Homeಅಂಕಣಗಳುಮಾತು ಮರೆತ ಭಾರತ; ಕಿಲ್ವೇನ್ಮಣಿ ಫೈಲ್: ಸ್ವತಂತ್ರ ಭಾರತದ ಭೀಕರ ಹತ್ಯಾಕಾಂಡ

ಮಾತು ಮರೆತ ಭಾರತ; ಕಿಲ್ವೇನ್ಮಣಿ ಫೈಲ್: ಸ್ವತಂತ್ರ ಭಾರತದ ಭೀಕರ ಹತ್ಯಾಕಾಂಡ

- Advertisement -
- Advertisement -

1947ರ ಆಗಸ್ಟ್ 15ರಂದು ಭಾರತ ದೇಶವು ಬ್ರಿಟಿಷರಿಂದ ಸ್ವತಂತ್ರವಾಯಿತು. ಭಾರತೀಯರು ಬ್ರಿಟಿಷರ ದಬ್ಬಾಳಿಕೆಯಿಂದ ಮುಕ್ತಿ ಪಡೆದರು. 1950 ಜನವರಿ 26ರಂದು ಭಾರತದ ಸಂವಿಧಾನವು ಜಾರಿಗೊಂಡಿತು. ಅದು ಸಮಸ್ತ ಭಾರತೀಯರಿಗೂ ಮೂಲಭೂತ ಹಕ್ಕುಗಳನ್ನು ಖಾತ್ರಿಗೊಳಿಸಿತು. ಅದು ಸರ್ವ ಭಾರತೀಯರಿಗೂ ಸ್ವಾತಂತ್ರ್ಯ, ಸಮಾನತೆಯನ್ನು ಜಾರಿಗೊಳಿಸುವ ಜವಾಬ್ದಾರಿಯನ್ನು ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಹೆಗಲ ಮೇಲೆ ಹೇರಿತು. ಬ್ರಿಟಿಷರಿಂದ ರಾಜಕೀಯ ಸ್ವಾತಂತ್ರ್ಯ ಗಳಿಸಿಕೊಂಡ ಭಾರತವು ನಂತರದ ದಿನಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು ತನ್ನೆಲ್ಲಾ ಜನತೆಗೆ ಖಾತ್ರಿಗೊಳಿಸಲು ಸೋತಿದೆ. ಅದಕ್ಕೆ ಸ್ಪಷ್ಟ ನಿದರ್ಶನ ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸುವ ದೌರ್ಜನ್ಯಗಳಾಗಿವೆ.

ಸ್ವತಂತ್ರ ಭಾರತಕ್ಕೆ 20 ವರ್ಷಗಳಾಗಿತ್ತು. ಅಷ್ಟರಲ್ಲಿಯೇ ಅತ್ಯಂತ ಭೀಕರ ದಲಿತರ ಹತ್ಯಾಕಾಂಡ ತಮಿಳುನಾಡಿನ ಕಿಲ್ವೇನ್ಮಣಿಯಲ್ಲಿ ನಡೆಯಿತು. ಅದಕ್ಕೂ ಮೊದಲು ಅದೆಷ್ಟು ದೌರ್ಜನ್ಯಗಳಾಗಿದ್ದವೋ ಕಾಣೆ. ಅವುಗಳೆಲ್ಲ ಭಾರತದ ಇತಿಹಾಸದಲ್ಲಿ ಸಮಾಧಿಯಾಗಿ ಹೋಗಿವೆ. ಆದರೆ 1968 ಡಿಸೆಂಬರ್ 25ರಂದು ಕಿಲ್ವೇನ್ಮಣಿಯಲ್ಲಿ ನಡೆದದ್ದು ಅಕ್ಷರಶಃ ನರಮೇಧ.

