Homeಅಂಕಣಗಳುಮಾತು ಮರೆತ ಭಾರತ; ಕಾರಂಚೇಡು ಫೈಲ್ : ದಲಿತರ ಮೇಲೆ ಶೂದ್ರರ ಅಟ್ಟಹಾಸ

ಮಾತು ಮರೆತ ಭಾರತ; ಕಾರಂಚೇಡು ಫೈಲ್ : ದಲಿತರ ಮೇಲೆ ಶೂದ್ರರ ಅಟ್ಟಹಾಸ

- Advertisement -
- Advertisement -

ಅದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿನ ಕಾರಂಚೇಡು ಎಂಬ ಊರು. ಈ ಊರಿನ ಹೆಸರು ಕೇಳಿದರೆ ಸಾಕು ಇಡೀ ಆಂಧ್ರಪ್ರದೇಶದ ದಲಿತರು ಹಾಗೂ ಮೇಲ್ಜಾತಿ ಭೂಮಾಲೀಕರು ಇಬ್ಬರೂ ಬೆಚ್ಚಿ ಬೀಳುತ್ತಾರೆ. ಅದಕ್ಕೆ ಕಾರಣ ಜುಲೈ 17, 1985ರಲ್ಲಿ ಕಾರಂಚೇಡುವಿನಲ್ಲಿ ನಡೆದಿದ್ದ ಭೀಕರ ನರಮೇಧ ಹಾಗೂ ನಂತರದ ಬೆಳವಣಿಗೆಗಳು.

ಈ ಘಟನೆ ನಡೆದು 23 ವರ್ಷಗಳ ನಂತರ ಸುಪ್ರೀಂಕೋರ್ಟ್ ಈ ನರಮೇಧಕ್ಕೆ ಕಾರಣರಾದ ಹಲವರಲ್ಲಿ ಒಬ್ಬನಿಗೆ ಜೀವಾವಧಿ ಶಿಕ್ಷೆ ನೀಡಿ, ಉಳಿದಂತೆ 30 ಅಪರಾಧಿಗಳಿಗೆ ಮೂರು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತು. ದಲಿತ ಭಾರತದ ಇತಿಹಾಸದಲ್ಲಿ ಕಾರಂಚೇಡು ಅಚ್ಚಳಿಯದಂತೆ ನಿಲ್ಲಲು ಮುಖ್ಯ ಕಾರಣವೇ ಕನಿಷ್ಟಪಕ್ಷ ದಲಿತರನ್ನು ಕೊಂದ ಕೆಲವರಿಗಾದರೂ ಶಿಕ್ಷೆಯಾದದ್ದಾಗಿದೆ.

