Homeಅಂಕಣಗಳುಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ದಲಿತರ ಮೇಲೆ ನಡೆದ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರವಾಗಿದ್ದು, ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಆ ದಲಿತರ ಮೇಲಿನ ದೌರ್ಜನ್ಯಗಳ 10 ಘಟನೆಯಲ್ಲಿ ಇದು ಮೂರನೆಯದ್ದಾಗಿದೆ. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತನೆಯಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ರಾಜಸ್ತಾನದ ಬಟೋಡ ಎಂಬ ಹಳ್ಳಿಯ ದಲಿತೆ ಪಾರ್ವತಿಗೆ (ಹೆಸರು ಬದಲಿಸಿದೆ) ಒಬ್ಬನೇ ಮಗ. ಅವನನ್ನು ಓದಿಸಿ ಉತ್ತಮ ಹಂತಕ್ಕೆ ಕಳಿಸಬೇಕೆಂಬುದೇ ಆಕೆಯ ಏಕೈಕ ಆಸೆ. ಆ ಕಾರಣಕ್ಕಾಗಿಯೇ ಸುಮಾರು 100 ಕಿಮೀ ದೂರದಲ್ಲಿರುವ ಪಟ್ಟಣ ’ದೌಸಾ’ಗೆ ಕೆಲಸಕ್ಕೆಂದು ದಿನವೂ ಪ್ರಯಾಣಿಸಬೇಕಿತ್ತು. 17 ವರ್ಷದ ಮಗ ರಘು ಇದ್ದಕ್ಕಿದ್ದಂತೆ ಕುಡಿತದ ಚಟವನ್ನು ಮೈಗೂಡಿಸಿಕೊಂಡಾಗ ಇನ್ನಿಲ್ಲದಂತೆ ನೊಂದುಕೊಂಡಿದ್ದ ಪಾರ್ವತಿ ತನ್ನ ಕನಸನ್ನು ಅರ್ಧಕ್ಕೆ ಕೈಬಿಡದೇ ಅವನ ಮನವೊಲಿಸಲು ಪ್ರಾರಂಭಿಸಿದ್ದಳು. ಆದರೇನು ಮಾಡುವುದು; ರಘು ಗಲಭೆಯೊಂದರಲ್ಲಿ ಜೈಲಿಗೂ ಹೋಗಿಬಿಟ್ಟನು. ಆಗಲೂ ಆತನ ಮನಸ್ಸನ್ನು ಹೇಗಾದರೂ ಮಾಡಿ ಬದಲಾಯಿಸಬೇಕೆಂಬ ಹಠಕ್ಕೆ ಬಿದ್ದು ದಿನವೂ ಜೈಲಿಗೆ ಹೋಗುವುದನ್ನೂ ರೂಢಿಸಿಕೊಂಡಿದ್ದಳು. ಇದೇ ಸಮಯದಲ್ಲಿ ಕೋವಿಡ್-19ನಿಂದಾಗಿ ದೇಶವೇ ಲಾಕ್‌ಡೌನ್ ಆಯಿತು. ಆದರೆ ಅಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಏಪ್ರಿಲ್ 21, 2020ರಂದು ಮಗನನ್ನು ನೋಡಲು ಬರಿಗಾಲಲ್ಲಿ ನಡೆದು ದೌಸಾಗೆ ಹೋಗಲು ಅಣಿಯಾದಳು. ಮಧ್ಯ ಅವರಿವರ ಸಹಾಯ ಪಡೆದು ಸಂಜೆಯಷ್ಟೊತ್ತಿಗೆ ಜೈಲಿನ ಬಳಿ ತಲುಪಿದಳಾದರೂ ಅವಳಿಗೆ ಮಗನನ್ನು ಭೇಟಿಯಾಗಲು ಬೆಳಗ್ಗೆಯವರೆಗೆ ಕಾಯಬೇಕಾಯಿತು. ಅಲ್ಲೇ ಜೈಲಿನ ಆವರಣದಲ್ಲಿಯೇ ಮಲಗಿಕೊಂಡು ಬೆಳಗ್ಗೆ ಎದ್ದು ಮಗನನ್ನು ಭೇಟಿಯಾಗಿ ಮತ್ತೆ ಅದೇ ರೀತಿಯಲ್ಲಿ ತನ್ನ ಹಳ್ಳಿ ಬಟೋಡಾಗೆ ಮರಳಿದಾಗ ಹಳ್ಳಿಯವರೆಲ್ಲರೂ ಆಕೆಯನ್ನು ಕ್ವಾರಂಟೈನ್‌ನಲ್ಲಿರಲು ಸೂಚಿಸಿದರು. ಅದೇ ಹಳ್ಳಿಯ ಸರ್ಕಾರಿ ಶಾಲೆಯನ್ನು ಕ್ವಾರಂಟೈನ್ ಕೇಂದ್ರವನ್ನಾಗಿಸಲಾಗಿತ್ತು. ಈ ತೀರ್ಮಾನ ನ್ಯಾಯಯುತವಾದುದೇ ಎಂದರಿತ ಪಾರ್ವತಿ ಕ್ವಾರಂಟೈನ್ ಕೇಂದ್ರಕ್ಕೆ ತೆರಳಿದಳು.

