Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

- Advertisement -
- Advertisement -

ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಗುರುವಾರ ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದಾರೆ. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪ್ರಕಾರ, ಜಿತೇಂದ್ರಪಾಲ್ ತನ್ನ ಸ್ನೇಹಿತ ಹರೀಶ್ ಕುಮಾರ್ ಜೊತೆ ಮಂಗಳವಾರ ಬಾಲಿಯಿಂದ ಬರ್ವಾಗೆ ಹೋಗುತ್ತಿದ್ದರು. ಜಿತೇಂದ್ರಪಾಲ್ ಮೋಟಾರ್ ಸೈಕಲ್ ನಲ್ಲಿ ಕುಮಾರ್ ಹಿಂದೆ ಕುಳಿತಿದ್ದರು.

ಬಾಲಿಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಯುವಕರು ನಿಲ್ಲಿಸಲು ಹೇಳಿದರು. ಹರೀಶ್ ವೇಗ ಕಡಿಮೆ ಮಾಡಿದಾಗ ಒಬ್ಬಾತ ಜಿತೇಂದ್ರಪಾಲ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಅವರು ಕೆಳಗೆ ಬಿದ್ದಾಗ ಹೊಟ್ಟೆ ಮತ್ತು ಎದೆಗೆ ಮತ್ತೆ ನಾಲ್ಕು ಬಾರಿ ಇರಿದಿದ್ದಾರೆ. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ.

ದಲಿತ ವ್ಯಕ್ತಿ ಒಳ್ಳೆಯ ಉಡುಪು ಧರಿಸಿದ್ದಕ್ಕೂ, ಆತ ಮೀಸೆ ಬಿಟ್ಟಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜಸ್ಥಾನ ಪೊಲೀಸರು ಹೇಳುತ್ತಿದ್ದಾರೆ. “2020ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದ ಪರಸ್ಪರ ಪೈಪೋಟಿಯ ಪರಿಣಾಮ ಈ ಕೊಲೆಯಾಗಿದೆ” ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಿತೇಂದ್ರಪಾಲ್ ಹತ್ಯೆಯ ನಂತರ ಅವರ ಕುಟುಂಬ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ಹಾಗೂ ಆಡಳಿತ ವರ್ಗ ಮನವೊಲಿಸಿದ ನಂತರ ಶುಕ್ರವಾರ ಮರಣೋತ್ತರ ಪರೀಕ್ಷೆಗೆ ಒಪ್ಪಿದರು.

ಜೀತೆಂದ್ರಪಾಲ್‌ ಸಹೋದರನಿಗೆ ಸರ್ಕಾರಿ ನೌಕರಿ ಮತ್ತು ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಅಧಿಕಾರಿ ವರ್ಗ ಭರವಸೆ ನೀಡಿದೆ. ಬರ್ವಾ ಗ್ರಾಮದಲ್ಲಿ ಶಾಶ್ವತವಾದ ಪೊಲೀಸ್ ಚೌಕ್‌ ನಿರ್ಮಿಸಲು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ.

ಬಾಲಿ ಶಾಸಕ ಪುಷ್ಪೇಂದ್ರ ಸಿಂಗ್ ರಾಣಾವತ್ ಮತ್ತು ಮಾರ್ವಾರ್ ಜಂಕ್ಷನ್ ಶಾಸಕ ಖುಶ್ವೀರ್ ಸಿಂಗ್ ಜೋಜಾವರ್ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗ ಕಲ್ಪಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಕುರಿತು ಮಾತನಾಡಿದ್ದರು.

ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

“ಜಿತೇಂದ್ರಪಾಲ್ ಮೇಘವಾಲ್ ಅವರು ಮೀಸೆ ಬಿಟ್ಟ ಕಾರಣಕ್ಕೆ ಕೊಲೆಯಾಗಿದ್ದಾರೆ. ದಲಿತರ ಚೆನ್ನಾಗಿ ಕಾಣುವುದು ಸವರ್ಣಿಯ ಹಿಂದೂಗಳಿಗೆ ಯಾಕೆ ಚುಚ್ಚುತ್ತದೆ? ಈ ದೌರ್ಜನ್ಯ ನಿಲ್ಲುವುದು ಯಾವಾಗ?” ಎಂದು Ambedkarite India ಟ್ವಿಟರ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ಇದು 21ನೇ ಶತಮಾನದ ಭಾರತ. ರಾಜಸ್ಥಾನದ ಸರ್ಕಾರಿ ನೌಕರಿಯಲ್ಲಿದ್ದ ಜಿತೇಂದ್ರಪಾಲ್ ಮೇಘವಾಲ್ ಮೀಸೆಯನ್ನು ಬಿಟ್ಟಿದ್ದಕ್ಕಾಗಿ ಮತ್ತು ಉತ್ತಮ ಜೀವನಶೈಲಿಯನ್ನು ನಡೆಸಿದ್ದಕ್ಕಾಗಿ ಕೊಲೆಯಾಗಿದ್ದಾರೆ” ಎಂದು ಟ್ರೈಬಲ್ ಆರ್ಮಿ ಟ್ವಿಟರ್‌ ಖಾತೆ ಹೇಳಿದೆ.


ಇದನ್ನೂ ಓದಿರಿ: ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...