Homeಅಂಕಣಗಳುಮಾತು ಮರೆತ ಭಾರತ-23; ಮಿರ್ಚ್‌ಪುರ ಫೈಲ್: ಊರುಬಿಟ್ಟ ದಲಿತರಿಗೆ ಧೈರ್ಯ ತುಂಬುವವರಾರು?

ಮಾತು ಮರೆತ ಭಾರತ-23; ಮಿರ್ಚ್‌ಪುರ ಫೈಲ್: ಊರುಬಿಟ್ಟ ದಲಿತರಿಗೆ ಧೈರ್ಯ ತುಂಬುವವರಾರು?

- Advertisement -
- Advertisement -

ಮಿರ್ಚ್‌ಪುರ, ಹರಿಯಾಣ ರಾಜ್ಯದ ಹಿಸಾರ್ ಜಿಲ್ಲೆಯ ಗ್ರಾಮ. ಸಿಂಧೂ ಬಯಲಿನ ನಾಗರಿಕತೆಗೆ ಸಂಬಂಧಿಸಿದ ರಾಖೀಗರಿ ಸ್ಥಳ ಇಲ್ಲಿಂದ ಕೇವಲ 15 ಕಿಲೋಮೀಟರ್ ದೂರದಲ್ಲಿದೆ. ಈ ಗ್ರಾಮದಲ್ಲಿ ಜಾಟ್ ಜನಾಂಗ ಅತ್ಯಧಿಕ ಸಂಖ್ಯೆಯಲ್ಲಿದ್ದರೂ ದಲಿತರು ಸಹ ಶೇ.18ರಷ್ಟಿದ್ದಾರೆ. ದಲಿತರಲ್ಲಿ ವಾಲ್ಮೀಕಿ ಸಮುದಾಯದ (ಕರ್ನಾಟಕದ ವಾಲ್ಮೀಕಿ ಸಮುದಾಯ ಬೇರೆ) ಜನಸಂಖ್ಯೆಯೇ ಹೆಚ್ಚಿದ್ದು ಓಟ್ ಬ್ಯಾಂಕ್ ರಾಜಕಾರಣದಲ್ಲಿ ಗಮನಾರ್ಹವಾದ ಪಾತ್ರವನ್ನೇ ಹೊಂದಿದ್ದರು. ಆದರೆ ಇಂದು ಈ ವಾಲ್ಮೀಕಿ ಸಮುದಾಯದ ಒಂದು ಕುಟುಂಬವೂ ಸಹ ಮಿರ್ಚ್‌ಪುರದಲ್ಲಿ ವಾಸವಾಗಿಲ್ಲ. ಜಾಟರು ನಡೆಸಿದ ಅಮಾನವೀಯ ದೌರ್ಜನ್ಯಕ್ಕೆ ಬೇಸತ್ತು ಭಾರತದಾದ್ಯಂತ ಚದುರಿಹೋಗಿದ್ದಾರೆ. ದಲಿತರು ನೂರಾರು ವರ್ಷಗಳಿಂದ ಬಾಳಿ ಬದುಕಿದ್ದ ಊರು ಬಿಟ್ಟುಹೋಗಲು ಕಾರಣವೇನು? ಮುಂದೆ ಮಿರ್ಚ್‌ಪುರ ಫೈಲ್ ಕತೆಯನ್ನು ನೋಡೋಣ.

