Homeಅಂಕಣಗಳುಮಾತು ಮರೆತ ಭಾರತ; ಕಿಲ್ವೇನ್ಮಣಿ ಫೈಲ್: ಸ್ವತಂತ್ರ ಭಾರತದ ಭೀಕರ ಹತ್ಯಾಕಾಂಡ

ಮಾತು ಮರೆತ ಭಾರತ; ಕಿಲ್ವೇನ್ಮಣಿ ಫೈಲ್: ಸ್ವತಂತ್ರ ಭಾರತದ ಭೀಕರ ಹತ್ಯಾಕಾಂಡ

- Advertisement -
- Advertisement -

1947ರ ಆಗಸ್ಟ್ 15ರಂದು ಭಾರತ ದೇಶವು ಬ್ರಿಟಿಷರಿಂದ ಸ್ವತಂತ್ರವಾಯಿತು. ಭಾರತೀಯರು ಬ್ರಿಟಿಷರ ದಬ್ಬಾಳಿಕೆಯಿಂದ ಮುಕ್ತಿ ಪಡೆದರು. 1950 ಜನವರಿ 26ರಂದು ಭಾರತದ ಸಂವಿಧಾನವು ಜಾರಿಗೊಂಡಿತು. ಅದು ಸಮಸ್ತ ಭಾರತೀಯರಿಗೂ ಮೂಲಭೂತ ಹಕ್ಕುಗಳನ್ನು ಖಾತ್ರಿಗೊಳಿಸಿತು. ಅದು ಸರ್ವ ಭಾರತೀಯರಿಗೂ ಸ್ವಾತಂತ್ರ್ಯ, ಸಮಾನತೆಯನ್ನು ಜಾರಿಗೊಳಿಸುವ ಜವಾಬ್ದಾರಿಯನ್ನು ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಹೆಗಲ ಮೇಲೆ ಹೇರಿತು. ಬ್ರಿಟಿಷರಿಂದ ರಾಜಕೀಯ ಸ್ವಾತಂತ್ರ್ಯ ಗಳಿಸಿಕೊಂಡ ಭಾರತವು ನಂತರದ ದಿನಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು ತನ್ನೆಲ್ಲಾ ಜನತೆಗೆ ಖಾತ್ರಿಗೊಳಿಸಲು ಸೋತಿದೆ. ಅದಕ್ಕೆ ಸ್ಪಷ್ಟ ನಿದರ್ಶನ ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸುವ ದೌರ್ಜನ್ಯಗಳಾಗಿವೆ.

ಸ್ವತಂತ್ರ ಭಾರತಕ್ಕೆ 20 ವರ್ಷಗಳಾಗಿತ್ತು. ಅಷ್ಟರಲ್ಲಿಯೇ ಅತ್ಯಂತ ಭೀಕರ ದಲಿತರ ಹತ್ಯಾಕಾಂಡ ತಮಿಳುನಾಡಿನ ಕಿಲ್ವೇನ್ಮಣಿಯಲ್ಲಿ ನಡೆಯಿತು. ಅದಕ್ಕೂ ಮೊದಲು ಅದೆಷ್ಟು ದೌರ್ಜನ್ಯಗಳಾಗಿದ್ದವೋ ಕಾಣೆ. ಅವುಗಳೆಲ್ಲ ಭಾರತದ ಇತಿಹಾಸದಲ್ಲಿ ಸಮಾಧಿಯಾಗಿ ಹೋಗಿವೆ. ಆದರೆ 1968 ಡಿಸೆಂಬರ್ 25ರಂದು ಕಿಲ್ವೇನ್ಮಣಿಯಲ್ಲಿ ನಡೆದದ್ದು ಅಕ್ಷರಶಃ ನರಮೇಧ.

