Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

- Advertisement -
- Advertisement -

ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಗುರುವಾರ ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದಾರೆ. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪ್ರಕಾರ, ಜಿತೇಂದ್ರಪಾಲ್ ತನ್ನ ಸ್ನೇಹಿತ ಹರೀಶ್ ಕುಮಾರ್ ಜೊತೆ ಮಂಗಳವಾರ ಬಾಲಿಯಿಂದ ಬರ್ವಾಗೆ ಹೋಗುತ್ತಿದ್ದರು. ಜಿತೇಂದ್ರಪಾಲ್ ಮೋಟಾರ್ ಸೈಕಲ್ ನಲ್ಲಿ ಕುಮಾರ್ ಹಿಂದೆ ಕುಳಿತಿದ್ದರು.

ಬಾಲಿಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಯುವಕರು ನಿಲ್ಲಿಸಲು ಹೇಳಿದರು. ಹರೀಶ್ ವೇಗ ಕಡಿಮೆ ಮಾಡಿದಾಗ ಒಬ್ಬಾತ ಜಿತೇಂದ್ರಪಾಲ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಅವರು ಕೆಳಗೆ ಬಿದ್ದಾಗ ಹೊಟ್ಟೆ ಮತ್ತು ಎದೆಗೆ ಮತ್ತೆ ನಾಲ್ಕು ಬಾರಿ ಇರಿದಿದ್ದಾರೆ. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ.

ದಲಿತ ವ್ಯಕ್ತಿ ಒಳ್ಳೆಯ ಉಡುಪು ಧರಿಸಿದ್ದಕ್ಕೂ, ಆತ ಮೀಸೆ ಬಿಟ್ಟಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜಸ್ಥಾನ ಪೊಲೀಸರು ಹೇಳುತ್ತಿದ್ದಾರೆ. “2020ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದ ಪರಸ್ಪರ ಪೈಪೋಟಿಯ ಪರಿಣಾಮ ಈ ಕೊಲೆಯಾಗಿದೆ” ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಿತೇಂದ್ರಪಾಲ್ ಹತ್ಯೆಯ ನಂತರ ಅವರ ಕುಟುಂಬ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ಹಾಗೂ ಆಡಳಿತ ವರ್ಗ ಮನವೊಲಿಸಿದ ನಂತರ ಶುಕ್ರವಾರ ಮರಣೋತ್ತರ ಪರೀಕ್ಷೆಗೆ ಒಪ್ಪಿದರು.

ಜೀತೆಂದ್ರಪಾಲ್‌ ಸಹೋದರನಿಗೆ ಸರ್ಕಾರಿ ನೌಕರಿ ಮತ್ತು ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಅಧಿಕಾರಿ ವರ್ಗ ಭರವಸೆ ನೀಡಿದೆ. ಬರ್ವಾ ಗ್ರಾಮದಲ್ಲಿ ಶಾಶ್ವತವಾದ ಪೊಲೀಸ್ ಚೌಕ್‌ ನಿರ್ಮಿಸಲು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ.

ಬಾಲಿ ಶಾಸಕ ಪುಷ್ಪೇಂದ್ರ ಸಿಂಗ್ ರಾಣಾವತ್ ಮತ್ತು ಮಾರ್ವಾರ್ ಜಂಕ್ಷನ್ ಶಾಸಕ ಖುಶ್ವೀರ್ ಸಿಂಗ್ ಜೋಜಾವರ್ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗ ಕಲ್ಪಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಕುರಿತು ಮಾತನಾಡಿದ್ದರು.

ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

“ಜಿತೇಂದ್ರಪಾಲ್ ಮೇಘವಾಲ್ ಅವರು ಮೀಸೆ ಬಿಟ್ಟ ಕಾರಣಕ್ಕೆ ಕೊಲೆಯಾಗಿದ್ದಾರೆ. ದಲಿತರ ಚೆನ್ನಾಗಿ ಕಾಣುವುದು ಸವರ್ಣಿಯ ಹಿಂದೂಗಳಿಗೆ ಯಾಕೆ ಚುಚ್ಚುತ್ತದೆ? ಈ ದೌರ್ಜನ್ಯ ನಿಲ್ಲುವುದು ಯಾವಾಗ?” ಎಂದು Ambedkarite India ಟ್ವಿಟರ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ಇದು 21ನೇ ಶತಮಾನದ ಭಾರತ. ರಾಜಸ್ಥಾನದ ಸರ್ಕಾರಿ ನೌಕರಿಯಲ್ಲಿದ್ದ ಜಿತೇಂದ್ರಪಾಲ್ ಮೇಘವಾಲ್ ಮೀಸೆಯನ್ನು ಬಿಟ್ಟಿದ್ದಕ್ಕಾಗಿ ಮತ್ತು ಉತ್ತಮ ಜೀವನಶೈಲಿಯನ್ನು ನಡೆಸಿದ್ದಕ್ಕಾಗಿ ಕೊಲೆಯಾಗಿದ್ದಾರೆ” ಎಂದು ಟ್ರೈಬಲ್ ಆರ್ಮಿ ಟ್ವಿಟರ್‌ ಖಾತೆ ಹೇಳಿದೆ.


ಇದನ್ನೂ ಓದಿರಿ: ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...