ದಲಿತರಾದ ವಾಲ್ಮೀಕಿ ಸಮುದಾಯದ ಜಯಪ್ರಕಾಶ ಕುಟುಂಬ ನಾಯಿಯೊಂದನ್ನು ಸಾಕಿತ್ತು. ಏಪ್ರಿಲ್ 19, 2010ರ ರಾತ್ರಿ ಊರಿಗೆ ಬೈಕಿನಲ್ಲಿ ಮರಳಿದ ಹಿಂದೂ ಮೇಲ್ಜಾತಿ ಜಾಟ್ ಯುವಕರ ಗುಂಪನ್ನು ಕಂಡು ಆ ನಾಯಿ ಬೊಗಳಿತು. ತಮ್ಮನ್ನು ಕಂಡು ಬೊಗಳಿದ ನಾಯಿ ದಲಿತರು ಸಾಕಿರುವುದೆಂದು ತಿಳಿದಿದ್ದ ಜಾಟ್ ಯುವಕರಿಗೆ ಅದನ್ನು ಸಹಿಸಲಾಗಲಿಲ್ಲ. ಹಾಗಾಗಿ ಅ ಯುವಕರಲ್ಲೊಬ್ಬ ಆ ಸಾಕುನಾಯಿಯ ಮೇಲೆ ಇಟ್ಟಿಗೆಯನ್ನು ತೂರಿಯೋಬಿಟ್ಟ. ಇದನ್ನು ಕಂಡ ದಲಿತ ಕುಟುಂಬದ ಯೋಗೇಶ್ ಆ ಯುವಕರಿಗೆ ಬುದ್ಧಿವಾದ ಹೇಳಿದ. ’ನಾಯಿ ಬೊಗಳುವುದು ಸಹಜ; ಅದಕ್ಕೆಲ್ಲ ಇಟ್ಟಿಗೆಯಿಂದ ಹೊಡೆಯುವುದ’ ಎಂದು ಪ್ರಶ್ನಿಸಿದ. ಆಗ ಅಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ಗಲಾಟೆಯೂ ನಡೆಯಿತು. ಆದರೆ ಊರಿನವರೆಲ್ಲರೂ ಮಧ್ಯಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಿ ಸಮಾಧಾನ ಪಡಿಸಿದ್ದರು.

ಇದಾದ ಮಾರನೇ ದಿನದಿಂದಲೇ ನಾಯಿ ಸಾಕಿದ್ದ ದಲಿತ ಸಮುದಾಯದವರು ತಮ್ಮ ಕ್ಷಮೆ ಕೇಳಬೇಕೆಂದು ಜಾಟ್ ಸಮುದಾಯದವರು ಒತ್ತಾಯಿಸಿದರು. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದೂ ಧಮಕಿ ಹಾಕಿದರು. ಇದಕ್ಕೆ ದಲಿತ ಯುವಕರು ಒಪ್ಪಲಿಲ್ಲವಾದರೂ, ದಲಿತ ಮುಖಂಡರಾದ ವೀರ್ ಭನ್ ಮತ್ತು ಕರಣ್ ಸಿಂಗ್ ಅವರುಗಳು ಕ್ಷಮೆ ಕೇಳಲು ಜಾಟ್ ಕುಟುಂಬದ ಮನೆಗೆ ಹೋಗಿಯೇಬಿಟ್ಟರು. ಜಾಟ್ ಮುಖ್ಯಸ್ಥನ ಮನೆಯ ಮುಂದೆ ನಿಂತು ಕ್ಷಮೆ ಕೇಳಿದ ದಲಿತ ಹಿರೀಕರಿಬ್ಬರಿಗೂ ಜಾಟರು ಅಮಾನವೀಯವಾಗಿ ಥಳಿಸಿದರು. ಅವರಿಬ್ಬರಲ್ಲಿ ಒಬ್ಬರು ತೀವ್ರ ಗಾಯಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೂ ಸೇರಿಸಲಾಯಿತು. ಪೊಲೀಸ್ ಸ್ಟೇಷನ್ನಿನಲ್ಲಿ ದೂರನ್ನು ದಾಖಲಿಸಲಾಯಿತು.

ಇದಾದ ಮಾರನೇ ದಿನ ಅಂದರೆ ಏಪ್ರಿಲ್ 20, 2010ರಂದು ದಾರಿಯಲ್ಲಿ ಹೋಗುತ್ತಿದ್ದ ದಲಿತ ಯುವಕರನ್ನುದ್ದೇಶಿಸಿ ಜಾಟ್ ಯುವಕನೊಬ್ಬ ’ನಿಮ್ಮ ಮನೆಗಳನ್ನ ಸುಟ್ಟುಹಾಕ್ತೀವಿ ನೋಡಿ’ ಎಂದಿದ್ದನು. ಆಗಲೂ ಎರಡು ಗುಂಪುಗಳ ನಡುವೆ ಜಗಳವಾಗಿತ್ತು. ಈ ಜಗಳಕ್ಕೆ ಸಂಬಂಧಿಸಿದಂತೆ ಊರಿನ ಜಾಟ್ ಜನರೆಲ್ಲರೂ ಒಂದೆಡೆ ಸೇರಿದರು. ಅದರಲ್ಲಿ ಮಹಿಳೆಯರೂ ಭಾಗವಹಿಸಿದ್ದರು. ಈ ಜಗಳಕ್ಕೆ ಸಂಬಂಧಿಸಿದಂತೆ ’ದಲಿತರು ಜಾಟ್ ಯುವಕನೊಬ್ಬನನ್ನು ಸುಖಾಸುಮ್ಮನೆ ಥಳಿಸಿದ್ದಾರೆ’ ಎಂಬ ಸುಳ್ಳು ಸುದ್ದಿಯನ್ನು ಜಾಟರು ಊರಲ್ಲೆಲ್ಲಾ ಹಬ್ಬಿಸಿದರು.