60ರ ದಶಕ ಭಾರತದ ಭೂಹೋರಾಟಗಳ ಕಾಲಘಟ್ಟ ಎಂದೇ ಹೇಳಬಹುದು. ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದ ಎಡಪಂಥೀಯ ಸಂಘಟನೆಗಳು ಭೂರಹಿತ ಕೂಲಿ ಕಾರ್ಮಿಕರಿಗೆ
ಭೂಹಂಚಿಕೆ ಮಾಡುವಂತೆ ದೇಶಾದ್ಯಂತ ಹೋರಾಟ ರೂಪಿಸಿದ್ದವು. ಮಹಾರಾಷ್ಟ್ರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಅನುಯಾಯಿ ದಾದಾಸಾಹೇಬ್ ಗಾಯಕ್ವಾಡ್ ಸಹ ಭೂಹೋರಾಟ ಆರಂಭಿಸಿದ್ದು ಇದೇ ಕಾಲಘಟ್ಟದಲ್ಲಿ. ಬ್ರಿಟಿಷರಿಂದ ಭಾರತ ಸ್ವತಂತ್ರಗೊಂಡು 20 ವರ್ಷಗಳು ಕಳೆದಿದ್ದರೂ ಬೃಹತ್ ದೇವಾಲಯಗಳು ಹಾಗೂ ಮೇಲ್ಜಾತಿ ಭೂಮಾಲೀಕರು ಸಾವಿರಾರು ಎಕರೆಗಟ್ಟಲೆ ಭೂಮಿಯನ್ನು ವಶದಲ್ಲಿಟ್ಟುಕೊಂಡಿದ್ದರು. ಅಂದಿನ ಎಲ್ಲಾ ರಾಜಕೀಯ ಪಕ್ಷಗಳೂ ಭೂಮಾಲೀಕರ ಅಂಗಳವಾಗಿದ್ದ ಕಾರಣ ಅವರ ವಿರುದ್ಧ ತಿರುಗಿ ಬೀಳುವವರಿರಲಿಲ್ಲ. ಆದರೆ ಸೈದ್ಧಾಂತಿಕವಾಗಿ ಕೃಷಿಕೂಲಿಗಳ ಪರವಾಗಿಯೇ ಕೆಲಸ ಮಾಡುತ್ತಿದ್ದ ಕಮ್ಯುನಿಸ್ಟ್ ಸಂಘಟನೆಗಳು ಮಾತ್ರ ಭೂಹೋರಾಟವನ್ನೇ ಪ್ರಮುಖ ಕಾರ್ಯಕ್ರಮವನ್ನಾಗಿ ಮಾಡಿಕೊಂಡವು. ಇದರ ಪರಿಣಾಮವಾಗಿ ಹಳ್ಳಿಗಳಲ್ಲಿ ಕೃಷಿಕೂಲಿಗಳಾಗಿ ದುಡಿಯುತ್ತಿದ್ದ ದಲಿತರನ್ನು ಸಂಘಟಿಸಿದರು. ಇದೇ ರೀತಿಯಲ್ಲಿಯೇ ಅವಿಭಜಿತ ತಂಜಾವೂರು ಜಿಲ್ಲೆಯಲ್ಲಿಯೂ ಹಲವು ಸಂಘಟನೆಗಳಾದವು.

ತಮಿಳುನಾಡಿನ ಕಿಲ್ವೇನ್ಮಣಿ ದಲಿತ ಕೃಷಿಕೂಲಿಗಳೂ ಸಹ ಸಂಘಟನೆಯೊಂದನ್ನು ಸ್ಥಾಪಿಸಿಕೊಂಡರು. ಇದಕ್ಕೆ ತಕ್ಕಂತೆ ಹಸಿರು ಕ್ರಾಂತಿಯೂ ಸಹ ಭಾರತದಲ್ಲಿ ಮನೆಮಾತಾಗಿತ್ತು. ಈ ಸಂಘಟನೆಯ ಮೂಲಕ ಕೂಲಿ ದರವನ್ನು ಹೆಚ್ಚು ಮಾಡಲು ಭೂಮಾಲೀಕರನ್ನು ಆಗ್ರಹಿಸುತ್ತಿದ್ದರು. ಇದಕ್ಕೆ ವಿರುದ್ಧವಾಗಿ ಭೂಮಾಲೀಕರೂ ಸಹ ಭತ್ತ ಉತ್ಪಾದನೆ ಸಂಘಟನೆಯನ್ನು ಸ್ಥಾಪಿಸಿಕೊಂಡು ಒಗ್ಗಟ್ಟಾದರು. ಅಲ್ಲಿಂದ ಈ ಎರಡು ಸಂಘಟನೆಗಳ ನಡುವೆ ಆಗಾಗ ಸಂಘರ್ಷ ನಡೆಯುತ್ತಲೇ ಇತ್ತು. ಕೃಷಿ ಕೂಲಿಕಾರರು ತಮ್ಮ ಕೂಲಿ ದರವನ್ನು ಹೆಚ್ಚು ಮಾಡಿಸಿಕೊಳ್ಳಲು ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದರು. ಭೂಮಾಲೀಕರು ಕೃಷಿ ಕೂಲಿಗಳನ್ನು ಹದ್ದುಬಸ್ತಿನಲ್ಲಿಡುವ ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದರು.

