Homeಅಂಕಣಗಳುಮಾತು ಮರೆತ ಭಾರತ; ಬಥಾನಿ ತೋಲ ಫೈಲ್: ತಿರುಗಿಬಿದ್ದರೆ ತಲೆದಂಡ

ಮಾತು ಮರೆತ ಭಾರತ; ಬಥಾನಿ ತೋಲ ಫೈಲ್: ತಿರುಗಿಬಿದ್ದರೆ ತಲೆದಂಡ

- Advertisement -
- Advertisement -

ಭಾರತದ ಜಾತೀಯ ಫ್ಯೂಡಲಿಸಂ ಹೇಗಿರುತ್ತದೆ ಎಂಬ ಉದಾಹರಣೆಗೆ ಬಿಹಾರ ರಾಜ್ಯಕ್ಕಿಂತಲೂ ಕರಾಳ ಉದಾಹರಣೆ ಮತ್ತೊಂದು ಇರಲಾರದು. ಜಾತೀಯ ಫ್ಯೂಡಲಿಸಂ ಮಧ್ಯಕಾಲೀನ ಇಡೀ ಭಾರತದ ವಿದ್ಯಮಾನವಾದರೂ ಕಣ್ಣಿಗೆ ರಾಚುವಂತೆ ಇಂದಿಗೂ ಅದರ ಲಕ್ಷಣಗಳನ್ನು ಮೈದೆಳೆದು ನಿಂತಿರುವ ರಾಜ್ಯ ಬಿಹಾರ. ಸ್ವತಂತ್ರ ಭಾರತದಲ್ಲಿ ಅತ್ಯಂತ ಭೀಕರವಾದ ದಲಿತರ ಹತ್ಯಾಕಾಂಡಗಳು ನಡೆದಿರುವುದೂ ಸಹ ಈ ಕಾರಣಕ್ಕಾಗಿಯೇ. ಬ್ರಿಟಿಷರಿಂದ ಭಾರತಕ್ಕೆ ದೊರೆತ ಸ್ವಾತಂತ್ರ್ಯ ನೇರವಾಗಿ ದ್ವಿಜ ಭೂಮಾಲೀಕರ ಕೈಗೆ ಹೋಯಿತು. ಭೂಸುಧಾರಣೆಯಿಂದಾಗಿ ಮೇಲ್-ಶೂದ್ರ ಜಾತಿಗಳೂ ಸಹ ಭೂಮಾಲೀಕರ ಸ್ಥಾನಕ್ಕೇರಿದವು. ಅಲ್ಲಿಯವರೆಗೆ ದ್ವಿಜ-ಭೂಮಾಲೀಕರ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದ ಶೂದ್ರ-ದಲಿತರ ಜಾಗದಲ್ಲಿ ಭೂಸುಧಾರಣೆಯ ಬಳಿಕ ದಲಿತ ಕೂಲಿಗಳು ಏಕಾಂಗಿಯಾಗಿ ಸಿಕ್ಕಿಬಿದ್ದರು. ಈ ಕಾರಣದಿಂದಾಗಿ ದ್ವಿಜ ಹಾಗೂ ಮೇಲ್-ಶೂದ್ರ ಭೂಮಾಲೀಕರು ದಲಿತರನ್ನು ಹಾಗೂ ಕೆಳಶೂದ್ರ ಜಾತಿಗಳನ್ನು ಶೋಷಿಸಲು ಮುಂದುವರೆಸಿದರು. ಸ್ವತಂತ್ರ ಬಂದು ಸಂವಿಧಾನ ರಚನೆಯಾದ ಬಳಿಕವೂ ಬಿಹಾರದಲ್ಲಿ ಸರ್ಕಾರಗಳ ಬದಲು ಭೂಮಾಲೀಕರ ಸರ್ವಾಧಿಕಾರವೇ ಮುಂದುವರೆಯಿತು. ಈಗಲೂ ಆ ಪರಿಸ್ಥಿತಿಯಲ್ಲಿ ಅಂತಹ ಬದಲಾವಣೆ ಆಗಿಲ್ಲ.

