Homeಅಂಕಣಗಳುಮಾತು ಮರೆತ ಭಾರತ; ಬೆಲ್ಚಿ ಫೈಲ್: ಭಾರತವನ್ನು ಬೆಚ್ಚಿ ಬೀಳಿಸಿದ ದಲಿತರ ನರಮೇಧ

ಮಾತು ಮರೆತ ಭಾರತ; ಬೆಲ್ಚಿ ಫೈಲ್: ಭಾರತವನ್ನು ಬೆಚ್ಚಿ ಬೀಳಿಸಿದ ದಲಿತರ ನರಮೇಧ

- Advertisement -
- Advertisement -

ದಲಿತರು ಎಚ್ಚೆತ್ತು ತಿರುಗಿಬಿದ್ದರೆ ದಲಿತೇತರರ ದೃಷ್ಟಿಯಲ್ಲಿ ನಾಯಕರಾಗುವುದಿಲ್ಲ. ಖಳನಾಯಕರೋ ಅಥವಾ ಉಗ್ರವಾದಿಗಳೋ ಆಗಿಬಿಡುತ್ತಾರೆ. ಇಂತಹ ಒಂದು ಪ್ರಕರಣಕ್ಕೆ ಮುಖ್ಯ ಉದಾಹರಣೆ ಬೆಲ್ಚಿ. ಬಿಹಾರದ ಗಡಿ ಭಾಗದ ಪುಟ್ಟ ಹಳ್ಳಿಯೇ ಬೆಲ್ಚಿ. ಪಾಟ್ನಾದಿಂದ ಸುಮಾರು 90 ಕಿಮೀ ದೂರದಲ್ಲಿದೆ. ಇಂದಿಗೂ ಸಹ ಕಳೆಕಟ್ಟಿಕೊಳ್ಳದೆ ಕುಗ್ರಾಮವಾಗಿಯೇ ಉಳಿದಿದೆ. ಮೇ 27, 1977ರಂದು ದೇಶವನ್ನೇ ಬೆಚ್ಚಿಬೀಳಿಸಿದ ಘಟನೆಯೊಂದು ಇಲ್ಲಿ ನಡೆದಿತ್ತು. ಅಲ್ಲಿ ನಡೆದ ನರಮೇಧವು ಕರ್ನಾಟಕದ ಚಿಂತಾಮಣಿ ತಾಲ್ಲೂಕಿನ ಗೊಲ್ಲಹಳ್ಳಿ ಶಿವಪ್ರಸಾದ್ ಎಂಬ ಯುವಕನನ್ನೂ ಕಾಡಿತ್ತು. ಬೆಚ್ಚಿ ಬೀಳಿಸಿ ಆಕ್ರೋಶಭರಿತರನ್ನಾಗಿಸಿ ಪ್ರತಿಕ್ರಿಯಿಸುವಂತೆ ಮಾಡಿತ್ತು. ಆಗ ಮೂಡಿದ ಕವಿತೆಯೇ ಮುಂದೆ ಹಾಡಾಗಿ ಕೆಂಡವಾಯಿತು.

ಕಾಶಿ ಕಂಚಿ ಕಾಳಹಸ್ತಿ
ಕಾಣುವಂತ ಕಣ್ಣಿಗೆ
ಬೆಲ್ಚಿ ಪಿಪ್ರ ಕೆಸ್ತಾರ
ಕಾಣಲಿಲ್ಲ ಯಾಕೆ?

ಎಂಬ ಸಾಲುಗಳನ್ನು ಕವಿ ಗೊಲ್ಲಹಳ್ಳಿ ಶಿವಪ್ರಸಾದ್ ಅವರಿಂದ ಬರೆಸಿತ್ತು ಈ ಘಟನೆ. ಹಾಗಾದರೆ ಅಲ್ಲಿ ನಡೆದದ್ದಾದರೂ ಏನು?

