Homeಅಂಕಣಗಳುಮಾತು ಮರೆತ ಭಾರತ; ಬಥಾನಿ ತೋಲ ಫೈಲ್: ತಿರುಗಿಬಿದ್ದರೆ ತಲೆದಂಡ

ಮಾತು ಮರೆತ ಭಾರತ; ಬಥಾನಿ ತೋಲ ಫೈಲ್: ತಿರುಗಿಬಿದ್ದರೆ ತಲೆದಂಡ

- Advertisement -
- Advertisement -

ಭಾರತದ ಜಾತೀಯ ಫ್ಯೂಡಲಿಸಂ ಹೇಗಿರುತ್ತದೆ ಎಂಬ ಉದಾಹರಣೆಗೆ ಬಿಹಾರ ರಾಜ್ಯಕ್ಕಿಂತಲೂ ಕರಾಳ ಉದಾಹರಣೆ ಮತ್ತೊಂದು ಇರಲಾರದು. ಜಾತೀಯ ಫ್ಯೂಡಲಿಸಂ ಮಧ್ಯಕಾಲೀನ ಇಡೀ ಭಾರತದ ವಿದ್ಯಮಾನವಾದರೂ ಕಣ್ಣಿಗೆ ರಾಚುವಂತೆ ಇಂದಿಗೂ ಅದರ ಲಕ್ಷಣಗಳನ್ನು ಮೈದೆಳೆದು ನಿಂತಿರುವ ರಾಜ್ಯ ಬಿಹಾರ. ಸ್ವತಂತ್ರ ಭಾರತದಲ್ಲಿ ಅತ್ಯಂತ ಭೀಕರವಾದ ದಲಿತರ ಹತ್ಯಾಕಾಂಡಗಳು ನಡೆದಿರುವುದೂ ಸಹ ಈ ಕಾರಣಕ್ಕಾಗಿಯೇ. ಬ್ರಿಟಿಷರಿಂದ ಭಾರತಕ್ಕೆ ದೊರೆತ ಸ್ವಾತಂತ್ರ್ಯ ನೇರವಾಗಿ ದ್ವಿಜ ಭೂಮಾಲೀಕರ ಕೈಗೆ ಹೋಯಿತು. ಭೂಸುಧಾರಣೆಯಿಂದಾಗಿ ಮೇಲ್-ಶೂದ್ರ ಜಾತಿಗಳೂ ಸಹ ಭೂಮಾಲೀಕರ ಸ್ಥಾನಕ್ಕೇರಿದವು. ಅಲ್ಲಿಯವರೆಗೆ ದ್ವಿಜ-ಭೂಮಾಲೀಕರ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದ ಶೂದ್ರ-ದಲಿತರ ಜಾಗದಲ್ಲಿ ಭೂಸುಧಾರಣೆಯ ಬಳಿಕ ದಲಿತ ಕೂಲಿಗಳು ಏಕಾಂಗಿಯಾಗಿ ಸಿಕ್ಕಿಬಿದ್ದರು. ಈ ಕಾರಣದಿಂದಾಗಿ ದ್ವಿಜ ಹಾಗೂ ಮೇಲ್-ಶೂದ್ರ ಭೂಮಾಲೀಕರು ದಲಿತರನ್ನು ಹಾಗೂ ಕೆಳಶೂದ್ರ ಜಾತಿಗಳನ್ನು ಶೋಷಿಸಲು ಮುಂದುವರೆಸಿದರು. ಸ್ವತಂತ್ರ ಬಂದು ಸಂವಿಧಾನ ರಚನೆಯಾದ ಬಳಿಕವೂ ಬಿಹಾರದಲ್ಲಿ ಸರ್ಕಾರಗಳ ಬದಲು ಭೂಮಾಲೀಕರ ಸರ್ವಾಧಿಕಾರವೇ ಮುಂದುವರೆಯಿತು. ಈಗಲೂ ಆ ಪರಿಸ್ಥಿತಿಯಲ್ಲಿ ಅಂತಹ ಬದಲಾವಣೆ ಆಗಿಲ್ಲ.

