Homeಅಂಕಣಗಳುಮಾತು ಮರೆತ ಭಾರತ; ಬಥಾನಿ ತೋಲ ಫೈಲ್: ತಿರುಗಿಬಿದ್ದರೆ ತಲೆದಂಡ

ಮಾತು ಮರೆತ ಭಾರತ; ಬಥಾನಿ ತೋಲ ಫೈಲ್: ತಿರುಗಿಬಿದ್ದರೆ ತಲೆದಂಡ

- Advertisement -
- Advertisement -

ಭಾರತದ ಜಾತೀಯ ಫ್ಯೂಡಲಿಸಂ ಹೇಗಿರುತ್ತದೆ ಎಂಬ ಉದಾಹರಣೆಗೆ ಬಿಹಾರ ರಾಜ್ಯಕ್ಕಿಂತಲೂ ಕರಾಳ ಉದಾಹರಣೆ ಮತ್ತೊಂದು ಇರಲಾರದು. ಜಾತೀಯ ಫ್ಯೂಡಲಿಸಂ ಮಧ್ಯಕಾಲೀನ ಇಡೀ ಭಾರತದ ವಿದ್ಯಮಾನವಾದರೂ ಕಣ್ಣಿಗೆ ರಾಚುವಂತೆ ಇಂದಿಗೂ ಅದರ ಲಕ್ಷಣಗಳನ್ನು ಮೈದೆಳೆದು ನಿಂತಿರುವ ರಾಜ್ಯ ಬಿಹಾರ. ಸ್ವತಂತ್ರ ಭಾರತದಲ್ಲಿ ಅತ್ಯಂತ ಭೀಕರವಾದ ದಲಿತರ ಹತ್ಯಾಕಾಂಡಗಳು ನಡೆದಿರುವುದೂ ಸಹ ಈ ಕಾರಣಕ್ಕಾಗಿಯೇ. ಬ್ರಿಟಿಷರಿಂದ ಭಾರತಕ್ಕೆ ದೊರೆತ ಸ್ವಾತಂತ್ರ್ಯ ನೇರವಾಗಿ ದ್ವಿಜ ಭೂಮಾಲೀಕರ ಕೈಗೆ ಹೋಯಿತು. ಭೂಸುಧಾರಣೆಯಿಂದಾಗಿ ಮೇಲ್-ಶೂದ್ರ ಜಾತಿಗಳೂ ಸಹ ಭೂಮಾಲೀಕರ ಸ್ಥಾನಕ್ಕೇರಿದವು. ಅಲ್ಲಿಯವರೆಗೆ ದ್ವಿಜ-ಭೂಮಾಲೀಕರ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದ ಶೂದ್ರ-ದಲಿತರ ಜಾಗದಲ್ಲಿ ಭೂಸುಧಾರಣೆಯ ಬಳಿಕ ದಲಿತ ಕೂಲಿಗಳು ಏಕಾಂಗಿಯಾಗಿ ಸಿಕ್ಕಿಬಿದ್ದರು. ಈ ಕಾರಣದಿಂದಾಗಿ ದ್ವಿಜ ಹಾಗೂ ಮೇಲ್-ಶೂದ್ರ ಭೂಮಾಲೀಕರು ದಲಿತರನ್ನು ಹಾಗೂ ಕೆಳಶೂದ್ರ ಜಾತಿಗಳನ್ನು ಶೋಷಿಸಲು ಮುಂದುವರೆಸಿದರು. ಸ್ವತಂತ್ರ ಬಂದು ಸಂವಿಧಾನ ರಚನೆಯಾದ ಬಳಿಕವೂ ಬಿಹಾರದಲ್ಲಿ ಸರ್ಕಾರಗಳ ಬದಲು ಭೂಮಾಲೀಕರ ಸರ್ವಾಧಿಕಾರವೇ ಮುಂದುವರೆಯಿತು. ಈಗಲೂ ಆ ಪರಿಸ್ಥಿತಿಯಲ್ಲಿ ಅಂತಹ ಬದಲಾವಣೆ ಆಗಿಲ್ಲ.