1960ರ ದಶಕದಲ್ಲಿ ಆಂಧ್ರಪ್ರದೇಶದ ಪ್ರಮುಖ ರೈತಾಪಿ ಜಾತಿಯವರಾದ ಕಮ್ಮಾಗಳು ಕೃಷಿ ಗೇಣಿದಾರರಾಗಿದ್ದರು. ಜೊತೆಗೆ ಕೃಷಿ ಕೂಲಿಗಳೂ ಆಗಿದ್ದರು. ಈ ಕಾರಣದಿಂದ ಸಹಜವಾಗಿ ಕೂಲಿಗಳ ಪರವಾಗಿ ವರ್ಗ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಮ್ಯುನಿಸ್ಟ್ ಪಕ್ಷದೊಂದಿಗೆ ಈ ಕಮ್ಮಾಗಳು ಗುರುತಿಸಿಕೊಂಡಿದ್ದರು. ಮತ್ತೊಂದು ಕಡೆ ರೆಡ್ಡಿಗಳು ಆಡಳಿತ ಪಕ್ಷವಾದ ಕಾಂಗ್ರೆಸ್ಸಿನೊಂದಿಗೆ ಗುರುತಿಸಿಕೊಂಡಿದ್ದರು. ಇಲ್ಲಿನ ಪ್ರಮುಖ ದಲಿತ ಜಾತಿಗಳಾದ ಮಾಲ ಮತ್ತು ಮಾದಿಗರೂ ಸಹ ರಾಜಕೀಯವಾಗಿ ಕಮ್ಯುನಿಸ್ಟ್ ಹಾಗೂ ಕಾಂಗ್ರೆಸ್ಸಿನಲ್ಲಿ ಹಂಚಿಹೋಗಿದ್ದರು. ಆದರೆ 70-80ರ ದಶಕದ ಭೂಸುಧಾರಣೆ ಹಾಗೂ ಇನ್ನಿತರ ಆರ್ಥಿಕ ಪಲ್ಲಟಗಳ ಕಾರಣವಾಗಿ ಕಮ್ಮಾ ಜಾತಿಗಳ ಕೈಗೆ ಭೂಮಿ ದಕ್ಕಿತು. ಸದಾ ಮೇಲ್ಮುಖ ಚಲನೆಗೆ ಹಾತೊರೆಯುತ್ತಿದ್ದ ಕಮ್ಮಾ ಕೃಷಿಕರು ಕೊನೆಗೂ ಜಮೀನುಗಳನ್ನು ಪಡೆದುಕೊಂಡರು. ಇದು ಅವರನ್ನು ಭೂಮಾಲೀಕ ಜಾತಿಯನ್ನಾಗಿ ಮಾಡಿತು. ಇದೇ ಕಾರಣದಿಂದ 80ರ ದಶಕದಲ್ಲಿ ಪ್ರಮುಖವಾಗಿ ಕಮ್ಮಾ ಮುಂಚೂಣಿ ನಾಯಕರೆಲ್ಲ ಸೇರಿ ’ತೆಲುಗು ದೇಶಂ’ ಪಕ್ಷವನ್ನು ಸ್ಥಾಪಿಸುವಂತಾಯಿತು. ತೆಲುಗು ನಾಡಿನ ಪ್ರಖ್ಯಾತ ನಟ ಎನ್.ಟಿ.ರಾಮರಾವ್ ಇದರ ಮುಖ್ಯಸ್ಥ. ಇವರೇ 1983ರಲ್ಲಿ ಮುಖ್ಯಮಂತ್ರಿಯೂ ಆದರು. ಈ ರಾಮರಾವ್‌ರವರ ಮಗಳಿಗೆ ಕಾರಂಚೇಡುವಿನ ಕಮ್ಮಾ ಭೂಮಾಲೀಕ ದಗ್ಗುಬಾಟಿ ಚೆಂಚುರಾಮಯ್ಯನ ಮಗ ದಗ್ಗುಬಾಟಿ ಚೆಂಚು ವೆಂಕಟೇಶ್ವರರಾವ್ ಜೊತೆ ವಿವಾಹವಾದಾಗಿನಿಂದ ಕಾರಂಚೇಡುವಿನ ಕಮ್ಮಾ ಭೂಮಾಲೀಕರ ಕಾಲುಗಳು ನೆಲದ ಮೇಲೆ ನಿಲ್ಲಲಿಲ್ಲ. ಇದರ ಜೊತೆಗೆ ದಗ್ಗುಬಾಟಿ ಚೆಂಚು ವೆಂಕಟೇಶ್ವರ ರಾವ್ 1983ರಲ್ಲಿ ನಡೆದ ಚುನಾವಣೆಯಲ್ಲಿ ಶಾಸಕನಾಗಿ ಆಯ್ಕೆಯಾಗಿಬಿಟ್ಟ. ಇದರಿಂದ ಅಲ್ಲಿನ ಕಮ್ಮಾ ಭೂಮಾಲೀಕರ ಆಟಾಟೋಪಗಳಿಗೆ ತಡೆ ಇಲ್ಲದಂತಾಯಿತು. ಅವರ ಹೊಲಗಳಲ್ಲಿ ಕೃಷಿಕೂಲಿಗಳಾಗಿ ಕೆಲಸ ಮಾಡುತ್ತಿದ್ದ ದಲಿತರಿಗೆ ಅದರಲ್ಲೂ ಮಾದಿಗರಿಗೆ ಕಿರುಕುಳ ನೀಡಲು ಆರಂಭಿಸಿದರು. ಕೂಲಿಯನ್ನೂ ಕಡಿಮೆ ಮಾಡಿದರು. ಇದರ ಜೊತೆಗೆ ಆ ಕಾಲದ ಹಿಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ ಪಕ್ಷಕ್ಕೆ ಓಟು ಹಾಕಿದ್ದನ್ನು ಕಂಡಿದ್ದ ಕಮ್ಮಾ ಭೂಮಾಲೀಕರು ಚೆಂಚುರಾಮಯ್ಯನ ಮುಖಂಡತ್ವದಲ್ಲಿ ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದರು. ಆ ದಿನ ಬಂದೇಬಿಟ್ಟಿತು.

