Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

- Advertisement -
- Advertisement -

ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಗುರುವಾರ ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದಾರೆ. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪ್ರಕಾರ, ಜಿತೇಂದ್ರಪಾಲ್ ತನ್ನ ಸ್ನೇಹಿತ ಹರೀಶ್ ಕುಮಾರ್ ಜೊತೆ ಮಂಗಳವಾರ ಬಾಲಿಯಿಂದ ಬರ್ವಾಗೆ ಹೋಗುತ್ತಿದ್ದರು. ಜಿತೇಂದ್ರಪಾಲ್ ಮೋಟಾರ್ ಸೈಕಲ್ ನಲ್ಲಿ ಕುಮಾರ್ ಹಿಂದೆ ಕುಳಿತಿದ್ದರು.

ಬಾಲಿಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಯುವಕರು ನಿಲ್ಲಿಸಲು ಹೇಳಿದರು. ಹರೀಶ್ ವೇಗ ಕಡಿಮೆ ಮಾಡಿದಾಗ ಒಬ್ಬಾತ ಜಿತೇಂದ್ರಪಾಲ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಅವರು ಕೆಳಗೆ ಬಿದ್ದಾಗ ಹೊಟ್ಟೆ ಮತ್ತು ಎದೆಗೆ ಮತ್ತೆ ನಾಲ್ಕು ಬಾರಿ ಇರಿದಿದ್ದಾರೆ. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ.

ದಲಿತ ವ್ಯಕ್ತಿ ಒಳ್ಳೆಯ ಉಡುಪು ಧರಿಸಿದ್ದಕ್ಕೂ, ಆತ ಮೀಸೆ ಬಿಟ್ಟಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜಸ್ಥಾನ ಪೊಲೀಸರು ಹೇಳುತ್ತಿದ್ದಾರೆ. “2020ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದ ಪರಸ್ಪರ ಪೈಪೋಟಿಯ ಪರಿಣಾಮ ಈ ಕೊಲೆಯಾಗಿದೆ” ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಿತೇಂದ್ರಪಾಲ್ ಹತ್ಯೆಯ ನಂತರ ಅವರ ಕುಟುಂಬ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ಹಾಗೂ ಆಡಳಿತ ವರ್ಗ ಮನವೊಲಿಸಿದ ನಂತರ ಶುಕ್ರವಾರ ಮರಣೋತ್ತರ ಪರೀಕ್ಷೆಗೆ ಒಪ್ಪಿದರು.

ಜೀತೆಂದ್ರಪಾಲ್‌ ಸಹೋದರನಿಗೆ ಸರ್ಕಾರಿ ನೌಕರಿ ಮತ್ತು ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಅಧಿಕಾರಿ ವರ್ಗ ಭರವಸೆ ನೀಡಿದೆ. ಬರ್ವಾ ಗ್ರಾಮದಲ್ಲಿ ಶಾಶ್ವತವಾದ ಪೊಲೀಸ್ ಚೌಕ್‌ ನಿರ್ಮಿಸಲು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ.

ಬಾಲಿ ಶಾಸಕ ಪುಷ್ಪೇಂದ್ರ ಸಿಂಗ್ ರಾಣಾವತ್ ಮತ್ತು ಮಾರ್ವಾರ್ ಜಂಕ್ಷನ್ ಶಾಸಕ ಖುಶ್ವೀರ್ ಸಿಂಗ್ ಜೋಜಾವರ್ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗ ಕಲ್ಪಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಕುರಿತು ಮಾತನಾಡಿದ್ದರು.

ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

“ಜಿತೇಂದ್ರಪಾಲ್ ಮೇಘವಾಲ್ ಅವರು ಮೀಸೆ ಬಿಟ್ಟ ಕಾರಣಕ್ಕೆ ಕೊಲೆಯಾಗಿದ್ದಾರೆ. ದಲಿತರ ಚೆನ್ನಾಗಿ ಕಾಣುವುದು ಸವರ್ಣಿಯ ಹಿಂದೂಗಳಿಗೆ ಯಾಕೆ ಚುಚ್ಚುತ್ತದೆ? ಈ ದೌರ್ಜನ್ಯ ನಿಲ್ಲುವುದು ಯಾವಾಗ?” ಎಂದು Ambedkarite India ಟ್ವಿಟರ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ಇದು 21ನೇ ಶತಮಾನದ ಭಾರತ. ರಾಜಸ್ಥಾನದ ಸರ್ಕಾರಿ ನೌಕರಿಯಲ್ಲಿದ್ದ ಜಿತೇಂದ್ರಪಾಲ್ ಮೇಘವಾಲ್ ಮೀಸೆಯನ್ನು ಬಿಟ್ಟಿದ್ದಕ್ಕಾಗಿ ಮತ್ತು ಉತ್ತಮ ಜೀವನಶೈಲಿಯನ್ನು ನಡೆಸಿದ್ದಕ್ಕಾಗಿ ಕೊಲೆಯಾಗಿದ್ದಾರೆ” ಎಂದು ಟ್ರೈಬಲ್ ಆರ್ಮಿ ಟ್ವಿಟರ್‌ ಖಾತೆ ಹೇಳಿದೆ.


ಇದನ್ನೂ ಓದಿರಿ: ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...