60ರ ದಶಕ ಭಾರತದ ಭೂಹೋರಾಟಗಳ ಕಾಲಘಟ್ಟ ಎಂದೇ ಹೇಳಬಹುದು. ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದ ಎಡಪಂಥೀಯ ಸಂಘಟನೆಗಳು ಭೂರಹಿತ ಕೂಲಿ ಕಾರ್ಮಿಕರಿಗೆ
ಭೂಹಂಚಿಕೆ ಮಾಡುವಂತೆ ದೇಶಾದ್ಯಂತ ಹೋರಾಟ ರೂಪಿಸಿದ್ದವು. ಮಹಾರಾಷ್ಟ್ರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಅನುಯಾಯಿ ದಾದಾಸಾಹೇಬ್ ಗಾಯಕ್ವಾಡ್ ಸಹ ಭೂಹೋರಾಟ ಆರಂಭಿಸಿದ್ದು ಇದೇ ಕಾಲಘಟ್ಟದಲ್ಲಿ. ಬ್ರಿಟಿಷರಿಂದ ಭಾರತ ಸ್ವತಂತ್ರಗೊಂಡು 20 ವರ್ಷಗಳು ಕಳೆದಿದ್ದರೂ ಬೃಹತ್ ದೇವಾಲಯಗಳು ಹಾಗೂ ಮೇಲ್ಜಾತಿ ಭೂಮಾಲೀಕರು ಸಾವಿರಾರು ಎಕರೆಗಟ್ಟಲೆ ಭೂಮಿಯನ್ನು ವಶದಲ್ಲಿಟ್ಟುಕೊಂಡಿದ್ದರು. ಅಂದಿನ ಎಲ್ಲಾ ರಾಜಕೀಯ ಪಕ್ಷಗಳೂ ಭೂಮಾಲೀಕರ ಅಂಗಳವಾಗಿದ್ದ ಕಾರಣ ಅವರ ವಿರುದ್ಧ ತಿರುಗಿ ಬೀಳುವವರಿರಲಿಲ್ಲ. ಆದರೆ ಸೈದ್ಧಾಂತಿಕವಾಗಿ ಕೃಷಿಕೂಲಿಗಳ ಪರವಾಗಿಯೇ ಕೆಲಸ ಮಾಡುತ್ತಿದ್ದ ಕಮ್ಯುನಿಸ್ಟ್ ಸಂಘಟನೆಗಳು ಮಾತ್ರ ಭೂಹೋರಾಟವನ್ನೇ ಪ್ರಮುಖ ಕಾರ್ಯಕ್ರಮವನ್ನಾಗಿ ಮಾಡಿಕೊಂಡವು. ಇದರ ಪರಿಣಾಮವಾಗಿ ಹಳ್ಳಿಗಳಲ್ಲಿ ಕೃಷಿಕೂಲಿಗಳಾಗಿ ದುಡಿಯುತ್ತಿದ್ದ ದಲಿತರನ್ನು ಸಂಘಟಿಸಿದರು. ಇದೇ ರೀತಿಯಲ್ಲಿಯೇ ಅವಿಭಜಿತ ತಂಜಾವೂರು ಜಿಲ್ಲೆಯಲ್ಲಿಯೂ ಹಲವು ಸಂಘಟನೆಗಳಾದವು.

ತಮಿಳುನಾಡಿನ ಕಿಲ್ವೇನ್ಮಣಿ ದಲಿತ ಕೃಷಿಕೂಲಿಗಳೂ ಸಹ ಸಂಘಟನೆಯೊಂದನ್ನು ಸ್ಥಾಪಿಸಿಕೊಂಡರು. ಇದಕ್ಕೆ ತಕ್ಕಂತೆ ಹಸಿರು ಕ್ರಾಂತಿಯೂ ಸಹ ಭಾರತದಲ್ಲಿ ಮನೆಮಾತಾಗಿತ್ತು. ಈ ಸಂಘಟನೆಯ ಮೂಲಕ ಕೂಲಿ ದರವನ್ನು ಹೆಚ್ಚು ಮಾಡಲು ಭೂಮಾಲೀಕರನ್ನು ಆಗ್ರಹಿಸುತ್ತಿದ್ದರು. ಇದಕ್ಕೆ ವಿರುದ್ಧವಾಗಿ ಭೂಮಾಲೀಕರೂ ಸಹ ಭತ್ತ ಉತ್ಪಾದನೆ ಸಂಘಟನೆಯನ್ನು ಸ್ಥಾಪಿಸಿಕೊಂಡು ಒಗ್ಗಟ್ಟಾದರು. ಅಲ್ಲಿಂದ ಈ ಎರಡು ಸಂಘಟನೆಗಳ ನಡುವೆ ಆಗಾಗ ಸಂಘರ್ಷ ನಡೆಯುತ್ತಲೇ ಇತ್ತು. ಕೃಷಿ ಕೂಲಿಕಾರರು ತಮ್ಮ ಕೂಲಿ ದರವನ್ನು ಹೆಚ್ಚು ಮಾಡಿಸಿಕೊಳ್ಳಲು ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದರು. ಭೂಮಾಲೀಕರು ಕೃಷಿ ಕೂಲಿಗಳನ್ನು ಹದ್ದುಬಸ್ತಿನಲ್ಲಿಡುವ ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದರು.