ಈ ಮೇಲಿನ ಪರಿಣಾಮದಿಂದಾಗಿ ಬಿಹಾರ ಸರ್ಕಾರದ ಜಾಗದಲ್ಲಿ ಭೂಮಿಹಾರ್ ಜಾತಿಯವರ ರಣವೀರ ಸೇನೆ, ರಜಪೂತರ ಕುನ್ವಾರ್ ಸೇನೆ, ಬ್ರಹ್ಮಶ್ರೀ ಸೇನೆ, ಪಿಂಡಾವ ಗ್ಯಾಂಗ್, ಸನ್‌ಲೈಟ್ ಸೇನೆಗಳು ಭೂಮಾಲೀಕರ ಪರವಾಗಿ ಹುಟ್ಟಿಕೊಂಡು ದಲಿತ-ಶೂದ್ರ ಕೂಲಿಗಳನ್ನು ಶೋಷಿಸಿ ಬದುಕಿ ಬೆಳೆಯಲು ಆರಂಭಿಸಿದರು. ಸರ್ಕಾರದ ಮೇಲೆ ಸರ್ಕಾರಗಳು ಬಂದರೂ ಈ ಶೋಷಣೆಯನ್ನು ನಿಲ್ಲಿಸಲಾಗಲಿಲ್ಲ. ಏಕೆಂದರೆ ಆಯಾ ಸರ್ಕಾರಗಳಲ್ಲಿ ಈ ಭೂಮಾಲೀಕ ಜಾತಿಯವರೇ ತುಂಬಿಕೊಂಡಿದ್ದರು. ಆದ್ದರಿಂದಲೇ ಈ ಮೇಲಿನ ಭೂಮಾಲೀಕ ಸೇನೆಗಳನ್ನು ಮಣಿಸಲು ನಕ್ಸಲ್‌ಬರಿ ಹೋರಾಟ ರೂಪು ತಾಳಿತು. ಈ ದ್ವಿಜ ಭೂಮಾಲೀಕ ಸೇನೆಗಳನ್ನು ಎದುರಿಸಲು ಸಶಸ್ತ್ರ ಹೋರಾಟಗಳಿಗೆ ದಲಿತರೂ ಇಳಿದರು. ಭೂಮಾಲೀಕರು ಹಾಗೂ ದಲಿತ-ಶೂದ್ರ ಕೂಲಿಗಳ ನಡುವೆ ಮಾರಾಮಾರಿಗಳಾದವು. ಈ ಕಾರಣದಿಂದಾಗಿಯೇ ತದನಂತರ ಬಿಹಾರದಲ್ಲಿ ಭೂಮಿಯನ್ನು ದಲಿತರಿಗೆ ಹಂಚಲಾಯಿತು.

ಬಿಹಾರದ ಬೋಜಪುರ ಜಿಲ್ಲೆಯಲ್ಲಿ ಕೇವಲ 100 ಮೀಟರ್ ಅಂತರದಲ್ಲಿ ಎರಡು ಹಳ್ಳಿಗಳಿವೆ. ಒಂದು, ಭೂಮಿಹಾರ್ ಮತ್ತು ರಜಪೂತ ಭೂಮಾಲೀಕರು ನೆಲಸಿರುವ ಬಕ್ರಿ ಕಾರೋನ್ ಮತ್ತೊಂದು ದಲಿತರು ಹಾಗೂ ಮುಸ್ಲಿಮ್ ಕೃಷಿಕೂಲಿಗಳು ನೆಲೆಸಿರುವ ಬಥಾನಿ ತೋಲ. ಈ ಎರಡೂ ಹಳ್ಳಿಗಳ ನಡುವೆ ಇಂದಿಗೂ ವೈಷಮ್ಯ ಕುದಿಯುತ್ತಲೇ ಇದೆ. ಇಂದಿಗೂ ದಲಿತರು ಭೂಮಿಹಾರ್ ಭೂಮಾಲೀಕರ ಎದುರು ಚಪ್ಪಲಿ ಹಾಕುವಂತಿಲ್ಲ. ದಲಿತರು ಅಷ್ಟು ಭಯಭೀತರಾಗಿದ್ದಾರೆ. ಇದಕ್ಕೆ ಮೂಲಕಾರಣ ಜುಲೈ 11, 1996ರಂದು ನಡೆದ ಆ ನರಮೇಧ.

