Homeಅಂಕಣಗಳುಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ದಲಿತರ ಮೇಲೆ ನಡೆದ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರವಾಗಿದ್ದು, ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಆ ದಲಿತರ ಮೇಲಿನ ದೌರ್ಜನ್ಯಗಳ 10 ಘಟನೆಯಲ್ಲಿ ಇದು ಮೂರನೆಯದ್ದಾಗಿದೆ. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತನೆಯಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ರಾಜಸ್ತಾನದ ಬಟೋಡ ಎಂಬ ಹಳ್ಳಿಯ ದಲಿತೆ ಪಾರ್ವತಿಗೆ (ಹೆಸರು ಬದಲಿಸಿದೆ) ಒಬ್ಬನೇ ಮಗ. ಅವನನ್ನು ಓದಿಸಿ ಉತ್ತಮ ಹಂತಕ್ಕೆ ಕಳಿಸಬೇಕೆಂಬುದೇ ಆಕೆಯ ಏಕೈಕ ಆಸೆ. ಆ ಕಾರಣಕ್ಕಾಗಿಯೇ ಸುಮಾರು 100 ಕಿಮೀ ದೂರದಲ್ಲಿರುವ ಪಟ್ಟಣ ’ದೌಸಾ’ಗೆ ಕೆಲಸಕ್ಕೆಂದು ದಿನವೂ ಪ್ರಯಾಣಿಸಬೇಕಿತ್ತು. 17 ವರ್ಷದ ಮಗ ರಘು ಇದ್ದಕ್ಕಿದ್ದಂತೆ ಕುಡಿತದ ಚಟವನ್ನು ಮೈಗೂಡಿಸಿಕೊಂಡಾಗ ಇನ್ನಿಲ್ಲದಂತೆ ನೊಂದುಕೊಂಡಿದ್ದ ಪಾರ್ವತಿ ತನ್ನ ಕನಸನ್ನು ಅರ್ಧಕ್ಕೆ ಕೈಬಿಡದೇ ಅವನ ಮನವೊಲಿಸಲು ಪ್ರಾರಂಭಿಸಿದ್ದಳು. ಆದರೇನು ಮಾಡುವುದು; ರಘು ಗಲಭೆಯೊಂದರಲ್ಲಿ ಜೈಲಿಗೂ ಹೋಗಿಬಿಟ್ಟನು. ಆಗಲೂ ಆತನ ಮನಸ್ಸನ್ನು ಹೇಗಾದರೂ ಮಾಡಿ ಬದಲಾಯಿಸಬೇಕೆಂಬ ಹಠಕ್ಕೆ ಬಿದ್ದು ದಿನವೂ ಜೈಲಿಗೆ ಹೋಗುವುದನ್ನೂ ರೂಢಿಸಿಕೊಂಡಿದ್ದಳು. ಇದೇ ಸಮಯದಲ್ಲಿ ಕೋವಿಡ್-19ನಿಂದಾಗಿ ದೇಶವೇ ಲಾಕ್‌ಡೌನ್ ಆಯಿತು. ಆದರೆ ಅಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಏಪ್ರಿಲ್ 21, 2020ರಂದು ಮಗನನ್ನು ನೋಡಲು ಬರಿಗಾಲಲ್ಲಿ ನಡೆದು ದೌಸಾಗೆ ಹೋಗಲು ಅಣಿಯಾದಳು. ಮಧ್ಯ ಅವರಿವರ ಸಹಾಯ ಪಡೆದು ಸಂಜೆಯಷ್ಟೊತ್ತಿಗೆ ಜೈಲಿನ ಬಳಿ ತಲುಪಿದಳಾದರೂ ಅವಳಿಗೆ ಮಗನನ್ನು ಭೇಟಿಯಾಗಲು ಬೆಳಗ್ಗೆಯವರೆಗೆ ಕಾಯಬೇಕಾಯಿತು. ಅಲ್ಲೇ ಜೈಲಿನ ಆವರಣದಲ್ಲಿಯೇ ಮಲಗಿಕೊಂಡು ಬೆಳಗ್ಗೆ ಎದ್ದು ಮಗನನ್ನು ಭೇಟಿಯಾಗಿ ಮತ್ತೆ ಅದೇ ರೀತಿಯಲ್ಲಿ ತನ್ನ ಹಳ್ಳಿ ಬಟೋಡಾಗೆ ಮರಳಿದಾಗ ಹಳ್ಳಿಯವರೆಲ್ಲರೂ ಆಕೆಯನ್ನು ಕ್ವಾರಂಟೈನ್‌ನಲ್ಲಿರಲು ಸೂಚಿಸಿದರು. ಅದೇ ಹಳ್ಳಿಯ ಸರ್ಕಾರಿ ಶಾಲೆಯನ್ನು ಕ್ವಾರಂಟೈನ್ ಕೇಂದ್ರವನ್ನಾಗಿಸಲಾಗಿತ್ತು. ಈ ತೀರ್ಮಾನ ನ್ಯಾಯಯುತವಾದುದೇ ಎಂದರಿತ ಪಾರ್ವತಿ ಕ್ವಾರಂಟೈನ್ ಕೇಂದ್ರಕ್ಕೆ ತೆರಳಿದಳು.