1968ನೇ ಇಸವಿಯ ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಬೆಳೆ ಕೊಯ್ಲು ಸಮಯ ಬಂದಾಗ ಕೃಷಿಕೂಲಿಗಳ ಸಂಘಟನೆಯು ಭೂಮಾಲೀಕರು ಕೂಲಿ ದರ ಹೆಚ್ಚು ಮಾಡದಿದ್ದರೆ ಕೆಲಸಕ್ಕೆ ಬರುವುದಿಲ್ಲವೆಂದು ಘೋಷಿಸಿತು. ಎಂದಿನಂತೆ ಭೂಮಾಲೀಕರು ಕೃಷಿಕೂಲಿಗಳನ್ನು ವಿಭಜಿಸಿ ತಮ್ಮ ಆಟವನ್ನು ಆಡಲು ಮುಂದಾದರಾದರೂ ಈ ಬಾರಿ ಸಂಘಟನೆಯ ಕಾರಣಕ್ಕಾಗಿ ಒಬ್ಬ/ಳು ಕೃಷಿಕೂಲಿಯೂ ಅಲ್ಲಾಡಲಿಲ್ಲ. ಈ ಬೆಳವಣಿಗೆ ಭೂಮಾಲೀಕರ ಪಿತ್ತ ನೆತ್ತಿಗೇರಿಸಿತ್ತು. ಆದರೂ ಪಕ್ಕದ ಊರಿನ ಕೃಷಿಕೂಲಿಗಳನ್ನು ಕರೆಸಿ ಕೊಯ್ಲು ಮಾಡಿಸಿಕೊಳ್ಳುವಲ್ಲಿ ಮೇಲ್ಜಾತಿ ಭೂಮಾಲೀಕರು ಯಶಸ್ವಿಯಾದರು. ಈ ಘಟನೆ ಎರಡೂ ಪಾಳೆಯದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿತ್ತು.

ಇಂತಹ ಪರಿಸ್ಥಿತಿಯಲ್ಲಿ ಕಿಲ್ವೇನ್ಮಣಿಯ ಕಿರಾಣಿ ಅಂಗಡಿಯ ಮಾಲೀಕನೊಬ್ಬನನ್ನು ಭೂಮಾಲೀಕರ ಬೆಂಬಲಿಗರು ಅಪಹರಣ ಮಾಡಿದರು. ಇದಕ್ಕೆ ಮುಖ್ಯ ಕಾರಣ ಭೂಮಾಲೀಕರು ದಲಿತ ಕೃಷಿಕೂಲಿಗಳನ್ನು ಬಹಿಷ್ಕಾರ ಹಾಕಿದ್ದರೂ ಅವರಿಗೆ ಆ ಅಂಗಡಿಯ ಮಾಲೀಕ ದವಸ ಧಾನ್ಯಗಳನ್ನು ನೀಡಿದ್ದು. ಹೀಗೆ ಅಪಹರಣಗೊಂಡ ವ್ಯಕ್ತಿಯನ್ನು ಬಿಡಿಸಿಕೊಂಡು ಬರಲು ತೆರಳಿದ ಕೃಷಿ ಕೂಲಿಗಳ ಹಾಗೂ ಭೂಮಾಲೀಕರ ಗೂಂಡಾಗಳ ನಡುವೆ ಸಂಘರ್ಷವೇರ್ಪಟ್ಟು ಭೂಮಾಲೀಕರ ಬೆಂಬಲಿಗನೊಬ್ಬ ಅದರಲ್ಲಿ ಹತ್ಯೆಯಾದನು. ಈ ಘಟನೆ ಕಿಲ್ವೇನ್ಮಣಿಯ ಹತ್ಯಾಕಾಂಡಕ್ಕೆ ತಕ್ಷಣದ ಕಾರಣವಾಯಿತು. ಆದರೆ ಮೇಲ್ಜಾತಿ ಭೂಮಾಲೀಕರಲ್ಲಿದ್ದ ’ಸ್ವಾಭಿಮಾನಿ ದಲಿತ’ರ ಮೇಲಿನ ಸಿಟ್ಟು ಅದಕ್ಕೆ ಶಾಶ್ವತ ಕಾರಣವಾಗಿತ್ತು.