ಎಪ್ಪತ್ತರ ದಶಕದಲ್ಲಿ ಹಲವು ರಾಜಕೀಯ ಸ್ಥಿತ್ಯಂತರಗಳು ನಡೆದವು. 1977ರಷ್ಟೊತ್ತಿಗೆ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಕಳೆದುಕೊಂಡಿತ್ತು. ಜನತಾ ಪಕ್ಷದ ಮೊರಾರ್ಜಿ ದೇಸಾಯಿಯವರ ಸರ್ಕಾರ ರಚನೆಯಾಗಿತ್ತು. ಬಿಹಾರದಲ್ಲಿ ಜನತಾ ಪಕ್ಷದ ಕರ್ಪೂರಿ ಠಾಕೂರ್ ಮುಖ್ಯಮಂತ್ರಿಯಾಗಿದ್ದರು. ಬೆಲ್ಚಿಯ ನರಮೇಧದ ನಂತರ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ಕುಗ್ರಾಮವಾದ ಬೆಲ್ಚಿಯನ್ನು ಆನೆಯ ಮೇಲೆ ಕುಳಿತು ಪ್ರವೇಶಿಸಿದ್ದ ಇಂದಿರಾಗಾಂಧಿಯವರು ದಿನಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸಿದ್ದರು.

ಬೆಲ್ಚಿಯಲ್ಲಿ ಎರಡು ಭೂಮಾಲೀಕ ತಂಡಗಳ ನಡುವೆ ವೈಷಮ್ಯವಿತ್ತು. ಒಂದು ಭೂಮಾಲೀಕ ತಂಡದ ನಾಯಕ ಮಹಾವೀರ್ ಹಾಗೂ ಮತ್ತೊಂದರ ನಾಯಕ ಪರಶುರಾಮ್. ಇಬ್ಬರೂ ಕುರ್ಮಿ ಜಾತಿಗೆ ಸೇರಿದವರು. ಇವರಿಬ್ಬರ ನಡುವೆಯೂ ಆಗಾಗ ಕಲಹಗಳು ಏರ್ಪಡುತ್ತಿದ್ದವು. ಇವರಿಬ್ಬರ ಬೆನ್ನಿಗೆ ರಾಜಕೀಯ ನಾಯಕರ ಬಲವೂ ಇತ್ತು. ಇವರಿಬ್ಬರದ್ದು ಭೂಮಾಲೀಕರ ನಡುವಿನ ಸಂಘರ್ಷವಾದರೇ ಬೆಲ್ಚಿಯ ದಲಿತ ಯುವತಿಯನ್ನು ಮದುವೆಯಾಗಿದ್ದ ಸಿದ್ದೇಶ್ವರ ಪಾಸ್ವಾನ್ ದಲಿತ ಕೂಲಿಗಳನ್ನು ಸಂಘಟಿಸುವ ಕೆಲಸಕ್ಕೆ ಇಳಿದು ಈ ಇಬ್ಬರು ಭೂಮಾಲೀಕರ ದ್ವೇಷ ಕಟ್ಟಿಕೊಂಡಿದ್ದನು. ಕಿಲ್ವೇನ್ಮಣಿಯಲ್ಲಿ ನಡೆದಂತೆ ಇಲ್ಲಿಯೂ ಸಹ ಕೃಷಿ ಕೂಲಿಗಳು ಕೂಲಿಯ ಹಣವನ್ನು ಹೆಚ್ಚು ಮಾಡಬೇಕೆಂದು ಆಗ್ರಹಿಸುತ್ತಿದ್ದರು.

