Homeಅಂಕಣಗಳುಮಾತು ಮರೆತ ಭಾರತ-23; ಮಿರ್ಚ್‌ಪುರ ಫೈಲ್: ಊರುಬಿಟ್ಟ ದಲಿತರಿಗೆ ಧೈರ್ಯ ತುಂಬುವವರಾರು?

ಮಾತು ಮರೆತ ಭಾರತ-23; ಮಿರ್ಚ್‌ಪುರ ಫೈಲ್: ಊರುಬಿಟ್ಟ ದಲಿತರಿಗೆ ಧೈರ್ಯ ತುಂಬುವವರಾರು?

- Advertisement -
- Advertisement -

ಮಿರ್ಚ್‌ಪುರ, ಹರಿಯಾಣ ರಾಜ್ಯದ ಹಿಸಾರ್ ಜಿಲ್ಲೆಯ ಗ್ರಾಮ. ಸಿಂಧೂ ಬಯಲಿನ ನಾಗರಿಕತೆಗೆ ಸಂಬಂಧಿಸಿದ ರಾಖೀಗರಿ ಸ್ಥಳ ಇಲ್ಲಿಂದ ಕೇವಲ 15 ಕಿಲೋಮೀಟರ್ ದೂರದಲ್ಲಿದೆ. ಈ ಗ್ರಾಮದಲ್ಲಿ ಜಾಟ್ ಜನಾಂಗ ಅತ್ಯಧಿಕ ಸಂಖ್ಯೆಯಲ್ಲಿದ್ದರೂ ದಲಿತರು ಸಹ ಶೇ.18ರಷ್ಟಿದ್ದಾರೆ. ದಲಿತರಲ್ಲಿ ವಾಲ್ಮೀಕಿ ಸಮುದಾಯದ (ಕರ್ನಾಟಕದ ವಾಲ್ಮೀಕಿ ಸಮುದಾಯ ಬೇರೆ) ಜನಸಂಖ್ಯೆಯೇ ಹೆಚ್ಚಿದ್ದು ಓಟ್ ಬ್ಯಾಂಕ್ ರಾಜಕಾರಣದಲ್ಲಿ ಗಮನಾರ್ಹವಾದ ಪಾತ್ರವನ್ನೇ ಹೊಂದಿದ್ದರು. ಆದರೆ ಇಂದು ಈ ವಾಲ್ಮೀಕಿ ಸಮುದಾಯದ ಒಂದು ಕುಟುಂಬವೂ ಸಹ ಮಿರ್ಚ್‌ಪುರದಲ್ಲಿ ವಾಸವಾಗಿಲ್ಲ. ಜಾಟರು ನಡೆಸಿದ ಅಮಾನವೀಯ ದೌರ್ಜನ್ಯಕ್ಕೆ ಬೇಸತ್ತು ಭಾರತದಾದ್ಯಂತ ಚದುರಿಹೋಗಿದ್ದಾರೆ. ದಲಿತರು ನೂರಾರು ವರ್ಷಗಳಿಂದ ಬಾಳಿ ಬದುಕಿದ್ದ ಊರು ಬಿಟ್ಟುಹೋಗಲು ಕಾರಣವೇನು? ಮುಂದೆ ಮಿರ್ಚ್‌ಪುರ ಫೈಲ್ ಕತೆಯನ್ನು ನೋಡೋಣ.

