಬರಬೇಡವೆಂದು ಸೂಚಿಸಿದ್ದರು. ಇವರಿಬ್ಬರ ನಡುವಿನ ಪ್ರೀತಿಗೆ ಬ್ರೇಕ್ ಹಾಕಲು ಮಗಳು ಅಮೃತ ಪಿಯುಸಿ ಪಾಸ್ ಆದ ನಂತರ ಮುಂದೆ ಕಾಲೇಜಿಗೆ ಒಂದು ವರ್ಷ ಕಾಲ ಸೇರಿಸಲೇ ಇಲ್ಲ. ನಂತರದ ವರ್ಷ ಅಮೃತ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದಾಗ ಪ್ರಣಯ್ ಸಹ ಇಂಜಿನಿಯರಿಂಗ್ ಓದುತ್ತಿದ್ದನು. ಒಟ್ಟಿಗೆ ಇರಬೇಕೆಂದು ಅಂದುಕೊಂಡ ಮೇಲೆ ಅದೆಷ್ಟು ವರ್ಷ ದೂರವಿದ್ದರೇನು? ಅಷ್ಟು ಸುಲಭವಾಗಿ ಪ್ರೀತಿಸಿದ ಸಂಗಾತಿಯನ್ನು ಮರೆಯಲು ಸಾಧ್ಯವೇ? 2018ರ ಜನವರಿ ತಿಂಗಳಂದು ಪ್ರಣಯ್ ಹಾಗೂ ಅಮೃತವರ್ಷಿಣಿ ಇಬ್ಬರೂ ವಿವಾಹವಾದರು. ಈ ವಿವಾಹ ಮಾರುತಿ ರಾವ್ ಮತ್ತು ಕುಟುಂಬಕ್ಕೆ ಕಿಂಚಿತ್ತೂ ಇಷ್ಟವಿರಲಿಲ್ಲ. ತೆಲಂಗಾಣ ರಾಷ್ಟ್ರೀಯ ಪಕ್ಷದ ಪದಾಧಿಕಾರಿಯಾಗಿದ್ದ ಮಾರುತಿರಾವ್‌ಗೆ ಪ್ರತಿಷ್ಠೆ ನೆತ್ತಿಗೇರಿ ತಲೆ ತಿರುಗುತ್ತಿತ್ತು. ಮಗಳು ಗರ್ಭಿಣಿ ಆದ ವಿಚಾರ ತಿಳಿದಾಗ ಆಕೆ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ವೈದ್ಯರ ಮೂಲಕವೇ ಗರ್ಭಪಾತ ಮಾಡಿಸಿಕೊಂಡು ಮನೆಗೆ ಮರಳುವಂತೆ ಸೂಚಿಸಿದ್ದನು. ಆದರೆ ಅಮೃತ ಪ್ರಣಯನ ರೀತಿಯಲ್ಲಿಯೇ ಇನ್ನಷ್ಟು ಗಟ್ಟಿಯಾಗಿದ್ದಳು. ಮೇಲ್ಜಾತಿ ಹುಡುಗಿ ತನ್ನ ಮನೆ ಬಿಟ್ಟು, ತಮ್ಮ ಮನೆ ತುಂಬಿಕೊಂಡಿದ್ದಾಳೆಂದು ಪ್ರಣಯ್ ತಂದೆತಾಯಿಯೂ ಸಹ ಪ್ರೀತಿಯಿಂದ ಸಲಹುತ್ತಿದ್ದರು. ಹೀಗೆ ಎಲ್ಲಾ ರೀತಿಯ ಪ್ರಯತ್ನ ಮಾಡಿದಾಗಲೂ ಸಹ ಮಗಳು ಮನೆಗೆ ಬರುವುದಿಲ್ಲವೆಂದು ಖಡಾಖಂಡಿತವಾಗಿ ಹೇಳಿದಾಗ ಮಾರುತಿರಾವ್‌ಗೆ ಬಹಳ ನಿರಾಶೆಯಾಗಿತ್ತು.