ಈ ಮೇಲಿನ ಪರಿಣಾಮದಿಂದಾಗಿ ಬಿಹಾರ ಸರ್ಕಾರದ ಜಾಗದಲ್ಲಿ ಭೂಮಿಹಾರ್ ಜಾತಿಯವರ ರಣವೀರ ಸೇನೆ, ರಜಪೂತರ ಕುನ್ವಾರ್ ಸೇನೆ, ಬ್ರಹ್ಮಶ್ರೀ ಸೇನೆ, ಪಿಂಡಾವ ಗ್ಯಾಂಗ್, ಸನ್‌ಲೈಟ್ ಸೇನೆಗಳು ಭೂಮಾಲೀಕರ ಪರವಾಗಿ ಹುಟ್ಟಿಕೊಂಡು ದಲಿತ-ಶೂದ್ರ ಕೂಲಿಗಳನ್ನು ಶೋಷಿಸಿ ಬದುಕಿ ಬೆಳೆಯಲು ಆರಂಭಿಸಿದರು. ಸರ್ಕಾರದ ಮೇಲೆ ಸರ್ಕಾರಗಳು ಬಂದರೂ ಈ ಶೋಷಣೆಯನ್ನು ನಿಲ್ಲಿಸಲಾಗಲಿಲ್ಲ. ಏಕೆಂದರೆ ಆಯಾ ಸರ್ಕಾರಗಳಲ್ಲಿ ಈ ಭೂಮಾಲೀಕ ಜಾತಿಯವರೇ ತುಂಬಿಕೊಂಡಿದ್ದರು. ಆದ್ದರಿಂದಲೇ ಈ ಮೇಲಿನ ಭೂಮಾಲೀಕ ಸೇನೆಗಳನ್ನು ಮಣಿಸಲು ನಕ್ಸಲ್‌ಬರಿ ಹೋರಾಟ ರೂಪು ತಾಳಿತು. ಈ ದ್ವಿಜ ಭೂಮಾಲೀಕ ಸೇನೆಗಳನ್ನು ಎದುರಿಸಲು ಸಶಸ್ತ್ರ ಹೋರಾಟಗಳಿಗೆ ದಲಿತರೂ ಇಳಿದರು. ಭೂಮಾಲೀಕರು ಹಾಗೂ ದಲಿತ-ಶೂದ್ರ ಕೂಲಿಗಳ ನಡುವೆ ಮಾರಾಮಾರಿಗಳಾದವು. ಈ ಕಾರಣದಿಂದಾಗಿಯೇ ತದನಂತರ ಬಿಹಾರದಲ್ಲಿ ಭೂಮಿಯನ್ನು ದಲಿತರಿಗೆ ಹಂಚಲಾಯಿತು.

ಬಿಹಾರದ ಬೋಜಪುರ ಜಿಲ್ಲೆಯಲ್ಲಿ ಕೇವಲ 100 ಮೀಟರ್ ಅಂತರದಲ್ಲಿ ಎರಡು ಹಳ್ಳಿಗಳಿವೆ. ಒಂದು, ಭೂಮಿಹಾರ್ ಮತ್ತು ರಜಪೂತ ಭೂಮಾಲೀಕರು ನೆಲಸಿರುವ ಬಕ್ರಿ ಕಾರೋನ್ ಮತ್ತೊಂದು ದಲಿತರು ಹಾಗೂ ಮುಸ್ಲಿಮ್ ಕೃಷಿಕೂಲಿಗಳು ನೆಲೆಸಿರುವ ಬಥಾನಿ ತೋಲ. ಈ ಎರಡೂ ಹಳ್ಳಿಗಳ ನಡುವೆ ಇಂದಿಗೂ ವೈಷಮ್ಯ ಕುದಿಯುತ್ತಲೇ ಇದೆ. ಇಂದಿಗೂ ದಲಿತರು ಭೂಮಿಹಾರ್ ಭೂಮಾಲೀಕರ ಎದುರು ಚಪ್ಪಲಿ ಹಾಕುವಂತಿಲ್ಲ. ದಲಿತರು ಅಷ್ಟು ಭಯಭೀತರಾಗಿದ್ದಾರೆ. ಇದಕ್ಕೆ ಮೂಲಕಾರಣ ಜುಲೈ 11, 1996ರಂದು ನಡೆದ ಆ ನರಮೇಧ.