ಇದನ್ನೂ ಓದಿ: ಮಾತು ಮರೆತ ಭಾರತ-28; ಲಾಕ್‌ಡೌನ್ ಫೈಲ್ಸ್ : ದಲಿತರ ಪಾಲಿನ ಕಗ್ಗತ್ತಲ ದೀಪಾವಳಿ

200 ಕಿಮೀ ದೂರದ ಪ್ರಯಾಣ ಮಾಡಿದ್ದ ಪಾರ್ವತಿ ಬಳಲಿದ್ದಳು. ಸರಿಯಾದ ಆಹಾರ ನೀರಿಲ್ಲದೆ ನಿತ್ರಾಣಳಾಗಿದ್ದಳು. ಆ ಕ್ವಾರಂಟೈನ್ ಕೇಂದ್ರದಲ್ಲಿ ಆಕೆಯೊಬ್ಬಳೇ ತಂಗಬೇಕಾಯಿತು. ಪೊಲೀಸರು ಮತ್ತು ಶುಶ್ರೂಷಕ ಸಿಬ್ಬಂದಿ ಮುಂಜಾಗ್ರತೆಯ ಕಾರಣಕ್ಕಾಗಿ ಆಕೆಯೊಂದಿಗೆ ಯಾರನ್ನೂ ತಂಗಲು ಬಿಡಲಿಲ್ಲ. ಆದರೂ ಸುದೀರ್ಘ ಪ್ರಯಾಣದ ಕಾರಣ ಒಂದಷ್ಟು ಆಹಾರ ಹೊಟ್ಟೆಗೆ ಬಿದ್ದೊಡನೆ ಕಣ್ಣು ಎಳೆಯಲು ಆರಂಭಿಸಿದ್ದವು. ಗಾಢ ನಿದ್ರೆಗೆ ಜಾರಿದಳು.

ಇದೇ ಸಮಯದಲ್ಲಿ ಪಾರ್ವತಿ ಕೊಠಡಿಗೆ ಬಂದ ರಿಷಿಕೇಶ್ ಮೀನ, ಲಖನ್ ರಾಮ್ ಮತ್ತು ಕಮಲ್ ಖರ್ವಾಲ್ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡರು. ನಿದ್ದೆಯ ಮಂಪರಿನಲ್ಲಿದ್ದ ಪಾರ್ವತಿಗೆ ಅದೇನಾಗುತ್ತಿದೆ ಎಂಬುದು ತಿಳಿಯುವಷ್ಟರಲ್ಲಿ ಆಕೆಯ ಕಾಲುಗಳು ಹಗ್ಗದಿಂದ ಬಿಗಿಯಾಗಿ ಬಂಧಿಯಾಗಿದ್ದವು. ಹಿಂದೂ ಮೇಲ್ಜಾತಿಯ ಆ ಮೂರು ಪ್ರಾಣಿಗಳು ಆಕೆಯ ಮೇಲೆ ಒಬ್ಬರಾದ ಮೇಲೊಬ್ಬರಂತೆ ಅತ್ಯಾಚಾರ ಮಾಡಿದರು. ಪಾರ್ವತಿಯನ್ನು ಕಾಪಾಡಲು ಅಲ್ಲಿ ಒಂದು ನರಪಿಳ್ಳೆಯೂ ಸಹ ಇರಲಿಲ್ಲ. ಪೊಲೀಸ್ ಮತ್ತು ದಾದಿಯರು ಗೌಗತ್ತಲಾಗುತ್ತಿದ್ದಂತೆ ಮನೆಗೆ ತೆರಳಿದ್ದರು. ಹಳ್ಳಿಯ ವ್ಯಕ್ತಿಯೊಬ್ಬನಿಗೆ ಸೆಕ್ಯುರಿಟಿ ಕೆಲಸ ಒಪ್ಪಿಸಿ ಮನೆಯಲ್ಲಿ ಹಾಯಾಗಿ ಮಲಗಲು ತೆರಳಿದ್ದರು.