ಮಾರುತಿರಾವ್

ಪ್ರಣಯ್ ಮತ್ತು ಅಮೃತವರ್ಷಿಣಿಯ ಮದುವೆಯನ್ನು ಗಟ್ಟಿಯಾಗಿ ವಿರೋಧಿಸಿದ್ದ ಮಾರುತಿರಾವ್ ಮಗಳನ್ನು ಮನವೊಲಿಸಲು ಸೋತಾಗ ಅತ್ಯಂತ ಅಮಾನವೀಯ ಆಲೋಚನೆ ಮಾಡಿದ್ದನು. ತನ್ನ ಮಗಳ ಗಂಡ ಪ್ರಣಯ್‌ನನ್ನು ಕೊಲ್ಲಿಸಿಬಿಡಲು ಒಂದು ಕೋಟಿಗೆ ಸುಫಾರಿ ನೀಡಿದ್ದನು. ಮುಂಗಡ ಹಣವನ್ನಾಗಿ 15 ಲಕ್ಷ ರೂಪಾಯಿಗಳನ್ನೂ ಪಾವತಿಸಿದ್ದನು. ಪ್ರಣಯನನ್ನು ಕೊಲ್ಲಲು ಮುಂದಾದ ಸುಫಾರಿ ಕಿಲ್ಲರ್ ಬಿಹಾರದ ಸುಭಾಷ್ ಕುಮಾರ್ ಶರ್ಮಾ. ಹೀಗೆ ಮಾರುತಿರಾವ್ ಒಳಗಿದ್ದ ’ಜಾತಿ ಭಯೋತ್ಪಾದಕ’ ಧುತ್ತನೆ ಎಚ್ಚರವಾಗಿದ್ದನು. ಒಂದು ಕೋಟಿ ಹೋದರೂ ಪರವಾಗಿಲ್ಲ; ದಲಿತನನ್ನು ಮದುವೆಯಾಗಿ ತನ್ನ ಸನಾತನ ಮಾನ ಕಳೆದಳೆಂದು ಭಾವಿಸಿ ಕೊಲೆಗೆ ಸಂಚು ರೂಪಿಸಿದನು.