ಇದನ್ನೂ ಓದಿ: ಮಾತು ಮರೆತ ಭಾರತ-28; ಲಾಕ್‌ಡೌನ್ ಫೈಲ್ಸ್ : ದಲಿತರ ಪಾಲಿನ ಕಗ್ಗತ್ತಲ ದೀಪಾವಳಿ

200 ಕಿಮೀ ದೂರದ ಪ್ರಯಾಣ ಮಾಡಿದ್ದ ಪಾರ್ವತಿ ಬಳಲಿದ್ದಳು. ಸರಿಯಾದ ಆಹಾರ ನೀರಿಲ್ಲದೆ ನಿತ್ರಾಣಳಾಗಿದ್ದಳು. ಆ ಕ್ವಾರಂಟೈನ್ ಕೇಂದ್ರದಲ್ಲಿ ಆಕೆಯೊಬ್ಬಳೇ ತಂಗಬೇಕಾಯಿತು. ಪೊಲೀಸರು ಮತ್ತು ಶುಶ್ರೂಷಕ ಸಿಬ್ಬಂದಿ ಮುಂಜಾಗ್ರತೆಯ ಕಾರಣಕ್ಕಾಗಿ ಆಕೆಯೊಂದಿಗೆ ಯಾರನ್ನೂ ತಂಗಲು ಬಿಡಲಿಲ್ಲ. ಆದರೂ ಸುದೀರ್ಘ ಪ್ರಯಾಣದ ಕಾರಣ ಒಂದಷ್ಟು ಆಹಾರ ಹೊಟ್ಟೆಗೆ ಬಿದ್ದೊಡನೆ ಕಣ್ಣು ಎಳೆಯಲು ಆರಂಭಿಸಿದ್ದವು. ಗಾಢ ನಿದ್ರೆಗೆ ಜಾರಿದಳು.

ಇದೇ ಸಮಯದಲ್ಲಿ ಪಾರ್ವತಿ ಕೊಠಡಿಗೆ ಬಂದ ರಿಷಿಕೇಶ್ ಮೀನ, ಲಖನ್ ರಾಮ್ ಮತ್ತು ಕಮಲ್ ಖರ್ವಾಲ್ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡರು. ನಿದ್ದೆಯ ಮಂಪರಿನಲ್ಲಿದ್ದ ಪಾರ್ವತಿಗೆ ಅದೇನಾಗುತ್ತಿದೆ ಎಂಬುದು ತಿಳಿಯುವಷ್ಟರಲ್ಲಿ ಆಕೆಯ ಕಾಲುಗಳು ಹಗ್ಗದಿಂದ ಬಿಗಿಯಾಗಿ ಬಂಧಿಯಾಗಿದ್ದವು. ಹಿಂದೂ ಮೇಲ್ಜಾತಿಯ ಆ ಮೂರು ಪ್ರಾಣಿಗಳು ಆಕೆಯ ಮೇಲೆ ಒಬ್ಬರಾದ ಮೇಲೊಬ್ಬರಂತೆ ಅತ್ಯಾಚಾರ ಮಾಡಿದರು. ಪಾರ್ವತಿಯನ್ನು ಕಾಪಾಡಲು ಅಲ್ಲಿ ಒಂದು ನರಪಿಳ್ಳೆಯೂ ಸಹ ಇರಲಿಲ್ಲ. ಪೊಲೀಸ್ ಮತ್ತು ದಾದಿಯರು ಗೌಗತ್ತಲಾಗುತ್ತಿದ್ದಂತೆ ಮನೆಗೆ ತೆರಳಿದ್ದರು. ಹಳ್ಳಿಯ ವ್ಯಕ್ತಿಯೊಬ್ಬನಿಗೆ ಸೆಕ್ಯುರಿಟಿ ಕೆಲಸ ಒಪ್ಪಿಸಿ ಮನೆಯಲ್ಲಿ ಹಾಯಾಗಿ ಮಲಗಲು ತೆರಳಿದ್ದರು.