ಈ ಮೇಲಿನ ಮೂರೂ ಘಟನೆಗಳು ಮಿರ್ಚ್‌ಪುರದಲ್ಲಿ ದಲಿತರ ವಿರುದ್ಧ ಬಹುದೊಡ್ಡ ಸಂಚನ್ನು ರೂಪಿಸಿದವು. ಏಪ್ರಿಲ್ 21ರಂದು ಇದ್ದಕ್ಕಿದ್ದಂತೆ ಸುಮಾರು 100-150 ಜನಸಂಖ್ಯೆಯ ಜಾಟ್ ಯುವಕರ ತಂಡವೊಂದು ಲಾಠಿ, ಕಲ್ಲು, ಪೆಟ್ರೋಲ್ ಹಿಡಿದು ಗುಂಪುಗೂಡಿತು. ಅಲ್ಲೇನಾಗುತ್ತಿದೆ ಎಂಬುದನ್ನು ತಿಳಿಯುವಷ್ಟರಲ್ಲಿ ದಲಿತರ ಮನೆಗಳ ಮೇಲೆ ಕಲ್ಲುಗಳನ್ನು ತೂರಲಾಯಿತು. ಕೆಲವೇ ನಿಮಿಷಗಳಲ್ಲಿ ಜಾಟರ ಮತ್ತೊಂದು ಗುಂಪು ಸಹ ಜೊತೆಗೂಡಿಕೊಂಡಿದ್ದರಿಂದ ಅವರ ಸಂಖ್ಯೆ 400ಕ್ಕೆ ಏರಿತು. ಕೆಲವು ವರದಿಗಳ ಪ್ರಕಾರ ಅದು 1000 ಮುಟ್ಟಿತ್ತು. ಜಾಟರ ಮುಂದೆ ಜನಸಂಖ್ಯೆಯಲ್ಲಿ ಕಡಿಮೆ ಇದ್ದ ದಲಿತರ ಗುಂಪು ಸಹ ಸುಮ್ಮನೆ ಹೆದರಿ ಕುಳಿತುಕೊಳ್ಳದೆ ಅಥವಾ ಓಡಿಹೋಗದೇ ಕೈಗೆ ಸಿಕ್ಕ ಕಲ್ಲು ಮತ್ತು ಇಟ್ಟಿಗೆಗಳನ್ನು ಜಾಟರತ್ತ ತೂರಿ ತಿರುಗೇಟು ನೀಡಿತು. ಪರಿಸ್ಥಿತಿ ತಾರಕಕ್ಕೇರುತ್ತಿರುವುದನ್ನು ಕಂಡ ಹಿರಿಯ ಮುಖಂಡರುಗಳು ಎರಡೂ ಗುಂಪಿನ ಯುವಕರಿಗೆ ಬುದ್ಧಿ ಹೇಳಿ ಈಗಲೇ ಸಭೆ ಸೇರಿ ವಿಷಯ ಬಗೆಹರಿಸಿಕೊಳ್ಳೋಣವೆಂದು ತಿಳಿಸಿದರು. ಈ ರಾಜಿ ಸಂಧಾನ ಸಭೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ನಡೆಸಿದ್ದರೆಂದೇ ಹೇಳಲಾಗುತ್ತದೆ. ಇದರ ಪರಿಣಾಮವಾಗಿ ದಲಿತ ಮತ್ತು ಜಾಟ್ ಸಮುದಾಯದ ಪುರುಷರು ಪಂಚಾಯ್ತಿ ಸೇರಿದರು. ಹೀಗೆ ಮಾತುಕತೆ ಆರಂಭಿಸುವಷ್ಟರಲ್ಲಿ ದಲಿತ ಕೇರಿಯ ಕಡೆಯಿಂದ ಮಹಿಳೆಯರ ಕೂಗು ಮುಗಿಲುಮುಟ್ಟಿತು. ಕ್ಷಣ ಮಾತ್ರದಲ್ಲಿ ದಲಿತ ಕೇರಿಯನ್ನು ಕಡುಗಪ್ಪಿನ ಹೊಗೆ ಆವರಿಸಿತ್ತು. ದಲಿತರ ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ದಲಿತರು ತಮ್ಮ ಮನೆಗಳತ್ತ ಓಡಿ ವಯಸ್ಸಾದವರನ್ನು, ಮಕ್ಕಳನ್ನು ಹಾಗೂ ಕೈಗೆ ಸಿಕ್ಕಷ್ಟು ಸಾಮಾನುಗಳನ್ನು ರಕ್ಷಿಸಿಕೊಂಡರು. ಆದರೆ 70 ವರ್ಷದ ತಾರಾ ಚಂದ್ ಹಾಗೂ ಆತನ ಪೋಲಿಯೋ ಪೀಡಿತ ಕೊನೆಯ ಮಗಳಿಬ್ಬರೂ ಮನೆಯಿಂದ ಹೊರಬರಲಾರದೇ ಜಾಟರಿತ್ತ ಬೆಂಕಿಗೆ ಗುಡಿಸಲಿನಲ್ಲಿಯೇ ಆಹುತಿಯಾಗಿದ್ದರು. ಈ ಭೀಕರ ಮಾರಣಹೋಮದಲ್ಲಿ 51 ದಲಿತರು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದರು. ಸುಮಾರು 18 ಮನೆಗಳು ಸುಟ್ಟು ಕರಕಲಾಗಿದ್ದವು. ಹಿಂದೂ ಮೇಲ್ಜಾತಿಗಳೊಳಗೆ ತುಂಬಿರುವ ಸನಾತನ ಜಾತಿಪ್ರಜ್ಞೆಯಿಂದ, ಕ್ಷುಲ್ಲಕ ಕಾರಣಕ್ಕೆ ದಲಿತರಿಬ್ಬರನ್ನೂ ಹಾಗೂ ಮಿರ್ಚ್‌ಪುರದ ದಲಿತರು ಕಟ್ಟಿಕೊಂಡಿದ್ದ ಬದುಕನ್ನು ಸುಟ್ಟುಹಾಕಿತ್ತು.

