Homeಅಂಕಣಗಳುಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

- Advertisement -
- Advertisement -

(ಭಾರತದ Dalit Human Rights Defenders Network ಎಂಬ ಸಂಸ್ಥೆಯು ‘No lockdown on Caste Atrocities’ ಎಂಬ ಪುಸ್ತಕದಲ್ಲಿ ನೈಜ ಘಟನೆಗಳನ್ನು ವರದಿ ಮಾಡಿದೆ. ಇದರಲ್ಲಿ ಭಾರತದ ಏಳು ರಾಜ್ಯಗಳಲ್ಲಿ ’ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ದಲಿತರ ಮೇಲೆ ನಡೆದ 60 ದೌರ್ಜನ್ಯಗಳನ್ನು ಪಟ್ಟಿ ಮಾಡಿದೆ. ಒಂದೊಂದೂ ಭೀಕರವಾಗಿದ್ದು, ಹಿಂದೂ ಮೇಲ್ಜಾತಿಗಳು ದಲಿತರ ಮೇಲೆ ನಡೆಸಿರುವ ಕ್ರೂರ ಕೃತ್ಯಗಳನ್ನು ಬಯಲುಗೊಳಿಸುತ್ತದೆ. ಆ ದಲಿತರ ಮೇಲಿನ ದೌರ್ಜನ್ಯಗಳ 10 ಘಟನೆಯಲ್ಲಿ ಇದು ಮೂರನೆಯದ್ದಾಗಿದೆ. ಇದನ್ನು ವರದಿ ಮಾಡುವ ಉದ್ದೇಶ ಖಂಡಿತವಾಗಿಯೂ ಹಿಂದೂ ಮೇಲ್ಜಾತಿಗಳ ಮನ ಪರಿವರ್ತನೆಯಲ್ಲ. ಬದಲಾಗಿ ’ಹಿಂದೂ ನಾವೆಲ್ಲ ಒಂದೂ’ ಎನ್ನುತ್ತಿರುವ ದಲಿತರ ಅಂಧಕಾರವನ್ನು ಕಳಚುವುದಾಗಿದೆ.)

