Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

- Advertisement -
- Advertisement -

ತನ್ನ ತಾಯಿ ಮಾಡಿರುವ ಕೆಲಸಕ್ಕೆ ಕೂಲಿ ಕೇಳಲು ಹೋಗಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಸವರ್ಣೀಯ ಸಮುದಾಯದ ದುಷ್ಕರ್ಮಿಗಳು ಹಲ್ಲೆ ನಡೆಸಿ, ವ್ಯಕ್ತಿಯೊಬ್ಬನ ಕಾಲು ನೆಕ್ಕುವಂತೆ ಮಾಡಿರುವ ಅಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್‌ ಬರೇಲಿಯಲ್ಲಿ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವಿಡಿಯೊದಲ್ಲಿ, ದಲಿತ ಬಾಲಕ ತಮ್ಮ ಕಿವಿಯ ಮೇಲೆ ಕೈಯಿಟ್ಟು ನೆಲದ ಮೇಲೆ ಕುಳಿತಿರುವುದು ಕಾಣುತ್ತದೆ. ಆರೋಪಿಗಳು ಬೈಕ್‌‌ ಮೇಲೆ ಕುಳಿತು ಸಂತ್ರಸ್ತ ಬಾಲಕ ಭಯದಿಂದ ನಡುಗುತ್ತಿರುವಾಗ ನಗುತ್ತಾ ವಿಕೃತ ಆನಂದಪಟ್ಟಿದ್ದಾರೆ. ಒಬ್ಬ ಆರೋಪಿಯು ಸಂತ್ರಸ್ತ ಬಾಲಕನಿಗೆ ನಿಂದಿಸುತ್ತಾ, “ಮತ್ತೆ ಇಂತಹ ತಪ್ಪು ಮಾಡುತ್ತಿಯಾ?” ಎಂದು ಕೇಳುತ್ತಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತ ದಲಿತ ಬಾಲಕ ಗಾಂಜಾ ಮಾರಾಟ ಮಾಡಿದ ಆರೋಪವನ್ನು ಒಪ್ಪಿಕೊಳ್ಳುವಂತೆ ದುಷ್ಕರ್ಮಿಗಳು ವಿಡಿಯೊದಲ್ಲಿ ಒತ್ತಾಯಿಸುತ್ತಾರೆ. ಬಾಲಕ ದೌರ್ಜನ್ಯಕ್ಕೆ ಹೆದರಿ ಅದನ್ನು ಒಪ್ಪಿಕೊಂಡಂತೆ ಕಾಣುತ್ತದೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಮುಖ ಆರೋಪಿ ಹೃತಿಕ್ ಸಿಂಗ್‌ ಸಹಿತ ಏಳು ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಘಟನೆ ಏಪ್ರಿಲ್ 10 ರಂದು ನಡೆದಿದ್ದು, ಸಂತ್ರಸ್ತ ಬಾಲಕನ ಲಿಖಿತ ದೂರಿನ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಕೆಲವು ಆರೋಪಿಗಳು ಸವರ್ಣೀಯ ಸಮುದಾಯದವರಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

“ನೊಂದ ವಿದ್ಯಾರ್ಥಿಯು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಂತರ ಆತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಯುಪಿ ಪೊಲೀಸರು ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದೇ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಸಿಂಗ್ ಹೇಳಿದ್ದಾರೆ.

ಸಂತ್ರಸ್ತ ಬಾಲಕ 10 ನೇ ತರಗತಿ ವಿದ್ಯಾರ್ಥಿಯಾಗಿದ್ದು, ತನ್ನ ವಿಧವೆಯಾದ ತಾಯಿಯೊಂದಿಗೆ ವಾಸಿಸುತ್ತಿದ್ದಾರೆ. ಸ್ಥಳೀಯ ವರದಿಗಳ ಪ್ರಕಾರ ಸಂತ್ರಸ್ತೆಯ ತಾಯಿ ಆರೋಪಿಗಳ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕನು ತಾಯಿ ಮಾಡಿರುವ ಕೆಲಸದ ಕೂಲಿ ನೀಡುವಂತೆ ಅವರ ಬಳಿ ಹೋಗಿ ಕೇಳಿದ್ದರು. ಇದರಿಂದ ಕುಪಿತಗೊಂಡ ಆರೋಪಿಗಳು ಬಾಲಕನನ್ನು ಹಿಡಿದು, ನಿಂದಿಸಿ, ಹಲ್ಲೆ ನಡೆಸಿ, ಆರೋಪಿಗಳಲ್ಲಿ ಒಬ್ಬನ ಪಾದಗಳನ್ನು ನೆಕ್ಕುವಂತೆ ಮಾಡಿದ್ದಾರೆ. ಆದರೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಈ ನಿರ್ದಿಷ್ಟ ಅಂಶಗಳನ್ನು ಉಲ್ಲೇಖಿಸಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...