ಮಹಾವೀರ್ ಮಹತೋ ಹಾಗೂ ಪರಶುರಾಮ್ ಅವರ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತರನ್ನೂ ಹಾಗೂ ಹಿಂದುಳಿದ ಜಾತಿಯ ಸೋನಾರರನ್ನೂ ಆ ಭೂಮಾಲೀಕರು ಶೋಷಿಸುತ್ತಿದ್ದರು. ಮಹಾವೀರನ ದಬ್ಬಾಳಿಕೆ ಬಹಳವೇ ಹೆಚ್ಚಾದಾಗ ಕೃಷಿ ಕೂಲಿಗಳ ರಕ್ಷಣೆಗೆ ಸಿದ್ದೇಶ್ವರ ಪಾಸ್ವಾನ್ ಧಾವಿಸುತ್ತಿದ್ದನು. ಇದೇ ರೀತಿ ಹಲವು ಸಂಘರ್ಷಗಳು ಏರ್ಪಟ್ಟು ಮಹಾವೀರ್ ಮತ್ತು ಪರಶುರಾಮ್ ಎದುರು ದಿನಬೆಳಗಾಗುವುದರೊಳಗಾಗಿ ಸಿದ್ದೇಶ್ವರ ಪಾಸ್ವಾನ್ ಪ್ರಭಾವ ಬೆಳೆಸಿಕೊಂಡಿದ್ದ. ಕೃಷಿಕೂಲಿಗಳು ಅವನನ್ನು ’ಸಿಂಗ್ವ’ ಎನ್ನುವಷ್ಟು ಎತ್ತರಕ್ಕೆ ಬೆಳೆದನು. ತನ್ನ ವೈರಿಗಳ ಹಿಂದೆ ಬಲಿಷ್ಠ ರಾಜಕಾರಣಿಗಳಿರುವುದನ್ನು ಅರಿತು ತನ್ನದೇ ತಂಡವನ್ನು ಕಟ್ಟಿಕೊಂಡನು. ಹೇಗಿದ್ದರೂ ಪೊಲೀಸ್ ವ್ಯವಸ್ಥೆ ಯಾವಾಗಲೂ ಮೇಲ್ಜಾತಿ ಪರವೇ ಇರುವುದರಿಂದ ಇಲ್ಲಿ ಸಿಂಗ್ವ ಮೇಲೆಯೂ ಕೇಸುಗಳು ದಾಖಲಾದವು. ಹಾಗಂತ ಸಿಂಗ್ವ ಕೈಕಟ್ಟಿ ಕೂತವನೂ ಅಲ್ಲ. ಏಟಿಗೆ ಎದಿರೇಟು ಕೊಟ್ಟವನೇ. ಜಗಳಕ್ಕೆ ಕಾಲು ಕೆರೆದು ನಿಲ್ಲುತ್ತಿದ್ದವನೇ. ಭೂಮಾಲೀಕರ ಬಂದೂಕುಗಳ ವಿರುದ್ಧ ತಾನೂ ಬಂದೂಕಿನ ತಂಡ ಕಟ್ಟಿದವನೇ. ಈ ಹಿಂದೆ ಅವನ ಮೇಲೆ ಎರಡು ಬಾರಿ ಆಕ್ರಮಣವಾಗಿತ್ತಾದರೂ ಎದುರಿಸಿ ನಿಂತಿದ್ದನು. ಹಾಗಾಗಿ ಬಿಹಾರದ ಆಸ್ತಾಮ ತಾಲ್ಲೂಕಿನಲ್ಲಿ ಮೂರನೆಯ ಹೆಸರೂ ಕೇಳಿಬಂದಿತು. ಆ ಹೆಸರೇ ಸಿಂಗ್ವ. ಈತನ ಪ್ರಾಬಲ್ಯ ಅದೆಷ್ಟರ ಮಟ್ಟಿಗೆ ಬೆಳೆಯಿತೆಂದರೆ ಆಸ್ತಾಮದ ಶಾಸಕ ಇಂದ್ರದೇವ್ ಚೌಧರಿ ಹಾಗೂ ಮತ್ತೊಬ್ಬ ರಾಜಕಾರಣಿ ಅರುಣ್ ಚೌಧರಿ ಈತನನ್ನು ತಮ್ಮ ಪರವಾಗಿ ಕೆಲಸ ಮಾಡಲು ಆಹ್ವಾನಿಸುವಷ್ಟು! ಆದರೆ ಈ ಇಬ್ಬರ ಗೆಳೆತನದ ಆಹ್ವಾನವೂ ಅನುಮಾನಾಸ್ಪದವಾದ್ದು ಎಂಬುದು ಸಿಂಗ್ವನಿಗೆ ಅರ್ಥವಾಗದೇ ಹೋದದ್ದು ವಿಪರ್ಯಾಸ.