ದಲಿತರಾದ ವಾಲ್ಮೀಕಿ ಸಮುದಾಯದ ಜಯಪ್ರಕಾಶ ಕುಟುಂಬ ನಾಯಿಯೊಂದನ್ನು ಸಾಕಿತ್ತು. ಏಪ್ರಿಲ್ 19, 2010ರ ರಾತ್ರಿ ಊರಿಗೆ ಬೈಕಿನಲ್ಲಿ ಮರಳಿದ ಹಿಂದೂ ಮೇಲ್ಜಾತಿ ಜಾಟ್ ಯುವಕರ ಗುಂಪನ್ನು ಕಂಡು ಆ ನಾಯಿ ಬೊಗಳಿತು. ತಮ್ಮನ್ನು ಕಂಡು ಬೊಗಳಿದ ನಾಯಿ ದಲಿತರು ಸಾಕಿರುವುದೆಂದು ತಿಳಿದಿದ್ದ ಜಾಟ್ ಯುವಕರಿಗೆ ಅದನ್ನು ಸಹಿಸಲಾಗಲಿಲ್ಲ. ಹಾಗಾಗಿ ಅ ಯುವಕರಲ್ಲೊಬ್ಬ ಆ ಸಾಕುನಾಯಿಯ ಮೇಲೆ ಇಟ್ಟಿಗೆಯನ್ನು ತೂರಿಯೋಬಿಟ್ಟ. ಇದನ್ನು ಕಂಡ ದಲಿತ ಕುಟುಂಬದ ಯೋಗೇಶ್ ಆ ಯುವಕರಿಗೆ ಬುದ್ಧಿವಾದ ಹೇಳಿದ. ’ನಾಯಿ ಬೊಗಳುವುದು ಸಹಜ; ಅದಕ್ಕೆಲ್ಲ ಇಟ್ಟಿಗೆಯಿಂದ ಹೊಡೆಯುವುದ’ ಎಂದು ಪ್ರಶ್ನಿಸಿದ. ಆಗ ಅಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ಗಲಾಟೆಯೂ ನಡೆಯಿತು. ಆದರೆ ಊರಿನವರೆಲ್ಲರೂ ಮಧ್ಯಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಿ ಸಮಾಧಾನ ಪಡಿಸಿದ್ದರು.

ಇದಾದ ಮಾರನೇ ದಿನದಿಂದಲೇ ನಾಯಿ ಸಾಕಿದ್ದ ದಲಿತ ಸಮುದಾಯದವರು ತಮ್ಮ ಕ್ಷಮೆ ಕೇಳಬೇಕೆಂದು ಜಾಟ್ ಸಮುದಾಯದವರು ಒತ್ತಾಯಿಸಿದರು. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದೂ ಧಮಕಿ ಹಾಕಿದರು. ಇದಕ್ಕೆ ದಲಿತ ಯುವಕರು ಒಪ್ಪಲಿಲ್ಲವಾದರೂ, ದಲಿತ ಮುಖಂಡರಾದ ವೀರ್ ಭನ್ ಮತ್ತು ಕರಣ್ ಸಿಂಗ್ ಅವರುಗಳು ಕ್ಷಮೆ ಕೇಳಲು ಜಾಟ್ ಕುಟುಂಬದ ಮನೆಗೆ ಹೋಗಿಯೇಬಿಟ್ಟರು. ಜಾಟ್ ಮುಖ್ಯಸ್ಥನ ಮನೆಯ ಮುಂದೆ ನಿಂತು ಕ್ಷಮೆ ಕೇಳಿದ ದಲಿತ ಹಿರೀಕರಿಬ್ಬರಿಗೂ ಜಾಟರು ಅಮಾನವೀಯವಾಗಿ ಥಳಿಸಿದರು. ಅವರಿಬ್ಬರಲ್ಲಿ ಒಬ್ಬರು ತೀವ್ರ ಗಾಯಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೂ ಸೇರಿಸಲಾಯಿತು. ಪೊಲೀಸ್ ಸ್ಟೇಷನ್ನಿನಲ್ಲಿ ದೂರನ್ನು ದಾಖಲಿಸಲಾಯಿತು.

ಇದಾದ ಮಾರನೇ ದಿನ ಅಂದರೆ ಏಪ್ರಿಲ್ 20, 2010ರಂದು ದಾರಿಯಲ್ಲಿ ಹೋಗುತ್ತಿದ್ದ ದಲಿತ ಯುವಕರನ್ನುದ್ದೇಶಿಸಿ ಜಾಟ್ ಯುವಕನೊಬ್ಬ ’ನಿಮ್ಮ ಮನೆಗಳನ್ನ ಸುಟ್ಟುಹಾಕ್ತೀವಿ ನೋಡಿ’ ಎಂದಿದ್ದನು. ಆಗಲೂ ಎರಡು ಗುಂಪುಗಳ ನಡುವೆ ಜಗಳವಾಗಿತ್ತು. ಈ ಜಗಳಕ್ಕೆ ಸಂಬಂಧಿಸಿದಂತೆ ಊರಿನ ಜಾಟ್ ಜನರೆಲ್ಲರೂ ಒಂದೆಡೆ ಸೇರಿದರು. ಅದರಲ್ಲಿ ಮಹಿಳೆಯರೂ ಭಾಗವಹಿಸಿದ್ದರು. ಈ ಜಗಳಕ್ಕೆ ಸಂಬಂಧಿಸಿದಂತೆ ’ದಲಿತರು ಜಾಟ್ ಯುವಕನೊಬ್ಬನನ್ನು ಸುಖಾಸುಮ್ಮನೆ ಥಳಿಸಿದ್ದಾರೆ’ ಎಂಬ ಸುಳ್ಳು ಸುದ್ದಿಯನ್ನು ಜಾಟರು ಊರಲ್ಲೆಲ್ಲಾ ಹಬ್ಬಿಸಿದರು.