1968ನೇ ಇಸವಿಯ ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಬೆಳೆ ಕೊಯ್ಲು ಸಮಯ ಬಂದಾಗ ಕೃಷಿಕೂಲಿಗಳ ಸಂಘಟನೆಯು ಭೂಮಾಲೀಕರು ಕೂಲಿ ದರ ಹೆಚ್ಚು ಮಾಡದಿದ್ದರೆ ಕೆಲಸಕ್ಕೆ ಬರುವುದಿಲ್ಲವೆಂದು ಘೋಷಿಸಿತು. ಎಂದಿನಂತೆ ಭೂಮಾಲೀಕರು ಕೃಷಿಕೂಲಿಗಳನ್ನು ವಿಭಜಿಸಿ ತಮ್ಮ ಆಟವನ್ನು ಆಡಲು ಮುಂದಾದರಾದರೂ ಈ ಬಾರಿ ಸಂಘಟನೆಯ ಕಾರಣಕ್ಕಾಗಿ ಒಬ್ಬ/ಳು ಕೃಷಿಕೂಲಿಯೂ ಅಲ್ಲಾಡಲಿಲ್ಲ. ಈ ಬೆಳವಣಿಗೆ ಭೂಮಾಲೀಕರ ಪಿತ್ತ ನೆತ್ತಿಗೇರಿಸಿತ್ತು. ಆದರೂ ಪಕ್ಕದ ಊರಿನ ಕೃಷಿಕೂಲಿಗಳನ್ನು ಕರೆಸಿ ಕೊಯ್ಲು ಮಾಡಿಸಿಕೊಳ್ಳುವಲ್ಲಿ ಮೇಲ್ಜಾತಿ ಭೂಮಾಲೀಕರು ಯಶಸ್ವಿಯಾದರು. ಈ ಘಟನೆ ಎರಡೂ ಪಾಳೆಯದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿತ್ತು.

ಇಂತಹ ಪರಿಸ್ಥಿತಿಯಲ್ಲಿ ಕಿಲ್ವೇನ್ಮಣಿಯ ಕಿರಾಣಿ ಅಂಗಡಿಯ ಮಾಲೀಕನೊಬ್ಬನನ್ನು ಭೂಮಾಲೀಕರ ಬೆಂಬಲಿಗರು ಅಪಹರಣ ಮಾಡಿದರು. ಇದಕ್ಕೆ ಮುಖ್ಯ ಕಾರಣ ಭೂಮಾಲೀಕರು ದಲಿತ ಕೃಷಿಕೂಲಿಗಳನ್ನು ಬಹಿಷ್ಕಾರ ಹಾಕಿದ್ದರೂ ಅವರಿಗೆ ಆ ಅಂಗಡಿಯ ಮಾಲೀಕ ದವಸ ಧಾನ್ಯಗಳನ್ನು ನೀಡಿದ್ದು. ಹೀಗೆ ಅಪಹರಣಗೊಂಡ ವ್ಯಕ್ತಿಯನ್ನು ಬಿಡಿಸಿಕೊಂಡು ಬರಲು ತೆರಳಿದ ಕೃಷಿ ಕೂಲಿಗಳ ಹಾಗೂ ಭೂಮಾಲೀಕರ ಗೂಂಡಾಗಳ ನಡುವೆ ಸಂಘರ್ಷವೇರ್ಪಟ್ಟು ಭೂಮಾಲೀಕರ ಬೆಂಬಲಿಗನೊಬ್ಬ ಅದರಲ್ಲಿ ಹತ್ಯೆಯಾದನು. ಈ ಘಟನೆ ಕಿಲ್ವೇನ್ಮಣಿಯ ಹತ್ಯಾಕಾಂಡಕ್ಕೆ ತಕ್ಷಣದ ಕಾರಣವಾಯಿತು. ಆದರೆ ಮೇಲ್ಜಾತಿ ಭೂಮಾಲೀಕರಲ್ಲಿದ್ದ ’ಸ್ವಾಭಿಮಾನಿ ದಲಿತ’ರ ಮೇಲಿನ ಸಿಟ್ಟು ಅದಕ್ಕೆ ಶಾಶ್ವತ ಕಾರಣವಾಗಿತ್ತು.