ಅಂದು ಬಕ್ರಿ ಕಾರೋನ್‌ನಿಂದ ಹೊರಟ ಭೂಮಾಲೀಕರ ರಣವೀರ ಸೇನೆ ಬಥಾನಿ ತೋಲ ಪ್ರವೇಶಿಸಿ ಸಿಕ್ಕಸಿಕ್ಕವರನ್ನು ಕೊಚ್ಚಿ ಕೊಂದಿತು. ಬಂದೂಕಿನಿಂದ ಸುಟ್ಟು ಸಾಯಿಸಿತು. ಈ ಮಾರಣಹೋಮ ಅದೆಷ್ಟು ಭೀಕರವಾಗಿತ್ತೆಂದರೆ, 18 ವರ್ಷದ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು! 25 ವರ್ಷದ ದಲಿತ ಮಹಿಳೆಯ ಮೊಲೆಗಳನ್ನು ಕತ್ತರಿಸಿ ಆಕೆಯನ್ನು ಕೊಲ್ಲಲಾಗಿತ್ತು! 9 ತಿಂಗಳ ದಲಿತ ಹೆಣ್ಣುಗೂಸನ್ನು ಮೇಲೆ ಗಾಳಿಯಲ್ಲಿ ಎಸೆದು ಕೆಳಗೆ ಬೀಳುವಾಗ ಕತ್ತಿಯಲ್ಲಿ ಕತ್ತರಿಸಿ ಎರಡು ಭಾಗ ಮಾಡಲಾಗಿತ್ತು! ದಲಿತ ಗರ್ಭಿಣಿ ಹೆಂಗಸಿನ ಗರ್ಭ ಬಗೆದು ಭ್ರೂಣ ಹೊರತೆಗೆದು ಕತ್ತರಿಸಿ ಬಿಸಾಕಲಾಗಿತ್ತು! ಈ ಘಟನೆ ನಡೆದಾಗ ಅಲ್ಲಿಯೇ ಒಂದು ಪೊಲೀಸ್ ತುಕಡಿ ಇತ್ತು. ಊರಿನ ಹೊರಭಾಗದಲ್ಲಿ ಎರಡು ಪೊಲೀಸ್ ತುಕಡಿಗಳಿದ್ದವು. ಆದರೆ ಈ ತುಕಡಿಗಳಾವುದಕ್ಕೂ ದಲಿತರನ್ನು ರಕ್ಷಿಸಲಾಗಲಿಲ್ಲ. ಈ ನರಮೇಧದಲ್ಲಿ ಹತರಾದದ್ದು 8 ಮಕ್ಕಳು, 12 ಮಹಿಳೆಯರು ಹಾಗೂ ಒಬ್ಬ ಗಂಡಸು ಸೇರಿದಂತೆ 21 ಕೃಷಿ ಕೂಲಿಗಳು.

ರಣವೀರ ಸೇನೆಯ ನಾಯಕ ಬ್ರಹ್ಮೇಶ್ವರ ಸಿಂಗ್ ಮುಖಯಾ ಈ ಬಗ್ಗೆ ಕೇಳಿದರೆ ಸ್ವಲ್ಪವೂ ವಿಷಾದವಿಲ್ಲದೆ ಮೀಸೆ ತಿರುವಿದನಂತೆ! ಆ ಗರ್ಭಿಣಿಯನ್ನು ಅಷ್ಟು ಕ್ರೂರವಾಗಿ ಏಕೆ ಕೊಂದಿರಿ ಎಂಬ ಪ್ರಶ್ನೆಗೆ ’ಆ ಗರ್ಭಿಣಿಯರು ನಕ್ಸಲೈಟರನ್ನು ಹಡೆಯುತ್ತಾರೆ. ಅದಕ್ಕೆ ಕೊಂದೆವು’ ಎಂದು ನಕ್ಕಿದನಂತೆ. ಆ ಮಕ್ಕಳನ್ನು ಏಕೆ ಕೊಂದಿರಿ ಎಂದದ್ದಕ್ಕೆ ’ಅವರು ಬೆಳೆದು ದೊಡ್ಡವರಾಗಿ ನಕ್ಸಲೈಟರಾಗುತ್ತಾರೆ’ ಎಂದನಂತೆ. ಇಂತಹವನ ಮುಖ್ಯಸ್ಥಿಕೆಯಲ್ಲಿ ರಣವೀರ ಸೇನೆ 227 ದಲಿತ ಕೃಷಿ ಕೂಲಿಗಳನ್ನು ಬಲಿ ತೆಗೆದುಕೊಂಡಿದೆ.