ಅಂದು ಬಕ್ರಿ ಕಾರೋನ್‌ನಿಂದ ಹೊರಟ ಭೂಮಾಲೀಕರ ರಣವೀರ ಸೇನೆ ಬಥಾನಿ ತೋಲ ಪ್ರವೇಶಿಸಿ ಸಿಕ್ಕಸಿಕ್ಕವರನ್ನು ಕೊಚ್ಚಿ ಕೊಂದಿತು. ಬಂದೂಕಿನಿಂದ ಸುಟ್ಟು ಸಾಯಿಸಿತು. ಈ ಮಾರಣಹೋಮ ಅದೆಷ್ಟು ಭೀಕರವಾಗಿತ್ತೆಂದರೆ, 18 ವರ್ಷದ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು! 25 ವರ್ಷದ ದಲಿತ ಮಹಿಳೆಯ ಮೊಲೆಗಳನ್ನು ಕತ್ತರಿಸಿ ಆಕೆಯನ್ನು ಕೊಲ್ಲಲಾಗಿತ್ತು! 9 ತಿಂಗಳ ದಲಿತ ಹೆಣ್ಣುಗೂಸನ್ನು ಮೇಲೆ ಗಾಳಿಯಲ್ಲಿ ಎಸೆದು ಕೆಳಗೆ ಬೀಳುವಾಗ ಕತ್ತಿಯಲ್ಲಿ ಕತ್ತರಿಸಿ ಎರಡು ಭಾಗ ಮಾಡಲಾಗಿತ್ತು! ದಲಿತ ಗರ್ಭಿಣಿ ಹೆಂಗಸಿನ ಗರ್ಭ ಬಗೆದು ಭ್ರೂಣ ಹೊರತೆಗೆದು ಕತ್ತರಿಸಿ ಬಿಸಾಕಲಾಗಿತ್ತು! ಈ ಘಟನೆ ನಡೆದಾಗ ಅಲ್ಲಿಯೇ ಒಂದು ಪೊಲೀಸ್ ತುಕಡಿ ಇತ್ತು. ಊರಿನ ಹೊರಭಾಗದಲ್ಲಿ ಎರಡು ಪೊಲೀಸ್ ತುಕಡಿಗಳಿದ್ದವು. ಆದರೆ ಈ ತುಕಡಿಗಳಾವುದಕ್ಕೂ ದಲಿತರನ್ನು ರಕ್ಷಿಸಲಾಗಲಿಲ್ಲ. ಈ ನರಮೇಧದಲ್ಲಿ ಹತರಾದದ್ದು 8 ಮಕ್ಕಳು, 12 ಮಹಿಳೆಯರು ಹಾಗೂ ಒಬ್ಬ ಗಂಡಸು ಸೇರಿದಂತೆ 21 ಕೃಷಿ ಕೂಲಿಗಳು.

ರಣವೀರ ಸೇನೆಯ ನಾಯಕ ಬ್ರಹ್ಮೇಶ್ವರ ಸಿಂಗ್ ಮುಖಯಾ ಈ ಬಗ್ಗೆ ಕೇಳಿದರೆ ಸ್ವಲ್ಪವೂ ವಿಷಾದವಿಲ್ಲದೆ ಮೀಸೆ ತಿರುವಿದನಂತೆ! ಆ ಗರ್ಭಿಣಿಯನ್ನು ಅಷ್ಟು ಕ್ರೂರವಾಗಿ ಏಕೆ ಕೊಂದಿರಿ ಎಂಬ ಪ್ರಶ್ನೆಗೆ ’ಆ ಗರ್ಭಿಣಿಯರು ನಕ್ಸಲೈಟರನ್ನು ಹಡೆಯುತ್ತಾರೆ. ಅದಕ್ಕೆ ಕೊಂದೆವು’ ಎಂದು ನಕ್ಕಿದನಂತೆ. ಆ ಮಕ್ಕಳನ್ನು ಏಕೆ ಕೊಂದಿರಿ ಎಂದದ್ದಕ್ಕೆ ’ಅವರು ಬೆಳೆದು ದೊಡ್ಡವರಾಗಿ ನಕ್ಸಲೈಟರಾಗುತ್ತಾರೆ’ ಎಂದನಂತೆ. ಇಂತಹವನ ಮುಖ್ಯಸ್ಥಿಕೆಯಲ್ಲಿ ರಣವೀರ ಸೇನೆ 227 ದಲಿತ ಕೃಷಿ ಕೂಲಿಗಳನ್ನು ಬಲಿ ತೆಗೆದುಕೊಂಡಿದೆ.