ಸುಮಾರು ನಾಲ್ಕು ಬಾರಿ ಪ್ರಣಯನನ್ನು ಕೊಲ್ಲಲು ಯತ್ನಿಸಿದ ಭಯೋತ್ಪಾದಕ ’ಶರ್ಮಾ’ ಪದೇಪದೇ ವಿಫಲನಾಗಿದ್ದನು. ಮಾರುತಿರಾವ್ ಅದೆಷ್ಟು ಚಾಲಾಕಿ ನಯವಂಚಕನೆಂದರೆ ತನ್ನ ಹೆಂಡತಿ ಹಾಗೂ ಮಗಳು ಅಮೃತವರ್ಷಿಣಿ ಪರಸ್ಪರ ದೂರವಾಣಿ ಕರೆ ಮಾಡಿ ಮಾತನಾಡಿಕೊಂಡು ಚೆನ್ನಾಗಿರಲು ಅನುವು ಮಾಡಿಕೊಟ್ಟು, ಪ್ರಣಯ್ ಚಲನವಲನಗಳನ್ನು ತಿಳಿದುಕೊಳ್ಳುತ್ತಿದ್ದನು. ಸೆಪ್ಟೆಂಬರ್ 13ರಂದು ಎಂದಿನಂತೆ ಕರೆ ಮಾಡಿದ್ದ ಅಮೃತಳ ತಾಯಿ ಮಗಳೊಂದಿಗೆ ಮಾತಾಡಿದ್ದರು. ಹೀಗೆ ಮಾತಾಡುವಾಗ ಸ್ವತಃ ಅಮೃತ ನಾಳೆ (ಸೆಪ್ಟೆಂಬರ್ 14) ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದಳು. ಇದನ್ನು ಅರಿತ ಮಾರುತಿರಾವ್ ಸುಫಾರಿ ಕಿಲ್ಲರ್ ಶರ್ಮಾನಿಗೆ ವಿಷಯ ತಿಳಿಸಿದ್ದನು. ಸೆಪ್ಟೆಂಬರ್ 14, 2018ರಂದು ಮಿರ್ಯಾಲಗುಡದ ಆಸ್ಪತ್ರೆಗೆ 5 ತಿಂಗಳ ಗರ್ಭಿಣಿಯಾಗಿದ್ದ ಹೆಂಡತಿ ಅಮೃತಳನ್ನು ನಿಯಮಿತ ತಪಾಸಣೆಗೆ ಕರೆದುಕೊಂಡು ಬಂದಿದ್ದ ಪ್ರಣಯ್ ಮತ್ತು ಆತನ ತಾಯಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಶರ್ಮಾ, ಅವರು ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆಯೇ ಪ್ರಣಯ್ ಮೇಲೆರಗಿ ಕಬ್ಬಿಣದ ಸಲಾಕೆಯಿಂದ ಮನಸೋಇಚ್ಛೆ ತಲೆಗೆ ಥಳಿಸಿ ಕೊಂದೇಬಿಟ್ಟನು. ಶರ್ಮಾ ಎಂಬ ಭಯೋತ್ಪಾದಕ ತನ್ನ ಸನಾತನ ಪರಂಪರೆಯ ರಕ್ಷಣೆ ಮಾಡಲು ಐದನೇ ಬಾರಿಗೆ ಯಶಸ್ವಿಯಾಗಿ ಒಂದು ಅಮಾಯಕ ಜೀವ ತೆಗೆದಿದ್ದನು. ಅದೂ ಸಹ ದಲಿತನೆಂಬ ಕಾರಣಕ್ಕೆ! ಈ ಇಡೀ ಘಟನೆ ಆಸ್ಪತ್ರೆಯ ಸಿ.ಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿ ಇಡೀ ಪ್ರಪಂಚವೇ ನೋಡಿತು. ಆ ಭೀಕರ ಭಯೋತ್ಪಾದಕ ಕೃತ್ಯ ಕಂಡು ಭಾರತದ ’ಮನುಷ್ಯರು’ ಅಕ್ಷರಶಃ ಬೆಚ್ಚಿಬಿದ್ದರು.

ಇದನ್ನೂ ಓದಿ: ಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ “ರುದ್ರ ನರ್ತನ”

ಈ ಕೊಲೆಯಾದ ಸಮಯದಲ್ಲಿ ಮಾರುತಿರಾವ್ ತನ್ನ ಮೇಲೆ ಅನುಮಾನ ಬಾರದಿರಲೆಂದು ’ದೃಶ್ಯಂ’ ಸಿನೆಮಾ ಮಾದರಿಯಲ್ಲಿ ಅಲಿಬಿ (ಅಪರಾಧ ನಡೆದ ಸಮಯದಲ್ಲಿ ಬೇರೆ ಜಾಗದಲ್ಲಿರುವುದಕ್ಕೆ ಸಾಕ್ಷಿ) ಸೃಷ್ಟಿಮಾಡುವ ಕಾರಣಕ್ಕಾಗಿ, ಗಣೇಶ ಚತುರ್ಥಿಗೆ ಆಹ್ವಾನ ಮಾಡುವ ನೆಪದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದನು. ದಾರಿಯಲ್ಲಿ ಬೇಕಂತಲೇ ಕಾರು ನಿಲ್ಲಿಸಿ ರಾಜಕಾರಣಿಯೊಬ್ಬರನ್ನು ಮಾತನಾಡಿಸಿದ್ದನು.