ಅಂದು ಮೇ 27, 1977. ಸಿಂಗ್ವನ ತಿರುಗಿ ಬೀಳುವಿಕೆಯನ್ನು ತಡೆದುಕೊಳ್ಳಲಾಗದೇ ಪರಿತಪಿಸುತ್ತಿದ್ದ ಮಹಾವೀರ್ ಹಾಗೂ ಪರಶುರಾಮ್ ಆತನನ್ನು ರಾಜಿ ಸಂಧಾನಕ್ಕೆ ಮನೆಗೆ ಕರೆಯುತ್ತಾರೆ. ಇವರ ಸಂಚನ್ನು ತಿಳಿದೇ ಮಹಾವೀರನ ಮನೆಗೆ ಬರುವ ಸಿಂಗ್ವನ ಜೊತೆಗೆ ಹತ್ತು ಮಂದಿ ಕೃಷಿಕೂಲಿಗಳೂ ಇರುತ್ತಾರೆ. ಅವರ ಬಳಿಯೂ ಶಸ್ತ್ರವಿರುತ್ತದೆ. ಆದರೆ ರಾಜಿ ಸಂಧಾನಕ್ಕೆ ಶಸ್ತ್ರಗಳನ್ನು ಕೆಳಗಿಡುವಂತೆ ಮಾತುಕತೆಯಾಗುತ್ತದೆ. ಬಳಿಕ ಸಿಂಗ್ವನ ತಂಡ ನಿಶ್ಯಸ್ತ್ರವಾಗಿ ನಿಲ್ಲುತ್ತದೆ. ಇದೇ ಸಮಯವನ್ನು ಬಳಸಿಕೊಂಡು ಪರಶುರಾಮನ ತಂಡ ತನ್ನ 40 ಬಂದೂಕುಧಾರಿಗಳೊಂದಿಗೆ ಗುಟ್ಟಾಗಿ ಒಳಬಂದು ಸಿಂಗ್ವನನ್ನೂ ಹಾಗೂ ಆತನ ಹತ್ತು ಸ್ನೇಹಿತರನ್ನೂ ಮರಗಳಿಗೆ ಕಟ್ಟಿ ಹಾಕುತ್ತಾರೆ. ಕುರ್ಮಿ ಜನಾಂಗದ ಮಹಿಳೆಯರು ಹಾಗೂ ಮಕ್ಕಳು ಅವರನ್ನು ಸುಡುವ ಸಲುವಾಗಿ ಒಣಗಿದ ಸೌದೆಗಳನ್ನು ಹೆಕ್ಕಿ ತರುತ್ತಾರೆ. ಬಂದೂಕಿನ ನಳಿಕೆಯನ್ನು ತಲೆಯ ಬಳಿ ಇಟ್ಟು ಆ ಹನ್ನೊಂದು ಕೃಷಿ ಕೂಲಿಗಳನ್ನೂ ಕೊಂದುಹಾಕುತ್ತಾರೆ. ನಂತರ ಅವರ ದೇಹಗಳಿಗೆ ಬೆಂಕಿ ಹಚ್ಚುತ್ತಾರೆ. ಸತ್ತ 11 ಕೃಷಿಕೂಲಿಗಳಲ್ಲಿ 9 ಜನ ದಲಿತರೂ ಹಾಗೂ ಮೂವರು ಹಿಂದುಳಿದ ಜಾತಿಯವರೂ ಇರುತ್ತಾರೆ. ಸತತ ಐದು ವರ್ಷಗಳ ಕೃಷಿಕೂಲಿಗಳ ಹೋರಾಟಕ್ಕೆ ಬೃಹತ್ ಹಿನ್ನಡೆಯಾಗುತ್ತದೆ. ಅಂದು ಆ ಘಟನೆ ನಡೆಯುವಾಗ ಇಂದ್ರದೇವ್ ಚೌಧರಿ ಹಾಗೂ ಅರುಣ್ ಚೌಧರಿ ಅಲ್ಲಿಯೇ ಇರುತ್ತಾರೆ.

