Homeಅಂಕಣಗಳುಮಾತು ಮರೆತ ಭಾರತ; ಬಥಾನಿ ತೋಲ ಫೈಲ್: ತಿರುಗಿಬಿದ್ದರೆ ತಲೆದಂಡ

ಮಾತು ಮರೆತ ಭಾರತ; ಬಥಾನಿ ತೋಲ ಫೈಲ್: ತಿರುಗಿಬಿದ್ದರೆ ತಲೆದಂಡ

- Advertisement -
- Advertisement -

ಭಾರತದ ಜಾತೀಯ ಫ್ಯೂಡಲಿಸಂ ಹೇಗಿರುತ್ತದೆ ಎಂಬ ಉದಾಹರಣೆಗೆ ಬಿಹಾರ ರಾಜ್ಯಕ್ಕಿಂತಲೂ ಕರಾಳ ಉದಾಹರಣೆ ಮತ್ತೊಂದು ಇರಲಾರದು. ಜಾತೀಯ ಫ್ಯೂಡಲಿಸಂ ಮಧ್ಯಕಾಲೀನ ಇಡೀ ಭಾರತದ ವಿದ್ಯಮಾನವಾದರೂ ಕಣ್ಣಿಗೆ ರಾಚುವಂತೆ ಇಂದಿಗೂ ಅದರ ಲಕ್ಷಣಗಳನ್ನು ಮೈದೆಳೆದು ನಿಂತಿರುವ ರಾಜ್ಯ ಬಿಹಾರ. ಸ್ವತಂತ್ರ ಭಾರತದಲ್ಲಿ ಅತ್ಯಂತ ಭೀಕರವಾದ ದಲಿತರ ಹತ್ಯಾಕಾಂಡಗಳು ನಡೆದಿರುವುದೂ ಸಹ ಈ ಕಾರಣಕ್ಕಾಗಿಯೇ. ಬ್ರಿಟಿಷರಿಂದ ಭಾರತಕ್ಕೆ ದೊರೆತ ಸ್ವಾತಂತ್ರ್ಯ ನೇರವಾಗಿ ದ್ವಿಜ ಭೂಮಾಲೀಕರ ಕೈಗೆ ಹೋಯಿತು. ಭೂಸುಧಾರಣೆಯಿಂದಾಗಿ ಮೇಲ್-ಶೂದ್ರ ಜಾತಿಗಳೂ ಸಹ ಭೂಮಾಲೀಕರ ಸ್ಥಾನಕ್ಕೇರಿದವು. ಅಲ್ಲಿಯವರೆಗೆ ದ್ವಿಜ-ಭೂಮಾಲೀಕರ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದ ಶೂದ್ರ-ದಲಿತರ ಜಾಗದಲ್ಲಿ ಭೂಸುಧಾರಣೆಯ ಬಳಿಕ ದಲಿತ ಕೂಲಿಗಳು ಏಕಾಂಗಿಯಾಗಿ ಸಿಕ್ಕಿಬಿದ್ದರು. ಈ ಕಾರಣದಿಂದಾಗಿ ದ್ವಿಜ ಹಾಗೂ ಮೇಲ್-ಶೂದ್ರ ಭೂಮಾಲೀಕರು ದಲಿತರನ್ನು ಹಾಗೂ ಕೆಳಶೂದ್ರ ಜಾತಿಗಳನ್ನು ಶೋಷಿಸಲು ಮುಂದುವರೆಸಿದರು. ಸ್ವತಂತ್ರ ಬಂದು ಸಂವಿಧಾನ ರಚನೆಯಾದ ಬಳಿಕವೂ ಬಿಹಾರದಲ್ಲಿ ಸರ್ಕಾರಗಳ ಬದಲು ಭೂಮಾಲೀಕರ ಸರ್ವಾಧಿಕಾರವೇ ಮುಂದುವರೆಯಿತು. ಈಗಲೂ ಆ ಪರಿಸ್ಥಿತಿಯಲ್ಲಿ ಅಂತಹ ಬದಲಾವಣೆ ಆಗಿಲ್ಲ.