ಬತಾನಿ ತೋಲದಲ್ಲಿ ದಲಿತ ಕೃಷಿಕೂಲಿಗಳನ್ನು ಕೊಲ್ಲಲು ಇದ್ದ ಕಾರಣವಿಷ್ಟೆ. ಆ ದಲಿತ ಕೂಲಿಗಳ ಮೇಲೆ ಈ ಭೂಮಾಲೀಕರು ದೌರ್ಜನ್ಯವೆಸಗಿದರೆ, ಕಡಿಮೆ ಕೂಲಿ ಕೊಟ್ಟರೆ ನಕ್ಸಲೈಟರಿಗೆ ಹೇಳಿ ಭೂಮಾಲಿಕರಿಗೆ ಬೆದರಿಕೆ ಹಾಕಿಸುತ್ತಾರೆ ಎಂಬುದು. ಇದು ನಿಜವೂ ಸಹ. ಏಕೆಂದರೆ ಬಿಹಾರದಲ್ಲಿ ಸರ್ಕಾರವೆಲ್ಲಿತ್ತು! ಸರ್ಕಾರ ಕೈಕಟ್ಟಿ ಕುಳಿತಾಗ ಬಡಜನತೆ ರಾಬಿನ್‌ಹುಡ್‌ಗಾಗಿ ಕಾಯುತ್ತಾರೆ. ಆ ರಾಬಿನ್‌ಹುಡ್‌ಅನ್ನು ದಲಿತ ಕೃಷಿಕೂಲಿಗಳು ನಕ್ಸಲೈಟರಲ್ಲಿ ಕಂಡುಕೊಂಡಿದ್ದರು. ಹಲವು ಬಾರಿ ಸ್ವತಃ ರಾಬಿನ್‌ಹುಡ್‌ಗಳಾಗಿದ್ದರು. ನಕ್ಸಲೈಟರನ್ನು ನಂಬಿದ್ದಕ್ಕೆ ಹಲವು ದಲಿತ ಕುಟುಂಬಗಳಿಗೆ ಭೂಮಿಯೂ ದಕ್ಕಿದೆ. ಸಶಸ್ತ್ರ ಹೋರಾಟಗಾರರನ್ನು ನಂಬಲು ದಲಿತರೇನು ದಡ್ಡರಲ್ಲ. ಅದಕ್ಕೆ ಮುಖ್ಯ ಕಾರಣ ಶೋಷಕರನ್ನು ದಮನಿಸಬೇಕಾದ ಸರ್ಕಾರಗಳು ಅವರೊಂದಿಗೇ ಕೈ ಮಿಲಾಯಿಸಿದಾಗ ಇಂತಹ ಅಸಹಾಯಕ ನಡೆಗಳು ತೆರೆದುಕೊಳ್ಳುತ್ತವೆ.

ಬಥಾನಿ ತೋಲ ಹತ್ಯಾಕಾಂಡದ ಆರೋಪಿಗಳನ್ನು ಅಪರಾಧಿಗಳೆಂದು ಸೆಷೆನ್ ಕೋರ್ಟ್ ತೀರ್ಪಿತ್ತಿತಾದರೂ ಹೈಕೋರ್ಟ್ ಸಾಕ್ಷಿಗಳ ಮಾತುಗಳನ್ನೇ ಪರಿಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಅಪರಾಧಿಗಳನ್ನು ಖುಲಾಸೆಗೊಳಿಸಿತು. 2002ರಲ್ಲಿ ಭೂಮಿಹಾರ್ ಸಂಘಟನೆಯನ್ನು ನಿಷೇಧಿಸಿದ ಬಿಹಾರ್ ಸರ್ಕಾರ ಬ್ರಹ್ಮೇಶ್ವರ ಸಿಂಗ್ ವಿರುದ್ಧ ಇದ್ದ 17 ಕೇಸುಗಳಲ್ಲಿ ಅವನನ್ನು 9 ವರ್ಷ ಜೈಲಿಗೆ ನೂಕಿತು. ತದನಂತರ ಜಾಮೀನು ಪಡೆದು ಹೊರಬಂದ ಅವನನ್ನು ಮುಸುಕುಧಾರಿಗಳು ಬೀದಿಯಲ್ಲಿ ಕೊಂದುಹಾಕಿದರು. 2012ರಲ್ಲಿ ನಡೆದ ಈ ಘಟನೆಗೆ ಲಾಲೂಪ್ರಸಾದ್ ಯಾದವ್, ಕಾಂಗ್ರೆಸ್ ಪಾರ್ಟಿ, ರಾಮ್ ವಿಲಾಸ್ ಪಾಸ್ವಾನ್ ಎಲ್ಲರೂ ಕಣ್ಣೀರಾಗಿದ್ದರು. ಈತನ ಅಂತ್ಯ ಸಂಸ್ಕಾರಕ್ಕೆ ಬಿ.ಜೆ.ಪಿ ಶಾಸಕ ಸಿ.ಪಿ.ಠಾಕೂರ್ ಹಾಗೂ ಬಿಹಾರದ ಮಂತ್ರಿಗಳು ಹಾಜರಿದ್ದರು.

ಇಂದಿಗೂ ಬಥಾನಿ ತೋಲ ಕೇಸು ಸುಪ್ರೀಂ ಕೋರ್ಟಿನಲ್ಲಿ ಧೂಳು ತಿನ್ನುತ್ತಿದೆ.


ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...