Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

- Advertisement -
- Advertisement -

ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಗುರುವಾರ ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದಾರೆ. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪ್ರಕಾರ, ಜಿತೇಂದ್ರಪಾಲ್ ತನ್ನ ಸ್ನೇಹಿತ ಹರೀಶ್ ಕುಮಾರ್ ಜೊತೆ ಮಂಗಳವಾರ ಬಾಲಿಯಿಂದ ಬರ್ವಾಗೆ ಹೋಗುತ್ತಿದ್ದರು. ಜಿತೇಂದ್ರಪಾಲ್ ಮೋಟಾರ್ ಸೈಕಲ್ ನಲ್ಲಿ ಕುಮಾರ್ ಹಿಂದೆ ಕುಳಿತಿದ್ದರು.

ಬಾಲಿಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಯುವಕರು ನಿಲ್ಲಿಸಲು ಹೇಳಿದರು. ಹರೀಶ್ ವೇಗ ಕಡಿಮೆ ಮಾಡಿದಾಗ ಒಬ್ಬಾತ ಜಿತೇಂದ್ರಪಾಲ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಅವರು ಕೆಳಗೆ ಬಿದ್ದಾಗ ಹೊಟ್ಟೆ ಮತ್ತು ಎದೆಗೆ ಮತ್ತೆ ನಾಲ್ಕು ಬಾರಿ ಇರಿದಿದ್ದಾರೆ. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ.

ದಲಿತ ವ್ಯಕ್ತಿ ಒಳ್ಳೆಯ ಉಡುಪು ಧರಿಸಿದ್ದಕ್ಕೂ, ಆತ ಮೀಸೆ ಬಿಟ್ಟಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜಸ್ಥಾನ ಪೊಲೀಸರು ಹೇಳುತ್ತಿದ್ದಾರೆ. “2020ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದ ಪರಸ್ಪರ ಪೈಪೋಟಿಯ ಪರಿಣಾಮ ಈ ಕೊಲೆಯಾಗಿದೆ” ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಿತೇಂದ್ರಪಾಲ್ ಹತ್ಯೆಯ ನಂತರ ಅವರ ಕುಟುಂಬ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ಹಾಗೂ ಆಡಳಿತ ವರ್ಗ ಮನವೊಲಿಸಿದ ನಂತರ ಶುಕ್ರವಾರ ಮರಣೋತ್ತರ ಪರೀಕ್ಷೆಗೆ ಒಪ್ಪಿದರು.

ಜೀತೆಂದ್ರಪಾಲ್‌ ಸಹೋದರನಿಗೆ ಸರ್ಕಾರಿ ನೌಕರಿ ಮತ್ತು ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಅಧಿಕಾರಿ ವರ್ಗ ಭರವಸೆ ನೀಡಿದೆ. ಬರ್ವಾ ಗ್ರಾಮದಲ್ಲಿ ಶಾಶ್ವತವಾದ ಪೊಲೀಸ್ ಚೌಕ್‌ ನಿರ್ಮಿಸಲು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ.

ಬಾಲಿ ಶಾಸಕ ಪುಷ್ಪೇಂದ್ರ ಸಿಂಗ್ ರಾಣಾವತ್ ಮತ್ತು ಮಾರ್ವಾರ್ ಜಂಕ್ಷನ್ ಶಾಸಕ ಖುಶ್ವೀರ್ ಸಿಂಗ್ ಜೋಜಾವರ್ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗ ಕಲ್ಪಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಕುರಿತು ಮಾತನಾಡಿದ್ದರು.

ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

“ಜಿತೇಂದ್ರಪಾಲ್ ಮೇಘವಾಲ್ ಅವರು ಮೀಸೆ ಬಿಟ್ಟ ಕಾರಣಕ್ಕೆ ಕೊಲೆಯಾಗಿದ್ದಾರೆ. ದಲಿತರ ಚೆನ್ನಾಗಿ ಕಾಣುವುದು ಸವರ್ಣಿಯ ಹಿಂದೂಗಳಿಗೆ ಯಾಕೆ ಚುಚ್ಚುತ್ತದೆ? ಈ ದೌರ್ಜನ್ಯ ನಿಲ್ಲುವುದು ಯಾವಾಗ?” ಎಂದು Ambedkarite India ಟ್ವಿಟರ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ಇದು 21ನೇ ಶತಮಾನದ ಭಾರತ. ರಾಜಸ್ಥಾನದ ಸರ್ಕಾರಿ ನೌಕರಿಯಲ್ಲಿದ್ದ ಜಿತೇಂದ್ರಪಾಲ್ ಮೇಘವಾಲ್ ಮೀಸೆಯನ್ನು ಬಿಟ್ಟಿದ್ದಕ್ಕಾಗಿ ಮತ್ತು ಉತ್ತಮ ಜೀವನಶೈಲಿಯನ್ನು ನಡೆಸಿದ್ದಕ್ಕಾಗಿ ಕೊಲೆಯಾಗಿದ್ದಾರೆ” ಎಂದು ಟ್ರೈಬಲ್ ಆರ್ಮಿ ಟ್ವಿಟರ್‌ ಖಾತೆ ಹೇಳಿದೆ.


ಇದನ್ನೂ ಓದಿರಿ: ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...