ಈ ಮೇಲಿನ ಪರಿಣಾಮದಿಂದಾಗಿ ಬಿಹಾರ ಸರ್ಕಾರದ ಜಾಗದಲ್ಲಿ ಭೂಮಿಹಾರ್ ಜಾತಿಯವರ ರಣವೀರ ಸೇನೆ, ರಜಪೂತರ ಕುನ್ವಾರ್ ಸೇನೆ, ಬ್ರಹ್ಮಶ್ರೀ ಸೇನೆ, ಪಿಂಡಾವ ಗ್ಯಾಂಗ್, ಸನ್‌ಲೈಟ್ ಸೇನೆಗಳು ಭೂಮಾಲೀಕರ ಪರವಾಗಿ ಹುಟ್ಟಿಕೊಂಡು ದಲಿತ-ಶೂದ್ರ ಕೂಲಿಗಳನ್ನು ಶೋಷಿಸಿ ಬದುಕಿ ಬೆಳೆಯಲು ಆರಂಭಿಸಿದರು. ಸರ್ಕಾರದ ಮೇಲೆ ಸರ್ಕಾರಗಳು ಬಂದರೂ ಈ ಶೋಷಣೆಯನ್ನು ನಿಲ್ಲಿಸಲಾಗಲಿಲ್ಲ. ಏಕೆಂದರೆ ಆಯಾ ಸರ್ಕಾರಗಳಲ್ಲಿ ಈ ಭೂಮಾಲೀಕ ಜಾತಿಯವರೇ ತುಂಬಿಕೊಂಡಿದ್ದರು. ಆದ್ದರಿಂದಲೇ ಈ ಮೇಲಿನ ಭೂಮಾಲೀಕ ಸೇನೆಗಳನ್ನು ಮಣಿಸಲು ನಕ್ಸಲ್‌ಬರಿ ಹೋರಾಟ ರೂಪು ತಾಳಿತು. ಈ ದ್ವಿಜ ಭೂಮಾಲೀಕ ಸೇನೆಗಳನ್ನು ಎದುರಿಸಲು ಸಶಸ್ತ್ರ ಹೋರಾಟಗಳಿಗೆ ದಲಿತರೂ ಇಳಿದರು. ಭೂಮಾಲೀಕರು ಹಾಗೂ ದಲಿತ-ಶೂದ್ರ ಕೂಲಿಗಳ ನಡುವೆ ಮಾರಾಮಾರಿಗಳಾದವು. ಈ ಕಾರಣದಿಂದಾಗಿಯೇ ತದನಂತರ ಬಿಹಾರದಲ್ಲಿ ಭೂಮಿಯನ್ನು ದಲಿತರಿಗೆ ಹಂಚಲಾಯಿತು.

ಬಿಹಾರದ ಬೋಜಪುರ ಜಿಲ್ಲೆಯಲ್ಲಿ ಕೇವಲ 100 ಮೀಟರ್ ಅಂತರದಲ್ಲಿ ಎರಡು ಹಳ್ಳಿಗಳಿವೆ. ಒಂದು, ಭೂಮಿಹಾರ್ ಮತ್ತು ರಜಪೂತ ಭೂಮಾಲೀಕರು ನೆಲಸಿರುವ ಬಕ್ರಿ ಕಾರೋನ್ ಮತ್ತೊಂದು ದಲಿತರು ಹಾಗೂ ಮುಸ್ಲಿಮ್ ಕೃಷಿಕೂಲಿಗಳು ನೆಲೆಸಿರುವ ಬಥಾನಿ ತೋಲ. ಈ ಎರಡೂ ಹಳ್ಳಿಗಳ ನಡುವೆ ಇಂದಿಗೂ ವೈಷಮ್ಯ ಕುದಿಯುತ್ತಲೇ ಇದೆ. ಇಂದಿಗೂ ದಲಿತರು ಭೂಮಿಹಾರ್ ಭೂಮಾಲೀಕರ ಎದುರು ಚಪ್ಪಲಿ ಹಾಕುವಂತಿಲ್ಲ. ದಲಿತರು ಅಷ್ಟು ಭಯಭೀತರಾಗಿದ್ದಾರೆ. ಇದಕ್ಕೆ ಮೂಲಕಾರಣ ಜುಲೈ 11, 1996ರಂದು ನಡೆದ ಆ ನರಮೇಧ.