1968 ಡಿಸೆಂಬರ್ 25ನೇ ತಾರೀಖಿನಂದು ರಾತ್ರಿ ಹತ್ತು ಗಂಟೆಯ ಸಮಯಕ್ಕೆ ಲಾರಿಗಳಲ್ಲಿ ಬಂದ ಸುಮಾರು 200 ಭೂಮಾಲೀಕರ ಗೂಂಡಾಗಳು ದಲಿತ ಕೇರಿಯನ್ನು ಸುತ್ತುವರಿದು ನಿಂತರು. ಕೇರಿಯಿಂದ ಒಂದು ಸೊಳ್ಳೆಯೂ ಹೊರಹೋಗದಂತೆ ದಿಗ್ಭಂಧನ ವಿಧಿಸಿದರು. ಇಬ್ಬರು ಕೃಷಿಕೂಲಿಗಳನ್ನು ಗುರಿಮಾಡಿ ಬಂದೂಕಿನಿಂದ ಸುಟ್ಟು ಗಾಯಗೊಳಿಸಲಾಯಿತು. ಈ ಸದ್ದು ತಿಳಿದು ಹೊರಬಂದ ದಲಿತರ ಕೈಯಲ್ಲಿದ್ದ ಆಯುಧ ಕೇವಲ ಕಲ್ಲುಗಳು ಮಾತ್ರ. ಒಂದೆಡೆ ದಲಿತ ಯುವಕರು ಹಾಗೂ ವಯಸ್ಕರು ಕಲ್ಲುಗಳನ್ನು ತೂರುತ್ತಾ ಭೂಮಾಲೀಕರ ಗೂಂಡಾಗಳನ್ನು ಹಿಂದೆ ಸರಿಸುತ್ತಿದ್ದರೆ ಭೂಮಾಲೀಕರ ಗೂಂಡಾಗಳು ದಲಿತರು ಗುಂಪುಗಟ್ಟಿದ್ದ ಸ್ಥಳವನ್ನು ಹುಡುಕುತ್ತಿದ್ದರು. ಸುರಕ್ಷತೆಗಾಗಿ ಹೆಂಗಸರು, ವಯಸ್ಸಾದ ಮುದುಕ, ಮುದುಕಿಯರು ಹಾಗೂ ಮಕ್ಕಳನ್ನು ತನ್ನೊಡಲಲ್ಲಿ ತುಂಬಿಕೊಂಡಿದ್ದ ಗುಡಿಸಲು ಆ ಪಾಪಿಗಳ ಕಣ್ಣಿಗೆ ಬಿದ್ದೇಬಿಟ್ಟಿತು. ಆ ಗುಡಿಸಿಲಿನ ಸುತ್ತ ನೆರೆದ ದುಷ್ಕರ್ಮಿಗಳು ಗುಡಿಸಲಿಗೆ ಬೆಂಕಿ ಇಟ್ಟೇಬಿಟ್ಟರು. ಬೆಂಕಿಯ ತಾಪ ತಾಳಲಾರದೇ ಹೊರಬಂದ ಇಬ್ಬರು ಮುದುಕರನ್ನು ಕತ್ತರಿಸಿ ಮತ್ತೆ ಗುಡಿಸಿಲಿನೊಳಕ್ಕೆ ಎಸೆದರು. ಮಕ್ಕಳಾದರೂ ಬದುಕಿಕೊಳ್ಳಲೆಂದು ಗುಡಿಸಿಲಿನೊಳಗಿದ್ದ ಹೆಂಗಸರು ಇಬ್ಬರು ಮಕ್ಕಳನ್ನು ಹೊರಹಾಕಿದರು. ಆದರೆ ಒಂದೇ ಕ್ಷಣದಲ್ಲಿ ಮತ್ತೆ ಆ ಮಕ್ಕಳಿಬ್ಬರನ್ನೂ ಧಗಧಗನೆ ಉರಿಯುತ್ತಿರುವ ಗುಡಿಸಿಲಿನೊಳಕ್ಕೆ ಎಸೆಯಲಾಯಿತು. ಕೆಲವೇ ಕ್ಷಣಗಳಲ್ಲಿ ಆ ಗುಡಿಸಲು ಸುಟ್ಟು ಭಸ್ಮವಾಯಿತು. ಅದರಲ್ಲಿದ್ದ 5 ಮುದುಕರು, 16 ಮಹಿಳೆಯರು ಹಾಗೂ 23 ಮಕ್ಕಳೂ ಸೇರಿ 44 ಜನ ದಲಿತರು ಸುಟ್ಟು ಕರಕಲಾಗಿದ್ದರು.