ಈ ಮೇಲಿನ ಪರಿಣಾಮದಿಂದಾಗಿ ಬಿಹಾರ ಸರ್ಕಾರದ ಜಾಗದಲ್ಲಿ ಭೂಮಿಹಾರ್ ಜಾತಿಯವರ ರಣವೀರ ಸೇನೆ, ರಜಪೂತರ ಕುನ್ವಾರ್ ಸೇನೆ, ಬ್ರಹ್ಮಶ್ರೀ ಸೇನೆ, ಪಿಂಡಾವ ಗ್ಯಾಂಗ್, ಸನ್‌ಲೈಟ್ ಸೇನೆಗಳು ಭೂಮಾಲೀಕರ ಪರವಾಗಿ ಹುಟ್ಟಿಕೊಂಡು ದಲಿತ-ಶೂದ್ರ ಕೂಲಿಗಳನ್ನು ಶೋಷಿಸಿ ಬದುಕಿ ಬೆಳೆಯಲು ಆರಂಭಿಸಿದರು. ಸರ್ಕಾರದ ಮೇಲೆ ಸರ್ಕಾರಗಳು ಬಂದರೂ ಈ ಶೋಷಣೆಯನ್ನು ನಿಲ್ಲಿಸಲಾಗಲಿಲ್ಲ. ಏಕೆಂದರೆ ಆಯಾ ಸರ್ಕಾರಗಳಲ್ಲಿ ಈ ಭೂಮಾಲೀಕ ಜಾತಿಯವರೇ ತುಂಬಿಕೊಂಡಿದ್ದರು. ಆದ್ದರಿಂದಲೇ ಈ ಮೇಲಿನ ಭೂಮಾಲೀಕ ಸೇನೆಗಳನ್ನು ಮಣಿಸಲು ನಕ್ಸಲ್‌ಬರಿ ಹೋರಾಟ ರೂಪು ತಾಳಿತು. ಈ ದ್ವಿಜ ಭೂಮಾಲೀಕ ಸೇನೆಗಳನ್ನು ಎದುರಿಸಲು ಸಶಸ್ತ್ರ ಹೋರಾಟಗಳಿಗೆ ದಲಿತರೂ ಇಳಿದರು. ಭೂಮಾಲೀಕರು ಹಾಗೂ ದಲಿತ-ಶೂದ್ರ ಕೂಲಿಗಳ ನಡುವೆ ಮಾರಾಮಾರಿಗಳಾದವು. ಈ ಕಾರಣದಿಂದಾಗಿಯೇ ತದನಂತರ ಬಿಹಾರದಲ್ಲಿ ಭೂಮಿಯನ್ನು ದಲಿತರಿಗೆ ಹಂಚಲಾಯಿತು.

ಬಿಹಾರದ ಬೋಜಪುರ ಜಿಲ್ಲೆಯಲ್ಲಿ ಕೇವಲ 100 ಮೀಟರ್ ಅಂತರದಲ್ಲಿ ಎರಡು ಹಳ್ಳಿಗಳಿವೆ. ಒಂದು, ಭೂಮಿಹಾರ್ ಮತ್ತು ರಜಪೂತ ಭೂಮಾಲೀಕರು ನೆಲಸಿರುವ ಬಕ್ರಿ ಕಾರೋನ್ ಮತ್ತೊಂದು ದಲಿತರು ಹಾಗೂ ಮುಸ್ಲಿಮ್ ಕೃಷಿಕೂಲಿಗಳು ನೆಲೆಸಿರುವ ಬಥಾನಿ ತೋಲ. ಈ ಎರಡೂ ಹಳ್ಳಿಗಳ ನಡುವೆ ಇಂದಿಗೂ ವೈಷಮ್ಯ ಕುದಿಯುತ್ತಲೇ ಇದೆ. ಇಂದಿಗೂ ದಲಿತರು ಭೂಮಿಹಾರ್ ಭೂಮಾಲೀಕರ ಎದುರು ಚಪ್ಪಲಿ ಹಾಕುವಂತಿಲ್ಲ. ದಲಿತರು ಅಷ್ಟು ಭಯಭೀತರಾಗಿದ್ದಾರೆ. ಇದಕ್ಕೆ ಮೂಲಕಾರಣ ಜುಲೈ 11, 1996ರಂದು ನಡೆದ ಆ ನರಮೇಧ.