ಬತಾನಿ ತೋಲದಲ್ಲಿ ದಲಿತ ಕೃಷಿಕೂಲಿಗಳನ್ನು ಕೊಲ್ಲಲು ಇದ್ದ ಕಾರಣವಿಷ್ಟೆ. ಆ ದಲಿತ ಕೂಲಿಗಳ ಮೇಲೆ ಈ ಭೂಮಾಲೀಕರು ದೌರ್ಜನ್ಯವೆಸಗಿದರೆ, ಕಡಿಮೆ ಕೂಲಿ ಕೊಟ್ಟರೆ ನಕ್ಸಲೈಟರಿಗೆ ಹೇಳಿ ಭೂಮಾಲಿಕರಿಗೆ ಬೆದರಿಕೆ ಹಾಕಿಸುತ್ತಾರೆ ಎಂಬುದು. ಇದು ನಿಜವೂ ಸಹ. ಏಕೆಂದರೆ ಬಿಹಾರದಲ್ಲಿ ಸರ್ಕಾರವೆಲ್ಲಿತ್ತು! ಸರ್ಕಾರ ಕೈಕಟ್ಟಿ ಕುಳಿತಾಗ ಬಡಜನತೆ ರಾಬಿನ್‌ಹುಡ್‌ಗಾಗಿ ಕಾಯುತ್ತಾರೆ. ಆ ರಾಬಿನ್‌ಹುಡ್‌ಅನ್ನು ದಲಿತ ಕೃಷಿಕೂಲಿಗಳು ನಕ್ಸಲೈಟರಲ್ಲಿ ಕಂಡುಕೊಂಡಿದ್ದರು. ಹಲವು ಬಾರಿ ಸ್ವತಃ ರಾಬಿನ್‌ಹುಡ್‌ಗಳಾಗಿದ್ದರು. ನಕ್ಸಲೈಟರನ್ನು ನಂಬಿದ್ದಕ್ಕೆ ಹಲವು ದಲಿತ ಕುಟುಂಬಗಳಿಗೆ ಭೂಮಿಯೂ ದಕ್ಕಿದೆ. ಸಶಸ್ತ್ರ ಹೋರಾಟಗಾರರನ್ನು ನಂಬಲು ದಲಿತರೇನು ದಡ್ಡರಲ್ಲ. ಅದಕ್ಕೆ ಮುಖ್ಯ ಕಾರಣ ಶೋಷಕರನ್ನು ದಮನಿಸಬೇಕಾದ ಸರ್ಕಾರಗಳು ಅವರೊಂದಿಗೇ ಕೈ ಮಿಲಾಯಿಸಿದಾಗ ಇಂತಹ ಅಸಹಾಯಕ ನಡೆಗಳು ತೆರೆದುಕೊಳ್ಳುತ್ತವೆ.

ಬಥಾನಿ ತೋಲ ಹತ್ಯಾಕಾಂಡದ ಆರೋಪಿಗಳನ್ನು ಅಪರಾಧಿಗಳೆಂದು ಸೆಷೆನ್ ಕೋರ್ಟ್ ತೀರ್ಪಿತ್ತಿತಾದರೂ ಹೈಕೋರ್ಟ್ ಸಾಕ್ಷಿಗಳ ಮಾತುಗಳನ್ನೇ ಪರಿಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಅಪರಾಧಿಗಳನ್ನು ಖುಲಾಸೆಗೊಳಿಸಿತು. 2002ರಲ್ಲಿ ಭೂಮಿಹಾರ್ ಸಂಘಟನೆಯನ್ನು ನಿಷೇಧಿಸಿದ ಬಿಹಾರ್ ಸರ್ಕಾರ ಬ್ರಹ್ಮೇಶ್ವರ ಸಿಂಗ್ ವಿರುದ್ಧ ಇದ್ದ 17 ಕೇಸುಗಳಲ್ಲಿ ಅವನನ್ನು 9 ವರ್ಷ ಜೈಲಿಗೆ ನೂಕಿತು. ತದನಂತರ ಜಾಮೀನು ಪಡೆದು ಹೊರಬಂದ ಅವನನ್ನು ಮುಸುಕುಧಾರಿಗಳು ಬೀದಿಯಲ್ಲಿ ಕೊಂದುಹಾಕಿದರು. 2012ರಲ್ಲಿ ನಡೆದ ಈ ಘಟನೆಗೆ ಲಾಲೂಪ್ರಸಾದ್ ಯಾದವ್, ಕಾಂಗ್ರೆಸ್ ಪಾರ್ಟಿ, ರಾಮ್ ವಿಲಾಸ್ ಪಾಸ್ವಾನ್ ಎಲ್ಲರೂ ಕಣ್ಣೀರಾಗಿದ್ದರು. ಈತನ ಅಂತ್ಯ ಸಂಸ್ಕಾರಕ್ಕೆ ಬಿ.ಜೆ.ಪಿ ಶಾಸಕ ಸಿ.ಪಿ.ಠಾಕೂರ್ ಹಾಗೂ ಬಿಹಾರದ ಮಂತ್ರಿಗಳು ಹಾಜರಿದ್ದರು.

ಇಂದಿಗೂ ಬಥಾನಿ ತೋಲ ಕೇಸು ಸುಪ್ರೀಂ ಕೋರ್ಟಿನಲ್ಲಿ ಧೂಳು ತಿನ್ನುತ್ತಿದೆ.


ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...