ಇಂತಹ ನರಮೇಧ ನಡೆಸಿದ ಮೇಲೆ ಆ ದುಷ್ಕರ್ಮಿಗಳು ನೇರವಾಗಿ ಹೋದದ್ದು ಪೊಲೀಸ್ ಸ್ಟೇಷನ್ನಿಗೆ. ಅಲ್ಲಿ ತಮಗೆ ರಕ್ಷಣೆ ಬೇಕೆಂದು ಪೊಲೀಸ್ ಸೆಕ್ಯುರಿಟಿ ಪಡೆದರು. ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಅಣ್ಣಾದೊರೈ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದರು. ಭೂಮಾಲೀಕರನ್ನು ಹಾಗೂ ದುಷ್ಕರ್ಮಿಗಳನ್ನು ಜೈಲಿಗೆ ಅಟ್ಟಲಾಯಿತು. 10 ಜನರಿಗೆ 10 ವರ್ಷಗಳ ಕಾಲ ಶಿಕ್ಷೆಯನ್ನು ಸೆಷನ್ ಕೋರ್ಟ್ ವಿಧಿಸಿತು. ಅದರಲ್ಲಿ ಭೂಮಾಲೀಕರ ನಾಯಕ ಗೋಪಾಲಕೃಷ್ಣನ್ ನಾಯ್ಡು ಸಹ ಸೇರಿದ್ದನು. ಆದರೆ 1975ರಲ್ಲಿ ಸಾಕ್ಷಿಗಳ ಕೊರತೆಯ ಕಾರಣ ನೀಡಿ ಮದ್ರಾಸ್ ಹೈ ಕೋರ್ಟ್ ನಾಯ್ಡುಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ಬಿಡುಗಡೆಗೊಳಿಸಿತು. ನ್ಯಾಯಾಲಯದ ಶಿಕ್ಷೆಯಿಂದ ತಪ್ಪಿಸಿಕೊಂಡ ನಾಯ್ಡುವನ್ನು 1980ರಲ್ಲಿ ಪ್ರತೀಕಾರವಾಗಿ ಕೊಲೆ ಮಾಡಲಾಯಿತು.

ಕಿಲ್ವೇನ್ಮಣಿ ಘಟನೆಯು ಭಾರತದ ಭೂಹೋರಾಟಗಳ ಧಿಕ್ಕನ್ನು ಬದಲಾಯಿಸಿತು. ದೇಶಾದ್ಯಂತ ಹಲವು ಕಡೆ ನೂರಾರು ಭೂಹೋರಾಟಗಳು ನಡೆದವು. ವಿಪರ್ಯಾಸವೆಂದರೆ ಪ್ರತಿ ಬಾರಿಯೂ ಈ ದೇಶದಲ್ಲಿ ಒಂದು ಹುಲ್ಲುಕಡ್ಡಿಯು ಪ್ರಗತಿಪರವಾಗಿ ಅಲುಗಾಡಬೇಕೆಂದರೆ ದಲಿತರ ಮಾರಣ ಹೋಮವೇ ನಡೆಯಬೇಕಲ್ಲ!

ಕಿಲ್ವೇನ್ಮಣಿ ಘಟನೆ ಅಧರಿಸಿ ಹಲವು ಕಾದಂಬರಿಗಳು ಬಂದಿವೆ. ಸಿನೆಮಾಗಳನ್ನು ಮಾಡಲಾಗಿದೆ. ಇತ್ತೀಚೆಗೆ ತಮಿಳಿನಲ್ಲಿ ತೆರೆಕಂಡ ಅಸುರನ್ ಸಿನೆಮಾದಲ್ಲಿ ಕಿಲ್ವೇನ್ಮಣಿ ಹೋಲುವ ಘಟನೆಯೂ ಸೇರಿದೆ. ಅರವಿಂದನ್ ಸಿನೆಮಾದ ಪ್ರಮುಖ ಕಥೆ ಕಿಲ್ವೇನ್ಮಣಿ.

ಕೋಮುವಾದದ ಫೈಲ್ಸ್‌ಗಳೇ ಸದ್ದು ಮಾಡುತ್ತಿರುವ ಈ ಕಾಲಘಟ್ಟದಲ್ಲಿ ದಲಿತ್ ಫೈಲ್ಸ್‌ಗಳನ್ನು ಪರಿಗಣಿಸುವುದೇ ಈ ಮೇಲ್ಜಾತಿ ಹಿಂದೂ ಸಮಾಜ?


ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...