ಬೆಳಗ್ಗೆ ಈ ವಿಷಯವನ್ನು ಪಾರ್ವತಿ ಪೊಲೀಸರಿಗೆ ತಿಳಿಸಿದಾಗ ಆಕೆಯನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಿಂದಾಗಿ ಪಾರ್ವತಿಗೆ ಕೋವಿಡ್ ಪಾಸಿಟಿವ್ ಬಂದಿತಲ್ಲದೆ ಅತ್ಯಾಚಾರವಾಗಿರುವುದೂ ಖಾತ್ರಿಯಾಯಿತು. ಕೋವಿಡ್ ಫೋಬಿಯಾವನ್ನು ಮಾಧ್ಯಮಗಳು ಕ್ಷಣಕ್ಷಣಕ್ಕೂ ಬಿತ್ತರಿಸುತ್ತಿದ್ದ ಸಮಯವದು; ಪಾರ್ವತಿ ಕೋವಿಡ್‌ನಿಂದ ಬದುಕುಳಿಯುವುದು ಹೇಗೆ ಎಂದು ಚಿಂತಿಸುತ್ತಿದ್ದಳೋ ಅಥವಾ ತನ್ನ ಮೇಲೆ ನಡೆದಿರುವ ಅತ್ಯಾಚಾರದ ಗಾಯಕ್ಕೆ ಮಾನಸಿಕವಾಗಿ ಮುಲಾಮು ಹಚ್ಚಿಕೊಳ್ಳುತ್ತಿದ್ದಳೋ ಕಾಣೆ.

ಇದನ್ನೂ ಓದಿ: ಮಾತು ಮರೆತ ಭಾರತ-27; ಲಾಕ್‌ಡೌನ್ ಫೈಲ್ಸ್: ನೀರು ಕೇಳಿದ ದಲಿತ ಯುವಕನ ಉಸಿರು ನಿಲ್ಲಿಸಿದರು

ಈ ಪ್ರಕರಣದಿಂದ ಅರಿಯಬೇಕಾದ ಮತ್ತೊಂದು ವಿಚಾರವೇನೆಂದರೆ ಪಾರ್ವತಿ ಎಂಬ ದಲಿತ ಮಹಿಳೆಯ ಜಾಗದಲ್ಲಿ ಹಿಂದೂ ಮೇಲ್ಜಾತಿ ಮಹಿಳೆ ಇದ್ದಿದ್ದರೆ ಅಲ್ಲಿ ಹಳ್ಳಿಗರು ಆಕೆಯನ್ನು ಒಬ್ಬಂಟಿಯಾಗಿ ಇರಲು ಬಿಡುತ್ತಿದ್ದರೆ? ಪೊಲೀಸರು ಕಿಂಚಿತ್ ಮುಂಜಾಗ್ರತೆಯನ್ನೂ ವಹಿಸದೆ ನಿದ್ದೆ ಮಾಡಲು ಮನೆಗೆ ತೆರಳುತ್ತಿದ್ದರೆ? ದಾದಿಯರು ತಮ್ಮ ಕರ್ತವ್ಯವನ್ನು ಮರೆತು ಸ್ವಲ್ಪವೂ ಆಲೋಚಿಸದೇ ಮಹಿಳೆಯೊಬ್ಬಳನ್ನು ಬಿಟ್ಟು ಹೊರಡುತ್ತಿದ್ದರೇ? ಆ ಮೂವರು ಪಾಪಿಗಳು ಅಷ್ಟು ಧೈರ್ಯದಿಂದ ಕೊಠಡಿಗೆ ನುಗ್ಗಿ ಅತ್ಯಾಚಾರಗೈಯ್ಯುತ್ತಿದ್ದರೆ?

ಈ ಮೇಲಿನ ಪ್ರಶ್ನೆಗೆ ಉತ್ತರ ಹುಡುಕುವುದು ಅಷ್ಟು ಕಷ್ಟವಲ್ಲ. ಆದರೆ ಅದಕ್ಕೆ ಪರಿಹಾರ ಹುಡುಕುವುದು ಮಾತ್ರ ಇಂದಿಗೂ ಸಾಧ್ಯವಾಗಿಲ್ಲ. ದಲಿತರೆಂದರೆ ಈ ಸಮಾಜಕ್ಕೆ ಏನು ಬೇಕಾದರೂ ಮಾಡಿ ಬಿಸಾಕಬಹುದಾದ ವಸ್ತುಗಳಿದ್ದಂತೆ.

ಈಗ ಆ ಮೂವರು ಪಾಪಿಗಳು ಜೈಲಿನಲ್ಲಿದ್ದಾರೆ. ಪೊಲೀಸ್ ಒಬ್ಬ ಅಮಾನತುಗೊಂಡಿದ್ದಾನೆ. ಪಾರ್ವತಿಯೂ ಸಹ ಗುಣಮುಖಳಾಗಿ ತನ್ನ ಮಗನ ಭವಿಷ್ಯದ ಕನಸನ್ನು ಕಾಣುತ್ತಿದ್ದಾಳೆ. ಇದರ ನಡುವೆ ಆ ಮೂವರಿಗೆ ಶಿಕ್ಷೆ ಆಗುವುದೇ? ದಲಿತರ ಮೇಲಿನ ದೌರ್ಜನ್ಯಕ್ಕೆ ನ್ಯಾಯಾಲಯದ ನ್ಯಾಯದ ಇತಿಹಾಸ ಇಲ್ಲವೆಂದೇ ಉತ್ತರವನ್ನು ಪದೇಪದೇ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...