ರಾಜಸ್ತಾನದ ಬಟೋಡ ಎಂಬ ಹಳ್ಳಿಯ ದಲಿತೆ ಪಾರ್ವತಿಗೆ (ಹೆಸರು ಬದಲಿಸಿದೆ) ಒಬ್ಬನೇ ಮಗ. ಅವನನ್ನು ಓದಿಸಿ ಉತ್ತಮ ಹಂತಕ್ಕೆ ಕಳಿಸಬೇಕೆಂಬುದೇ ಆಕೆಯ ಏಕೈಕ ಆಸೆ. ಆ ಕಾರಣಕ್ಕಾಗಿಯೇ ಸುಮಾರು 100 ಕಿಮೀ ದೂರದಲ್ಲಿರುವ ಪಟ್ಟಣ ’ದೌಸಾ’ಗೆ ಕೆಲಸಕ್ಕೆಂದು ದಿನವೂ ಪ್ರಯಾಣಿಸಬೇಕಿತ್ತು. 17 ವರ್ಷದ ಮಗ ರಘು ಇದ್ದಕ್ಕಿದ್ದಂತೆ ಕುಡಿತದ ಚಟವನ್ನು ಮೈಗೂಡಿಸಿಕೊಂಡಾಗ ಇನ್ನಿಲ್ಲದಂತೆ ನೊಂದುಕೊಂಡಿದ್ದ ಪಾರ್ವತಿ ತನ್ನ ಕನಸನ್ನು ಅರ್ಧಕ್ಕೆ ಕೈಬಿಡದೇ ಅವನ ಮನವೊಲಿಸಲು ಪ್ರಾರಂಭಿಸಿದ್ದಳು. ಆದರೇನು ಮಾಡುವುದು; ರಘು ಗಲಭೆಯೊಂದರಲ್ಲಿ ಜೈಲಿಗೂ ಹೋಗಿಬಿಟ್ಟನು. ಆಗಲೂ ಆತನ ಮನಸ್ಸನ್ನು ಹೇಗಾದರೂ ಮಾಡಿ ಬದಲಾಯಿಸಬೇಕೆಂಬ ಹಠಕ್ಕೆ ಬಿದ್ದು ದಿನವೂ ಜೈಲಿಗೆ ಹೋಗುವುದನ್ನೂ ರೂಢಿಸಿಕೊಂಡಿದ್ದಳು. ಇದೇ ಸಮಯದಲ್ಲಿ ಕೋವಿಡ್-19ನಿಂದಾಗಿ ದೇಶವೇ ಲಾಕ್‌ಡೌನ್ ಆಯಿತು. ಆದರೆ ಅಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಏಪ್ರಿಲ್ 21, 2020ರಂದು ಮಗನನ್ನು ನೋಡಲು ಬರಿಗಾಲಲ್ಲಿ ನಡೆದು ದೌಸಾಗೆ ಹೋಗಲು ಅಣಿಯಾದಳು. ಮಧ್ಯ ಅವರಿವರ ಸಹಾಯ ಪಡೆದು ಸಂಜೆಯಷ್ಟೊತ್ತಿಗೆ ಜೈಲಿನ ಬಳಿ ತಲುಪಿದಳಾದರೂ ಅವಳಿಗೆ ಮಗನನ್ನು ಭೇಟಿಯಾಗಲು ಬೆಳಗ್ಗೆಯವರೆಗೆ ಕಾಯಬೇಕಾಯಿತು. ಅಲ್ಲೇ ಜೈಲಿನ ಆವರಣದಲ್ಲಿಯೇ ಮಲಗಿಕೊಂಡು ಬೆಳಗ್ಗೆ ಎದ್ದು ಮಗನನ್ನು ಭೇಟಿಯಾಗಿ ಮತ್ತೆ ಅದೇ ರೀತಿಯಲ್ಲಿ ತನ್ನ ಹಳ್ಳಿ ಬಟೋಡಾಗೆ ಮರಳಿದಾಗ ಹಳ್ಳಿಯವರೆಲ್ಲರೂ ಆಕೆಯನ್ನು ಕ್ವಾರಂಟೈನ್‌ನಲ್ಲಿರಲು ಸೂಚಿಸಿದರು. ಅದೇ ಹಳ್ಳಿಯ ಸರ್ಕಾರಿ ಶಾಲೆಯನ್ನು ಕ್ವಾರಂಟೈನ್ ಕೇಂದ್ರವನ್ನಾಗಿಸಲಾಗಿತ್ತು. ಈ ತೀರ್ಮಾನ ನ್ಯಾಯಯುತವಾದುದೇ ಎಂದರಿತ ಪಾರ್ವತಿ ಕ್ವಾರಂಟೈನ್ ಕೇಂದ್ರಕ್ಕೆ ತೆರಳಿದಳು.

ಇದನ್ನೂ ಓದಿ: ಮಾತು ಮರೆತ ಭಾರತ-28; ಲಾಕ್‌ಡೌನ್ ಫೈಲ್ಸ್ : ದಲಿತರ ಪಾಲಿನ ಕಗ್ಗತ್ತಲ ದೀಪಾವಳಿ

200 ಕಿಮೀ ದೂರದ ಪ್ರಯಾಣ ಮಾಡಿದ್ದ ಪಾರ್ವತಿ ಬಳಲಿದ್ದಳು. ಸರಿಯಾದ ಆಹಾರ ನೀರಿಲ್ಲದೆ ನಿತ್ರಾಣಳಾಗಿದ್ದಳು. ಆ ಕ್ವಾರಂಟೈನ್ ಕೇಂದ್ರದಲ್ಲಿ ಆಕೆಯೊಬ್ಬಳೇ ತಂಗಬೇಕಾಯಿತು. ಪೊಲೀಸರು ಮತ್ತು ಶುಶ್ರೂಷಕ ಸಿಬ್ಬಂದಿ ಮುಂಜಾಗ್ರತೆಯ ಕಾರಣಕ್ಕಾಗಿ ಆಕೆಯೊಂದಿಗೆ ಯಾರನ್ನೂ ತಂಗಲು ಬಿಡಲಿಲ್ಲ. ಆದರೂ ಸುದೀರ್ಘ ಪ್ರಯಾಣದ ಕಾರಣ ಒಂದಷ್ಟು ಆಹಾರ ಹೊಟ್ಟೆಗೆ ಬಿದ್ದೊಡನೆ ಕಣ್ಣು ಎಳೆಯಲು ಆರಂಭಿಸಿದ್ದವು. ಗಾಢ ನಿದ್ರೆಗೆ ಜಾರಿದಳು.

