Homeಅಂಕಣಗಳುಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ದಲಿತರ ಮೇಲೆ ನಡೆದ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರವಾಗಿದ್ದು, ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಆ ದಲಿತರ ಮೇಲಿನ ದೌರ್ಜನ್ಯಗಳ 10 ಘಟನೆಯಲ್ಲಿ ಇದು ಮೂರನೆಯದ್ದಾಗಿದೆ. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತನೆಯಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ರಾಜಸ್ತಾನದ ಬಟೋಡ ಎಂಬ ಹಳ್ಳಿಯ ದಲಿತೆ ಪಾರ್ವತಿಗೆ (ಹೆಸರು ಬದಲಿಸಿದೆ) ಒಬ್ಬನೇ ಮಗ. ಅವನನ್ನು ಓದಿಸಿ ಉತ್ತಮ ಹಂತಕ್ಕೆ ಕಳಿಸಬೇಕೆಂಬುದೇ ಆಕೆಯ ಏಕೈಕ ಆಸೆ. ಆ ಕಾರಣಕ್ಕಾಗಿಯೇ ಸುಮಾರು 100 ಕಿಮೀ ದೂರದಲ್ಲಿರುವ ಪಟ್ಟಣ ’ದೌಸಾ’ಗೆ ಕೆಲಸಕ್ಕೆಂದು ದಿನವೂ ಪ್ರಯಾಣಿಸಬೇಕಿತ್ತು. 17 ವರ್ಷದ ಮಗ ರಘು ಇದ್ದಕ್ಕಿದ್ದಂತೆ ಕುಡಿತದ ಚಟವನ್ನು ಮೈಗೂಡಿಸಿಕೊಂಡಾಗ ಇನ್ನಿಲ್ಲದಂತೆ ನೊಂದುಕೊಂಡಿದ್ದ ಪಾರ್ವತಿ ತನ್ನ ಕನಸನ್ನು ಅರ್ಧಕ್ಕೆ ಕೈಬಿಡದೇ ಅವನ ಮನವೊಲಿಸಲು ಪ್ರಾರಂಭಿಸಿದ್ದಳು. ಆದರೇನು ಮಾಡುವುದು; ರಘು ಗಲಭೆಯೊಂದರಲ್ಲಿ ಜೈಲಿಗೂ ಹೋಗಿಬಿಟ್ಟನು. ಆಗಲೂ ಆತನ ಮನಸ್ಸನ್ನು ಹೇಗಾದರೂ ಮಾಡಿ ಬದಲಾಯಿಸಬೇಕೆಂಬ ಹಠಕ್ಕೆ ಬಿದ್ದು ದಿನವೂ ಜೈಲಿಗೆ ಹೋಗುವುದನ್ನೂ ರೂಢಿಸಿಕೊಂಡಿದ್ದಳು. ಇದೇ ಸಮಯದಲ್ಲಿ ಕೋವಿಡ್-19ನಿಂದಾಗಿ ದೇಶವೇ ಲಾಕ್‌ಡೌನ್ ಆಯಿತು. ಆದರೆ ಅಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಏಪ್ರಿಲ್ 21, 2020ರಂದು ಮಗನನ್ನು ನೋಡಲು ಬರಿಗಾಲಲ್ಲಿ ನಡೆದು ದೌಸಾಗೆ ಹೋಗಲು ಅಣಿಯಾದಳು. ಮಧ್ಯ ಅವರಿವರ ಸಹಾಯ ಪಡೆದು ಸಂಜೆಯಷ್ಟೊತ್ತಿಗೆ ಜೈಲಿನ ಬಳಿ ತಲುಪಿದಳಾದರೂ ಅವಳಿಗೆ ಮಗನನ್ನು ಭೇಟಿಯಾಗಲು ಬೆಳಗ್ಗೆಯವರೆಗೆ ಕಾಯಬೇಕಾಯಿತು. ಅಲ್ಲೇ ಜೈಲಿನ ಆವರಣದಲ್ಲಿಯೇ ಮಲಗಿಕೊಂಡು ಬೆಳಗ್ಗೆ ಎದ್ದು ಮಗನನ್ನು ಭೇಟಿಯಾಗಿ ಮತ್ತೆ ಅದೇ ರೀತಿಯಲ್ಲಿ ತನ್ನ ಹಳ್ಳಿ ಬಟೋಡಾಗೆ ಮರಳಿದಾಗ ಹಳ್ಳಿಯವರೆಲ್ಲರೂ ಆಕೆಯನ್ನು ಕ್ವಾರಂಟೈನ್‌ನಲ್ಲಿರಲು ಸೂಚಿಸಿದರು. ಅದೇ ಹಳ್ಳಿಯ ಸರ್ಕಾರಿ ಶಾಲೆಯನ್ನು ಕ್ವಾರಂಟೈನ್ ಕೇಂದ್ರವನ್ನಾಗಿಸಲಾಗಿತ್ತು. ಈ ತೀರ್ಮಾನ ನ್ಯಾಯಯುತವಾದುದೇ ಎಂದರಿತ ಪಾರ್ವತಿ ಕ್ವಾರಂಟೈನ್ ಕೇಂದ್ರಕ್ಕೆ ತೆರಳಿದಳು.