ಎಂದಿನಂತೆ ಬೇಕಂತಲೇ ತಡವಾಗಿ ಬಂದ ಪೊಲೀಸರು ಮಹಾವೀರ್ ಹಾಗೂ ಪರಶುರಾಮ್ ಮೇಲೆ ಕೇಸು ದಾಖಲಿಸುತ್ತಾರೆ. ಬೇಲ್ ಸಿಗುತ್ತದೆ. ನಂತರ ವಿಚಾರಣೆ ನಡೆದು, ಸೆಷನ್ ಕೋರ್ಟ್ ತೀರ್ಪನ್ನು ಎತ್ತಿಹಿಡಿದ ಹೈಕೋರ್ಟ್ ಮಹಾವೀರ್ ಮತ್ತು ಪರಶುರಾಮನಿಗೆ ಮರಣದಂಡನೆ ವಿಧಿಸುತ್ತದೆ. ಇತರೆ 13 ಜನರಿಗೂ ಜೀವಾವಧಿ ಶಿಕ್ಷೆ ವಿಧಿಸುತ್ತದೆ. ಆದರೆ ಮುಂದೆ ಅವರೆಲ್ಲರಿಗೂ ಸುಪ್ರೀಂ ಕೋರ್ಟ್ ಬೇಲ್ ನೀಡುತ್ತದೆ.

ರಂಗಕರ್ಮಿ ಸಿಜಿಕೆ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ’ಬೆಲ್ಚಿ’ ಬೀದಿ ನಾಟಕ ರೂಪುಗೊಂಡು ಬಿಹಾರದ ಬೆಲ್ಚಿ ನರಮೇಧವನ್ನು ಕರ್ನಾಟಕಕ್ಕೆ ಪರಿಚಯಿಸಿತ್ತು. ಬೆಲ್ಚಿಯ ನರಮೇಧದ ವಿರುದ್ಧ ಕರ್ನಾಟಕದಲ್ಲಿಯೂ ದಲಿತ ಸಂಘರ್ಷ ಸಮಿತಿ ಹೋರಾಟ ರೂಪಿಸಿತ್ತು. ನಾಡೋಜ ಸಿದ್ದಲಿಂಗಯ್ಯನವರ ’ದೊಡ್ಡಗೌಡರ ಬಾಗಿಲಿಗೆ ನಮ್ಮ ಮೂಳೆಯ ತ್ವಾರಣ’ ಹಾಡು ಹೋರಾಟದ ಭಾಗವಾಗಿದ್ದು ಈ ನಾಟಕದಿಂದಲೇ ಆಗಿದೆ.


ಇದನ್ನೂ ಓದಿ: ಮಾತು ಮರೆತ ಭಾರತ; ಕಿಲ್ವೇನ್ಮಣಿ ಫೈಲ್: ಸ್ವತಂತ್ರ ಭಾರತದ ಭೀಕರ ಹತ್ಯಾಕಾಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೆಲ್ಚಿಯಂತಹ ದುರ್ಘಟನೆಯ ನಂತರವೂ ಈ ದೇಶದಲ್ಲಿ ದಲಿತರ ಮಾರಣಹೋಮ ನಿಂತಿಲ್ಲ. ಇದು ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...