ಈ ಘಟನೆಯಿಂದ ಭಯಭೀತರಾದ ದಲಿತರು ಊರುಬಿಟ್ಟು ವಾಸಕ್ಕಾಗಿ ಅಲೆದಾಡಿದರು. ಸುಮಾರು 150 ವಾಲ್ಮೀಕಿ ದಲಿತರು ಕೊನೆಗೆ ಕನ್ನಾಟ್ ನಗರದ ವಾಲ್ಮೀಕಿ ಮಂದಿರದಲ್ಲಿ ತಿಂಗಳಾನುಗಟ್ಟಲೆ ಕಾಲದೂಡಿ ಉಸಿರಾಡಿದರು. ಜಾಟರಿಂದ ಬೆದರಿಕೆಗಳು ಪದೇಪದೇ ಬರುತ್ತಿದ್ದ ಕಾರಣ 2011ರಷ್ಟೊತ್ತಿಗೆ 12 ಕುಟುಂಬಗಳು ಊರುಬಿಟ್ಟವು. ಅಲ್ಲಿಂದ ಇಲ್ಲಿಯವರೆಗೆ ಸುಮಾರು 254 ವಾಲ್ಮೀಕಿ ದಲಿತ ಕುಟುಂಬಗಳು ಊರುಬಿಟ್ಟು ದೇಶದಾದ್ಯಂತ ಚದುರಿಹೋಗಿದ್ದಾರೆ. ನೂರಾರು ವರ್ಷಗಳ ಕಾಲ ಒಂದೆಡೆ ನೆಲೆಸಿ ತಮ್ಮ ಬದುಕನ್ನು ರೂಪಿಸಿಕೊಂಡಿದ್ದ ಈ ದಲಿತ ಕುಟುಂಬಗಳು ಜಾಟರ ದೌರ್ಜನ್ಯಕ್ಕೆ ಬಲಿಯಾಗಿ ತಮ್ಮ ಜನ್ಮಸ್ಥಾನವನ್ನು ಬಿಟ್ಟು ಊರೂರು ಅಲೆಯುತ್ತಿದ್ದಾರೆ.