ಅಂದು ಬಕ್ರಿ ಕಾರೋನ್‌ನಿಂದ ಹೊರಟ ಭೂಮಾಲೀಕರ ರಣವೀರ ಸೇನೆ ಬಥಾನಿ ತೋಲ ಪ್ರವೇಶಿಸಿ ಸಿಕ್ಕಸಿಕ್ಕವರನ್ನು ಕೊಚ್ಚಿ ಕೊಂದಿತು. ಬಂದೂಕಿನಿಂದ ಸುಟ್ಟು ಸಾಯಿಸಿತು. ಈ ಮಾರಣಹೋಮ ಅದೆಷ್ಟು ಭೀಕರವಾಗಿತ್ತೆಂದರೆ, 18 ವರ್ಷದ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು! 25 ವರ್ಷದ ದಲಿತ ಮಹಿಳೆಯ ಮೊಲೆಗಳನ್ನು ಕತ್ತರಿಸಿ ಆಕೆಯನ್ನು ಕೊಲ್ಲಲಾಗಿತ್ತು! 9 ತಿಂಗಳ ದಲಿತ ಹೆಣ್ಣುಗೂಸನ್ನು ಮೇಲೆ ಗಾಳಿಯಲ್ಲಿ ಎಸೆದು ಕೆಳಗೆ ಬೀಳುವಾಗ ಕತ್ತಿಯಲ್ಲಿ ಕತ್ತರಿಸಿ ಎರಡು ಭಾಗ ಮಾಡಲಾಗಿತ್ತು! ದಲಿತ ಗರ್ಭಿಣಿ ಹೆಂಗಸಿನ ಗರ್ಭ ಬಗೆದು ಭ್ರೂಣ ಹೊರತೆಗೆದು ಕತ್ತರಿಸಿ ಬಿಸಾಕಲಾಗಿತ್ತು! ಈ ಘಟನೆ ನಡೆದಾಗ ಅಲ್ಲಿಯೇ ಒಂದು ಪೊಲೀಸ್ ತುಕಡಿ ಇತ್ತು. ಊರಿನ ಹೊರಭಾಗದಲ್ಲಿ ಎರಡು ಪೊಲೀಸ್ ತುಕಡಿಗಳಿದ್ದವು. ಆದರೆ ಈ ತುಕಡಿಗಳಾವುದಕ್ಕೂ ದಲಿತರನ್ನು ರಕ್ಷಿಸಲಾಗಲಿಲ್ಲ. ಈ ನರಮೇಧದಲ್ಲಿ ಹತರಾದದ್ದು 8 ಮಕ್ಕಳು, 12 ಮಹಿಳೆಯರು ಹಾಗೂ ಒಬ್ಬ ಗಂಡಸು ಸೇರಿದಂತೆ 21 ಕೃಷಿ ಕೂಲಿಗಳು.

ರಣವೀರ ಸೇನೆಯ ನಾಯಕ ಬ್ರಹ್ಮೇಶ್ವರ ಸಿಂಗ್ ಮುಖಯಾ ಈ ಬಗ್ಗೆ ಕೇಳಿದರೆ ಸ್ವಲ್ಪವೂ ವಿಷಾದವಿಲ್ಲದೆ ಮೀಸೆ ತಿರುವಿದನಂತೆ! ಆ ಗರ್ಭಿಣಿಯನ್ನು ಅಷ್ಟು ಕ್ರೂರವಾಗಿ ಏಕೆ ಕೊಂದಿರಿ ಎಂಬ ಪ್ರಶ್ನೆಗೆ ’ಆ ಗರ್ಭಿಣಿಯರು ನಕ್ಸಲೈಟರನ್ನು ಹಡೆಯುತ್ತಾರೆ. ಅದಕ್ಕೆ ಕೊಂದೆವು’ ಎಂದು ನಕ್ಕಿದನಂತೆ. ಆ ಮಕ್ಕಳನ್ನು ಏಕೆ ಕೊಂದಿರಿ ಎಂದದ್ದಕ್ಕೆ ’ಅವರು ಬೆಳೆದು ದೊಡ್ಡವರಾಗಿ ನಕ್ಸಲೈಟರಾಗುತ್ತಾರೆ’ ಎಂದನಂತೆ. ಇಂತಹವನ ಮುಖ್ಯಸ್ಥಿಕೆಯಲ್ಲಿ ರಣವೀರ ಸೇನೆ 227 ದಲಿತ ಕೃಷಿ ಕೂಲಿಗಳನ್ನು ಬಲಿ ತೆಗೆದುಕೊಂಡಿದೆ.