ಇದೇ ಸಮಯದಲ್ಲಿ ಪಾರ್ವತಿ ಕೊಠಡಿಗೆ ಬಂದ ರಿಷಿಕೇಶ್ ಮೀನ, ಲಖನ್ ರಾಮ್ ಮತ್ತು ಕಮಲ್ ಖರ್ವಾಲ್ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡರು. ನಿದ್ದೆಯ ಮಂಪರಿನಲ್ಲಿದ್ದ ಪಾರ್ವತಿಗೆ ಅದೇನಾಗುತ್ತಿದೆ ಎಂಬುದು ತಿಳಿಯುವಷ್ಟರಲ್ಲಿ ಆಕೆಯ ಕಾಲುಗಳು ಹಗ್ಗದಿಂದ ಬಿಗಿಯಾಗಿ ಬಂಧಿಯಾಗಿದ್ದವು. ಹಿಂದೂ ಮೇಲ್ಜಾತಿಯ ಆ ಮೂರು ಪ್ರಾಣಿಗಳು ಆಕೆಯ ಮೇಲೆ ಒಬ್ಬರಾದ ಮೇಲೊಬ್ಬರಂತೆ ಅತ್ಯಾಚಾರ ಮಾಡಿದರು. ಪಾರ್ವತಿಯನ್ನು ಕಾಪಾಡಲು ಅಲ್ಲಿ ಒಂದು ನರಪಿಳ್ಳೆಯೂ ಸಹ ಇರಲಿಲ್ಲ. ಪೊಲೀಸ್ ಮತ್ತು ದಾದಿಯರು ಗೌಗತ್ತಲಾಗುತ್ತಿದ್ದಂತೆ ಮನೆಗೆ ತೆರಳಿದ್ದರು. ಹಳ್ಳಿಯ ವ್ಯಕ್ತಿಯೊಬ್ಬನಿಗೆ ಸೆಕ್ಯುರಿಟಿ ಕೆಲಸ ಒಪ್ಪಿಸಿ ಮನೆಯಲ್ಲಿ ಹಾಯಾಗಿ ಮಲಗಲು ತೆರಳಿದ್ದರು.

ಬೆಳಗ್ಗೆ ಈ ವಿಷಯವನ್ನು ಪಾರ್ವತಿ ಪೊಲೀಸರಿಗೆ ತಿಳಿಸಿದಾಗ ಆಕೆಯನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಿಂದಾಗಿ ಪಾರ್ವತಿಗೆ ಕೋವಿಡ್ ಪಾಸಿಟಿವ್ ಬಂದಿತಲ್ಲದೆ ಅತ್ಯಾಚಾರವಾಗಿರುವುದೂ ಖಾತ್ರಿಯಾಯಿತು. ಕೋವಿಡ್ ಫೋಬಿಯಾವನ್ನು ಮಾಧ್ಯಮಗಳು ಕ್ಷಣಕ್ಷಣಕ್ಕೂ ಬಿತ್ತರಿಸುತ್ತಿದ್ದ ಸಮಯವದು; ಪಾರ್ವತಿ ಕೋವಿಡ್‌ನಿಂದ ಬದುಕುಳಿಯುವುದು ಹೇಗೆ ಎಂದು ಚಿಂತಿಸುತ್ತಿದ್ದಳೋ ಅಥವಾ ತನ್ನ ಮೇಲೆ ನಡೆದಿರುವ ಅತ್ಯಾಚಾರದ ಗಾಯಕ್ಕೆ ಮಾನಸಿಕವಾಗಿ ಮುಲಾಮು ಹಚ್ಚಿಕೊಳ್ಳುತ್ತಿದ್ದಳೋ ಕಾಣೆ.