ಪ್ರಣಯ್ ಕೊಲೆಯಾದ ದಿನವೇ ಅಮೃತವರ್ಷಿಣಿ ತನ್ನ ತಂದೆಯ ವಿರುದ್ಧ ಈ ಮೇಲಿನ ಮಾತುಗಳನ್ನು ಆಡಿದ್ದಳು. ತನ್ನ ಗಂಡ ಕೊನೆಯುಸಿರೆಳೆಯುವುದನ್ನು ಸ್ವತಃ ಕಣ್ಣಿಂದ ನೋಡಿದ ಅಮೃತ ಪೊಲೀಸರ ಮುಂದೆ ತನ್ನ ತಂದೆಯೇ ಕೊಲೆಗಾರ ಎಂದು ಹೇಳಿದ್ದಳು. ಇದರ ಆಧಾರದಲ್ಲಿ ಮಾರುತಿರಾವ್‌ನನ್ನು ಬಂದಿಸಲಾಯಿತಾದರೂ, ಪೊಲೀಸರಿಗೂ ಸಹ ಈತನ ಮೇಲೆ ಅನುಮಾನ ಬರದಂತೆ ನೋಡಿಕೊಳ್ಳಲಾಗಿತ್ತು. ಕೊಲೆಗಾರ ಶರ್ಮಾನನ್ನು ಸಿಸಿ ಕ್ಯಾಮೆರಾ ಫುಟೇಜ್ ಸಹಾಯದಿಂದ ಬಿಹಾರದಲ್ಲಿ ಪತ್ತೆ ಹಚ್ಚಿದಾಗಲೇ ಮಾರುತಿರಾವ್ ನಿಜ ಬಣ್ಣ ಬಯಲಾಗಿದ್ದು. ಈ ಮಾರುತಿರಾವ್ ತನ್ನ ಹೆಂಡತಿಯ ಮುಂದೆಯೂ ಸಹ ತನ್ನಲ್ಲಿನ ವಿಷವನ್ನು ಕಕ್ಕಿಕೊಂಡಿರಲಿಲ್ಲ. ತನ್ನೆಲ್ಲಾ ಕುಟಿಲ ಯೋಜನೆಯನ್ನು ತನ್ನ ತಮ್ಮ ಶ್ರವಣನ ಬಳಿ ಮಾತ್ರ ಹೇಳಿಕೊಂಡಿದ್ದ. ಅವರಿಬ್ಬರೂ ಸೇರಿ ಇಷ್ಟೆಲ್ಲ ಮಾಡಿದ್ದರು.

ಪ್ರಣಯ್ ಹೋದ ಮೇಲೆ ಧೃತಿಗೆಡದ ಅಮೃತ ಪ್ರಣಯ್ ಕುಟುಂಬದೊಂದಿಗೆ ಇದ್ದು ಅವರಿಗೆ ಧೈರ್ಯ ತುಂಬಿದಳು. ಸರ್ಕಾರ 4 ಲಕ್ಷ ಪರಿಹಾರ ಮತ್ತು ಸರ್ಕಾರಿ ನೌಕರಿ ನೀಡಲು ಬಂದಾಗ ಖಡಾಖಂಡಿತವಾಗಿ ಅದನ್ನು ನಿರಾಕರಿಸಿ ’ನನ್ನ ತಂದೆಯನ್ನು ನೇಣಿಗೇರಿಸಿ’ ಎಂದು ಅಂಗಲಾಚಿಕೊಂಡಿದ್ದಳು.

ಪ್ರಣಯ್ ಹೋದ ನಾಲ್ಕು ತಿಂಗಳಿಗೆ ಮುದ್ದಾದ ಮಗುವಿಗೆ ಜನ್ಮ ನೀಡಿದಳು. ಆ ಮಗುವಿನ ಹೆಸರು ನಿಹಾನ್ ಪ್ರಣಯ್.