ಅಂದು ಜುಲೈ 16, 1985ರ ಸಂಜೆಯ ಸಮಯ. ಕಾರಂಚೇಡುವಿನ ದಲಿತರ ನೀರಿನ ತೊಟ್ಟಿಯ ಬಳಿ ಕಮ್ಮಾ ಜಾತಿಯ ರೈತನೊಬ್ಬ ತನ್ನ ಎಮ್ಮೆಗಳನ್ನು ತೊಳೆಯುತ್ತಿದ್ದ. ಆ ಕೊಳಕು ನೀರು ನೇರವಾಗಿ ದಲಿತರ ನೀರಿನ ತೊಟ್ಟಿಗೆ ಹರಿಯುತ್ತಿತ್ತು. ಇದನ್ನು ಕಂಡ ದಲಿತನೊಬ್ಬ ಪ್ರಶ್ನಿಸಿದನು. ಇದನ್ನೇ ನೆಪ ಮಾಡಿಕೊಂಡು ಕಮ್ಮಾ ರೈತ ಕೈಲಿದ್ದ ಹಗ್ಗದಿಂದಲೇ ದಲಿತ ಯುವಕನನ್ನು ಹೊಡೆಯಲು ಆರಂಭಿಸಿದನು. ಇದನ್ನು ಕಂಡ ದಲಿತೆ ಮುನ್ನಂಗಿ ಸುವಾರ್ತ ತನ್ನ ಕೈಯಲ್ಲಿದ್ದ ಬಿಂದಿಗೆಯಿಂದಲೇ ಆ ಕಮ್ಮಾ ರೈತನನ್ನು ಹೊಡೆದು ಓಡಿಸಿದಳು. ಆ ಕಮ್ಮಾ ರೈತನೊಬ್ಬನಿಗಾದ ಶಾಸ್ತಿಯನ್ನು ಇಡೀ ಕಮ್ಮಾ ಜಾತಿ ತನಗಾದ ಅವಮಾನವೆಂದು ಭಾವಿಸಿತು. ಈ ಹಿಂದಿನ ಚುನಾವಣೆಯ ಘಟನೆಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದವರಿಗೆ ತತ್‌ಕ್ಷಣದ ಕಾರಣ ದೊರಕಿತು.