ಈ ಮೇಲಿನ ಮೂರೂ ಘಟನೆಗಳು ಮಿರ್ಚ್‌ಪುರದಲ್ಲಿ ದಲಿತರ ವಿರುದ್ಧ ಬಹುದೊಡ್ಡ ಸಂಚನ್ನು ರೂಪಿಸಿದವು. ಏಪ್ರಿಲ್ 21ರಂದು ಇದ್ದಕ್ಕಿದ್ದಂತೆ ಸುಮಾರು 100-150 ಜನಸಂಖ್ಯೆಯ ಜಾಟ್ ಯುವಕರ ತಂಡವೊಂದು ಲಾಠಿ, ಕಲ್ಲು, ಪೆಟ್ರೋಲ್ ಹಿಡಿದು ಗುಂಪುಗೂಡಿತು. ಅಲ್ಲೇನಾಗುತ್ತಿದೆ ಎಂಬುದನ್ನು ತಿಳಿಯುವಷ್ಟರಲ್ಲಿ ದಲಿತರ ಮನೆಗಳ ಮೇಲೆ ಕಲ್ಲುಗಳನ್ನು ತೂರಲಾಯಿತು. ಕೆಲವೇ ನಿಮಿಷಗಳಲ್ಲಿ ಜಾಟರ ಮತ್ತೊಂದು ಗುಂಪು ಸಹ ಜೊತೆಗೂಡಿಕೊಂಡಿದ್ದರಿಂದ ಅವರ ಸಂಖ್ಯೆ 400ಕ್ಕೆ ಏರಿತು. ಕೆಲವು ವರದಿಗಳ ಪ್ರಕಾರ ಅದು 1000 ಮುಟ್ಟಿತ್ತು. ಜಾಟರ ಮುಂದೆ ಜನಸಂಖ್ಯೆಯಲ್ಲಿ ಕಡಿಮೆ ಇದ್ದ ದಲಿತರ ಗುಂಪು ಸಹ ಸುಮ್ಮನೆ ಹೆದರಿ ಕುಳಿತುಕೊಳ್ಳದೆ ಅಥವಾ ಓಡಿಹೋಗದೇ ಕೈಗೆ ಸಿಕ್ಕ ಕಲ್ಲು ಮತ್ತು ಇಟ್ಟಿಗೆಗಳನ್ನು ಜಾಟರತ್ತ ತೂರಿ ತಿರುಗೇಟು ನೀಡಿತು. ಪರಿಸ್ಥಿತಿ ತಾರಕಕ್ಕೇರುತ್ತಿರುವುದನ್ನು ಕಂಡ ಹಿರಿಯ ಮುಖಂಡರುಗಳು ಎರಡೂ ಗುಂಪಿನ ಯುವಕರಿಗೆ ಬುದ್ಧಿ ಹೇಳಿ ಈಗಲೇ ಸಭೆ ಸೇರಿ ವಿಷಯ ಬಗೆಹರಿಸಿಕೊಳ್ಳೋಣವೆಂದು ತಿಳಿಸಿದರು. ಈ ರಾಜಿ ಸಂಧಾನ ಸಭೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ನಡೆಸಿದ್ದರೆಂದೇ ಹೇಳಲಾಗುತ್ತದೆ. ಇದರ ಪರಿಣಾಮವಾಗಿ ದಲಿತ ಮತ್ತು ಜಾಟ್ ಸಮುದಾಯದ ಪುರುಷರು ಪಂಚಾಯ್ತಿ ಸೇರಿದರು. ಹೀಗೆ ಮಾತುಕತೆ ಆರಂಭಿಸುವಷ್ಟರಲ್ಲಿ ದಲಿತ ಕೇರಿಯ ಕಡೆಯಿಂದ ಮಹಿಳೆಯರ ಕೂಗು ಮುಗಿಲುಮುಟ್ಟಿತು. ಕ್ಷಣ ಮಾತ್ರದಲ್ಲಿ ದಲಿತ ಕೇರಿಯನ್ನು ಕಡುಗಪ್ಪಿನ ಹೊಗೆ ಆವರಿಸಿತ್ತು. ದಲಿತರ ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ದಲಿತರು ತಮ್ಮ ಮನೆಗಳತ್ತ ಓಡಿ ವಯಸ್ಸಾದವರನ್ನು, ಮಕ್ಕಳನ್ನು ಹಾಗೂ ಕೈಗೆ ಸಿಕ್ಕಷ್ಟು ಸಾಮಾನುಗಳನ್ನು ರಕ್ಷಿಸಿಕೊಂಡರು. ಆದರೆ 70 ವರ್ಷದ ತಾರಾ ಚಂದ್ ಹಾಗೂ ಆತನ ಪೋಲಿಯೋ ಪೀಡಿತ ಕೊನೆಯ ಮಗಳಿಬ್ಬರೂ ಮನೆಯಿಂದ ಹೊರಬರಲಾರದೇ ಜಾಟರಿತ್ತ ಬೆಂಕಿಗೆ ಗುಡಿಸಲಿನಲ್ಲಿಯೇ ಆಹುತಿಯಾಗಿದ್ದರು. ಈ ಭೀಕರ ಮಾರಣಹೋಮದಲ್ಲಿ 51 ದಲಿತರು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದರು. ಸುಮಾರು 18 ಮನೆಗಳು ಸುಟ್ಟು ಕರಕಲಾಗಿದ್ದವು. ಹಿಂದೂ ಮೇಲ್ಜಾತಿಗಳೊಳಗೆ ತುಂಬಿರುವ ಸನಾತನ ಜಾತಿಪ್ರಜ್ಞೆಯಿಂದ, ಕ್ಷುಲ್ಲಕ ಕಾರಣಕ್ಕೆ ದಲಿತರಿಬ್ಬರನ್ನೂ ಹಾಗೂ ಮಿರ್ಚ್‌ಪುರದ ದಲಿತರು ಕಟ್ಟಿಕೊಂಡಿದ್ದ ಬದುಕನ್ನು ಸುಟ್ಟುಹಾಕಿತ್ತು.