ಬತಾನಿ ತೋಲದಲ್ಲಿ ದಲಿತ ಕೃಷಿಕೂಲಿಗಳನ್ನು ಕೊಲ್ಲಲು ಇದ್ದ ಕಾರಣವಿಷ್ಟೆ. ಆ ದಲಿತ ಕೂಲಿಗಳ ಮೇಲೆ ಈ ಭೂಮಾಲೀಕರು ದೌರ್ಜನ್ಯವೆಸಗಿದರೆ, ಕಡಿಮೆ ಕೂಲಿ ಕೊಟ್ಟರೆ ನಕ್ಸಲೈಟರಿಗೆ ಹೇಳಿ ಭೂಮಾಲಿಕರಿಗೆ ಬೆದರಿಕೆ ಹಾಕಿಸುತ್ತಾರೆ ಎಂಬುದು. ಇದು ನಿಜವೂ ಸಹ. ಏಕೆಂದರೆ ಬಿಹಾರದಲ್ಲಿ ಸರ್ಕಾರವೆಲ್ಲಿತ್ತು! ಸರ್ಕಾರ ಕೈಕಟ್ಟಿ ಕುಳಿತಾಗ ಬಡಜನತೆ ರಾಬಿನ್‌ಹುಡ್‌ಗಾಗಿ ಕಾಯುತ್ತಾರೆ. ಆ ರಾಬಿನ್‌ಹುಡ್‌ಅನ್ನು ದಲಿತ ಕೃಷಿಕೂಲಿಗಳು ನಕ್ಸಲೈಟರಲ್ಲಿ ಕಂಡುಕೊಂಡಿದ್ದರು. ಹಲವು ಬಾರಿ ಸ್ವತಃ ರಾಬಿನ್‌ಹುಡ್‌ಗಳಾಗಿದ್ದರು. ನಕ್ಸಲೈಟರನ್ನು ನಂಬಿದ್ದಕ್ಕೆ ಹಲವು ದಲಿತ ಕುಟುಂಬಗಳಿಗೆ ಭೂಮಿಯೂ ದಕ್ಕಿದೆ. ಸಶಸ್ತ್ರ ಹೋರಾಟಗಾರರನ್ನು ನಂಬಲು ದಲಿತರೇನು ದಡ್ಡರಲ್ಲ. ಅದಕ್ಕೆ ಮುಖ್ಯ ಕಾರಣ ಶೋಷಕರನ್ನು ದಮನಿಸಬೇಕಾದ ಸರ್ಕಾರಗಳು ಅವರೊಂದಿಗೇ ಕೈ ಮಿಲಾಯಿಸಿದಾಗ ಇಂತಹ ಅಸಹಾಯಕ ನಡೆಗಳು ತೆರೆದುಕೊಳ್ಳುತ್ತವೆ.

ಬಥಾನಿ ತೋಲ ಹತ್ಯಾಕಾಂಡದ ಆರೋಪಿಗಳನ್ನು ಅಪರಾಧಿಗಳೆಂದು ಸೆಷೆನ್ ಕೋರ್ಟ್ ತೀರ್ಪಿತ್ತಿತಾದರೂ ಹೈಕೋರ್ಟ್ ಸಾಕ್ಷಿಗಳ ಮಾತುಗಳನ್ನೇ ಪರಿಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಅಪರಾಧಿಗಳನ್ನು ಖುಲಾಸೆಗೊಳಿಸಿತು. 2002ರಲ್ಲಿ ಭೂಮಿಹಾರ್ ಸಂಘಟನೆಯನ್ನು ನಿಷೇಧಿಸಿದ ಬಿಹಾರ್ ಸರ್ಕಾರ ಬ್ರಹ್ಮೇಶ್ವರ ಸಿಂಗ್ ವಿರುದ್ಧ ಇದ್ದ 17 ಕೇಸುಗಳಲ್ಲಿ ಅವನನ್ನು 9 ವರ್ಷ ಜೈಲಿಗೆ ನೂಕಿತು. ತದನಂತರ ಜಾಮೀನು ಪಡೆದು ಹೊರಬಂದ ಅವನನ್ನು ಮುಸುಕುಧಾರಿಗಳು ಬೀದಿಯಲ್ಲಿ ಕೊಂದುಹಾಕಿದರು. 2012ರಲ್ಲಿ ನಡೆದ ಈ ಘಟನೆಗೆ ಲಾಲೂಪ್ರಸಾದ್ ಯಾದವ್, ಕಾಂಗ್ರೆಸ್ ಪಾರ್ಟಿ, ರಾಮ್ ವಿಲಾಸ್ ಪಾಸ್ವಾನ್ ಎಲ್ಲರೂ ಕಣ್ಣೀರಾಗಿದ್ದರು. ಈತನ ಅಂತ್ಯ ಸಂಸ್ಕಾರಕ್ಕೆ ಬಿ.ಜೆ.ಪಿ ಶಾಸಕ ಸಿ.ಪಿ.ಠಾಕೂರ್ ಹಾಗೂ ಬಿಹಾರದ ಮಂತ್ರಿಗಳು ಹಾಜರಿದ್ದರು.

ಇಂದಿಗೂ ಬಥಾನಿ ತೋಲ ಕೇಸು ಸುಪ್ರೀಂ ಕೋರ್ಟಿನಲ್ಲಿ ಧೂಳು ತಿನ್ನುತ್ತಿದೆ.


ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...