ಬೆಳಗ್ಗೆ ಈ ವಿಷಯವನ್ನು ಪಾರ್ವತಿ ಪೊಲೀಸರಿಗೆ ತಿಳಿಸಿದಾಗ ಆಕೆಯನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಿಂದಾಗಿ ಪಾರ್ವತಿಗೆ ಕೋವಿಡ್ ಪಾಸಿಟಿವ್ ಬಂದಿತಲ್ಲದೆ ಅತ್ಯಾಚಾರವಾಗಿರುವುದೂ ಖಾತ್ರಿಯಾಯಿತು. ಕೋವಿಡ್ ಫೋಬಿಯಾವನ್ನು ಮಾಧ್ಯಮಗಳು ಕ್ಷಣಕ್ಷಣಕ್ಕೂ ಬಿತ್ತರಿಸುತ್ತಿದ್ದ ಸಮಯವದು; ಪಾರ್ವತಿ ಕೋವಿಡ್‌ನಿಂದ ಬದುಕುಳಿಯುವುದು ಹೇಗೆ ಎಂದು ಚಿಂತಿಸುತ್ತಿದ್ದಳೋ ಅಥವಾ ತನ್ನ ಮೇಲೆ ನಡೆದಿರುವ ಅತ್ಯಾಚಾರದ ಗಾಯಕ್ಕೆ ಮಾನಸಿಕವಾಗಿ ಮುಲಾಮು ಹಚ್ಚಿಕೊಳ್ಳುತ್ತಿದ್ದಳೋ ಕಾಣೆ.

ಇದನ್ನೂ ಓದಿ: ಮಾತು ಮರೆತ ಭಾರತ-27; ಲಾಕ್‌ಡೌನ್ ಫೈಲ್ಸ್: ನೀರು ಕೇಳಿದ ದಲಿತ ಯುವಕನ ಉಸಿರು ನಿಲ್ಲಿಸಿದರು

ಈ ಪ್ರಕರಣದಿಂದ ಅರಿಯಬೇಕಾದ ಮತ್ತೊಂದು ವಿಚಾರವೇನೆಂದರೆ ಪಾರ್ವತಿ ಎಂಬ ದಲಿತ ಮಹಿಳೆಯ ಜಾಗದಲ್ಲಿ ಹಿಂದೂ ಮೇಲ್ಜಾತಿ ಮಹಿಳೆ ಇದ್ದಿದ್ದರೆ ಅಲ್ಲಿ ಹಳ್ಳಿಗರು ಆಕೆಯನ್ನು ಒಬ್ಬಂಟಿಯಾಗಿ ಇರಲು ಬಿಡುತ್ತಿದ್ದರೆ? ಪೊಲೀಸರು ಕಿಂಚಿತ್ ಮುಂಜಾಗ್ರತೆಯನ್ನೂ ವಹಿಸದೆ ನಿದ್ದೆ ಮಾಡಲು ಮನೆಗೆ ತೆರಳುತ್ತಿದ್ದರೆ? ದಾದಿಯರು ತಮ್ಮ ಕರ್ತವ್ಯವನ್ನು ಮರೆತು ಸ್ವಲ್ಪವೂ ಆಲೋಚಿಸದೇ ಮಹಿಳೆಯೊಬ್ಬಳನ್ನು ಬಿಟ್ಟು ಹೊರಡುತ್ತಿದ್ದರೇ? ಆ ಮೂವರು ಪಾಪಿಗಳು ಅಷ್ಟು ಧೈರ್ಯದಿಂದ ಕೊಠಡಿಗೆ ನುಗ್ಗಿ ಅತ್ಯಾಚಾರಗೈಯ್ಯುತ್ತಿದ್ದರೆ?

ಈ ಮೇಲಿನ ಪ್ರಶ್ನೆಗೆ ಉತ್ತರ ಹುಡುಕುವುದು ಅಷ್ಟು ಕಷ್ಟವಲ್ಲ. ಆದರೆ ಅದಕ್ಕೆ ಪರಿಹಾರ ಹುಡುಕುವುದು ಮಾತ್ರ ಇಂದಿಗೂ ಸಾಧ್ಯವಾಗಿಲ್ಲ. ದಲಿತರೆಂದರೆ ಈ ಸಮಾಜಕ್ಕೆ ಏನು ಬೇಕಾದರೂ ಮಾಡಿ ಬಿಸಾಕಬಹುದಾದ ವಸ್ತುಗಳಿದ್ದಂತೆ.

ಈಗ ಆ ಮೂವರು ಪಾಪಿಗಳು ಜೈಲಿನಲ್ಲಿದ್ದಾರೆ. ಪೊಲೀಸ್ ಒಬ್ಬ ಅಮಾನತುಗೊಂಡಿದ್ದಾನೆ. ಪಾರ್ವತಿಯೂ ಸಹ ಗುಣಮುಖಳಾಗಿ ತನ್ನ ಮಗನ ಭವಿಷ್ಯದ ಕನಸನ್ನು ಕಾಣುತ್ತಿದ್ದಾಳೆ. ಇದರ ನಡುವೆ ಆ ಮೂವರಿಗೆ ಶಿಕ್ಷೆ ಆಗುವುದೇ? ದಲಿತರ ಮೇಲಿನ ದೌರ್ಜನ್ಯಕ್ಕೆ ನ್ಯಾಯಾಲಯದ ನ್ಯಾಯದ ಇತಿಹಾಸ ಇಲ್ಲವೆಂದೇ ಉತ್ತರವನ್ನು ಪದೇಪದೇ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...