ಈ ನರಮೇಧಕ್ಕೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು 103 ಜನ ಆರೋಪಿಗಳನ್ನು ಬಂಧಿಸಿದರು. ಅದೂ ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಕಾರಣಕ್ಕೆ! ಜನವರಿ 2011ರಷ್ಟೊತ್ತಿಗೆ ಅವರಲ್ಲಿ 98 ಆರೋಪಿಗಳನ್ನು ತಿಹಾರ್ ಜೈಲಿಗೆ ಹಾಕಲಾಯಿತು. ಇದರ ವಿರುದ್ಧ ಜಾಟರು ಬೀದಿಗಿಳಿದು ಹೋರಾಡಿದ್ದರು. ಇದರ ಪರಿಣಾಮವಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು. ಸೆಪ್ಟೆಂಬರ್ 24ರಂದು 82 ಜನರನ್ನು ಖುಲಾಸೆಗೊಳಿಸಿದ ಕೋರ್ಟ್ ಕೇವಲ 15 ಆರೋಪಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿತು. ಆದರೆ ಅವರ್‍ಯಾರಿಗೂ ಕೊಲೆ ಮಾಡಿದ್ದಕ್ಕೆ ಶಿಕ್ಷೆ ಆಗಲಿಲ್ಲ. ಆದರೆ ಹೈಕೋರ್ಟ್ ಈ ಮೇಲಿನ ತೀರ್ಪನ್ನು ಅನೂರ್ಜಿತಗೊಳಿಸಿ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

2017ರಲ್ಲಿ ಮತ್ತೆ 40 ವಾಲ್ಮೀಕಿ ಕುಟುಂಬಗಳು ಇದೇ ಮಿರ್ಚ್‌ಪುರವನ್ನು ಬಿಟ್ಟು ಹೊರಹೋದವು. ಇದಕ್ಕೆ ಕಾರಣ ದಲಿತ ಯುವಕ ಸೈಕಲ್ ರೇಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಟರು ಏಕಾಏಕಿ ಆತನನ್ನು ಥಳಿಸಿದ್ದಾಗಿತ್ತು. ಇಂದು ಮಿರ್ಚ್‌ಪುರದಲ್ಲಿ ವಾಸಿಸುತ್ತಿರುವ ಬೆರಳೆಣಿಕೆಯಷ್ಟು ದಲಿತ ಕುಟುಂಬಗಳೂ ಸಹ ಊರು ಬಿಡುವ ಸಿದ್ಧತೆಯಲ್ಲಿವೆ. ಕಾಶ್ಮೀರಿ ಪಂಡಿತರು ಕಾಣುವ ಕಣ್ಣುಗಳಿಗೆ ಮಿರ್ಚ್‌ಪುರದ ವಾಲ್ಮೀಕಿಗಳು ಕಾಣುವರೇ?

ಕೊನೆಯದಾಗಿ ಇನ್ನೊಂದು ವಿಚಾರವನ್ನು ನೆನಪಿಸುತ್ತೇನೆ. 2010ರಲ್ಲಿ ಕಾಂಗ್ರೆಸ್ ಸರ್ಕಾರವಿತ್ತು. 2017ರಲ್ಲಿ ಬಿಜೆಪಿ ಸರ್ಕಾರವಿತ್ತು.


ಇದನ್ನೂ ಓದಿ: ಮಾತು ಮರೆತ ಭಾರತ; ಭೀಮಾ ಕೊರೆಗಾಂವ್ ಫೈಲ್: ಅಂಬೇಡ್ಕರ್ ಮನೆತನದ ಸದಸ್ಯನನ್ನೇ ಜೈಲಿಗಟ್ಟಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....