ಈ ಘಟನೆಯಿಂದ ಭಯಭೀತರಾದ ದಲಿತರು ಊರುಬಿಟ್ಟು ವಾಸಕ್ಕಾಗಿ ಅಲೆದಾಡಿದರು. ಸುಮಾರು 150 ವಾಲ್ಮೀಕಿ ದಲಿತರು ಕೊನೆಗೆ ಕನ್ನಾಟ್ ನಗರದ ವಾಲ್ಮೀಕಿ ಮಂದಿರದಲ್ಲಿ ತಿಂಗಳಾನುಗಟ್ಟಲೆ ಕಾಲದೂಡಿ ಉಸಿರಾಡಿದರು. ಜಾಟರಿಂದ ಬೆದರಿಕೆಗಳು ಪದೇಪದೇ ಬರುತ್ತಿದ್ದ ಕಾರಣ 2011ರಷ್ಟೊತ್ತಿಗೆ 12 ಕುಟುಂಬಗಳು ಊರುಬಿಟ್ಟವು. ಅಲ್ಲಿಂದ ಇಲ್ಲಿಯವರೆಗೆ ಸುಮಾರು 254 ವಾಲ್ಮೀಕಿ ದಲಿತ ಕುಟುಂಬಗಳು ಊರುಬಿಟ್ಟು ದೇಶದಾದ್ಯಂತ ಚದುರಿಹೋಗಿದ್ದಾರೆ. ನೂರಾರು ವರ್ಷಗಳ ಕಾಲ ಒಂದೆಡೆ ನೆಲೆಸಿ ತಮ್ಮ ಬದುಕನ್ನು ರೂಪಿಸಿಕೊಂಡಿದ್ದ ಈ ದಲಿತ ಕುಟುಂಬಗಳು ಜಾಟರ ದೌರ್ಜನ್ಯಕ್ಕೆ ಬಲಿಯಾಗಿ ತಮ್ಮ ಜನ್ಮಸ್ಥಾನವನ್ನು ಬಿಟ್ಟು ಊರೂರು ಅಲೆಯುತ್ತಿದ್ದಾರೆ.