ಅಂದು ಬಕ್ರಿ ಕಾರೋನ್‌ನಿಂದ ಹೊರಟ ಭೂಮಾಲೀಕರ ರಣವೀರ ಸೇನೆ ಬಥಾನಿ ತೋಲ ಪ್ರವೇಶಿಸಿ ಸಿಕ್ಕಸಿಕ್ಕವರನ್ನು ಕೊಚ್ಚಿ ಕೊಂದಿತು. ಬಂದೂಕಿನಿಂದ ಸುಟ್ಟು ಸಾಯಿಸಿತು. ಈ ಮಾರಣಹೋಮ ಅದೆಷ್ಟು ಭೀಕರವಾಗಿತ್ತೆಂದರೆ, 18 ವರ್ಷದ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು! 25 ವರ್ಷದ ದಲಿತ ಮಹಿಳೆಯ ಮೊಲೆಗಳನ್ನು ಕತ್ತರಿಸಿ ಆಕೆಯನ್ನು ಕೊಲ್ಲಲಾಗಿತ್ತು! 9 ತಿಂಗಳ ದಲಿತ ಹೆಣ್ಣುಗೂಸನ್ನು ಮೇಲೆ ಗಾಳಿಯಲ್ಲಿ ಎಸೆದು ಕೆಳಗೆ ಬೀಳುವಾಗ ಕತ್ತಿಯಲ್ಲಿ ಕತ್ತರಿಸಿ ಎರಡು ಭಾಗ ಮಾಡಲಾಗಿತ್ತು! ದಲಿತ ಗರ್ಭಿಣಿ ಹೆಂಗಸಿನ ಗರ್ಭ ಬಗೆದು ಭ್ರೂಣ ಹೊರತೆಗೆದು ಕತ್ತರಿಸಿ ಬಿಸಾಕಲಾಗಿತ್ತು! ಈ ಘಟನೆ ನಡೆದಾಗ ಅಲ್ಲಿಯೇ ಒಂದು ಪೊಲೀಸ್ ತುಕಡಿ ಇತ್ತು. ಊರಿನ ಹೊರಭಾಗದಲ್ಲಿ ಎರಡು ಪೊಲೀಸ್ ತುಕಡಿಗಳಿದ್ದವು. ಆದರೆ ಈ ತುಕಡಿಗಳಾವುದಕ್ಕೂ ದಲಿತರನ್ನು ರಕ್ಷಿಸಲಾಗಲಿಲ್ಲ. ಈ ನರಮೇಧದಲ್ಲಿ ಹತರಾದದ್ದು 8 ಮಕ್ಕಳು, 12 ಮಹಿಳೆಯರು ಹಾಗೂ ಒಬ್ಬ ಗಂಡಸು ಸೇರಿದಂತೆ 21 ಕೃಷಿ ಕೂಲಿಗಳು.

ರಣವೀರ ಸೇನೆಯ ನಾಯಕ ಬ್ರಹ್ಮೇಶ್ವರ ಸಿಂಗ್ ಮುಖಯಾ ಈ ಬಗ್ಗೆ ಕೇಳಿದರೆ ಸ್ವಲ್ಪವೂ ವಿಷಾದವಿಲ್ಲದೆ ಮೀಸೆ ತಿರುವಿದನಂತೆ! ಆ ಗರ್ಭಿಣಿಯನ್ನು ಅಷ್ಟು ಕ್ರೂರವಾಗಿ ಏಕೆ ಕೊಂದಿರಿ ಎಂಬ ಪ್ರಶ್ನೆಗೆ ’ಆ ಗರ್ಭಿಣಿಯರು ನಕ್ಸಲೈಟರನ್ನು ಹಡೆಯುತ್ತಾರೆ. ಅದಕ್ಕೆ ಕೊಂದೆವು’ ಎಂದು ನಕ್ಕಿದನಂತೆ. ಆ ಮಕ್ಕಳನ್ನು ಏಕೆ ಕೊಂದಿರಿ ಎಂದದ್ದಕ್ಕೆ ’ಅವರು ಬೆಳೆದು ದೊಡ್ಡವರಾಗಿ ನಕ್ಸಲೈಟರಾಗುತ್ತಾರೆ’ ಎಂದನಂತೆ. ಇಂತಹವನ ಮುಖ್ಯಸ್ಥಿಕೆಯಲ್ಲಿ ರಣವೀರ ಸೇನೆ 227 ದಲಿತ ಕೃಷಿ ಕೂಲಿಗಳನ್ನು ಬಲಿ ತೆಗೆದುಕೊಂಡಿದೆ.