ಇದನ್ನೂ ಓದಿ: ಮಾತು ಮರೆತ ಭಾರತ-27; ಲಾಕ್‌ಡೌನ್ ಫೈಲ್ಸ್: ನೀರು ಕೇಳಿದ ದಲಿತ ಯುವಕನ ಉಸಿರು ನಿಲ್ಲಿಸಿದರು

ಈ ಪ್ರಕರಣದಿಂದ ಅರಿಯಬೇಕಾದ ಮತ್ತೊಂದು ವಿಚಾರವೇನೆಂದರೆ ಪಾರ್ವತಿ ಎಂಬ ದಲಿತ ಮಹಿಳೆಯ ಜಾಗದಲ್ಲಿ ಹಿಂದೂ ಮೇಲ್ಜಾತಿ ಮಹಿಳೆ ಇದ್ದಿದ್ದರೆ ಅಲ್ಲಿ ಹಳ್ಳಿಗರು ಆಕೆಯನ್ನು ಒಬ್ಬಂಟಿಯಾಗಿ ಇರಲು ಬಿಡುತ್ತಿದ್ದರೆ? ಪೊಲೀಸರು ಕಿಂಚಿತ್ ಮುಂಜಾಗ್ರತೆಯನ್ನೂ ವಹಿಸದೆ ನಿದ್ದೆ ಮಾಡಲು ಮನೆಗೆ ತೆರಳುತ್ತಿದ್ದರೆ? ದಾದಿಯರು ತಮ್ಮ ಕರ್ತವ್ಯವನ್ನು ಮರೆತು ಸ್ವಲ್ಪವೂ ಆಲೋಚಿಸದೇ ಮಹಿಳೆಯೊಬ್ಬಳನ್ನು ಬಿಟ್ಟು ಹೊರಡುತ್ತಿದ್ದರೇ? ಆ ಮೂವರು ಪಾಪಿಗಳು ಅಷ್ಟು ಧೈರ್ಯದಿಂದ ಕೊಠಡಿಗೆ ನುಗ್ಗಿ ಅತ್ಯಾಚಾರಗೈಯ್ಯುತ್ತಿದ್ದರೆ?

ಈ ಮೇಲಿನ ಪ್ರಶ್ನೆಗೆ ಉತ್ತರ ಹುಡುಕುವುದು ಅಷ್ಟು ಕಷ್ಟವಲ್ಲ. ಆದರೆ ಅದಕ್ಕೆ ಪರಿಹಾರ ಹುಡುಕುವುದು ಮಾತ್ರ ಇಂದಿಗೂ ಸಾಧ್ಯವಾಗಿಲ್ಲ. ದಲಿತರೆಂದರೆ ಈ ಸಮಾಜಕ್ಕೆ ಏನು ಬೇಕಾದರೂ ಮಾಡಿ ಬಿಸಾಕಬಹುದಾದ ವಸ್ತುಗಳಿದ್ದಂತೆ.

ಈಗ ಆ ಮೂವರು ಪಾಪಿಗಳು ಜೈಲಿನಲ್ಲಿದ್ದಾರೆ. ಪೊಲೀಸ್ ಒಬ್ಬ ಅಮಾನತುಗೊಂಡಿದ್ದಾನೆ. ಪಾರ್ವತಿಯೂ ಸಹ ಗುಣಮುಖಳಾಗಿ ತನ್ನ ಮಗನ ಭವಿಷ್ಯದ ಕನಸನ್ನು ಕಾಣುತ್ತಿದ್ದಾಳೆ. ಇದರ ನಡುವೆ ಆ ಮೂವರಿಗೆ ಶಿಕ್ಷೆ ಆಗುವುದೇ? ದಲಿತರ ಮೇಲಿನ ದೌರ್ಜನ್ಯಕ್ಕೆ ನ್ಯಾಯಾಲಯದ ನ್ಯಾಯದ ಇತಿಹಾಸ ಇಲ್ಲವೆಂದೇ ಉತ್ತರವನ್ನು ಪದೇಪದೇ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...