ನೀರಿನ ತೊಟ್ಟಿಯ ಬಳಿ ನಡೆದಿದ್ದ ಗಲಾಟೆ ಸಂಬಂಧಿಸಿ ರಾಜಿ ಸಂಧಾನ ಮಾಡಿಕೊಳ್ಳೋಣವೆಂದು ದಲಿತ ಹಿರಿಯರನ್ನು ಕಮ್ಮಾ ಭೂಮಾಲೀಕರು ಒಪ್ಪಿಸಿದರು. ಜುಲೈ 17ರಂದು ಎರಡೂ ಕಡೆಯವರು ಪಂಚಾಯಿತಿ ಕಟ್ಟೆಯ ಬಳಿ ನೆರೆದರು. ಇದೇ ಸಮಯಕ್ಕೆ ಕಾಯುತ್ತಿದ್ದ ಕಮ್ಮಾ ಭೂಮಾಲೀಕರ ತಂಡ ಹಾಗೂ ಸುತ್ತಮುತ್ತಲಿದ್ದ ಅವರ ಸಂಬಂಧಿಕರು ಕತ್ತಿ, ಪಿಕಾಸಿ, ದೊಣ್ಣೆ, ಚೂರಿ, ಕುಡುಗೋಲುಗಳನ್ನು ಹಿಡಿದು ದಲಿತರ ಮೇಲೆರಗಿದರು. ನಿರಾಯುಧರಾದ ದಲಿತರು ಜೀವ ಉಳಿಸಿಕೊಳ್ಳಲು ಹೊಲಗದ್ದೆಗಳ ಹಾದಿಯನ್ನು ಹಿಡಿದರು. ಆದರೆ ಅವರನ್ನು ಬಿಡದಂತೆ ಹಿಂಬಾಲಿಸಿದ ಕಮ್ಮಾ ಸಮುದಾಯದ ಜಾತಿವಾದಿ ಕ್ರೂರಿಗಳು ಬೈಕು, ಟ್ರ್ಯಾಕ್ಟರ್, ಸೈಕಲ್ಲುಗಳ ಮೇಲೆ ಹತ್ತಿ ಬೆನ್ನತ್ತಿ ಒಬ್ಬೊಬ್ಬರನ್ನು ಪತ್ತೆ ಹಚ್ಚಿ ಕೊಲ್ಲುತ್ತಾ ಹೋದರು. ಸಿಕ್ಕಸಿಕ್ಕವರ ಮೇಲೆ ಹಲ್ಲೆ ಮಾಡಿದರು. ಈ ನರಮೇಧದಲ್ಲಿ ಕಮ್ಮಾಗಳು 6 ಜನ ಮಾದಿಗ ಯುವಕರನ್ನು ಕೊಂದುಹಾಕಿದರು. ಮೂವರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಅಟ್ಟಹಾಸ ಮೆರೆದರು. ಗರ್ಭಿಣಿಯರನ್ನೂ ಬಿಡದೆ ದೊಣ್ಣೆಯಿಂದ ಥಳಿಸಿದರು. ಹಲವರು ಪ್ರಾಣವನ್ನು ಉಳಿಸಿಕೊಳ್ಳಲು ಪಕ್ಕದ ಚಿರಾಲ ಪಟ್ಟಣಕ್ಕೆ ಓಡಿಹೋದರು. ಅಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಬ್ಬರು ಯುವಕರೂ ತೀರಿಕೊಂಡರು. ಈ ಸಮಯದಲ್ಲಿ ದಲಿತರನ್ನು ಕಾಪಾಡಿದ್ದು ಚಿರಾಲ ಪಟ್ಟಣದ ಒಂದು ಕ್ರೈಸ್ತ ಚರ್ಚ್. ವಾರವಿಡೀ ಅನ್ನವಿಟ್ಟು ಅವರನ್ನು ಪ್ರಾಣ ಭಯದಿಂದ ದೂರ ಮಾಡಿತು. ಆದರೆ ಈ ವಿಷಯ ತಿಳಿದ ಪೊಲೀಸರು ಚರ್ಚಿನಲ್ಲಿ ಪ್ರಾಣ ಭಯದಿಂದ ಬದುಕುತ್ತಿದ್ದ ದಲಿತರನ್ನೇ ಬಂಧಿಸಿತು. ಅಷ್ಟೊತ್ತಿಗೆ ಈ ನರಮೇಧ ಇಡೀ ಭಾರತದಾದ್ಯಂತ ಮನೆಮಾತಾಗಿತ್ತು. ಆಂಧ್ರಪ್ರದೇಶದ ದಕ್ಷ ಹೋರಾಟಗಾರರಾದ ಬೊಜ್ಜಾ ತಾರಕಂ ಮತ್ತು ಕಟ್ಟಿ ಪದ್ಮರಾವ್ ಇಬ್ಬರೂ ಸ್ಥಳೀಯವಾಗಿ ಎಚ್ಚೆತ್ತ ದಲಿತರನ್ನು ಸಂಘಟಿಸಿ ಕಾರಂಚೇಡು ದಲಿತರಿಗೆ ನ್ಯಾಯ ಕೊಡಿಸಲೋಸುಗ ಆಂಧ್ರಪ್ರದೇಶ ದಲಿತ ಮಹಾಸಭಾ ಸಂಘಟನೆ ಕಟ್ಟಿದರು. ಅದರ ಮೂಲಕ ದಲಿತರಿಗೆ ಧೈರ್ಯ ತುಂಬಲು ನೂರಾರು ಕಾರ್ಯಕ್ರಮ ರೂಪಿಸಿದರು. ಪ್ರಕಾಶಂ ಜಿಲ್ಲೆಯಲ್ಲಿ ಜಾಥಾ ಹಮ್ಮಿಕೊಂಡರು.

ಈ ಮೇಲಿನ ಹೋರಾಟದಿಂದಾಗಿ ಸೆಷನ್ ನ್ಯಾಯಾಲಯವು 159 ಕಮ್ಮಾ ಜಾತಿಯ ಜಾತಿವಾದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಆದರೆ ಪ್ರಮುಖ ಸಾಕ್ಷಿಯಾಗಿದ್ದ ದಲಿತ ಮಹಿಳೆಯ ಕೊಲೆಯೊಡನೆ ಪ್ರಕರಣ ಬೇರೆಯದೇ ಜಾಡು ಹಿಡಿಯಿತು. ಆಂಧ್ರಪ್ರದೇಶ ಹೈಕೋರ್ಟ್ ಅನುಮಾನಾಸ್ಪದ ವಿಚಾರಣೆ ಎಂಬ ನೆಪವೊಡ್ಡಿ ಅಪರಾಧಿಗಳಿಗೆ ಶಿಕ್ಷೆಯನ್ನು ತಡೆಹಿಡಿಯಿತು. ಆದರೆ ಬೊಜ್ಜಾ ತಾರಕಂರವರ ಸತತ ಪ್ರಯತ್ನದಿಂದ 2008ರಲ್ಲಿ ಸುಪ್ರೀಂ ಕೋರ್ಟ್, ಪ್ರಕರಣದ ಆರೋಪಿ ಒಬ್ಬನಿಗೆ ಜೀವಾವಧಿ ಶಿಕ್ಷೆಯನ್ನೂ ಉಳಿದ 30 ಮಂದಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಉಳಿದವರನ್ನು ಖುಲಾಸೆಗೊಳಿಸಿತು. ಈ ಪ್ರಕರಣದ ಮುಖ್ಯ ರೂವಾರಿ ಚೆಂಚುರಾಮಯ್ಯ ನ್ಯಾಯಾಲಯದ ಕಣ್ಣುಗಳಿಂದ ತಪ್ಪಿಸಿಕೊಂಡನು. ಆದರೆ ಪೀಪಲ್ಸ್ ವಾರ್ ತಂಡವು ಕಾರಂಚೇಡುವಿನ ಮನೆಗೆ ನುಗ್ಗಿ ಚೆಂಚುರಾಮಯ್ಯನನ್ನು ಹಾಡುಹಗಲೇ ಕೊಂದುಹಾಕಿತು. ಈ ನಡೆಯನ್ನು ದಲಿತ ಮಹಾಸಭಾ ಖಂಡಿಸಿತು. ನಿಜವೆಂದರೆ ಅಲ್ಲಿಂದ ಇಲ್ಲಿಯವರೆಗೂ ಪ್ರಕಾಶಂ ಜಿಲ್ಲೆಯಲ್ಲಿ ಇಂತಹ ಭೀಕರ ಘಟನೆ ಮತ್ತೊಂದು ನಡೆದಿಲ್ಲ.