ಈ ಕೊಲೆ ಮಾಡಿದ ಹಾಗೂ ಮಾಡಲು ಕೈವಾಡ ರೂಪಿಸಿದ ಏಳು ಜನರನ್ನು ಬಂಧಿಸಲಾಯಿತು. ಮುಖ್ಯ ಆರೋಪಿ ಮಾರುತಿ ರಾವ್ ಹಾಗೂ ಶ್ರವಣ. ಹಲವು ತಿಂಗಳುಗಳ ಕಾಲ ಜೈಲಿನಲ್ಲಿದ್ದ ಮಾರುತಿರಾವ್ ಜಾಮೀನಿನ ಮೇಲೆ ಹೊರಬಂದನು. ಬಂದ ದಿನವೇ ವೈಶ್ಯ ಸಂಘದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡನು. ಬಹುಶಃ ಜಾತಿಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲವಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರಬಹುದು. ಪ್ರಾಣ ತೆಗೆದಾದರೂ ಸರಿ, ಪ್ರಾಣ ಕೊಟ್ಟಾದರೂ ಸರಿ, ಜಾತಿ ಪ್ರತಿಷ್ಠೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಆಲೋಚಿಸುವವರೆಲ್ಲರೂ ಭಯೋತ್ಪಾದಕರೇ ಆಗಿದ್ದಾರೆ. ಅಂತಹ ಭಯೋತ್ಪಾದಕರಲ್ಲಿ ಈ ಮಾರುತಿರಾವ್ ಸಹ ಒಬ್ಬ. ಈತ ಸತ್ತ ದಿನ ಸೋಷಿಯಲ್ ಮೀಡಿಯಾದಲ್ಲಿ ಆತನ ಪರವಾಗಿ ದುಃಖ ವ್ಯಕ್ತಪಡಿಸುತ್ತ ಅಮೃತಳನ್ನು ಹೀಗಳೆದವರೆಲ್ಲರೂ ಜಾತಿವಾದಿ ಭಯೋತ್ಪಾದಕರೇ ಆಗಿದ್ದಾರೆ. ಇಂತಹವರಿಗೆ ಆದಷ್ಟು ಬೇಗ ಬುದ್ಧಿ ಕಲಿಸುವ ಕಾನೂನು ಜಾರಿಗೊಳ್ಳಬೇಕಿದೆ. ಅದಕ್ಕಿಂತಲೂ ಹೆಚ್ಚಾಗಿ ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಆಂದೋಲನ ರೂಪುಗೊಳ್ಳಬೇಕಿದೆ.

ಇದನ್ನೂ ಓದಿ: ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

ಇಂತಹ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ರಾಜಸ್ಥಾನ ಸರ್ಕಾರ 2019ರಲ್ಲಿ ಒಂದು ಕಾಯ್ದೆಯನ್ನು ಎರಡೂ ಸದನಗಳಲ್ಲಿ ಪಾಸು ಮಾಡಿದೆ. ಆದರೆ ಇದಕ್ಕೆ ರಾಷ್ಟ್ರಪತಿಯವರ ಅಂಕಿತವಿನ್ನೂ ಬಿದ್ದಿಲ್ಲ.

ಭಾರತದ ದತ್ತಾಂಶ ಸಂಸ್ಥೆಯು 2017ರಲ್ಲಿ ಅಧ್ಯಯನ ಮಾಡಿರುವ ಪ್ರಕಾರ ಅಂತರ್ಜಾತಿ ವಿವಾಹ ಗ್ರಾಮಗಳಲ್ಲಿ ಶೇ.5.2 ಇದ್ದರೆ ನಗರಗಳಲ್ಲಿ ಶೇ.4.9 ರಷ್ಟಿದೆ. ಭಾರತದಲ್ಲಿ ದಿನದಿಂದ ದಿನಕ್ಕೆ ಮರ್ಯಾದೆಗೇಡು ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೊಂದು ಪರಿಹಾರ ಅತಿ ಜರೂರಾಗಿ ಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...