1968 ಡಿಸೆಂಬರ್ 25ನೇ ತಾರೀಖಿನಂದು ರಾತ್ರಿ ಹತ್ತು ಗಂಟೆಯ ಸಮಯಕ್ಕೆ ಲಾರಿಗಳಲ್ಲಿ ಬಂದ ಸುಮಾರು 200 ಭೂಮಾಲೀಕರ ಗೂಂಡಾಗಳು ದಲಿತ ಕೇರಿಯನ್ನು ಸುತ್ತುವರಿದು ನಿಂತರು. ಕೇರಿಯಿಂದ ಒಂದು ಸೊಳ್ಳೆಯೂ ಹೊರಹೋಗದಂತೆ ದಿಗ್ಭಂಧನ ವಿಧಿಸಿದರು. ಇಬ್ಬರು ಕೃಷಿಕೂಲಿಗಳನ್ನು ಗುರಿಮಾಡಿ ಬಂದೂಕಿನಿಂದ ಸುಟ್ಟು ಗಾಯಗೊಳಿಸಲಾಯಿತು. ಈ ಸದ್ದು ತಿಳಿದು ಹೊರಬಂದ ದಲಿತರ ಕೈಯಲ್ಲಿದ್ದ ಆಯುಧ ಕೇವಲ ಕಲ್ಲುಗಳು ಮಾತ್ರ. ಒಂದೆಡೆ ದಲಿತ ಯುವಕರು ಹಾಗೂ ವಯಸ್ಕರು ಕಲ್ಲುಗಳನ್ನು ತೂರುತ್ತಾ ಭೂಮಾಲೀಕರ ಗೂಂಡಾಗಳನ್ನು ಹಿಂದೆ ಸರಿಸುತ್ತಿದ್ದರೆ ಭೂಮಾಲೀಕರ ಗೂಂಡಾಗಳು ದಲಿತರು ಗುಂಪುಗಟ್ಟಿದ್ದ ಸ್ಥಳವನ್ನು ಹುಡುಕುತ್ತಿದ್ದರು. ಸುರಕ್ಷತೆಗಾಗಿ ಹೆಂಗಸರು, ವಯಸ್ಸಾದ ಮುದುಕ, ಮುದುಕಿಯರು ಹಾಗೂ ಮಕ್ಕಳನ್ನು ತನ್ನೊಡಲಲ್ಲಿ ತುಂಬಿಕೊಂಡಿದ್ದ ಗುಡಿಸಲು ಆ ಪಾಪಿಗಳ ಕಣ್ಣಿಗೆ ಬಿದ್ದೇಬಿಟ್ಟಿತು. ಆ ಗುಡಿಸಿಲಿನ ಸುತ್ತ ನೆರೆದ ದುಷ್ಕರ್ಮಿಗಳು ಗುಡಿಸಲಿಗೆ ಬೆಂಕಿ ಇಟ್ಟೇಬಿಟ್ಟರು. ಬೆಂಕಿಯ ತಾಪ ತಾಳಲಾರದೇ ಹೊರಬಂದ ಇಬ್ಬರು ಮುದುಕರನ್ನು ಕತ್ತರಿಸಿ ಮತ್ತೆ ಗುಡಿಸಿಲಿನೊಳಕ್ಕೆ ಎಸೆದರು. ಮಕ್ಕಳಾದರೂ ಬದುಕಿಕೊಳ್ಳಲೆಂದು ಗುಡಿಸಿಲಿನೊಳಗಿದ್ದ ಹೆಂಗಸರು ಇಬ್ಬರು ಮಕ್ಕಳನ್ನು ಹೊರಹಾಕಿದರು. ಆದರೆ ಒಂದೇ ಕ್ಷಣದಲ್ಲಿ ಮತ್ತೆ ಆ ಮಕ್ಕಳಿಬ್ಬರನ್ನೂ ಧಗಧಗನೆ ಉರಿಯುತ್ತಿರುವ ಗುಡಿಸಿಲಿನೊಳಕ್ಕೆ ಎಸೆಯಲಾಯಿತು. ಕೆಲವೇ ಕ್ಷಣಗಳಲ್ಲಿ ಆ ಗುಡಿಸಲು ಸುಟ್ಟು ಭಸ್ಮವಾಯಿತು. ಅದರಲ್ಲಿದ್ದ 5 ಮುದುಕರು, 16 ಮಹಿಳೆಯರು ಹಾಗೂ 23 ಮಕ್ಕಳೂ ಸೇರಿ 44 ಜನ ದಲಿತರು ಸುಟ್ಟು ಕರಕಲಾಗಿದ್ದರು.