ಆದರೂ ಇಂದಿಗೂ ಕಾರಂಚೇಡು ಗ್ರಾಮವನ್ನು ತೊರೆದು ಬಂದಿರುವ ಮಾದಿಗ ಕುಟುಂಬಗಳು ಮತ್ತೆ ಅಲ್ಲಿಗೆ ಹೋಗುವ ಮನಸ್ಸು ಮಾಡಿಲ್ಲವೆಂದರೆ ಅವರ ಮನಸ್ಸಲ್ಲಿ ಆ ಭೀಕರ ಹತ್ಯಾಕಾಂಡ ಮೂಡಿಸಿರುವ ಭಯವನ್ನು
ಅಂದಾಜಿಸಬಹುದಾಗಿದೆ. ಕಾರಂಚೇಡುವಿನಿಂದ ಓಡಿಬಂದ ಸುಮಾರು 500ಕ್ಕೂ ಹೆಚ್ಚು ಮಾದಿಗರು ಇಂದಿಗೂ ಪ್ರಕಾಶಂ ಜಿಲ್ಲೆಯಾದ್ಯಂತ ಅಲ್ಲಲ್ಲಿ ಬದುಕುಕಟ್ಟಿಕೊಂಡು ಜೀವಿಸುತ್ತಿದ್ದಾರೆ.

ಒಟ್ಟಾರೆ ಜಾತಿ ಅಸಮಾನತೆ ಹಾಗೂ ಜಾತಿಯ ದರ್ಪ ಶೂದ್ರ ಜಾತಿಗಳನ್ನೂ ಬಿಟ್ಟಿಲ್ಲ. ಮೇಲ್ಜಾತಿಗಳು ಶೂದ್ರರನ್ನು ಹಿಂದೆ ಹೇಗೆ ನಡೆಸಿಕೊಂಡು ಶೋಷಿಸಿದವೋ ಹಾಗೆಯೇ ಇಂದು ಶೂದ್ರ ಜಾತಿಗಳು ದಲಿತರನ್ನು ನಡೆಸಿಕೊಳ್ಳುತ್ತಿವೆ. ಜಾತಿ ವೈರಸ್ ಭಾರತೀಯರನ್ನೇ ಬಲಿ ತೆಗೆದುಕೊಂಡಿದೆ.


ಇದನ್ನೂ ಓದಿ: ಮಾತು ಮರೆತ ಭಾರತ; ಬೆಲ್ಚಿ ಫೈಲ್: ಭಾರತವನ್ನು ಬೆಚ್ಚಿ ಬೀಳಿಸಿದ ದಲಿತರ ನರಮೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೆಲವೇ ಕೆಲವರು ನಡೆಸುವ ಇಂಥಾ ಕೃತ್ಯಗಳಿಗೆ ಇಡೀ ಶೂದ್ರರೇ ಹೀಗೆ ಎಂಬಂತೆ ಬಿಂಬಿಸುವುದು ಸರಿಯಲ್ಲ. ಸುಳ್ಳು ದಲಿತ ದೌರ್ಜನ್ಯ ಕೇಸುಗಳಲ್ಲಿ ಅತೀ ಹೆಚ್ಚು ಕಷ್ಟನಷ್ಟಗಳನ್ನು ಅನುಭವಿಸಿದವರು ನಾವು ಶೂದ್ರರೇ…

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...