Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

- Advertisement -
- Advertisement -

ತನ್ನ ತಾಯಿ ಮಾಡಿರುವ ಕೆಲಸಕ್ಕೆ ಕೂಲಿ ಕೇಳಲು ಹೋಗಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಸವರ್ಣೀಯ ಸಮುದಾಯದ ದುಷ್ಕರ್ಮಿಗಳು ಹಲ್ಲೆ ನಡೆಸಿ, ವ್ಯಕ್ತಿಯೊಬ್ಬನ ಕಾಲು ನೆಕ್ಕುವಂತೆ ಮಾಡಿರುವ ಅಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್‌ ಬರೇಲಿಯಲ್ಲಿ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವಿಡಿಯೊದಲ್ಲಿ, ದಲಿತ ಬಾಲಕ ತಮ್ಮ ಕಿವಿಯ ಮೇಲೆ ಕೈಯಿಟ್ಟು ನೆಲದ ಮೇಲೆ ಕುಳಿತಿರುವುದು ಕಾಣುತ್ತದೆ. ಆರೋಪಿಗಳು ಬೈಕ್‌‌ ಮೇಲೆ ಕುಳಿತು ಸಂತ್ರಸ್ತ ಬಾಲಕ ಭಯದಿಂದ ನಡುಗುತ್ತಿರುವಾಗ ನಗುತ್ತಾ ವಿಕೃತ ಆನಂದಪಟ್ಟಿದ್ದಾರೆ. ಒಬ್ಬ ಆರೋಪಿಯು ಸಂತ್ರಸ್ತ ಬಾಲಕನಿಗೆ ನಿಂದಿಸುತ್ತಾ, “ಮತ್ತೆ ಇಂತಹ ತಪ್ಪು ಮಾಡುತ್ತಿಯಾ?” ಎಂದು ಕೇಳುತ್ತಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತ ದಲಿತ ಬಾಲಕ ಗಾಂಜಾ ಮಾರಾಟ ಮಾಡಿದ ಆರೋಪವನ್ನು ಒಪ್ಪಿಕೊಳ್ಳುವಂತೆ ದುಷ್ಕರ್ಮಿಗಳು ವಿಡಿಯೊದಲ್ಲಿ ಒತ್ತಾಯಿಸುತ್ತಾರೆ. ಬಾಲಕ ದೌರ್ಜನ್ಯಕ್ಕೆ ಹೆದರಿ ಅದನ್ನು ಒಪ್ಪಿಕೊಂಡಂತೆ ಕಾಣುತ್ತದೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಮುಖ ಆರೋಪಿ ಹೃತಿಕ್ ಸಿಂಗ್‌ ಸಹಿತ ಏಳು ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಘಟನೆ ಏಪ್ರಿಲ್ 10 ರಂದು ನಡೆದಿದ್ದು, ಸಂತ್ರಸ್ತ ಬಾಲಕನ ಲಿಖಿತ ದೂರಿನ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಕೆಲವು ಆರೋಪಿಗಳು ಸವರ್ಣೀಯ ಸಮುದಾಯದವರಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

“ನೊಂದ ವಿದ್ಯಾರ್ಥಿಯು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಂತರ ಆತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಯುಪಿ ಪೊಲೀಸರು ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದೇ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಸಿಂಗ್ ಹೇಳಿದ್ದಾರೆ.

ಸಂತ್ರಸ್ತ ಬಾಲಕ 10 ನೇ ತರಗತಿ ವಿದ್ಯಾರ್ಥಿಯಾಗಿದ್ದು, ತನ್ನ ವಿಧವೆಯಾದ ತಾಯಿಯೊಂದಿಗೆ ವಾಸಿಸುತ್ತಿದ್ದಾರೆ. ಸ್ಥಳೀಯ ವರದಿಗಳ ಪ್ರಕಾರ ಸಂತ್ರಸ್ತೆಯ ತಾಯಿ ಆರೋಪಿಗಳ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕನು ತಾಯಿ ಮಾಡಿರುವ ಕೆಲಸದ ಕೂಲಿ ನೀಡುವಂತೆ ಅವರ ಬಳಿ ಹೋಗಿ ಕೇಳಿದ್ದರು. ಇದರಿಂದ ಕುಪಿತಗೊಂಡ ಆರೋಪಿಗಳು ಬಾಲಕನನ್ನು ಹಿಡಿದು, ನಿಂದಿಸಿ, ಹಲ್ಲೆ ನಡೆಸಿ, ಆರೋಪಿಗಳಲ್ಲಿ ಒಬ್ಬನ ಪಾದಗಳನ್ನು ನೆಕ್ಕುವಂತೆ ಮಾಡಿದ್ದಾರೆ. ಆದರೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಈ ನಿರ್ದಿಷ್ಟ ಅಂಶಗಳನ್ನು ಉಲ್ಲೇಖಿಸಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...