ಇಂತಹ ನರಮೇಧ ನಡೆಸಿದ ಮೇಲೆ ಆ ದುಷ್ಕರ್ಮಿಗಳು ನೇರವಾಗಿ ಹೋದದ್ದು ಪೊಲೀಸ್ ಸ್ಟೇಷನ್ನಿಗೆ. ಅಲ್ಲಿ ತಮಗೆ ರಕ್ಷಣೆ ಬೇಕೆಂದು ಪೊಲೀಸ್ ಸೆಕ್ಯುರಿಟಿ ಪಡೆದರು. ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಅಣ್ಣಾದೊರೈ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದರು. ಭೂಮಾಲೀಕರನ್ನು ಹಾಗೂ ದುಷ್ಕರ್ಮಿಗಳನ್ನು ಜೈಲಿಗೆ ಅಟ್ಟಲಾಯಿತು. 10 ಜನರಿಗೆ 10 ವರ್ಷಗಳ ಕಾಲ ಶಿಕ್ಷೆಯನ್ನು ಸೆಷನ್ ಕೋರ್ಟ್ ವಿಧಿಸಿತು. ಅದರಲ್ಲಿ ಭೂಮಾಲೀಕರ ನಾಯಕ ಗೋಪಾಲಕೃಷ್ಣನ್ ನಾಯ್ಡು ಸಹ ಸೇರಿದ್ದನು. ಆದರೆ 1975ರಲ್ಲಿ ಸಾಕ್ಷಿಗಳ ಕೊರತೆಯ ಕಾರಣ ನೀಡಿ ಮದ್ರಾಸ್ ಹೈ ಕೋರ್ಟ್ ನಾಯ್ಡುಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ಬಿಡುಗಡೆಗೊಳಿಸಿತು. ನ್ಯಾಯಾಲಯದ ಶಿಕ್ಷೆಯಿಂದ ತಪ್ಪಿಸಿಕೊಂಡ ನಾಯ್ಡುವನ್ನು 1980ರಲ್ಲಿ ಪ್ರತೀಕಾರವಾಗಿ ಕೊಲೆ ಮಾಡಲಾಯಿತು.

ಕಿಲ್ವೇನ್ಮಣಿ ಘಟನೆಯು ಭಾರತದ ಭೂಹೋರಾಟಗಳ ಧಿಕ್ಕನ್ನು ಬದಲಾಯಿಸಿತು. ದೇಶಾದ್ಯಂತ ಹಲವು ಕಡೆ ನೂರಾರು ಭೂಹೋರಾಟಗಳು ನಡೆದವು. ವಿಪರ್ಯಾಸವೆಂದರೆ ಪ್ರತಿ ಬಾರಿಯೂ ಈ ದೇಶದಲ್ಲಿ ಒಂದು ಹುಲ್ಲುಕಡ್ಡಿಯು ಪ್ರಗತಿಪರವಾಗಿ ಅಲುಗಾಡಬೇಕೆಂದರೆ ದಲಿತರ ಮಾರಣ ಹೋಮವೇ ನಡೆಯಬೇಕಲ್ಲ!

ಕಿಲ್ವೇನ್ಮಣಿ ಘಟನೆ ಅಧರಿಸಿ ಹಲವು ಕಾದಂಬರಿಗಳು ಬಂದಿವೆ. ಸಿನೆಮಾಗಳನ್ನು ಮಾಡಲಾಗಿದೆ. ಇತ್ತೀಚೆಗೆ ತಮಿಳಿನಲ್ಲಿ ತೆರೆಕಂಡ ಅಸುರನ್ ಸಿನೆಮಾದಲ್ಲಿ ಕಿಲ್ವೇನ್ಮಣಿ ಹೋಲುವ ಘಟನೆಯೂ ಸೇರಿದೆ. ಅರವಿಂದನ್ ಸಿನೆಮಾದ ಪ್ರಮುಖ ಕಥೆ ಕಿಲ್ವೇನ್ಮಣಿ.

ಕೋಮುವಾದದ ಫೈಲ್ಸ್‌ಗಳೇ ಸದ್ದು ಮಾಡುತ್ತಿರುವ ಈ ಕಾಲಘಟ್ಟದಲ್ಲಿ ದಲಿತ್ ಫೈಲ್ಸ್‌ಗಳನ್ನು ಪರಿಗಣಿಸುವುದೇ ಈ ಮೇಲ್ಜಾತಿ ಹಿಂದೂ ಸಮಾಜ?


ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...