ಬತಾನಿ ತೋಲದಲ್ಲಿ ದಲಿತ ಕೃಷಿಕೂಲಿಗಳನ್ನು ಕೊಲ್ಲಲು ಇದ್ದ ಕಾರಣವಿಷ್ಟೆ. ಆ ದಲಿತ ಕೂಲಿಗಳ ಮೇಲೆ ಈ ಭೂಮಾಲೀಕರು ದೌರ್ಜನ್ಯವೆಸಗಿದರೆ, ಕಡಿಮೆ ಕೂಲಿ ಕೊಟ್ಟರೆ ನಕ್ಸಲೈಟರಿಗೆ ಹೇಳಿ ಭೂಮಾಲಿಕರಿಗೆ ಬೆದರಿಕೆ ಹಾಕಿಸುತ್ತಾರೆ ಎಂಬುದು. ಇದು ನಿಜವೂ ಸಹ. ಏಕೆಂದರೆ ಬಿಹಾರದಲ್ಲಿ ಸರ್ಕಾರವೆಲ್ಲಿತ್ತು! ಸರ್ಕಾರ ಕೈಕಟ್ಟಿ ಕುಳಿತಾಗ ಬಡಜನತೆ ರಾಬಿನ್‌ಹುಡ್‌ಗಾಗಿ ಕಾಯುತ್ತಾರೆ. ಆ ರಾಬಿನ್‌ಹುಡ್‌ಅನ್ನು ದಲಿತ ಕೃಷಿಕೂಲಿಗಳು ನಕ್ಸಲೈಟರಲ್ಲಿ ಕಂಡುಕೊಂಡಿದ್ದರು. ಹಲವು ಬಾರಿ ಸ್ವತಃ ರಾಬಿನ್‌ಹುಡ್‌ಗಳಾಗಿದ್ದರು. ನಕ್ಸಲೈಟರನ್ನು ನಂಬಿದ್ದಕ್ಕೆ ಹಲವು ದಲಿತ ಕುಟುಂಬಗಳಿಗೆ ಭೂಮಿಯೂ ದಕ್ಕಿದೆ. ಸಶಸ್ತ್ರ ಹೋರಾಟಗಾರರನ್ನು ನಂಬಲು ದಲಿತರೇನು ದಡ್ಡರಲ್ಲ. ಅದಕ್ಕೆ ಮುಖ್ಯ ಕಾರಣ ಶೋಷಕರನ್ನು ದಮನಿಸಬೇಕಾದ ಸರ್ಕಾರಗಳು ಅವರೊಂದಿಗೇ ಕೈ ಮಿಲಾಯಿಸಿದಾಗ ಇಂತಹ ಅಸಹಾಯಕ ನಡೆಗಳು ತೆರೆದುಕೊಳ್ಳುತ್ತವೆ.

ಬಥಾನಿ ತೋಲ ಹತ್ಯಾಕಾಂಡದ ಆರೋಪಿಗಳನ್ನು ಅಪರಾಧಿಗಳೆಂದು ಸೆಷೆನ್ ಕೋರ್ಟ್ ತೀರ್ಪಿತ್ತಿತಾದರೂ ಹೈಕೋರ್ಟ್ ಸಾಕ್ಷಿಗಳ ಮಾತುಗಳನ್ನೇ ಪರಿಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಅಪರಾಧಿಗಳನ್ನು ಖುಲಾಸೆಗೊಳಿಸಿತು. 2002ರಲ್ಲಿ ಭೂಮಿಹಾರ್ ಸಂಘಟನೆಯನ್ನು ನಿಷೇಧಿಸಿದ ಬಿಹಾರ್ ಸರ್ಕಾರ ಬ್ರಹ್ಮೇಶ್ವರ ಸಿಂಗ್ ವಿರುದ್ಧ ಇದ್ದ 17 ಕೇಸುಗಳಲ್ಲಿ ಅವನನ್ನು 9 ವರ್ಷ ಜೈಲಿಗೆ ನೂಕಿತು. ತದನಂತರ ಜಾಮೀನು ಪಡೆದು ಹೊರಬಂದ ಅವನನ್ನು ಮುಸುಕುಧಾರಿಗಳು ಬೀದಿಯಲ್ಲಿ ಕೊಂದುಹಾಕಿದರು. 2012ರಲ್ಲಿ ನಡೆದ ಈ ಘಟನೆಗೆ ಲಾಲೂಪ್ರಸಾದ್ ಯಾದವ್, ಕಾಂಗ್ರೆಸ್ ಪಾರ್ಟಿ, ರಾಮ್ ವಿಲಾಸ್ ಪಾಸ್ವಾನ್ ಎಲ್ಲರೂ ಕಣ್ಣೀರಾಗಿದ್ದರು. ಈತನ ಅಂತ್ಯ ಸಂಸ್ಕಾರಕ್ಕೆ ಬಿ.ಜೆ.ಪಿ ಶಾಸಕ ಸಿ.ಪಿ.ಠಾಕೂರ್ ಹಾಗೂ ಬಿಹಾರದ ಮಂತ್ರಿಗಳು ಹಾಜರಿದ್ದರು.

ಇಂದಿಗೂ ಬಥಾನಿ ತೋಲ ಕೇಸು ಸುಪ್ರೀಂ ಕೋರ್ಟಿನಲ್ಲಿ ಧೂಳು ತಿನ್ನುತ್ತಿದೆ.


ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...