ಇದನ್ನೂ ಓದಿ: ಮಾತು ಮರೆತ ಭಾರತ-28; ಲಾಕ್‌ಡೌನ್ ಫೈಲ್ಸ್ : ದಲಿತರ ಪಾಲಿನ ಕಗ್ಗತ್ತಲ ದೀಪಾವಳಿ

200 ಕಿಮೀ ದೂರದ ಪ್ರಯಾಣ ಮಾಡಿದ್ದ ಪಾರ್ವತಿ ಬಳಲಿದ್ದಳು. ಸರಿಯಾದ ಆಹಾರ ನೀರಿಲ್ಲದೆ ನಿತ್ರಾಣಳಾಗಿದ್ದಳು. ಆ ಕ್ವಾರಂಟೈನ್ ಕೇಂದ್ರದಲ್ಲಿ ಆಕೆಯೊಬ್ಬಳೇ ತಂಗಬೇಕಾಯಿತು. ಪೊಲೀಸರು ಮತ್ತು ಶುಶ್ರೂಷಕ ಸಿಬ್ಬಂದಿ ಮುಂಜಾಗ್ರತೆಯ ಕಾರಣಕ್ಕಾಗಿ ಆಕೆಯೊಂದಿಗೆ ಯಾರನ್ನೂ ತಂಗಲು ಬಿಡಲಿಲ್ಲ. ಆದರೂ ಸುದೀರ್ಘ ಪ್ರಯಾಣದ ಕಾರಣ ಒಂದಷ್ಟು ಆಹಾರ ಹೊಟ್ಟೆಗೆ ಬಿದ್ದೊಡನೆ ಕಣ್ಣು ಎಳೆಯಲು ಆರಂಭಿಸಿದ್ದವು. ಗಾಢ ನಿದ್ರೆಗೆ ಜಾರಿದಳು.

ಇದೇ ಸಮಯದಲ್ಲಿ ಪಾರ್ವತಿ ಕೊಠಡಿಗೆ ಬಂದ ರಿಷಿಕೇಶ್ ಮೀನ, ಲಖನ್ ರಾಮ್ ಮತ್ತು ಕಮಲ್ ಖರ್ವಾಲ್ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡರು. ನಿದ್ದೆಯ ಮಂಪರಿನಲ್ಲಿದ್ದ ಪಾರ್ವತಿಗೆ ಅದೇನಾಗುತ್ತಿದೆ ಎಂಬುದು ತಿಳಿಯುವಷ್ಟರಲ್ಲಿ ಆಕೆಯ ಕಾಲುಗಳು ಹಗ್ಗದಿಂದ ಬಿಗಿಯಾಗಿ ಬಂಧಿಯಾಗಿದ್ದವು. ಹಿಂದೂ ಮೇಲ್ಜಾತಿಯ ಆ ಮೂರು ಪ್ರಾಣಿಗಳು ಆಕೆಯ ಮೇಲೆ ಒಬ್ಬರಾದ ಮೇಲೊಬ್ಬರಂತೆ ಅತ್ಯಾಚಾರ ಮಾಡಿದರು. ಪಾರ್ವತಿಯನ್ನು ಕಾಪಾಡಲು ಅಲ್ಲಿ ಒಂದು ನರಪಿಳ್ಳೆಯೂ ಸಹ ಇರಲಿಲ್ಲ. ಪೊಲೀಸ್ ಮತ್ತು ದಾದಿಯರು ಗೌಗತ್ತಲಾಗುತ್ತಿದ್ದಂತೆ ಮನೆಗೆ ತೆರಳಿದ್ದರು. ಹಳ್ಳಿಯ ವ್ಯಕ್ತಿಯೊಬ್ಬನಿಗೆ ಸೆಕ್ಯುರಿಟಿ ಕೆಲಸ ಒಪ್ಪಿಸಿ ಮನೆಯಲ್ಲಿ ಹಾಯಾಗಿ ಮಲಗಲು ತೆರಳಿದ್ದರು.