ಈ ನರಮೇಧಕ್ಕೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು 103 ಜನ ಆರೋಪಿಗಳನ್ನು ಬಂಧಿಸಿದರು. ಅದೂ ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಕಾರಣಕ್ಕೆ! ಜನವರಿ 2011ರಷ್ಟೊತ್ತಿಗೆ ಅವರಲ್ಲಿ 98 ಆರೋಪಿಗಳನ್ನು ತಿಹಾರ್ ಜೈಲಿಗೆ ಹಾಕಲಾಯಿತು. ಇದರ ವಿರುದ್ಧ ಜಾಟರು ಬೀದಿಗಿಳಿದು ಹೋರಾಡಿದ್ದರು. ಇದರ ಪರಿಣಾಮವಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಯಿತು. ಸೆಪ್ಟೆಂಬರ್ 24ರಂದು 82 ಜನರನ್ನು ಖುಲಾಸೆಗೊಳಿಸಿದ ಕೋರ್ಟ್ ಕೇವಲ 15 ಆರೋಪಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿತು. ಆದರೆ ಅವರ್‍ಯಾರಿಗೂ ಕೊಲೆ ಮಾಡಿದ್ದಕ್ಕೆ ಶಿಕ್ಷೆ ಆಗಲಿಲ್ಲ. ಆದರೆ ಹೈಕೋರ್ಟ್ ಈ ಮೇಲಿನ ತೀರ್ಪನ್ನು ಅನೂರ್ಜಿತಗೊಳಿಸಿ 12 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

2017ರಲ್ಲಿ ಮತ್ತೆ 40 ವಾಲ್ಮೀಕಿ ಕುಟುಂಬಗಳು ಇದೇ ಮಿರ್ಚ್‌ಪುರವನ್ನು ಬಿಟ್ಟು ಹೊರಹೋದವು. ಇದಕ್ಕೆ ಕಾರಣ ದಲಿತ ಯುವಕ ಸೈಕಲ್ ರೇಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಟರು ಏಕಾಏಕಿ ಆತನನ್ನು ಥಳಿಸಿದ್ದಾಗಿತ್ತು. ಇಂದು ಮಿರ್ಚ್‌ಪುರದಲ್ಲಿ ವಾಸಿಸುತ್ತಿರುವ ಬೆರಳೆಣಿಕೆಯಷ್ಟು ದಲಿತ ಕುಟುಂಬಗಳೂ ಸಹ ಊರು ಬಿಡುವ ಸಿದ್ಧತೆಯಲ್ಲಿವೆ. ಕಾಶ್ಮೀರಿ ಪಂಡಿತರು ಕಾಣುವ ಕಣ್ಣುಗಳಿಗೆ ಮಿರ್ಚ್‌ಪುರದ ವಾಲ್ಮೀಕಿಗಳು ಕಾಣುವರೇ?

ಕೊನೆಯದಾಗಿ ಇನ್ನೊಂದು ವಿಚಾರವನ್ನು ನೆನಪಿಸುತ್ತೇನೆ. 2010ರಲ್ಲಿ ಕಾಂಗ್ರೆಸ್ ಸರ್ಕಾರವಿತ್ತು. 2017ರಲ್ಲಿ ಬಿಜೆಪಿ ಸರ್ಕಾರವಿತ್ತು.


ಇದನ್ನೂ ಓದಿ: ಮಾತು ಮರೆತ ಭಾರತ; ಭೀಮಾ ಕೊರೆಗಾಂವ್ ಫೈಲ್: ಅಂಬೇಡ್ಕರ್ ಮನೆತನದ ಸದಸ್ಯನನ್ನೇ ಜೈಲಿಗಟ್ಟಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....