ಬೆಳಗ್ಗೆ ಈ ವಿಷಯವನ್ನು ಪಾರ್ವತಿ ಪೊಲೀಸರಿಗೆ ತಿಳಿಸಿದಾಗ ಆಕೆಯನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಿಂದಾಗಿ ಪಾರ್ವತಿಗೆ ಕೋವಿಡ್ ಪಾಸಿಟಿವ್ ಬಂದಿತಲ್ಲದೆ ಅತ್ಯಾಚಾರವಾಗಿರುವುದೂ ಖಾತ್ರಿಯಾಯಿತು. ಕೋವಿಡ್ ಫೋಬಿಯಾವನ್ನು ಮಾಧ್ಯಮಗಳು ಕ್ಷಣಕ್ಷಣಕ್ಕೂ ಬಿತ್ತರಿಸುತ್ತಿದ್ದ ಸಮಯವದು; ಪಾರ್ವತಿ ಕೋವಿಡ್‌ನಿಂದ ಬದುಕುಳಿಯುವುದು ಹೇಗೆ ಎಂದು ಚಿಂತಿಸುತ್ತಿದ್ದಳೋ ಅಥವಾ ತನ್ನ ಮೇಲೆ ನಡೆದಿರುವ ಅತ್ಯಾಚಾರದ ಗಾಯಕ್ಕೆ ಮಾನಸಿಕವಾಗಿ ಮುಲಾಮು ಹಚ್ಚಿಕೊಳ್ಳುತ್ತಿದ್ದಳೋ ಕಾಣೆ.

ಇದನ್ನೂ ಓದಿ: ಮಾತು ಮರೆತ ಭಾರತ-27; ಲಾಕ್‌ಡೌನ್ ಫೈಲ್ಸ್: ನೀರು ಕೇಳಿದ ದಲಿತ ಯುವಕನ ಉಸಿರು ನಿಲ್ಲಿಸಿದರು

ಈ ಪ್ರಕರಣದಿಂದ ಅರಿಯಬೇಕಾದ ಮತ್ತೊಂದು ವಿಚಾರವೇನೆಂದರೆ ಪಾರ್ವತಿ ಎಂಬ ದಲಿತ ಮಹಿಳೆಯ ಜಾಗದಲ್ಲಿ ಹಿಂದೂ ಮೇಲ್ಜಾತಿ ಮಹಿಳೆ ಇದ್ದಿದ್ದರೆ ಅಲ್ಲಿ ಹಳ್ಳಿಗರು ಆಕೆಯನ್ನು ಒಬ್ಬಂಟಿಯಾಗಿ ಇರಲು ಬಿಡುತ್ತಿದ್ದರೆ? ಪೊಲೀಸರು ಕಿಂಚಿತ್ ಮುಂಜಾಗ್ರತೆಯನ್ನೂ ವಹಿಸದೆ ನಿದ್ದೆ ಮಾಡಲು ಮನೆಗೆ ತೆರಳುತ್ತಿದ್ದರೆ? ದಾದಿಯರು ತಮ್ಮ ಕರ್ತವ್ಯವನ್ನು ಮರೆತು ಸ್ವಲ್ಪವೂ ಆಲೋಚಿಸದೇ ಮಹಿಳೆಯೊಬ್ಬಳನ್ನು ಬಿಟ್ಟು ಹೊರಡುತ್ತಿದ್ದರೇ? ಆ ಮೂವರು ಪಾಪಿಗಳು ಅಷ್ಟು ಧೈರ್ಯದಿಂದ ಕೊಠಡಿಗೆ ನುಗ್ಗಿ ಅತ್ಯಾಚಾರಗೈಯ್ಯುತ್ತಿದ್ದರೆ?

ಈ ಮೇಲಿನ ಪ್ರಶ್ನೆಗೆ ಉತ್ತರ ಹುಡುಕುವುದು ಅಷ್ಟು ಕಷ್ಟವಲ್ಲ. ಆದರೆ ಅದಕ್ಕೆ ಪರಿಹಾರ ಹುಡುಕುವುದು ಮಾತ್ರ ಇಂದಿಗೂ ಸಾಧ್ಯವಾಗಿಲ್ಲ. ದಲಿತರೆಂದರೆ ಈ ಸಮಾಜಕ್ಕೆ ಏನು ಬೇಕಾದರೂ ಮಾಡಿ ಬಿಸಾಕಬಹುದಾದ ವಸ್ತುಗಳಿದ್ದಂತೆ.

ಈಗ ಆ ಮೂವರು ಪಾಪಿಗಳು ಜೈಲಿನಲ್ಲಿದ್ದಾರೆ. ಪೊಲೀಸ್ ಒಬ್ಬ ಅಮಾನತುಗೊಂಡಿದ್ದಾನೆ. ಪಾರ್ವತಿಯೂ ಸಹ ಗುಣಮುಖಳಾಗಿ ತನ್ನ ಮಗನ ಭವಿಷ್ಯದ ಕನಸನ್ನು ಕಾಣುತ್ತಿದ್ದಾಳೆ. ಇದರ ನಡುವೆ ಆ ಮೂವರಿಗೆ ಶಿಕ್ಷೆ ಆಗುವುದೇ? ದಲಿತರ ಮೇಲಿನ ದೌರ್ಜನ್ಯಕ್ಕೆ ನ್ಯಾಯಾಲಯದ ನ್ಯಾಯದ ಇತಿಹಾಸ ಇಲ್ಲವೆಂದೇ ಉತ್ತರವನ್ನು ಪದೇಪದೇ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...